Homeಮುಖಪುಟತೆಲಂಗಾಣ ಎನ್‌ಕೌಂಟರ್‌: ಕಾನೂನು ತನ್ನ ಕರ್ತವ್ಯವನ್ನು ಮುಗಿಸಿದೆ - ಸಜ್ಜನಾರ್

ತೆಲಂಗಾಣ ಎನ್‌ಕೌಂಟರ್‌: ಕಾನೂನು ತನ್ನ ಕರ್ತವ್ಯವನ್ನು ಮುಗಿಸಿದೆ – ಸಜ್ಜನಾರ್

- Advertisement -
- Advertisement -

ಪಶುವೈದ್ಯೆಯ ಸಾಮೂಹಿಕ ಅತ್ಯಾಚಾರ, ಕೊಲೆಯ ಆರೋಪಿಗಳನ್ನು ಎನ್‌ಕೌಂಟರ್‌ ಮಾಡಿದ ಸೈಬರಾಬಾದ್ ಪೊಲೀಸ್‌ ಮುಖ್ಯಸ್ಥ ಸಜ್ಜನಾರ್ ಕಾನೂನು ತನ್ನ ಕರ್ತವ್ಯವನ್ನು ನಿರ್ವಹಿಸಿದೆ ಎಂದು ಹೇಳಿದ್ದಾರೆ.

ಇಂದು ಬೆಳ್ಳಂಬೆಳಿಗ್ಗೆ ನಡೆದ ಎನ್‌ಕೌಂಟರ್‌ ಕುರಿತು ಮಾಹಿತಿ ನೀಡಲು ಎನ್‌ಕೌಟರ್‌ ನಡೆದ ಸ್ಥಳದಲ್ಲಿಯೇ ಪತ್ರಿಕಾಗೋಷ್ಟಿ ನಡೆಸಿದ ಅವರು ನಾಲ್ವರು ಆರೋಪಿಗಳು ನಮ್ಮ ಪೊಲೀಸರ ಗನ್‌ಗಳನ್ನು ಕಸಿದುಕೊಂಡರು. ಹಾಗಾಗಿ ನಾವು ಗುಂಡು ಹಾರಿಸಬೇಕಾಯಿತು ಎಂದಿದ್ದಾರೆ.

ಈ ನಡುವೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಘಟನೆಯ ಕುರಿತು ತನಿಖೆಗೆ ಆದೇಶಿಸಿದ್ದು ಕೇಂದ್ರ ಗೃಹ ಇಲಾಖೆಗೂ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಬಂದ ಪ್ರಶ್ನೆಗಳಿಗೆ ಅವರು ಉತ್ತರಿಸಿದ್ದಾರೆ.

10 ಜನ ಪೊಲೀಸ್ ಅಧಿಕಾರಿಗಳು ನಾಲ್ವರು ಆರೋಪಿಗಳೊಂದಿಗೆ ಘಟನೆಯನ್ನು ಮರುನಿರೂಪಿಸಲು ಮತ್ತು ಸಂತ್ರಸ್ತೆಯ ಕಳೆದುಕೊಂಡಿದ್ದ ಕೆಲ ವಸ್ತುಗಳನ್ನು ಹುಡುಕಲು ಸ್ಥಳಕ್ಕೆ ಹೋಗಿದ್ದೆವು. ಆಗ ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದರು. ಕಲ್ಲು ಕೋಲುಗಳಿಂದ ನಮ್ಮ ಮೇಲೆ ದಾಳಿ ಮಾಡಿದರು. ನಾವು ನಮ್ಮ ಪೊಲೀಸರಿಗೆ ಸಂಯಮದಿಂದಿರಲು ಸೂಚಿಸಿದ್ದೆವು. ಹಾಗೆಯೇ ಅವರಿಗೆ ಶರಣಾಗಲು ಎಚ್ಚರಿಕೆ ನೀಡಿದೆವು. ಆದರೆ ಅವರು ನಮ್ಮ ಎರಡು ಗನ್‌ಗಳನ್ನು ಕಿತ್ತುಕೊಂಡು ಪರಾರಿಯಾಗಲು ಪ್ರಯತ್ನಿಸಿದರು ಆಗ ನಾವು ಫೈರ್‌ ಮಾಡಬೇಕಾಯಿತು ಎಂದು ಮಾಹಿತಿ ನೀಡಿದ್ದಾರೆ.

ಇಂದು ಮುಂಜಾನೆ 5:30ರ ಸಮಯದಲ್ಲಿ ನಾವು ಅಲ್ಲಿಗೆ ಹೋಗಿದ್ದೆವು. ಅವರಿಗೆ ಕೈಕೊಳ ಹಾಕಿರಲಿಲ್ಲ. 10 ಸದಸ್ಯರ ತಂಡದಲ್ಲಿದ್ದ ಇಬ್ಬರು ಪೊಲೀಸರು ತಲೆಗೆ ಗಾಯಗಳಾಗಿವೆ ಎಂದು ಅವರು ಹೇಳಿದ್ದಾರೆ.

ಮುಹಮ್ಮದ್ ಆರಿಫ್ (26), ಜೊಲ್ಲು ಶಿವ (20), ಜೊಲ್ಲು ನವೀನ್ (20) ಮತ್ತು ಚಿಂತಕುಂಟ ಚೆನ್ನಕೇಶವುಲು (20) ಎನ್‌ಕೌಂಟರ್‌ ನಲ್ಲಿ ಹತರಾದ ಆರೋಪಿಗಳಾಗಿದ್ದಾರೆ.

ಕಳೆದ ನಾಲ್ಕು ದಿನಗಳಿಂದ ನಡೆಸಿದ ವಿಚಾರಣೆಯಲ್ಲಿ ಹಲವು ವಿವರಗಳು ಬಹಿರಂಗಗೊಂಡಿವೆ ಎಂದು ಸಜ್ಜನಾರ್ ತಿಳಿಸಿದ್ದಾರೆ. ಇದರ ಆಧಾರದ ಮೇಲೆ ಪೊಲೀಸ್ ತಂಡವು ಆರೋಪಿಗಳನ್ನು ಕರೆದೊಯ್ದು ಸಂತ್ರಸ್ತೆಯ ಮೊಬೈಲ್ ಫೋನ್, ಪವರ್‌ ಬ್ಯಾಂಕ್ ಮತ್ತು ವಾಚ್‌ ಅನ್ನು ಸಂಗ್ರಹಿಸಿದ್ದೇವೆ ಎಂದು ತಿಳಿಸಿದ್ದಾರೆ.

“ಕಳೆದ ನಾಲ್ಕು ದಿನಗಳಲ್ಲಿ, ನಾವು ಡಿಎನ್‌ಎ ಪ್ರೊಫೈಲಿಂಗ್ ಮಾಡಿದ್ದೇವೆ, ಅಪರಾಧವನ್ನು ಸಾಬೀತುಪಡಿಸಲು ವೈಜ್ಞಾನಿಕ ಪುರಾವೆಗಳನ್ನು ಸಂಗ್ರಹಿಸಿದ್ದೇವೆ. ನಾಲ್ವರು ಹಾರ್ಡ್‌ಕೋರ್ ಆರೋಪಿಗಳು ಇತರ ಅಪರಾಧಗಳಲ್ಲಿಯೂ ಭಾಗಿಯಾದ ಶಂಕೆಯಿದೆ ಎಂದು ಪೊಲೀಸ್ ಮುಖ್ಯಸ್ಥರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪೊಲೀಸರ ಈ ಕಟ್ಟುಕತೆಯನ್ನು ನಂಬುವುದು ಸಾಧ್ಯವಿಲ್ಲ. ಅತ್ಯಾಚಾರದ ಆರೋಪಿಗಳನ್ನು ಕೈಕೋಳ ತೊಡಿಸದೆಯೇ ಸ್ಥಳ ಪರಿಶೀಲನೆಗೆ ಕರೆದುಕೊಂಡು ಹೋಗಿದ್ದು ಕರ್ತವ್ಯಲೋಪ ಅಥವಾ ಪೂರ್ವನಿಯೋಜಿತ ಸಂಚು.

LEAVE A REPLY

Please enter your comment!
Please enter your name here

- Advertisment -

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...