Homeಮುಖಪುಟತೆಲಂಗಾಣ: 18 ವರ್ಷಗಳ ಜೈಲುವಾಸದ ನಂತರ ದುಬೈನಿಂದ ಆಗಮಿಸಿದ ಐವರು

ತೆಲಂಗಾಣ: 18 ವರ್ಷಗಳ ಜೈಲುವಾಸದ ನಂತರ ದುಬೈನಿಂದ ಆಗಮಿಸಿದ ಐವರು

- Advertisement -
- Advertisement -

ಕ್ರಿಮಿನಲ್ ಪ್ರಕರಣವೊಂದರಲ್ಲಿ ಅರಬ್‌ನಲ್ಲಿ ಶಿಕ್ಷೆಗೆ ಗುರಿಯಾಗಿದ್ದ ತೆಲಂಗಾಣದ ಐವರು ಪುರುಷರು 18 ವರ್ಷಗಳ ನಂತರ ದುಬೈನಿಂದ ತವರಿಗೆ ಮರಳಿದ್ದಾರೆ. ತಮ್ಮವರನ್ನು ಕಂಡ ಖುಷಿಯಲ್ಲಿ, ವಿಮಾನ ನಿಲ್ದಾಣದಲ್ಲೇ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ.

ತಮ್ಮ ವಾಪಸಾತಿಗೆ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕ ಕೆಟಿ ರಾಮರಾವ್ (ಕೆಟಿಆರ್) ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಹೇಳಿರುವ ಎಲ್ಲ ಐವರು ಪುರುಷರು ರಾಜ್ಯದ ರಾಜಣ್ಣ ಸಿರಿಸಿಲ್ಲಾ ಜಿಲ್ಲೆಯ ನಿವಾಸಿಗಳು. ಬಿಆರ್‌ಎಸ್‌ ಪಕ್ಷವು ಅವರ ಕುಟುಂಬ ಸದಸ್ಯರೊಂದಿಗೆ ನಿವಾಸಿಗಳ ಪುನರ್ಮಿಲನದ ಭಾವನಾತ್ಮಕ ವೀಡಿಯೊವನ್ನು ಹಂಚಿಕೊಂಡಿದೆ.

ಐದು ಜನರ ಮೇಲೆ ಕ್ರಿಮಿನಲ್ ಆರೋಪ

ತೆಲಂಗಾಣದ ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯ ನಿವಾಸಿಗಳಾದ ಶಿವರಾತ್ರಿ ಮಲ್ಲೇಶ್, ಶಿವರಾತ್ರಿ ರವಿ, ಗೊಲ್ಲೆಂ ನಾಂಪಲ್ಲಿ, ದುಂಡುಗುಲ ಲಕ್ಷ್ಮಣ್ ಮತ್ತು ಶಿವರಾತ್ರಿ ಹನ್ಮಂತು ಎಂಬ ಐವರು ನೇಪಾಳದ ಪ್ರಜೆಯೊಬ್ಬರನ್ನು 2005ರಲ್ಲಿ ದುಬೈನಲ್ಲಿ ಕೆಲಸ ಮಾಡುತ್ತಿದ್ದಾಗ ಹತ್ಯೆ ಮಾಡಿದ ಆರೋಪದ ಮೇಲೆ, 25 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದರು.

ದುಬೈನಲ್ಲಿ ವಾಚ್‌ಮನ್ ಆಗಿ ಕೆಲಸ ಮಾಡುತ್ತಿದ್ದ ಬಹದ್ದೂರ್ ಸಿಂಗ್ ಎಂಬ ಮೃತ ನೇಪಾಳದ ಪ್ರಜೆಯ ಕುಟುಂಬವನ್ನು ಭೇಟಿ ಮಾಡಲು ಕೆಟಿಆರ್ ನೇಪಾಳಕ್ಕೆ ಹೋಗಿದ್ದರು ಎಂದು ಬಿಆರ್‌ಎಸ್ ಹೇಳಿಕೊಂಡಿದೆ. ದುಬೈನಲ್ಲಿನ ಕಾನೂನಿನ ಪ್ರಕಾರ, ಬಹದ್ದೂರ್ ಅವರ ಕುಟುಂಬ ಸದಸ್ಯರು ಕ್ಷಮೆ ನೀಡಿದರೆ ಐವರನ್ನು ಬಿಡುಗಡೆ ಮಾಡುವ ಸಾಧ್ಯತೆಯಿತ್ತು. ಆದ್ದರಿಂದ, ಕೆಟಿಆರ್ ಬಹದ್ದೂರ್ ಕುಟುಂಬಸ್ಥರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ.

ನೇಪಾಳದ ಬಹದ್ದೂರ್ ಅವರ ಕುಟುಂಬ ಸದಸ್ಯರು, ವಕೀಲರು ಮತ್ತು ಇತರ ಪ್ರತಿನಿಧಿಗಳ ಸಹಾಯದಿಂದ ಕ್ಷಮಾದಾನಕ್ಕೆ ಸಹಿ ಹಾಕಿದರು. ನೇಪಾಳದ ಪ್ರಜೆಯ ಕುಟುಂಬಕ್ಕೆ ಕೆಟಿಆರ್ ₹15 ಲಕ್ಷ ಚೆಕ್ ನೀಡಿದ್ದಾರೆ ಎಂದು ಬಿಆರ್‌ಎಸ್ ಹೇಳಿಕೊಂಡಿದೆ.

‘ಬಿಆರ್‌ಎಸ್ ಕಾರ್ಯಾಧ್ಯಕ್ಷ ಮತ್ತು ಮಾಜಿ ಸಚಿವರ ಸತತ ಪ್ರಯತ್ನದಿಂದ ರಾಜಣ್ಣ ಸಿರಿಸಿಲ್ಲ ಜಿಲ್ಲೆಯ ನಿವಾಸಿಗಳು 18 ವರ್ಷಗಳ ಜೈಲುವಾಸದ ನಂತರ ದುಬೈನಿಂದ ಮನೆಗೆ ಮರಳಿದರು. ಮಾಜಿ ಸಚಿವ ಹಾಗೂ ಶಾಸಕರಾದ ಕೆಟಿಆರ್ ಅವರು  ಎಲ್ಲರಿಗೂ ವಿಮಾನ ಟಿಕೆಟ್ ವ್ಯವಸ್ಥೆ ಮಾಡಿದರು’ ಎಂದು ಬಿಆರ್‌ಎಸ್‌ ತನ್ನ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದೆ.

‘ಎರಡು ತಿಂಗಳ ಹಿಂದೆ ದುಬೈ ಜೈಲಿನಿಂದ ಬಿಡುಗಡೆಯಾಗಿದ್ದ ಕೋನರಾವ್ ಪೇಟೆ ಮಂಡಲದ ದಂಡುಂಗುಲ ಲಕ್ಷ್ಮಣ್. ಮತ್ತೊಬ್ಬ ರುದ್ರಂಗಿ ಮಂಡಲದ ಮನಾಳ ಗ್ರಾಮದ ಶಿವರಾತ್ರಿ ಹನ್ಮಂತು ಎರಡು ದಿನಗಳ ಹಿಂದೆ ಬಿಡುಗಡೆಗೊಂಡು ಮನೆಗೆ ತಲುಪಿದ್ದ. ದುಬೈ ನ್ಯಾಯಾಲಯದ ಕ್ಷಮಾದಾನದಿಂದಾಗಿ ಜಿಲ್ಲೆಯ ನಿವಾಸಿಗಳು ಮನೆಗೆ ತೆರಳುತ್ತಿದ್ದಾರೆ. ಪೆದ್ದೂರು ಗ್ರಾಮದ ಶಿವರಾತ್ರಿ ಮಲ್ಲೇಶಂ ಹಾಗೂ ರವಿ ಎಂಬ ಇಬ್ಬರು ಸಹೋದರರು ಇದೇ ತಿಂಗಳ 21ರಂದು ಬಿಡುಗಡೆಯಾಗಿದ್ದರು. ಚಂದೂರ್ತಿ ಮಂಡಲದ ಮತ್ತೊಬ್ಬ ವ್ಯಕ್ತಿ ವೆಂಕಟೇಶ್ ಮುಂದಿನ ತಿಂಗಳು ಬಿಡುಗಡೆಯಾಗಲಿದ್ದಾರೆ’ ಎಂದು ಬಿಆರ್‌ಎಸ್‌ ಹೇಳಿದೆ.

‘ರಾಜಣ್ಣ ಸಿರಿಸಿಲ್ಲ ಜಿಲ್ಲೆಯ ಚಂದೂರ್ತಿ ಮಂಡಲದ ಕೋನರಾವ್ ಪೇಟೆ ಗ್ರಾಮದ ಗೋಲಂ ನಾಂಪಳ್ಳಿ, ಶಿವರಾತ್ರಿ ಹನುಮಂಡ್ಲು ಹಾಗೂ ದಂಡುಂಗುಲ ಲಕ್ಷ್ಮಣ್ ದುಬೈಗೆ ತೆರಳಿದ್ದರು. ಹೋದ ಆರು ತಿಂಗಳ ನಂತರ ನೇಪಾಳದ ಬಹದ್ದೂರ್ ಸಿಂಗ್ ಎಂಬ ಕಾವಲುಗಾರನ ಕೊಲೆ ಮಾಡಲಾಯಿತು. ಅಲ್ಲಿ ಕೆಲಸ ಮಾಡುತ್ತಿರುವ ಜಿಲ್ಲೆಯ ಐವರು ನಿವಾಸಿಗಳು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿತ್ತು. ಭಾಷೆ ಸಂವಹನದ ಕಾರಣದಿಂದ ಪೊಲೀಸರಿಗೆ ಏನು ಹೇಳಿದ್ದಾರೋ ಗೊತ್ತಿಲ್ಲ. ಆದರೆ, ಶಿಕ್ಷೆ ಸಾಬೀತಾಗಿದ್ದು, ದುಬೈ ಕೋರ್ಟ್ ಆರಂಭದಲ್ಲಿ ಹತ್ತು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಮೇಲ್ಮನವಿ ಸಲ್ಲಿಸಿದ ನಂತರ, 25 ವರ್ಷಗಳ ಶಿಕ್ಷೆ ವಿಧಿಸಲಾಯಿತು. ದುಬೈನ ಕಾನೂನು ಪ್ರಕಾರ ಕೊಲೆಯಾದವರ ಕುಟುಂಬಸ್ಥರು ಕ್ಷಮೆ ಯಾಚಿಸಿದರೆ ಬಿಡುಗಡೆ ಸಾಧ್ಯತೆ ಇದ್ದು, 2011ರಲ್ಲಿ ಶಾಸಕ ಕೆ.ಟಿ.ಆರ್ ಒಮ್ಮೆ ನೇಪಾಳಕ್ಕೆ ತೆರಳಿದ್ದರು’ ಎಂದು ಹೇಳಿದೆ.

‘ನೇಪಾಳದ ಬಹದ್ದೂರ್ ಅವರ ಕುಟುಂಬ ಸದಸ್ಯರು ವಕೀಲ ಅನುರಾಧ ಮತ್ತು ಇತರ ಪ್ರತಿನಿಧಿಗಳ ಸಹಾಯದಿಂದ ಕ್ಷಮಾದಾನಕ್ಕೆ ಸಹಿ ಹಾಕಿದರು. ಆರ್ಥಿಕವಾಗಿ ಕೆಟಿಆರ್ ಅವರಿಗೆ ಹದಿನೈದು ಲಕ್ಷ ರೂಪಾಯಿ ಚೆಕ್ ನೀಡಿದರು. ಅವರ ಕ್ಷಮಾದಾನ ಅರ್ಜಿಯನ್ನು ದುಬೈ ನ್ಯಾಯಾಲಯವು ತಿರಸ್ಕರಿಸಿತು. ಇದು ದುಬೈನಲ್ಲಿನ ಕಾನೂನುಗಳ ಬದಲಾವಣೆಯಿಂದಾಗಿ ಅವರ ಬಿಡುಗಡೆಗೆ ತಡವಾಯಿತು. ಸೆಪ್ಟೆಂಬರ್‌ನಲ್ಲಿ ಸಚಿವ ಕೆಟಿಆರ್ ಅವರು ಸಂತ್ರಸ್ತೆಯ ಕುಟುಂಬ ಸದಸ್ಯರೊಂದಿಗೆ ದುಬೈ ಕೋರ್ಟ್‌ನಲ್ಲಿ ಪ್ರಕರಣವನ್ನು ಪರಿಶೀಲಿಸಿದರು ಮತ್ತು ಕೇಂದ್ರ ವಿದೇಶಾಂಗ ಸಚಿವಾಲಯದ ಸಹಾಯದಿಂದ ದುಬೈ ರಾಜನ ಅಪಾಯಿಂಟ್‌ಮೆಂಟ್ ಪಡೆದು ಈ ಪ್ರಕರಣದಲ್ಲಿ ಕ್ಷಮಾದಾನ ಕೋರಿದರು’ ಎಂದು ಪಕ್ಷ ಹೇಳಿಕೊಂಡಿದೆ.

ಇದನ್ನೂ ಓದಿ; ಹರಿಯಾಣ 160 ರೈತರನ್ನು ಗಾಯಗೊಳಿಸಿದ್ದರೂ ನಮ್ಮ ಪೊಲೀಸರು ಜವಾಬ್ದಾರಿಯಿಂದ ನಡೆದುಕೊಂಡಿದ್ದಾರೆ: ಪಂಜಾಬ್ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...