Homeಮುಖಪುಟತೆಲಂಗಾಣ ಎನ್‌ಕೌಂಟರ್‌: ಶವಗಳನ್ನು ರಕ್ಷಿಸಲು ಶೀತಲ ಪೆಟ್ಟಿಗೆಗಳ ಕೊರತೆ - ವೈದ್ಯರ ಪರದಾಟ

ತೆಲಂಗಾಣ ಎನ್‌ಕೌಂಟರ್‌: ಶವಗಳನ್ನು ರಕ್ಷಿಸಲು ಶೀತಲ ಪೆಟ್ಟಿಗೆಗಳ ಕೊರತೆ – ವೈದ್ಯರ ಪರದಾಟ

- Advertisement -
- Advertisement -

ಹೈದರಾಬಾದ್ ಪಶುವೈದ್ಯೆ ಅತ್ಯಾಚಾರ-ಹತ್ಯೆ ಪ್ರಕರಣದ ಆರೋಪಿಗಳನ್ನು ಪೊಲೀಸರ್ ಎನ್‌ಕೌಂಟರ್ ನಡೆಸಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯರು ಹೈದರಾಬಾದ್ ನ ಆರ್.ಜಿ.ಐ ಆಸ್ಪತ್ರೆಗೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.

ಶೆಡ್ ನಗರದ ಹತ್ತಿರ ಇರುವ ಚತನಪಲ್ಲಿಯಲ್ಲಿ ಅತ್ಯಾಚಾರ-ಕೊಲೆ ಆರೋಪಿಗಳನ್ನು ಎನ್ ಕೌಂಟರ್ ಮಾಡಿದ ಸ್ಥಳದಲ್ಲಿ ತನಿಖೆ ನಡೆಸುತ್ತಿದ್ದಾರೆ. ಎನ್ ಕೌಂಟರ್ ಹೇಗೆ ನಡೆಯಿತು ಎಂಬುದನ್ನು ಪರಿಶೀಲಿಸಲಿರುವ ಮಾನವ ಹಕ್ಕುಗಳ ಆಯೋಗದ ಸದಸ್ಯರು ಪ್ರಾಥಮಿಕ ತನಿಖೆ ನಡೆಸುತ್ತಿದ್ದ ಪೊಲೀಸರನ್ನು ಪ್ರಶ್ನಿಸುವ ಸಾಧ್ಯತೆ ಇದೆ ಎಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಎನ್ ಕೌಂಟರ್ ನಡೆದ 500 ಮೀಟರ್ ಸುತ್ತಳತೆಯಲ್ಲಿ ಪೊಲೀಸರು ಸರ್ಪಕಾವಲು ಕಾಯುತ್ತಿದ್ದು, ತೊಂಡಪಲ್ಲಿ ಟೋಲ್ ಪ್ಲಾಜಾ ಹತ್ತಿರ ತೆರಳಿ ಸ್ಥಳ ಪರಿಶೀಲನೆ ಮಾಡಲಿದ್ದಾರೆ ಎಂದು ವರದಿಯಾಗಿದೆ.

ಇದೇ ವೇಳೆ ಮೆಹಬೂಬನಗರ ಜಿಲ್ಲಾಸ್ಪತ್ರೆಯಲ್ಲಿ ಪೊಲೀಸರ ಎನ್ ಕೌಂಟರ್ ನಲ್ಲಿ ಸಾವನ್ನಪ್ಪಿರುವ ನಾಲ್ವರು ಆರೋಪಿಗಳ ಮೃತದೇಹಗಳನ್ನು ಇಡಲಾಗಿದ್ದು ಶೀತಲಪೆಟ್ಟಿಗೆಯಲ್ಲಿ ಇಡಲು ಸಮಸ್ಯೆಯಾಗಿದೆ. ಆಸ್ಪತ್ರೆಯಲ್ಲಿ ಮೂರು ಶೀತಲ ಪೆಟ್ಟಿಗೆಗಳು ಇವೆ. ಇವುಗಳ ಪೈಕಿ ಎರಡು ಕಾರ್ಯ ನಿರ್ವಹಿಸುತ್ತಿವೆ. ಇದರಿಂದ ನಾಲ್ಕು ಶವಗಳನ್ನು ಶೀತಲ ಪೆಟ್ಟಿಗೆಯಲ್ಲಿ ಇಡಲು ಸಾಧ್ಯವಾಗುತ್ತಿಲ್ಲ.

ಒಂದು ಶೀತಲ ಪೆಟ್ಟಿಗೆ ಕೆಟ್ಟು ಹೋಗಿದೆ. ಬೇರೆ ಮೃತದೇಹಗಳು ಬಂದರೆ ಮೆಹಬೂಬನಗರ ಜಿಲ್ಲಾಸ್ಪತ್ರೆಯಲ್ಲಿ ಇಡಲು ಜಾಗದ ಕೊರತೆ ಮತ್ತು ಶೀತಲ ಪೆಟ್ಟಿಗೆಗಳ ಕೊರತೆ ಇದೆ. ಸ್ಥಳೀಯ ಮೃತದೇಹಗಳ ಮರಣೋತ್ತರ ಪರೀಕ್ಷೆಯೂ ಇಲ್ಲೇ ನಡೆಯಬೇಕಾಗಿದೆ ಎಂದು ವರದಿ ತಿಳಿಸಿದೆ.

ಈ ಆಸ್ಪತ್ರೆಯಲ್ಲಿ ಭದ್ರತಾ ಪರಿಸ್ಥಿತಿ ಮತ್ತು ಶೀತಲ ಪೆಟ್ಟಿಗೆಗಳ ಕೊರತೆ ಇದೆ. ಸ್ಥಳೀಯ ಪ್ರಕರಣಗಳನ್ನು ತೆಲಂಗಾಣ ಹೈಕೋರ್ಟ್ ಆದೇಶದ ಮೇರೆಗೆ ಮೆಹಬೂಬನಗರದಿಂದ 15 ಕಿಲೋ ಮೀಟರ್ ದೂರದಲ್ಲಿರುವ  ಜಡ್ ಚೆರ್ಲ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗುತ್ತಿದೆ. ಹೀಗಾಗಿ ಸಿಕಿಂದರಾಬಾದ್ ಆಸ್ಪತ್ರೆಗೆ ಮೃತ ದೇಹಗಳನ್ನು ಸ್ಥಳಾಂತರಿಸಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...