Homeಮುಖಪುಟತೆಲಂಗಾಣ: 18 ವರ್ಷಗಳ ಜೈಲುವಾಸದ ನಂತರ ದುಬೈನಿಂದ ಆಗಮಿಸಿದ ಐವರು

ತೆಲಂಗಾಣ: 18 ವರ್ಷಗಳ ಜೈಲುವಾಸದ ನಂತರ ದುಬೈನಿಂದ ಆಗಮಿಸಿದ ಐವರು

- Advertisement -
- Advertisement -

ಕ್ರಿಮಿನಲ್ ಪ್ರಕರಣವೊಂದರಲ್ಲಿ ಅರಬ್‌ನಲ್ಲಿ ಶಿಕ್ಷೆಗೆ ಗುರಿಯಾಗಿದ್ದ ತೆಲಂಗಾಣದ ಐವರು ಪುರುಷರು 18 ವರ್ಷಗಳ ನಂತರ ದುಬೈನಿಂದ ತವರಿಗೆ ಮರಳಿದ್ದಾರೆ. ತಮ್ಮವರನ್ನು ಕಂಡ ಖುಷಿಯಲ್ಲಿ, ವಿಮಾನ ನಿಲ್ದಾಣದಲ್ಲೇ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ.

ತಮ್ಮ ವಾಪಸಾತಿಗೆ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕ ಕೆಟಿ ರಾಮರಾವ್ (ಕೆಟಿಆರ್) ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಹೇಳಿರುವ ಎಲ್ಲ ಐವರು ಪುರುಷರು ರಾಜ್ಯದ ರಾಜಣ್ಣ ಸಿರಿಸಿಲ್ಲಾ ಜಿಲ್ಲೆಯ ನಿವಾಸಿಗಳು. ಬಿಆರ್‌ಎಸ್‌ ಪಕ್ಷವು ಅವರ ಕುಟುಂಬ ಸದಸ್ಯರೊಂದಿಗೆ ನಿವಾಸಿಗಳ ಪುನರ್ಮಿಲನದ ಭಾವನಾತ್ಮಕ ವೀಡಿಯೊವನ್ನು ಹಂಚಿಕೊಂಡಿದೆ.

ಐದು ಜನರ ಮೇಲೆ ಕ್ರಿಮಿನಲ್ ಆರೋಪ

ತೆಲಂಗಾಣದ ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯ ನಿವಾಸಿಗಳಾದ ಶಿವರಾತ್ರಿ ಮಲ್ಲೇಶ್, ಶಿವರಾತ್ರಿ ರವಿ, ಗೊಲ್ಲೆಂ ನಾಂಪಲ್ಲಿ, ದುಂಡುಗುಲ ಲಕ್ಷ್ಮಣ್ ಮತ್ತು ಶಿವರಾತ್ರಿ ಹನ್ಮಂತು ಎಂಬ ಐವರು ನೇಪಾಳದ ಪ್ರಜೆಯೊಬ್ಬರನ್ನು 2005ರಲ್ಲಿ ದುಬೈನಲ್ಲಿ ಕೆಲಸ ಮಾಡುತ್ತಿದ್ದಾಗ ಹತ್ಯೆ ಮಾಡಿದ ಆರೋಪದ ಮೇಲೆ, 25 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದರು.

ದುಬೈನಲ್ಲಿ ವಾಚ್‌ಮನ್ ಆಗಿ ಕೆಲಸ ಮಾಡುತ್ತಿದ್ದ ಬಹದ್ದೂರ್ ಸಿಂಗ್ ಎಂಬ ಮೃತ ನೇಪಾಳದ ಪ್ರಜೆಯ ಕುಟುಂಬವನ್ನು ಭೇಟಿ ಮಾಡಲು ಕೆಟಿಆರ್ ನೇಪಾಳಕ್ಕೆ ಹೋಗಿದ್ದರು ಎಂದು ಬಿಆರ್‌ಎಸ್ ಹೇಳಿಕೊಂಡಿದೆ. ದುಬೈನಲ್ಲಿನ ಕಾನೂನಿನ ಪ್ರಕಾರ, ಬಹದ್ದೂರ್ ಅವರ ಕುಟುಂಬ ಸದಸ್ಯರು ಕ್ಷಮೆ ನೀಡಿದರೆ ಐವರನ್ನು ಬಿಡುಗಡೆ ಮಾಡುವ ಸಾಧ್ಯತೆಯಿತ್ತು. ಆದ್ದರಿಂದ, ಕೆಟಿಆರ್ ಬಹದ್ದೂರ್ ಕುಟುಂಬಸ್ಥರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ.

ನೇಪಾಳದ ಬಹದ್ದೂರ್ ಅವರ ಕುಟುಂಬ ಸದಸ್ಯರು, ವಕೀಲರು ಮತ್ತು ಇತರ ಪ್ರತಿನಿಧಿಗಳ ಸಹಾಯದಿಂದ ಕ್ಷಮಾದಾನಕ್ಕೆ ಸಹಿ ಹಾಕಿದರು. ನೇಪಾಳದ ಪ್ರಜೆಯ ಕುಟುಂಬಕ್ಕೆ ಕೆಟಿಆರ್ ₹15 ಲಕ್ಷ ಚೆಕ್ ನೀಡಿದ್ದಾರೆ ಎಂದು ಬಿಆರ್‌ಎಸ್ ಹೇಳಿಕೊಂಡಿದೆ.

‘ಬಿಆರ್‌ಎಸ್ ಕಾರ್ಯಾಧ್ಯಕ್ಷ ಮತ್ತು ಮಾಜಿ ಸಚಿವರ ಸತತ ಪ್ರಯತ್ನದಿಂದ ರಾಜಣ್ಣ ಸಿರಿಸಿಲ್ಲ ಜಿಲ್ಲೆಯ ನಿವಾಸಿಗಳು 18 ವರ್ಷಗಳ ಜೈಲುವಾಸದ ನಂತರ ದುಬೈನಿಂದ ಮನೆಗೆ ಮರಳಿದರು. ಮಾಜಿ ಸಚಿವ ಹಾಗೂ ಶಾಸಕರಾದ ಕೆಟಿಆರ್ ಅವರು  ಎಲ್ಲರಿಗೂ ವಿಮಾನ ಟಿಕೆಟ್ ವ್ಯವಸ್ಥೆ ಮಾಡಿದರು’ ಎಂದು ಬಿಆರ್‌ಎಸ್‌ ತನ್ನ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದೆ.

‘ಎರಡು ತಿಂಗಳ ಹಿಂದೆ ದುಬೈ ಜೈಲಿನಿಂದ ಬಿಡುಗಡೆಯಾಗಿದ್ದ ಕೋನರಾವ್ ಪೇಟೆ ಮಂಡಲದ ದಂಡುಂಗುಲ ಲಕ್ಷ್ಮಣ್. ಮತ್ತೊಬ್ಬ ರುದ್ರಂಗಿ ಮಂಡಲದ ಮನಾಳ ಗ್ರಾಮದ ಶಿವರಾತ್ರಿ ಹನ್ಮಂತು ಎರಡು ದಿನಗಳ ಹಿಂದೆ ಬಿಡುಗಡೆಗೊಂಡು ಮನೆಗೆ ತಲುಪಿದ್ದ. ದುಬೈ ನ್ಯಾಯಾಲಯದ ಕ್ಷಮಾದಾನದಿಂದಾಗಿ ಜಿಲ್ಲೆಯ ನಿವಾಸಿಗಳು ಮನೆಗೆ ತೆರಳುತ್ತಿದ್ದಾರೆ. ಪೆದ್ದೂರು ಗ್ರಾಮದ ಶಿವರಾತ್ರಿ ಮಲ್ಲೇಶಂ ಹಾಗೂ ರವಿ ಎಂಬ ಇಬ್ಬರು ಸಹೋದರರು ಇದೇ ತಿಂಗಳ 21ರಂದು ಬಿಡುಗಡೆಯಾಗಿದ್ದರು. ಚಂದೂರ್ತಿ ಮಂಡಲದ ಮತ್ತೊಬ್ಬ ವ್ಯಕ್ತಿ ವೆಂಕಟೇಶ್ ಮುಂದಿನ ತಿಂಗಳು ಬಿಡುಗಡೆಯಾಗಲಿದ್ದಾರೆ’ ಎಂದು ಬಿಆರ್‌ಎಸ್‌ ಹೇಳಿದೆ.

‘ರಾಜಣ್ಣ ಸಿರಿಸಿಲ್ಲ ಜಿಲ್ಲೆಯ ಚಂದೂರ್ತಿ ಮಂಡಲದ ಕೋನರಾವ್ ಪೇಟೆ ಗ್ರಾಮದ ಗೋಲಂ ನಾಂಪಳ್ಳಿ, ಶಿವರಾತ್ರಿ ಹನುಮಂಡ್ಲು ಹಾಗೂ ದಂಡುಂಗುಲ ಲಕ್ಷ್ಮಣ್ ದುಬೈಗೆ ತೆರಳಿದ್ದರು. ಹೋದ ಆರು ತಿಂಗಳ ನಂತರ ನೇಪಾಳದ ಬಹದ್ದೂರ್ ಸಿಂಗ್ ಎಂಬ ಕಾವಲುಗಾರನ ಕೊಲೆ ಮಾಡಲಾಯಿತು. ಅಲ್ಲಿ ಕೆಲಸ ಮಾಡುತ್ತಿರುವ ಜಿಲ್ಲೆಯ ಐವರು ನಿವಾಸಿಗಳು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿತ್ತು. ಭಾಷೆ ಸಂವಹನದ ಕಾರಣದಿಂದ ಪೊಲೀಸರಿಗೆ ಏನು ಹೇಳಿದ್ದಾರೋ ಗೊತ್ತಿಲ್ಲ. ಆದರೆ, ಶಿಕ್ಷೆ ಸಾಬೀತಾಗಿದ್ದು, ದುಬೈ ಕೋರ್ಟ್ ಆರಂಭದಲ್ಲಿ ಹತ್ತು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಮೇಲ್ಮನವಿ ಸಲ್ಲಿಸಿದ ನಂತರ, 25 ವರ್ಷಗಳ ಶಿಕ್ಷೆ ವಿಧಿಸಲಾಯಿತು. ದುಬೈನ ಕಾನೂನು ಪ್ರಕಾರ ಕೊಲೆಯಾದವರ ಕುಟುಂಬಸ್ಥರು ಕ್ಷಮೆ ಯಾಚಿಸಿದರೆ ಬಿಡುಗಡೆ ಸಾಧ್ಯತೆ ಇದ್ದು, 2011ರಲ್ಲಿ ಶಾಸಕ ಕೆ.ಟಿ.ಆರ್ ಒಮ್ಮೆ ನೇಪಾಳಕ್ಕೆ ತೆರಳಿದ್ದರು’ ಎಂದು ಹೇಳಿದೆ.

‘ನೇಪಾಳದ ಬಹದ್ದೂರ್ ಅವರ ಕುಟುಂಬ ಸದಸ್ಯರು ವಕೀಲ ಅನುರಾಧ ಮತ್ತು ಇತರ ಪ್ರತಿನಿಧಿಗಳ ಸಹಾಯದಿಂದ ಕ್ಷಮಾದಾನಕ್ಕೆ ಸಹಿ ಹಾಕಿದರು. ಆರ್ಥಿಕವಾಗಿ ಕೆಟಿಆರ್ ಅವರಿಗೆ ಹದಿನೈದು ಲಕ್ಷ ರೂಪಾಯಿ ಚೆಕ್ ನೀಡಿದರು. ಅವರ ಕ್ಷಮಾದಾನ ಅರ್ಜಿಯನ್ನು ದುಬೈ ನ್ಯಾಯಾಲಯವು ತಿರಸ್ಕರಿಸಿತು. ಇದು ದುಬೈನಲ್ಲಿನ ಕಾನೂನುಗಳ ಬದಲಾವಣೆಯಿಂದಾಗಿ ಅವರ ಬಿಡುಗಡೆಗೆ ತಡವಾಯಿತು. ಸೆಪ್ಟೆಂಬರ್‌ನಲ್ಲಿ ಸಚಿವ ಕೆಟಿಆರ್ ಅವರು ಸಂತ್ರಸ್ತೆಯ ಕುಟುಂಬ ಸದಸ್ಯರೊಂದಿಗೆ ದುಬೈ ಕೋರ್ಟ್‌ನಲ್ಲಿ ಪ್ರಕರಣವನ್ನು ಪರಿಶೀಲಿಸಿದರು ಮತ್ತು ಕೇಂದ್ರ ವಿದೇಶಾಂಗ ಸಚಿವಾಲಯದ ಸಹಾಯದಿಂದ ದುಬೈ ರಾಜನ ಅಪಾಯಿಂಟ್‌ಮೆಂಟ್ ಪಡೆದು ಈ ಪ್ರಕರಣದಲ್ಲಿ ಕ್ಷಮಾದಾನ ಕೋರಿದರು’ ಎಂದು ಪಕ್ಷ ಹೇಳಿಕೊಂಡಿದೆ.

ಇದನ್ನೂ ಓದಿ; ಹರಿಯಾಣ 160 ರೈತರನ್ನು ಗಾಯಗೊಳಿಸಿದ್ದರೂ ನಮ್ಮ ಪೊಲೀಸರು ಜವಾಬ್ದಾರಿಯಿಂದ ನಡೆದುಕೊಂಡಿದ್ದಾರೆ: ಪಂಜಾಬ್ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...