Homeಮುಖಪುಟತೆಲಂಗಾಣ: 18 ವರ್ಷಗಳ ಜೈಲುವಾಸದ ನಂತರ ದುಬೈನಿಂದ ಆಗಮಿಸಿದ ಐವರು

ತೆಲಂಗಾಣ: 18 ವರ್ಷಗಳ ಜೈಲುವಾಸದ ನಂತರ ದುಬೈನಿಂದ ಆಗಮಿಸಿದ ಐವರು

- Advertisement -
- Advertisement -

ಕ್ರಿಮಿನಲ್ ಪ್ರಕರಣವೊಂದರಲ್ಲಿ ಅರಬ್‌ನಲ್ಲಿ ಶಿಕ್ಷೆಗೆ ಗುರಿಯಾಗಿದ್ದ ತೆಲಂಗಾಣದ ಐವರು ಪುರುಷರು 18 ವರ್ಷಗಳ ನಂತರ ದುಬೈನಿಂದ ತವರಿಗೆ ಮರಳಿದ್ದಾರೆ. ತಮ್ಮವರನ್ನು ಕಂಡ ಖುಷಿಯಲ್ಲಿ, ವಿಮಾನ ನಿಲ್ದಾಣದಲ್ಲೇ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ.

ತಮ್ಮ ವಾಪಸಾತಿಗೆ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕ ಕೆಟಿ ರಾಮರಾವ್ (ಕೆಟಿಆರ್) ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಹೇಳಿರುವ ಎಲ್ಲ ಐವರು ಪುರುಷರು ರಾಜ್ಯದ ರಾಜಣ್ಣ ಸಿರಿಸಿಲ್ಲಾ ಜಿಲ್ಲೆಯ ನಿವಾಸಿಗಳು. ಬಿಆರ್‌ಎಸ್‌ ಪಕ್ಷವು ಅವರ ಕುಟುಂಬ ಸದಸ್ಯರೊಂದಿಗೆ ನಿವಾಸಿಗಳ ಪುನರ್ಮಿಲನದ ಭಾವನಾತ್ಮಕ ವೀಡಿಯೊವನ್ನು ಹಂಚಿಕೊಂಡಿದೆ.

ಐದು ಜನರ ಮೇಲೆ ಕ್ರಿಮಿನಲ್ ಆರೋಪ

ತೆಲಂಗಾಣದ ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯ ನಿವಾಸಿಗಳಾದ ಶಿವರಾತ್ರಿ ಮಲ್ಲೇಶ್, ಶಿವರಾತ್ರಿ ರವಿ, ಗೊಲ್ಲೆಂ ನಾಂಪಲ್ಲಿ, ದುಂಡುಗುಲ ಲಕ್ಷ್ಮಣ್ ಮತ್ತು ಶಿವರಾತ್ರಿ ಹನ್ಮಂತು ಎಂಬ ಐವರು ನೇಪಾಳದ ಪ್ರಜೆಯೊಬ್ಬರನ್ನು 2005ರಲ್ಲಿ ದುಬೈನಲ್ಲಿ ಕೆಲಸ ಮಾಡುತ್ತಿದ್ದಾಗ ಹತ್ಯೆ ಮಾಡಿದ ಆರೋಪದ ಮೇಲೆ, 25 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದರು.

ದುಬೈನಲ್ಲಿ ವಾಚ್‌ಮನ್ ಆಗಿ ಕೆಲಸ ಮಾಡುತ್ತಿದ್ದ ಬಹದ್ದೂರ್ ಸಿಂಗ್ ಎಂಬ ಮೃತ ನೇಪಾಳದ ಪ್ರಜೆಯ ಕುಟುಂಬವನ್ನು ಭೇಟಿ ಮಾಡಲು ಕೆಟಿಆರ್ ನೇಪಾಳಕ್ಕೆ ಹೋಗಿದ್ದರು ಎಂದು ಬಿಆರ್‌ಎಸ್ ಹೇಳಿಕೊಂಡಿದೆ. ದುಬೈನಲ್ಲಿನ ಕಾನೂನಿನ ಪ್ರಕಾರ, ಬಹದ್ದೂರ್ ಅವರ ಕುಟುಂಬ ಸದಸ್ಯರು ಕ್ಷಮೆ ನೀಡಿದರೆ ಐವರನ್ನು ಬಿಡುಗಡೆ ಮಾಡುವ ಸಾಧ್ಯತೆಯಿತ್ತು. ಆದ್ದರಿಂದ, ಕೆಟಿಆರ್ ಬಹದ್ದೂರ್ ಕುಟುಂಬಸ್ಥರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ.

ನೇಪಾಳದ ಬಹದ್ದೂರ್ ಅವರ ಕುಟುಂಬ ಸದಸ್ಯರು, ವಕೀಲರು ಮತ್ತು ಇತರ ಪ್ರತಿನಿಧಿಗಳ ಸಹಾಯದಿಂದ ಕ್ಷಮಾದಾನಕ್ಕೆ ಸಹಿ ಹಾಕಿದರು. ನೇಪಾಳದ ಪ್ರಜೆಯ ಕುಟುಂಬಕ್ಕೆ ಕೆಟಿಆರ್ ₹15 ಲಕ್ಷ ಚೆಕ್ ನೀಡಿದ್ದಾರೆ ಎಂದು ಬಿಆರ್‌ಎಸ್ ಹೇಳಿಕೊಂಡಿದೆ.

‘ಬಿಆರ್‌ಎಸ್ ಕಾರ್ಯಾಧ್ಯಕ್ಷ ಮತ್ತು ಮಾಜಿ ಸಚಿವರ ಸತತ ಪ್ರಯತ್ನದಿಂದ ರಾಜಣ್ಣ ಸಿರಿಸಿಲ್ಲ ಜಿಲ್ಲೆಯ ನಿವಾಸಿಗಳು 18 ವರ್ಷಗಳ ಜೈಲುವಾಸದ ನಂತರ ದುಬೈನಿಂದ ಮನೆಗೆ ಮರಳಿದರು. ಮಾಜಿ ಸಚಿವ ಹಾಗೂ ಶಾಸಕರಾದ ಕೆಟಿಆರ್ ಅವರು  ಎಲ್ಲರಿಗೂ ವಿಮಾನ ಟಿಕೆಟ್ ವ್ಯವಸ್ಥೆ ಮಾಡಿದರು’ ಎಂದು ಬಿಆರ್‌ಎಸ್‌ ತನ್ನ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದೆ.

‘ಎರಡು ತಿಂಗಳ ಹಿಂದೆ ದುಬೈ ಜೈಲಿನಿಂದ ಬಿಡುಗಡೆಯಾಗಿದ್ದ ಕೋನರಾವ್ ಪೇಟೆ ಮಂಡಲದ ದಂಡುಂಗುಲ ಲಕ್ಷ್ಮಣ್. ಮತ್ತೊಬ್ಬ ರುದ್ರಂಗಿ ಮಂಡಲದ ಮನಾಳ ಗ್ರಾಮದ ಶಿವರಾತ್ರಿ ಹನ್ಮಂತು ಎರಡು ದಿನಗಳ ಹಿಂದೆ ಬಿಡುಗಡೆಗೊಂಡು ಮನೆಗೆ ತಲುಪಿದ್ದ. ದುಬೈ ನ್ಯಾಯಾಲಯದ ಕ್ಷಮಾದಾನದಿಂದಾಗಿ ಜಿಲ್ಲೆಯ ನಿವಾಸಿಗಳು ಮನೆಗೆ ತೆರಳುತ್ತಿದ್ದಾರೆ. ಪೆದ್ದೂರು ಗ್ರಾಮದ ಶಿವರಾತ್ರಿ ಮಲ್ಲೇಶಂ ಹಾಗೂ ರವಿ ಎಂಬ ಇಬ್ಬರು ಸಹೋದರರು ಇದೇ ತಿಂಗಳ 21ರಂದು ಬಿಡುಗಡೆಯಾಗಿದ್ದರು. ಚಂದೂರ್ತಿ ಮಂಡಲದ ಮತ್ತೊಬ್ಬ ವ್ಯಕ್ತಿ ವೆಂಕಟೇಶ್ ಮುಂದಿನ ತಿಂಗಳು ಬಿಡುಗಡೆಯಾಗಲಿದ್ದಾರೆ’ ಎಂದು ಬಿಆರ್‌ಎಸ್‌ ಹೇಳಿದೆ.

‘ರಾಜಣ್ಣ ಸಿರಿಸಿಲ್ಲ ಜಿಲ್ಲೆಯ ಚಂದೂರ್ತಿ ಮಂಡಲದ ಕೋನರಾವ್ ಪೇಟೆ ಗ್ರಾಮದ ಗೋಲಂ ನಾಂಪಳ್ಳಿ, ಶಿವರಾತ್ರಿ ಹನುಮಂಡ್ಲು ಹಾಗೂ ದಂಡುಂಗುಲ ಲಕ್ಷ್ಮಣ್ ದುಬೈಗೆ ತೆರಳಿದ್ದರು. ಹೋದ ಆರು ತಿಂಗಳ ನಂತರ ನೇಪಾಳದ ಬಹದ್ದೂರ್ ಸಿಂಗ್ ಎಂಬ ಕಾವಲುಗಾರನ ಕೊಲೆ ಮಾಡಲಾಯಿತು. ಅಲ್ಲಿ ಕೆಲಸ ಮಾಡುತ್ತಿರುವ ಜಿಲ್ಲೆಯ ಐವರು ನಿವಾಸಿಗಳು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿತ್ತು. ಭಾಷೆ ಸಂವಹನದ ಕಾರಣದಿಂದ ಪೊಲೀಸರಿಗೆ ಏನು ಹೇಳಿದ್ದಾರೋ ಗೊತ್ತಿಲ್ಲ. ಆದರೆ, ಶಿಕ್ಷೆ ಸಾಬೀತಾಗಿದ್ದು, ದುಬೈ ಕೋರ್ಟ್ ಆರಂಭದಲ್ಲಿ ಹತ್ತು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಮೇಲ್ಮನವಿ ಸಲ್ಲಿಸಿದ ನಂತರ, 25 ವರ್ಷಗಳ ಶಿಕ್ಷೆ ವಿಧಿಸಲಾಯಿತು. ದುಬೈನ ಕಾನೂನು ಪ್ರಕಾರ ಕೊಲೆಯಾದವರ ಕುಟುಂಬಸ್ಥರು ಕ್ಷಮೆ ಯಾಚಿಸಿದರೆ ಬಿಡುಗಡೆ ಸಾಧ್ಯತೆ ಇದ್ದು, 2011ರಲ್ಲಿ ಶಾಸಕ ಕೆ.ಟಿ.ಆರ್ ಒಮ್ಮೆ ನೇಪಾಳಕ್ಕೆ ತೆರಳಿದ್ದರು’ ಎಂದು ಹೇಳಿದೆ.

‘ನೇಪಾಳದ ಬಹದ್ದೂರ್ ಅವರ ಕುಟುಂಬ ಸದಸ್ಯರು ವಕೀಲ ಅನುರಾಧ ಮತ್ತು ಇತರ ಪ್ರತಿನಿಧಿಗಳ ಸಹಾಯದಿಂದ ಕ್ಷಮಾದಾನಕ್ಕೆ ಸಹಿ ಹಾಕಿದರು. ಆರ್ಥಿಕವಾಗಿ ಕೆಟಿಆರ್ ಅವರಿಗೆ ಹದಿನೈದು ಲಕ್ಷ ರೂಪಾಯಿ ಚೆಕ್ ನೀಡಿದರು. ಅವರ ಕ್ಷಮಾದಾನ ಅರ್ಜಿಯನ್ನು ದುಬೈ ನ್ಯಾಯಾಲಯವು ತಿರಸ್ಕರಿಸಿತು. ಇದು ದುಬೈನಲ್ಲಿನ ಕಾನೂನುಗಳ ಬದಲಾವಣೆಯಿಂದಾಗಿ ಅವರ ಬಿಡುಗಡೆಗೆ ತಡವಾಯಿತು. ಸೆಪ್ಟೆಂಬರ್‌ನಲ್ಲಿ ಸಚಿವ ಕೆಟಿಆರ್ ಅವರು ಸಂತ್ರಸ್ತೆಯ ಕುಟುಂಬ ಸದಸ್ಯರೊಂದಿಗೆ ದುಬೈ ಕೋರ್ಟ್‌ನಲ್ಲಿ ಪ್ರಕರಣವನ್ನು ಪರಿಶೀಲಿಸಿದರು ಮತ್ತು ಕೇಂದ್ರ ವಿದೇಶಾಂಗ ಸಚಿವಾಲಯದ ಸಹಾಯದಿಂದ ದುಬೈ ರಾಜನ ಅಪಾಯಿಂಟ್‌ಮೆಂಟ್ ಪಡೆದು ಈ ಪ್ರಕರಣದಲ್ಲಿ ಕ್ಷಮಾದಾನ ಕೋರಿದರು’ ಎಂದು ಪಕ್ಷ ಹೇಳಿಕೊಂಡಿದೆ.

ಇದನ್ನೂ ಓದಿ; ಹರಿಯಾಣ 160 ರೈತರನ್ನು ಗಾಯಗೊಳಿಸಿದ್ದರೂ ನಮ್ಮ ಪೊಲೀಸರು ಜವಾಬ್ದಾರಿಯಿಂದ ನಡೆದುಕೊಂಡಿದ್ದಾರೆ: ಪಂಜಾಬ್ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...