Homeಮುಖಪುಟತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

- Advertisement -
- Advertisement -

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು. ಇಂದು, ಕೊಲೆ ಮಾಡಿದ ತಂಡವನ್ನು ಪೊಲೀಸರು ಬಂಧಿಸಿದ್ದಾರೆ.

ಅಪಘಾತ ಸ್ಥಳದಲ್ಲಿದ್ದ ಬುಲೆರೋ ವಾಹನ ಚಾಲಕನನ್ನು ಹಿಡಿದು ಪೊಲೀಸರು ವಿಚಾರಣೆ ನಡೆಸಿದಾಗ ಈ ಸುಪಾರಿ ಗ್ಯಾಂಗ್ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ. ಗ್ಯಾಂಗ್ ನ್ನು ವಶಪಡಿಸಿಕೊಂಡು ವಿಚಾರಣೆ ನಡೆಸಿ ತನಿಖೆ ಮಾಡಿದಾಗ, ನಂದಿನ್ನಿ ಗ್ರಾಮದ ರೈಸ್ ಮಿಲ್ ಮಾಲೀಕರಾದ ಮಿಲ್ ಈರಣ್ಣ ಈ ಹತ್ಯೆ ಮಾಡಿಸಿದ್ದಾರೆ ಎನ್ನುವುದು ತಿಳಿದುಬಂದಿದೆ.

ಮಿಲ್ ಈರಣ್ಣ, ರಾಯಲಸೀಮಾ ಸುಪಾರಿ ಗ್ಯಾಂಗ್ ಜೊತೆ 15 ಲಕ್ಷ ರೂಪಾಯಿಗೆ ಒಪ್ಪಂದ ಮಾಡಿಕೊಂಡು ಕೊಲೆ ಮಾಡಲು ಸಂಚು ರೂಪಿಸಿದ್ದರು. ಸುಪಾರಿ ಗ್ಯಾಂಗ್ ಒಂದು ವಾರದಿಂದ ಭೀಮರಾಯನ ಬೆನ್ನುಹತ್ತು, ಆತ ಒಬ್ಬಂಟಿಯಾಗಿ ಇರುವ ಸಂದರ್ಭ ನೋಡಿ ಅಪಘಾತ ಮಾಡಿಸಿ ಕೊಲೆ ಮಾಡಿದ್ದಾರೆ.

ಕಳೆದ ಶುಕ್ರವಾರದಿಂದ ವಿಚಾರಣೆ ನಡೆಸಿದ ಪೊಲೀಸರು, ಇಂದು ಹತ್ತು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 8 ಲಕ್ಷ 50 ಸಾವಿರ ರುಪಾಯಿ ಹಣ, ನಾಲ್ಕು ಕಾರು, ಒಂದು ಫೋರ್ ವಿಲ್ಹರ್ ಬೊಲೆರೋ ವಾಹನ, ಎರಡು ದ್ವಿಚಕ್ರ ವಾಹನ, ಹನ್ನೊಂದು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ, ಪ್ರಮುಖ ಆರೋಪಿಗಳನ್ನು ಬಂಧಿಸಿ ಪೋಲಿಸ್ ಕಸ್ಟಡಿಗೆ ಹಾಕಲಾಗಿದೆ ಎಂದು ಜಿಲ್ಲಾ ಎಸ್.ಪಿ ಟಿ. ಶ್ರೀನಿವಾಸ್ ರಾವ್ ತಿಳಿಸಿದ್ದಾರೆ.

ಕೊಲೆಯ ಬಳಿಕ ಮೃತ ದೇಹ ಗದ್ವಾಲದಿಂದ ಗ್ರಾಮಕ್ಕೆ ತಂದಾಗ ಅಪಾರ ಅಭಿಮಾನಿಗಳು ಗ್ರಾಮದಲ್ಲಿ ನೆರೆದಿದ್ದರು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಇದೇ ಸಂದರ್ಭದಲ್ಲಿ ಮೃತ ದೇಹ ಒಂದು ಕಡೆಯಾದರೆ ಇನ್ನೊಂದು ಕಡೆ ರೈಸ್ ಮಿಲ್ಲಿನ ಮೇಲೆ ಕಲ್ಲು ಎಸೆದು ಗದ್ದಲ ನಡೆದಾಗ
ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ಸಂಭವಿಸಿತ್ತು.

ಪೊಲೀಸರು ಮಧ್ಯೆಪ್ರವೇಶಿಸಿ, ಅಂತ್ಯ ಸಂಸ್ಕಾರ ಆಗುವವರೆಗೂ ರೈಸ್ ಮಿಲ್ಲಿನ ಸುತ್ತಾ ಸರ್ಪಗಾವಲಾಗಿದ್ದರು. ಮತ್ತೆ ದಾಳಿ ನಡೆಯಬಹುದು, ಗಲಾಟೆಗಳು ನಡೆಯಬಹುದು ಎಂದು ಗ್ರಾಮದಲ್ಲಿ ಪೊಲೀಸರು ಕಾವಲಾಗಿ ನಿಂತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...