Homeಮುಖಪುಟತೆಲಂಗಾಣ ಎನ್‌ಕೌಂಟರ್‌: ಕಾನೂನು ತನ್ನ ಕರ್ತವ್ಯವನ್ನು ಮುಗಿಸಿದೆ - ಸಜ್ಜನಾರ್

ತೆಲಂಗಾಣ ಎನ್‌ಕೌಂಟರ್‌: ಕಾನೂನು ತನ್ನ ಕರ್ತವ್ಯವನ್ನು ಮುಗಿಸಿದೆ – ಸಜ್ಜನಾರ್

- Advertisement -
- Advertisement -

ಪಶುವೈದ್ಯೆಯ ಸಾಮೂಹಿಕ ಅತ್ಯಾಚಾರ, ಕೊಲೆಯ ಆರೋಪಿಗಳನ್ನು ಎನ್‌ಕೌಂಟರ್‌ ಮಾಡಿದ ಸೈಬರಾಬಾದ್ ಪೊಲೀಸ್‌ ಮುಖ್ಯಸ್ಥ ಸಜ್ಜನಾರ್ ಕಾನೂನು ತನ್ನ ಕರ್ತವ್ಯವನ್ನು ನಿರ್ವಹಿಸಿದೆ ಎಂದು ಹೇಳಿದ್ದಾರೆ.

ಇಂದು ಬೆಳ್ಳಂಬೆಳಿಗ್ಗೆ ನಡೆದ ಎನ್‌ಕೌಂಟರ್‌ ಕುರಿತು ಮಾಹಿತಿ ನೀಡಲು ಎನ್‌ಕೌಟರ್‌ ನಡೆದ ಸ್ಥಳದಲ್ಲಿಯೇ ಪತ್ರಿಕಾಗೋಷ್ಟಿ ನಡೆಸಿದ ಅವರು ನಾಲ್ವರು ಆರೋಪಿಗಳು ನಮ್ಮ ಪೊಲೀಸರ ಗನ್‌ಗಳನ್ನು ಕಸಿದುಕೊಂಡರು. ಹಾಗಾಗಿ ನಾವು ಗುಂಡು ಹಾರಿಸಬೇಕಾಯಿತು ಎಂದಿದ್ದಾರೆ.

ಈ ನಡುವೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಘಟನೆಯ ಕುರಿತು ತನಿಖೆಗೆ ಆದೇಶಿಸಿದ್ದು ಕೇಂದ್ರ ಗೃಹ ಇಲಾಖೆಗೂ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಬಂದ ಪ್ರಶ್ನೆಗಳಿಗೆ ಅವರು ಉತ್ತರಿಸಿದ್ದಾರೆ.

10 ಜನ ಪೊಲೀಸ್ ಅಧಿಕಾರಿಗಳು ನಾಲ್ವರು ಆರೋಪಿಗಳೊಂದಿಗೆ ಘಟನೆಯನ್ನು ಮರುನಿರೂಪಿಸಲು ಮತ್ತು ಸಂತ್ರಸ್ತೆಯ ಕಳೆದುಕೊಂಡಿದ್ದ ಕೆಲ ವಸ್ತುಗಳನ್ನು ಹುಡುಕಲು ಸ್ಥಳಕ್ಕೆ ಹೋಗಿದ್ದೆವು. ಆಗ ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದರು. ಕಲ್ಲು ಕೋಲುಗಳಿಂದ ನಮ್ಮ ಮೇಲೆ ದಾಳಿ ಮಾಡಿದರು. ನಾವು ನಮ್ಮ ಪೊಲೀಸರಿಗೆ ಸಂಯಮದಿಂದಿರಲು ಸೂಚಿಸಿದ್ದೆವು. ಹಾಗೆಯೇ ಅವರಿಗೆ ಶರಣಾಗಲು ಎಚ್ಚರಿಕೆ ನೀಡಿದೆವು. ಆದರೆ ಅವರು ನಮ್ಮ ಎರಡು ಗನ್‌ಗಳನ್ನು ಕಿತ್ತುಕೊಂಡು ಪರಾರಿಯಾಗಲು ಪ್ರಯತ್ನಿಸಿದರು ಆಗ ನಾವು ಫೈರ್‌ ಮಾಡಬೇಕಾಯಿತು ಎಂದು ಮಾಹಿತಿ ನೀಡಿದ್ದಾರೆ.

ಇಂದು ಮುಂಜಾನೆ 5:30ರ ಸಮಯದಲ್ಲಿ ನಾವು ಅಲ್ಲಿಗೆ ಹೋಗಿದ್ದೆವು. ಅವರಿಗೆ ಕೈಕೊಳ ಹಾಕಿರಲಿಲ್ಲ. 10 ಸದಸ್ಯರ ತಂಡದಲ್ಲಿದ್ದ ಇಬ್ಬರು ಪೊಲೀಸರು ತಲೆಗೆ ಗಾಯಗಳಾಗಿವೆ ಎಂದು ಅವರು ಹೇಳಿದ್ದಾರೆ.

ಮುಹಮ್ಮದ್ ಆರಿಫ್ (26), ಜೊಲ್ಲು ಶಿವ (20), ಜೊಲ್ಲು ನವೀನ್ (20) ಮತ್ತು ಚಿಂತಕುಂಟ ಚೆನ್ನಕೇಶವುಲು (20) ಎನ್‌ಕೌಂಟರ್‌ ನಲ್ಲಿ ಹತರಾದ ಆರೋಪಿಗಳಾಗಿದ್ದಾರೆ.

ಕಳೆದ ನಾಲ್ಕು ದಿನಗಳಿಂದ ನಡೆಸಿದ ವಿಚಾರಣೆಯಲ್ಲಿ ಹಲವು ವಿವರಗಳು ಬಹಿರಂಗಗೊಂಡಿವೆ ಎಂದು ಸಜ್ಜನಾರ್ ತಿಳಿಸಿದ್ದಾರೆ. ಇದರ ಆಧಾರದ ಮೇಲೆ ಪೊಲೀಸ್ ತಂಡವು ಆರೋಪಿಗಳನ್ನು ಕರೆದೊಯ್ದು ಸಂತ್ರಸ್ತೆಯ ಮೊಬೈಲ್ ಫೋನ್, ಪವರ್‌ ಬ್ಯಾಂಕ್ ಮತ್ತು ವಾಚ್‌ ಅನ್ನು ಸಂಗ್ರಹಿಸಿದ್ದೇವೆ ಎಂದು ತಿಳಿಸಿದ್ದಾರೆ.

“ಕಳೆದ ನಾಲ್ಕು ದಿನಗಳಲ್ಲಿ, ನಾವು ಡಿಎನ್‌ಎ ಪ್ರೊಫೈಲಿಂಗ್ ಮಾಡಿದ್ದೇವೆ, ಅಪರಾಧವನ್ನು ಸಾಬೀತುಪಡಿಸಲು ವೈಜ್ಞಾನಿಕ ಪುರಾವೆಗಳನ್ನು ಸಂಗ್ರಹಿಸಿದ್ದೇವೆ. ನಾಲ್ವರು ಹಾರ್ಡ್‌ಕೋರ್ ಆರೋಪಿಗಳು ಇತರ ಅಪರಾಧಗಳಲ್ಲಿಯೂ ಭಾಗಿಯಾದ ಶಂಕೆಯಿದೆ ಎಂದು ಪೊಲೀಸ್ ಮುಖ್ಯಸ್ಥರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪೊಲೀಸರ ಈ ಕಟ್ಟುಕತೆಯನ್ನು ನಂಬುವುದು ಸಾಧ್ಯವಿಲ್ಲ. ಅತ್ಯಾಚಾರದ ಆರೋಪಿಗಳನ್ನು ಕೈಕೋಳ ತೊಡಿಸದೆಯೇ ಸ್ಥಳ ಪರಿಶೀಲನೆಗೆ ಕರೆದುಕೊಂಡು ಹೋಗಿದ್ದು ಕರ್ತವ್ಯಲೋಪ ಅಥವಾ ಪೂರ್ವನಿಯೋಜಿತ ಸಂಚು.

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...