Homeಮುಖಪುಟತೆಲಂಗಾಣ: 18 ವರ್ಷಗಳ ಜೈಲುವಾಸದ ನಂತರ ದುಬೈನಿಂದ ಆಗಮಿಸಿದ ಐವರು

ತೆಲಂಗಾಣ: 18 ವರ್ಷಗಳ ಜೈಲುವಾಸದ ನಂತರ ದುಬೈನಿಂದ ಆಗಮಿಸಿದ ಐವರು

- Advertisement -
- Advertisement -

ಕ್ರಿಮಿನಲ್ ಪ್ರಕರಣವೊಂದರಲ್ಲಿ ಅರಬ್‌ನಲ್ಲಿ ಶಿಕ್ಷೆಗೆ ಗುರಿಯಾಗಿದ್ದ ತೆಲಂಗಾಣದ ಐವರು ಪುರುಷರು 18 ವರ್ಷಗಳ ನಂತರ ದುಬೈನಿಂದ ತವರಿಗೆ ಮರಳಿದ್ದಾರೆ. ತಮ್ಮವರನ್ನು ಕಂಡ ಖುಷಿಯಲ್ಲಿ, ವಿಮಾನ ನಿಲ್ದಾಣದಲ್ಲೇ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ.

ತಮ್ಮ ವಾಪಸಾತಿಗೆ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕ ಕೆಟಿ ರಾಮರಾವ್ (ಕೆಟಿಆರ್) ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಹೇಳಿರುವ ಎಲ್ಲ ಐವರು ಪುರುಷರು ರಾಜ್ಯದ ರಾಜಣ್ಣ ಸಿರಿಸಿಲ್ಲಾ ಜಿಲ್ಲೆಯ ನಿವಾಸಿಗಳು. ಬಿಆರ್‌ಎಸ್‌ ಪಕ್ಷವು ಅವರ ಕುಟುಂಬ ಸದಸ್ಯರೊಂದಿಗೆ ನಿವಾಸಿಗಳ ಪುನರ್ಮಿಲನದ ಭಾವನಾತ್ಮಕ ವೀಡಿಯೊವನ್ನು ಹಂಚಿಕೊಂಡಿದೆ.

ಐದು ಜನರ ಮೇಲೆ ಕ್ರಿಮಿನಲ್ ಆರೋಪ

ತೆಲಂಗಾಣದ ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯ ನಿವಾಸಿಗಳಾದ ಶಿವರಾತ್ರಿ ಮಲ್ಲೇಶ್, ಶಿವರಾತ್ರಿ ರವಿ, ಗೊಲ್ಲೆಂ ನಾಂಪಲ್ಲಿ, ದುಂಡುಗುಲ ಲಕ್ಷ್ಮಣ್ ಮತ್ತು ಶಿವರಾತ್ರಿ ಹನ್ಮಂತು ಎಂಬ ಐವರು ನೇಪಾಳದ ಪ್ರಜೆಯೊಬ್ಬರನ್ನು 2005ರಲ್ಲಿ ದುಬೈನಲ್ಲಿ ಕೆಲಸ ಮಾಡುತ್ತಿದ್ದಾಗ ಹತ್ಯೆ ಮಾಡಿದ ಆರೋಪದ ಮೇಲೆ, 25 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದರು.

ದುಬೈನಲ್ಲಿ ವಾಚ್‌ಮನ್ ಆಗಿ ಕೆಲಸ ಮಾಡುತ್ತಿದ್ದ ಬಹದ್ದೂರ್ ಸಿಂಗ್ ಎಂಬ ಮೃತ ನೇಪಾಳದ ಪ್ರಜೆಯ ಕುಟುಂಬವನ್ನು ಭೇಟಿ ಮಾಡಲು ಕೆಟಿಆರ್ ನೇಪಾಳಕ್ಕೆ ಹೋಗಿದ್ದರು ಎಂದು ಬಿಆರ್‌ಎಸ್ ಹೇಳಿಕೊಂಡಿದೆ. ದುಬೈನಲ್ಲಿನ ಕಾನೂನಿನ ಪ್ರಕಾರ, ಬಹದ್ದೂರ್ ಅವರ ಕುಟುಂಬ ಸದಸ್ಯರು ಕ್ಷಮೆ ನೀಡಿದರೆ ಐವರನ್ನು ಬಿಡುಗಡೆ ಮಾಡುವ ಸಾಧ್ಯತೆಯಿತ್ತು. ಆದ್ದರಿಂದ, ಕೆಟಿಆರ್ ಬಹದ್ದೂರ್ ಕುಟುಂಬಸ್ಥರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ.

ನೇಪಾಳದ ಬಹದ್ದೂರ್ ಅವರ ಕುಟುಂಬ ಸದಸ್ಯರು, ವಕೀಲರು ಮತ್ತು ಇತರ ಪ್ರತಿನಿಧಿಗಳ ಸಹಾಯದಿಂದ ಕ್ಷಮಾದಾನಕ್ಕೆ ಸಹಿ ಹಾಕಿದರು. ನೇಪಾಳದ ಪ್ರಜೆಯ ಕುಟುಂಬಕ್ಕೆ ಕೆಟಿಆರ್ ₹15 ಲಕ್ಷ ಚೆಕ್ ನೀಡಿದ್ದಾರೆ ಎಂದು ಬಿಆರ್‌ಎಸ್ ಹೇಳಿಕೊಂಡಿದೆ.

‘ಬಿಆರ್‌ಎಸ್ ಕಾರ್ಯಾಧ್ಯಕ್ಷ ಮತ್ತು ಮಾಜಿ ಸಚಿವರ ಸತತ ಪ್ರಯತ್ನದಿಂದ ರಾಜಣ್ಣ ಸಿರಿಸಿಲ್ಲ ಜಿಲ್ಲೆಯ ನಿವಾಸಿಗಳು 18 ವರ್ಷಗಳ ಜೈಲುವಾಸದ ನಂತರ ದುಬೈನಿಂದ ಮನೆಗೆ ಮರಳಿದರು. ಮಾಜಿ ಸಚಿವ ಹಾಗೂ ಶಾಸಕರಾದ ಕೆಟಿಆರ್ ಅವರು  ಎಲ್ಲರಿಗೂ ವಿಮಾನ ಟಿಕೆಟ್ ವ್ಯವಸ್ಥೆ ಮಾಡಿದರು’ ಎಂದು ಬಿಆರ್‌ಎಸ್‌ ತನ್ನ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದೆ.

‘ಎರಡು ತಿಂಗಳ ಹಿಂದೆ ದುಬೈ ಜೈಲಿನಿಂದ ಬಿಡುಗಡೆಯಾಗಿದ್ದ ಕೋನರಾವ್ ಪೇಟೆ ಮಂಡಲದ ದಂಡುಂಗುಲ ಲಕ್ಷ್ಮಣ್. ಮತ್ತೊಬ್ಬ ರುದ್ರಂಗಿ ಮಂಡಲದ ಮನಾಳ ಗ್ರಾಮದ ಶಿವರಾತ್ರಿ ಹನ್ಮಂತು ಎರಡು ದಿನಗಳ ಹಿಂದೆ ಬಿಡುಗಡೆಗೊಂಡು ಮನೆಗೆ ತಲುಪಿದ್ದ. ದುಬೈ ನ್ಯಾಯಾಲಯದ ಕ್ಷಮಾದಾನದಿಂದಾಗಿ ಜಿಲ್ಲೆಯ ನಿವಾಸಿಗಳು ಮನೆಗೆ ತೆರಳುತ್ತಿದ್ದಾರೆ. ಪೆದ್ದೂರು ಗ್ರಾಮದ ಶಿವರಾತ್ರಿ ಮಲ್ಲೇಶಂ ಹಾಗೂ ರವಿ ಎಂಬ ಇಬ್ಬರು ಸಹೋದರರು ಇದೇ ತಿಂಗಳ 21ರಂದು ಬಿಡುಗಡೆಯಾಗಿದ್ದರು. ಚಂದೂರ್ತಿ ಮಂಡಲದ ಮತ್ತೊಬ್ಬ ವ್ಯಕ್ತಿ ವೆಂಕಟೇಶ್ ಮುಂದಿನ ತಿಂಗಳು ಬಿಡುಗಡೆಯಾಗಲಿದ್ದಾರೆ’ ಎಂದು ಬಿಆರ್‌ಎಸ್‌ ಹೇಳಿದೆ.

‘ರಾಜಣ್ಣ ಸಿರಿಸಿಲ್ಲ ಜಿಲ್ಲೆಯ ಚಂದೂರ್ತಿ ಮಂಡಲದ ಕೋನರಾವ್ ಪೇಟೆ ಗ್ರಾಮದ ಗೋಲಂ ನಾಂಪಳ್ಳಿ, ಶಿವರಾತ್ರಿ ಹನುಮಂಡ್ಲು ಹಾಗೂ ದಂಡುಂಗುಲ ಲಕ್ಷ್ಮಣ್ ದುಬೈಗೆ ತೆರಳಿದ್ದರು. ಹೋದ ಆರು ತಿಂಗಳ ನಂತರ ನೇಪಾಳದ ಬಹದ್ದೂರ್ ಸಿಂಗ್ ಎಂಬ ಕಾವಲುಗಾರನ ಕೊಲೆ ಮಾಡಲಾಯಿತು. ಅಲ್ಲಿ ಕೆಲಸ ಮಾಡುತ್ತಿರುವ ಜಿಲ್ಲೆಯ ಐವರು ನಿವಾಸಿಗಳು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿತ್ತು. ಭಾಷೆ ಸಂವಹನದ ಕಾರಣದಿಂದ ಪೊಲೀಸರಿಗೆ ಏನು ಹೇಳಿದ್ದಾರೋ ಗೊತ್ತಿಲ್ಲ. ಆದರೆ, ಶಿಕ್ಷೆ ಸಾಬೀತಾಗಿದ್ದು, ದುಬೈ ಕೋರ್ಟ್ ಆರಂಭದಲ್ಲಿ ಹತ್ತು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಮೇಲ್ಮನವಿ ಸಲ್ಲಿಸಿದ ನಂತರ, 25 ವರ್ಷಗಳ ಶಿಕ್ಷೆ ವಿಧಿಸಲಾಯಿತು. ದುಬೈನ ಕಾನೂನು ಪ್ರಕಾರ ಕೊಲೆಯಾದವರ ಕುಟುಂಬಸ್ಥರು ಕ್ಷಮೆ ಯಾಚಿಸಿದರೆ ಬಿಡುಗಡೆ ಸಾಧ್ಯತೆ ಇದ್ದು, 2011ರಲ್ಲಿ ಶಾಸಕ ಕೆ.ಟಿ.ಆರ್ ಒಮ್ಮೆ ನೇಪಾಳಕ್ಕೆ ತೆರಳಿದ್ದರು’ ಎಂದು ಹೇಳಿದೆ.

‘ನೇಪಾಳದ ಬಹದ್ದೂರ್ ಅವರ ಕುಟುಂಬ ಸದಸ್ಯರು ವಕೀಲ ಅನುರಾಧ ಮತ್ತು ಇತರ ಪ್ರತಿನಿಧಿಗಳ ಸಹಾಯದಿಂದ ಕ್ಷಮಾದಾನಕ್ಕೆ ಸಹಿ ಹಾಕಿದರು. ಆರ್ಥಿಕವಾಗಿ ಕೆಟಿಆರ್ ಅವರಿಗೆ ಹದಿನೈದು ಲಕ್ಷ ರೂಪಾಯಿ ಚೆಕ್ ನೀಡಿದರು. ಅವರ ಕ್ಷಮಾದಾನ ಅರ್ಜಿಯನ್ನು ದುಬೈ ನ್ಯಾಯಾಲಯವು ತಿರಸ್ಕರಿಸಿತು. ಇದು ದುಬೈನಲ್ಲಿನ ಕಾನೂನುಗಳ ಬದಲಾವಣೆಯಿಂದಾಗಿ ಅವರ ಬಿಡುಗಡೆಗೆ ತಡವಾಯಿತು. ಸೆಪ್ಟೆಂಬರ್‌ನಲ್ಲಿ ಸಚಿವ ಕೆಟಿಆರ್ ಅವರು ಸಂತ್ರಸ್ತೆಯ ಕುಟುಂಬ ಸದಸ್ಯರೊಂದಿಗೆ ದುಬೈ ಕೋರ್ಟ್‌ನಲ್ಲಿ ಪ್ರಕರಣವನ್ನು ಪರಿಶೀಲಿಸಿದರು ಮತ್ತು ಕೇಂದ್ರ ವಿದೇಶಾಂಗ ಸಚಿವಾಲಯದ ಸಹಾಯದಿಂದ ದುಬೈ ರಾಜನ ಅಪಾಯಿಂಟ್‌ಮೆಂಟ್ ಪಡೆದು ಈ ಪ್ರಕರಣದಲ್ಲಿ ಕ್ಷಮಾದಾನ ಕೋರಿದರು’ ಎಂದು ಪಕ್ಷ ಹೇಳಿಕೊಂಡಿದೆ.

ಇದನ್ನೂ ಓದಿ; ಹರಿಯಾಣ 160 ರೈತರನ್ನು ಗಾಯಗೊಳಿಸಿದ್ದರೂ ನಮ್ಮ ಪೊಲೀಸರು ಜವಾಬ್ದಾರಿಯಿಂದ ನಡೆದುಕೊಂಡಿದ್ದಾರೆ: ಪಂಜಾಬ್ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...