Homeಮುಖಪುಟತೆಲಂಗಾಣ: 18 ವರ್ಷಗಳ ಜೈಲುವಾಸದ ನಂತರ ದುಬೈನಿಂದ ಆಗಮಿಸಿದ ಐವರು

ತೆಲಂಗಾಣ: 18 ವರ್ಷಗಳ ಜೈಲುವಾಸದ ನಂತರ ದುಬೈನಿಂದ ಆಗಮಿಸಿದ ಐವರು

- Advertisement -
- Advertisement -

ಕ್ರಿಮಿನಲ್ ಪ್ರಕರಣವೊಂದರಲ್ಲಿ ಅರಬ್‌ನಲ್ಲಿ ಶಿಕ್ಷೆಗೆ ಗುರಿಯಾಗಿದ್ದ ತೆಲಂಗಾಣದ ಐವರು ಪುರುಷರು 18 ವರ್ಷಗಳ ನಂತರ ದುಬೈನಿಂದ ತವರಿಗೆ ಮರಳಿದ್ದಾರೆ. ತಮ್ಮವರನ್ನು ಕಂಡ ಖುಷಿಯಲ್ಲಿ, ವಿಮಾನ ನಿಲ್ದಾಣದಲ್ಲೇ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ.

ತಮ್ಮ ವಾಪಸಾತಿಗೆ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕ ಕೆಟಿ ರಾಮರಾವ್ (ಕೆಟಿಆರ್) ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಹೇಳಿರುವ ಎಲ್ಲ ಐವರು ಪುರುಷರು ರಾಜ್ಯದ ರಾಜಣ್ಣ ಸಿರಿಸಿಲ್ಲಾ ಜಿಲ್ಲೆಯ ನಿವಾಸಿಗಳು. ಬಿಆರ್‌ಎಸ್‌ ಪಕ್ಷವು ಅವರ ಕುಟುಂಬ ಸದಸ್ಯರೊಂದಿಗೆ ನಿವಾಸಿಗಳ ಪುನರ್ಮಿಲನದ ಭಾವನಾತ್ಮಕ ವೀಡಿಯೊವನ್ನು ಹಂಚಿಕೊಂಡಿದೆ.

ಐದು ಜನರ ಮೇಲೆ ಕ್ರಿಮಿನಲ್ ಆರೋಪ

ತೆಲಂಗಾಣದ ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯ ನಿವಾಸಿಗಳಾದ ಶಿವರಾತ್ರಿ ಮಲ್ಲೇಶ್, ಶಿವರಾತ್ರಿ ರವಿ, ಗೊಲ್ಲೆಂ ನಾಂಪಲ್ಲಿ, ದುಂಡುಗುಲ ಲಕ್ಷ್ಮಣ್ ಮತ್ತು ಶಿವರಾತ್ರಿ ಹನ್ಮಂತು ಎಂಬ ಐವರು ನೇಪಾಳದ ಪ್ರಜೆಯೊಬ್ಬರನ್ನು 2005ರಲ್ಲಿ ದುಬೈನಲ್ಲಿ ಕೆಲಸ ಮಾಡುತ್ತಿದ್ದಾಗ ಹತ್ಯೆ ಮಾಡಿದ ಆರೋಪದ ಮೇಲೆ, 25 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದರು.

ದುಬೈನಲ್ಲಿ ವಾಚ್‌ಮನ್ ಆಗಿ ಕೆಲಸ ಮಾಡುತ್ತಿದ್ದ ಬಹದ್ದೂರ್ ಸಿಂಗ್ ಎಂಬ ಮೃತ ನೇಪಾಳದ ಪ್ರಜೆಯ ಕುಟುಂಬವನ್ನು ಭೇಟಿ ಮಾಡಲು ಕೆಟಿಆರ್ ನೇಪಾಳಕ್ಕೆ ಹೋಗಿದ್ದರು ಎಂದು ಬಿಆರ್‌ಎಸ್ ಹೇಳಿಕೊಂಡಿದೆ. ದುಬೈನಲ್ಲಿನ ಕಾನೂನಿನ ಪ್ರಕಾರ, ಬಹದ್ದೂರ್ ಅವರ ಕುಟುಂಬ ಸದಸ್ಯರು ಕ್ಷಮೆ ನೀಡಿದರೆ ಐವರನ್ನು ಬಿಡುಗಡೆ ಮಾಡುವ ಸಾಧ್ಯತೆಯಿತ್ತು. ಆದ್ದರಿಂದ, ಕೆಟಿಆರ್ ಬಹದ್ದೂರ್ ಕುಟುಂಬಸ್ಥರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ.

ನೇಪಾಳದ ಬಹದ್ದೂರ್ ಅವರ ಕುಟುಂಬ ಸದಸ್ಯರು, ವಕೀಲರು ಮತ್ತು ಇತರ ಪ್ರತಿನಿಧಿಗಳ ಸಹಾಯದಿಂದ ಕ್ಷಮಾದಾನಕ್ಕೆ ಸಹಿ ಹಾಕಿದರು. ನೇಪಾಳದ ಪ್ರಜೆಯ ಕುಟುಂಬಕ್ಕೆ ಕೆಟಿಆರ್ ₹15 ಲಕ್ಷ ಚೆಕ್ ನೀಡಿದ್ದಾರೆ ಎಂದು ಬಿಆರ್‌ಎಸ್ ಹೇಳಿಕೊಂಡಿದೆ.

‘ಬಿಆರ್‌ಎಸ್ ಕಾರ್ಯಾಧ್ಯಕ್ಷ ಮತ್ತು ಮಾಜಿ ಸಚಿವರ ಸತತ ಪ್ರಯತ್ನದಿಂದ ರಾಜಣ್ಣ ಸಿರಿಸಿಲ್ಲ ಜಿಲ್ಲೆಯ ನಿವಾಸಿಗಳು 18 ವರ್ಷಗಳ ಜೈಲುವಾಸದ ನಂತರ ದುಬೈನಿಂದ ಮನೆಗೆ ಮರಳಿದರು. ಮಾಜಿ ಸಚಿವ ಹಾಗೂ ಶಾಸಕರಾದ ಕೆಟಿಆರ್ ಅವರು  ಎಲ್ಲರಿಗೂ ವಿಮಾನ ಟಿಕೆಟ್ ವ್ಯವಸ್ಥೆ ಮಾಡಿದರು’ ಎಂದು ಬಿಆರ್‌ಎಸ್‌ ತನ್ನ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದೆ.

‘ಎರಡು ತಿಂಗಳ ಹಿಂದೆ ದುಬೈ ಜೈಲಿನಿಂದ ಬಿಡುಗಡೆಯಾಗಿದ್ದ ಕೋನರಾವ್ ಪೇಟೆ ಮಂಡಲದ ದಂಡುಂಗುಲ ಲಕ್ಷ್ಮಣ್. ಮತ್ತೊಬ್ಬ ರುದ್ರಂಗಿ ಮಂಡಲದ ಮನಾಳ ಗ್ರಾಮದ ಶಿವರಾತ್ರಿ ಹನ್ಮಂತು ಎರಡು ದಿನಗಳ ಹಿಂದೆ ಬಿಡುಗಡೆಗೊಂಡು ಮನೆಗೆ ತಲುಪಿದ್ದ. ದುಬೈ ನ್ಯಾಯಾಲಯದ ಕ್ಷಮಾದಾನದಿಂದಾಗಿ ಜಿಲ್ಲೆಯ ನಿವಾಸಿಗಳು ಮನೆಗೆ ತೆರಳುತ್ತಿದ್ದಾರೆ. ಪೆದ್ದೂರು ಗ್ರಾಮದ ಶಿವರಾತ್ರಿ ಮಲ್ಲೇಶಂ ಹಾಗೂ ರವಿ ಎಂಬ ಇಬ್ಬರು ಸಹೋದರರು ಇದೇ ತಿಂಗಳ 21ರಂದು ಬಿಡುಗಡೆಯಾಗಿದ್ದರು. ಚಂದೂರ್ತಿ ಮಂಡಲದ ಮತ್ತೊಬ್ಬ ವ್ಯಕ್ತಿ ವೆಂಕಟೇಶ್ ಮುಂದಿನ ತಿಂಗಳು ಬಿಡುಗಡೆಯಾಗಲಿದ್ದಾರೆ’ ಎಂದು ಬಿಆರ್‌ಎಸ್‌ ಹೇಳಿದೆ.

‘ರಾಜಣ್ಣ ಸಿರಿಸಿಲ್ಲ ಜಿಲ್ಲೆಯ ಚಂದೂರ್ತಿ ಮಂಡಲದ ಕೋನರಾವ್ ಪೇಟೆ ಗ್ರಾಮದ ಗೋಲಂ ನಾಂಪಳ್ಳಿ, ಶಿವರಾತ್ರಿ ಹನುಮಂಡ್ಲು ಹಾಗೂ ದಂಡುಂಗುಲ ಲಕ್ಷ್ಮಣ್ ದುಬೈಗೆ ತೆರಳಿದ್ದರು. ಹೋದ ಆರು ತಿಂಗಳ ನಂತರ ನೇಪಾಳದ ಬಹದ್ದೂರ್ ಸಿಂಗ್ ಎಂಬ ಕಾವಲುಗಾರನ ಕೊಲೆ ಮಾಡಲಾಯಿತು. ಅಲ್ಲಿ ಕೆಲಸ ಮಾಡುತ್ತಿರುವ ಜಿಲ್ಲೆಯ ಐವರು ನಿವಾಸಿಗಳು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿತ್ತು. ಭಾಷೆ ಸಂವಹನದ ಕಾರಣದಿಂದ ಪೊಲೀಸರಿಗೆ ಏನು ಹೇಳಿದ್ದಾರೋ ಗೊತ್ತಿಲ್ಲ. ಆದರೆ, ಶಿಕ್ಷೆ ಸಾಬೀತಾಗಿದ್ದು, ದುಬೈ ಕೋರ್ಟ್ ಆರಂಭದಲ್ಲಿ ಹತ್ತು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಮೇಲ್ಮನವಿ ಸಲ್ಲಿಸಿದ ನಂತರ, 25 ವರ್ಷಗಳ ಶಿಕ್ಷೆ ವಿಧಿಸಲಾಯಿತು. ದುಬೈನ ಕಾನೂನು ಪ್ರಕಾರ ಕೊಲೆಯಾದವರ ಕುಟುಂಬಸ್ಥರು ಕ್ಷಮೆ ಯಾಚಿಸಿದರೆ ಬಿಡುಗಡೆ ಸಾಧ್ಯತೆ ಇದ್ದು, 2011ರಲ್ಲಿ ಶಾಸಕ ಕೆ.ಟಿ.ಆರ್ ಒಮ್ಮೆ ನೇಪಾಳಕ್ಕೆ ತೆರಳಿದ್ದರು’ ಎಂದು ಹೇಳಿದೆ.

‘ನೇಪಾಳದ ಬಹದ್ದೂರ್ ಅವರ ಕುಟುಂಬ ಸದಸ್ಯರು ವಕೀಲ ಅನುರಾಧ ಮತ್ತು ಇತರ ಪ್ರತಿನಿಧಿಗಳ ಸಹಾಯದಿಂದ ಕ್ಷಮಾದಾನಕ್ಕೆ ಸಹಿ ಹಾಕಿದರು. ಆರ್ಥಿಕವಾಗಿ ಕೆಟಿಆರ್ ಅವರಿಗೆ ಹದಿನೈದು ಲಕ್ಷ ರೂಪಾಯಿ ಚೆಕ್ ನೀಡಿದರು. ಅವರ ಕ್ಷಮಾದಾನ ಅರ್ಜಿಯನ್ನು ದುಬೈ ನ್ಯಾಯಾಲಯವು ತಿರಸ್ಕರಿಸಿತು. ಇದು ದುಬೈನಲ್ಲಿನ ಕಾನೂನುಗಳ ಬದಲಾವಣೆಯಿಂದಾಗಿ ಅವರ ಬಿಡುಗಡೆಗೆ ತಡವಾಯಿತು. ಸೆಪ್ಟೆಂಬರ್‌ನಲ್ಲಿ ಸಚಿವ ಕೆಟಿಆರ್ ಅವರು ಸಂತ್ರಸ್ತೆಯ ಕುಟುಂಬ ಸದಸ್ಯರೊಂದಿಗೆ ದುಬೈ ಕೋರ್ಟ್‌ನಲ್ಲಿ ಪ್ರಕರಣವನ್ನು ಪರಿಶೀಲಿಸಿದರು ಮತ್ತು ಕೇಂದ್ರ ವಿದೇಶಾಂಗ ಸಚಿವಾಲಯದ ಸಹಾಯದಿಂದ ದುಬೈ ರಾಜನ ಅಪಾಯಿಂಟ್‌ಮೆಂಟ್ ಪಡೆದು ಈ ಪ್ರಕರಣದಲ್ಲಿ ಕ್ಷಮಾದಾನ ಕೋರಿದರು’ ಎಂದು ಪಕ್ಷ ಹೇಳಿಕೊಂಡಿದೆ.

ಇದನ್ನೂ ಓದಿ; ಹರಿಯಾಣ 160 ರೈತರನ್ನು ಗಾಯಗೊಳಿಸಿದ್ದರೂ ನಮ್ಮ ಪೊಲೀಸರು ಜವಾಬ್ದಾರಿಯಿಂದ ನಡೆದುಕೊಂಡಿದ್ದಾರೆ: ಪಂಜಾಬ್ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...