Homeಮುಖಪುಟತೆಲಂಗಾಣ ಎನ್‌ಕೌಂಟರ್‌: ಕಾನೂನು ತನ್ನ ಕರ್ತವ್ಯವನ್ನು ಮುಗಿಸಿದೆ - ಸಜ್ಜನಾರ್

ತೆಲಂಗಾಣ ಎನ್‌ಕೌಂಟರ್‌: ಕಾನೂನು ತನ್ನ ಕರ್ತವ್ಯವನ್ನು ಮುಗಿಸಿದೆ – ಸಜ್ಜನಾರ್

- Advertisement -
- Advertisement -

ಪಶುವೈದ್ಯೆಯ ಸಾಮೂಹಿಕ ಅತ್ಯಾಚಾರ, ಕೊಲೆಯ ಆರೋಪಿಗಳನ್ನು ಎನ್‌ಕೌಂಟರ್‌ ಮಾಡಿದ ಸೈಬರಾಬಾದ್ ಪೊಲೀಸ್‌ ಮುಖ್ಯಸ್ಥ ಸಜ್ಜನಾರ್ ಕಾನೂನು ತನ್ನ ಕರ್ತವ್ಯವನ್ನು ನಿರ್ವಹಿಸಿದೆ ಎಂದು ಹೇಳಿದ್ದಾರೆ.

ಇಂದು ಬೆಳ್ಳಂಬೆಳಿಗ್ಗೆ ನಡೆದ ಎನ್‌ಕೌಂಟರ್‌ ಕುರಿತು ಮಾಹಿತಿ ನೀಡಲು ಎನ್‌ಕೌಟರ್‌ ನಡೆದ ಸ್ಥಳದಲ್ಲಿಯೇ ಪತ್ರಿಕಾಗೋಷ್ಟಿ ನಡೆಸಿದ ಅವರು ನಾಲ್ವರು ಆರೋಪಿಗಳು ನಮ್ಮ ಪೊಲೀಸರ ಗನ್‌ಗಳನ್ನು ಕಸಿದುಕೊಂಡರು. ಹಾಗಾಗಿ ನಾವು ಗುಂಡು ಹಾರಿಸಬೇಕಾಯಿತು ಎಂದಿದ್ದಾರೆ.

ಈ ನಡುವೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಘಟನೆಯ ಕುರಿತು ತನಿಖೆಗೆ ಆದೇಶಿಸಿದ್ದು ಕೇಂದ್ರ ಗೃಹ ಇಲಾಖೆಗೂ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಬಂದ ಪ್ರಶ್ನೆಗಳಿಗೆ ಅವರು ಉತ್ತರಿಸಿದ್ದಾರೆ.

10 ಜನ ಪೊಲೀಸ್ ಅಧಿಕಾರಿಗಳು ನಾಲ್ವರು ಆರೋಪಿಗಳೊಂದಿಗೆ ಘಟನೆಯನ್ನು ಮರುನಿರೂಪಿಸಲು ಮತ್ತು ಸಂತ್ರಸ್ತೆಯ ಕಳೆದುಕೊಂಡಿದ್ದ ಕೆಲ ವಸ್ತುಗಳನ್ನು ಹುಡುಕಲು ಸ್ಥಳಕ್ಕೆ ಹೋಗಿದ್ದೆವು. ಆಗ ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದರು. ಕಲ್ಲು ಕೋಲುಗಳಿಂದ ನಮ್ಮ ಮೇಲೆ ದಾಳಿ ಮಾಡಿದರು. ನಾವು ನಮ್ಮ ಪೊಲೀಸರಿಗೆ ಸಂಯಮದಿಂದಿರಲು ಸೂಚಿಸಿದ್ದೆವು. ಹಾಗೆಯೇ ಅವರಿಗೆ ಶರಣಾಗಲು ಎಚ್ಚರಿಕೆ ನೀಡಿದೆವು. ಆದರೆ ಅವರು ನಮ್ಮ ಎರಡು ಗನ್‌ಗಳನ್ನು ಕಿತ್ತುಕೊಂಡು ಪರಾರಿಯಾಗಲು ಪ್ರಯತ್ನಿಸಿದರು ಆಗ ನಾವು ಫೈರ್‌ ಮಾಡಬೇಕಾಯಿತು ಎಂದು ಮಾಹಿತಿ ನೀಡಿದ್ದಾರೆ.

ಇಂದು ಮುಂಜಾನೆ 5:30ರ ಸಮಯದಲ್ಲಿ ನಾವು ಅಲ್ಲಿಗೆ ಹೋಗಿದ್ದೆವು. ಅವರಿಗೆ ಕೈಕೊಳ ಹಾಕಿರಲಿಲ್ಲ. 10 ಸದಸ್ಯರ ತಂಡದಲ್ಲಿದ್ದ ಇಬ್ಬರು ಪೊಲೀಸರು ತಲೆಗೆ ಗಾಯಗಳಾಗಿವೆ ಎಂದು ಅವರು ಹೇಳಿದ್ದಾರೆ.

ಮುಹಮ್ಮದ್ ಆರಿಫ್ (26), ಜೊಲ್ಲು ಶಿವ (20), ಜೊಲ್ಲು ನವೀನ್ (20) ಮತ್ತು ಚಿಂತಕುಂಟ ಚೆನ್ನಕೇಶವುಲು (20) ಎನ್‌ಕೌಂಟರ್‌ ನಲ್ಲಿ ಹತರಾದ ಆರೋಪಿಗಳಾಗಿದ್ದಾರೆ.

ಕಳೆದ ನಾಲ್ಕು ದಿನಗಳಿಂದ ನಡೆಸಿದ ವಿಚಾರಣೆಯಲ್ಲಿ ಹಲವು ವಿವರಗಳು ಬಹಿರಂಗಗೊಂಡಿವೆ ಎಂದು ಸಜ್ಜನಾರ್ ತಿಳಿಸಿದ್ದಾರೆ. ಇದರ ಆಧಾರದ ಮೇಲೆ ಪೊಲೀಸ್ ತಂಡವು ಆರೋಪಿಗಳನ್ನು ಕರೆದೊಯ್ದು ಸಂತ್ರಸ್ತೆಯ ಮೊಬೈಲ್ ಫೋನ್, ಪವರ್‌ ಬ್ಯಾಂಕ್ ಮತ್ತು ವಾಚ್‌ ಅನ್ನು ಸಂಗ್ರಹಿಸಿದ್ದೇವೆ ಎಂದು ತಿಳಿಸಿದ್ದಾರೆ.

“ಕಳೆದ ನಾಲ್ಕು ದಿನಗಳಲ್ಲಿ, ನಾವು ಡಿಎನ್‌ಎ ಪ್ರೊಫೈಲಿಂಗ್ ಮಾಡಿದ್ದೇವೆ, ಅಪರಾಧವನ್ನು ಸಾಬೀತುಪಡಿಸಲು ವೈಜ್ಞಾನಿಕ ಪುರಾವೆಗಳನ್ನು ಸಂಗ್ರಹಿಸಿದ್ದೇವೆ. ನಾಲ್ವರು ಹಾರ್ಡ್‌ಕೋರ್ ಆರೋಪಿಗಳು ಇತರ ಅಪರಾಧಗಳಲ್ಲಿಯೂ ಭಾಗಿಯಾದ ಶಂಕೆಯಿದೆ ಎಂದು ಪೊಲೀಸ್ ಮುಖ್ಯಸ್ಥರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪೊಲೀಸರ ಈ ಕಟ್ಟುಕತೆಯನ್ನು ನಂಬುವುದು ಸಾಧ್ಯವಿಲ್ಲ. ಅತ್ಯಾಚಾರದ ಆರೋಪಿಗಳನ್ನು ಕೈಕೋಳ ತೊಡಿಸದೆಯೇ ಸ್ಥಳ ಪರಿಶೀಲನೆಗೆ ಕರೆದುಕೊಂಡು ಹೋಗಿದ್ದು ಕರ್ತವ್ಯಲೋಪ ಅಥವಾ ಪೂರ್ವನಿಯೋಜಿತ ಸಂಚು.

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...