Homeಮುಖಪುಟತೆಲಂಗಾಣ: 18 ವರ್ಷಗಳ ಜೈಲುವಾಸದ ನಂತರ ದುಬೈನಿಂದ ಆಗಮಿಸಿದ ಐವರು

ತೆಲಂಗಾಣ: 18 ವರ್ಷಗಳ ಜೈಲುವಾಸದ ನಂತರ ದುಬೈನಿಂದ ಆಗಮಿಸಿದ ಐವರು

- Advertisement -
- Advertisement -

ಕ್ರಿಮಿನಲ್ ಪ್ರಕರಣವೊಂದರಲ್ಲಿ ಅರಬ್‌ನಲ್ಲಿ ಶಿಕ್ಷೆಗೆ ಗುರಿಯಾಗಿದ್ದ ತೆಲಂಗಾಣದ ಐವರು ಪುರುಷರು 18 ವರ್ಷಗಳ ನಂತರ ದುಬೈನಿಂದ ತವರಿಗೆ ಮರಳಿದ್ದಾರೆ. ತಮ್ಮವರನ್ನು ಕಂಡ ಖುಷಿಯಲ್ಲಿ, ವಿಮಾನ ನಿಲ್ದಾಣದಲ್ಲೇ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ.

ತಮ್ಮ ವಾಪಸಾತಿಗೆ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕ ಕೆಟಿ ರಾಮರಾವ್ (ಕೆಟಿಆರ್) ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಹೇಳಿರುವ ಎಲ್ಲ ಐವರು ಪುರುಷರು ರಾಜ್ಯದ ರಾಜಣ್ಣ ಸಿರಿಸಿಲ್ಲಾ ಜಿಲ್ಲೆಯ ನಿವಾಸಿಗಳು. ಬಿಆರ್‌ಎಸ್‌ ಪಕ್ಷವು ಅವರ ಕುಟುಂಬ ಸದಸ್ಯರೊಂದಿಗೆ ನಿವಾಸಿಗಳ ಪುನರ್ಮಿಲನದ ಭಾವನಾತ್ಮಕ ವೀಡಿಯೊವನ್ನು ಹಂಚಿಕೊಂಡಿದೆ.

ಐದು ಜನರ ಮೇಲೆ ಕ್ರಿಮಿನಲ್ ಆರೋಪ

ತೆಲಂಗಾಣದ ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯ ನಿವಾಸಿಗಳಾದ ಶಿವರಾತ್ರಿ ಮಲ್ಲೇಶ್, ಶಿವರಾತ್ರಿ ರವಿ, ಗೊಲ್ಲೆಂ ನಾಂಪಲ್ಲಿ, ದುಂಡುಗುಲ ಲಕ್ಷ್ಮಣ್ ಮತ್ತು ಶಿವರಾತ್ರಿ ಹನ್ಮಂತು ಎಂಬ ಐವರು ನೇಪಾಳದ ಪ್ರಜೆಯೊಬ್ಬರನ್ನು 2005ರಲ್ಲಿ ದುಬೈನಲ್ಲಿ ಕೆಲಸ ಮಾಡುತ್ತಿದ್ದಾಗ ಹತ್ಯೆ ಮಾಡಿದ ಆರೋಪದ ಮೇಲೆ, 25 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದರು.

ದುಬೈನಲ್ಲಿ ವಾಚ್‌ಮನ್ ಆಗಿ ಕೆಲಸ ಮಾಡುತ್ತಿದ್ದ ಬಹದ್ದೂರ್ ಸಿಂಗ್ ಎಂಬ ಮೃತ ನೇಪಾಳದ ಪ್ರಜೆಯ ಕುಟುಂಬವನ್ನು ಭೇಟಿ ಮಾಡಲು ಕೆಟಿಆರ್ ನೇಪಾಳಕ್ಕೆ ಹೋಗಿದ್ದರು ಎಂದು ಬಿಆರ್‌ಎಸ್ ಹೇಳಿಕೊಂಡಿದೆ. ದುಬೈನಲ್ಲಿನ ಕಾನೂನಿನ ಪ್ರಕಾರ, ಬಹದ್ದೂರ್ ಅವರ ಕುಟುಂಬ ಸದಸ್ಯರು ಕ್ಷಮೆ ನೀಡಿದರೆ ಐವರನ್ನು ಬಿಡುಗಡೆ ಮಾಡುವ ಸಾಧ್ಯತೆಯಿತ್ತು. ಆದ್ದರಿಂದ, ಕೆಟಿಆರ್ ಬಹದ್ದೂರ್ ಕುಟುಂಬಸ್ಥರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ.

ನೇಪಾಳದ ಬಹದ್ದೂರ್ ಅವರ ಕುಟುಂಬ ಸದಸ್ಯರು, ವಕೀಲರು ಮತ್ತು ಇತರ ಪ್ರತಿನಿಧಿಗಳ ಸಹಾಯದಿಂದ ಕ್ಷಮಾದಾನಕ್ಕೆ ಸಹಿ ಹಾಕಿದರು. ನೇಪಾಳದ ಪ್ರಜೆಯ ಕುಟುಂಬಕ್ಕೆ ಕೆಟಿಆರ್ ₹15 ಲಕ್ಷ ಚೆಕ್ ನೀಡಿದ್ದಾರೆ ಎಂದು ಬಿಆರ್‌ಎಸ್ ಹೇಳಿಕೊಂಡಿದೆ.

‘ಬಿಆರ್‌ಎಸ್ ಕಾರ್ಯಾಧ್ಯಕ್ಷ ಮತ್ತು ಮಾಜಿ ಸಚಿವರ ಸತತ ಪ್ರಯತ್ನದಿಂದ ರಾಜಣ್ಣ ಸಿರಿಸಿಲ್ಲ ಜಿಲ್ಲೆಯ ನಿವಾಸಿಗಳು 18 ವರ್ಷಗಳ ಜೈಲುವಾಸದ ನಂತರ ದುಬೈನಿಂದ ಮನೆಗೆ ಮರಳಿದರು. ಮಾಜಿ ಸಚಿವ ಹಾಗೂ ಶಾಸಕರಾದ ಕೆಟಿಆರ್ ಅವರು  ಎಲ್ಲರಿಗೂ ವಿಮಾನ ಟಿಕೆಟ್ ವ್ಯವಸ್ಥೆ ಮಾಡಿದರು’ ಎಂದು ಬಿಆರ್‌ಎಸ್‌ ತನ್ನ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದೆ.

‘ಎರಡು ತಿಂಗಳ ಹಿಂದೆ ದುಬೈ ಜೈಲಿನಿಂದ ಬಿಡುಗಡೆಯಾಗಿದ್ದ ಕೋನರಾವ್ ಪೇಟೆ ಮಂಡಲದ ದಂಡುಂಗುಲ ಲಕ್ಷ್ಮಣ್. ಮತ್ತೊಬ್ಬ ರುದ್ರಂಗಿ ಮಂಡಲದ ಮನಾಳ ಗ್ರಾಮದ ಶಿವರಾತ್ರಿ ಹನ್ಮಂತು ಎರಡು ದಿನಗಳ ಹಿಂದೆ ಬಿಡುಗಡೆಗೊಂಡು ಮನೆಗೆ ತಲುಪಿದ್ದ. ದುಬೈ ನ್ಯಾಯಾಲಯದ ಕ್ಷಮಾದಾನದಿಂದಾಗಿ ಜಿಲ್ಲೆಯ ನಿವಾಸಿಗಳು ಮನೆಗೆ ತೆರಳುತ್ತಿದ್ದಾರೆ. ಪೆದ್ದೂರು ಗ್ರಾಮದ ಶಿವರಾತ್ರಿ ಮಲ್ಲೇಶಂ ಹಾಗೂ ರವಿ ಎಂಬ ಇಬ್ಬರು ಸಹೋದರರು ಇದೇ ತಿಂಗಳ 21ರಂದು ಬಿಡುಗಡೆಯಾಗಿದ್ದರು. ಚಂದೂರ್ತಿ ಮಂಡಲದ ಮತ್ತೊಬ್ಬ ವ್ಯಕ್ತಿ ವೆಂಕಟೇಶ್ ಮುಂದಿನ ತಿಂಗಳು ಬಿಡುಗಡೆಯಾಗಲಿದ್ದಾರೆ’ ಎಂದು ಬಿಆರ್‌ಎಸ್‌ ಹೇಳಿದೆ.

‘ರಾಜಣ್ಣ ಸಿರಿಸಿಲ್ಲ ಜಿಲ್ಲೆಯ ಚಂದೂರ್ತಿ ಮಂಡಲದ ಕೋನರಾವ್ ಪೇಟೆ ಗ್ರಾಮದ ಗೋಲಂ ನಾಂಪಳ್ಳಿ, ಶಿವರಾತ್ರಿ ಹನುಮಂಡ್ಲು ಹಾಗೂ ದಂಡುಂಗುಲ ಲಕ್ಷ್ಮಣ್ ದುಬೈಗೆ ತೆರಳಿದ್ದರು. ಹೋದ ಆರು ತಿಂಗಳ ನಂತರ ನೇಪಾಳದ ಬಹದ್ದೂರ್ ಸಿಂಗ್ ಎಂಬ ಕಾವಲುಗಾರನ ಕೊಲೆ ಮಾಡಲಾಯಿತು. ಅಲ್ಲಿ ಕೆಲಸ ಮಾಡುತ್ತಿರುವ ಜಿಲ್ಲೆಯ ಐವರು ನಿವಾಸಿಗಳು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿತ್ತು. ಭಾಷೆ ಸಂವಹನದ ಕಾರಣದಿಂದ ಪೊಲೀಸರಿಗೆ ಏನು ಹೇಳಿದ್ದಾರೋ ಗೊತ್ತಿಲ್ಲ. ಆದರೆ, ಶಿಕ್ಷೆ ಸಾಬೀತಾಗಿದ್ದು, ದುಬೈ ಕೋರ್ಟ್ ಆರಂಭದಲ್ಲಿ ಹತ್ತು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಮೇಲ್ಮನವಿ ಸಲ್ಲಿಸಿದ ನಂತರ, 25 ವರ್ಷಗಳ ಶಿಕ್ಷೆ ವಿಧಿಸಲಾಯಿತು. ದುಬೈನ ಕಾನೂನು ಪ್ರಕಾರ ಕೊಲೆಯಾದವರ ಕುಟುಂಬಸ್ಥರು ಕ್ಷಮೆ ಯಾಚಿಸಿದರೆ ಬಿಡುಗಡೆ ಸಾಧ್ಯತೆ ಇದ್ದು, 2011ರಲ್ಲಿ ಶಾಸಕ ಕೆ.ಟಿ.ಆರ್ ಒಮ್ಮೆ ನೇಪಾಳಕ್ಕೆ ತೆರಳಿದ್ದರು’ ಎಂದು ಹೇಳಿದೆ.

‘ನೇಪಾಳದ ಬಹದ್ದೂರ್ ಅವರ ಕುಟುಂಬ ಸದಸ್ಯರು ವಕೀಲ ಅನುರಾಧ ಮತ್ತು ಇತರ ಪ್ರತಿನಿಧಿಗಳ ಸಹಾಯದಿಂದ ಕ್ಷಮಾದಾನಕ್ಕೆ ಸಹಿ ಹಾಕಿದರು. ಆರ್ಥಿಕವಾಗಿ ಕೆಟಿಆರ್ ಅವರಿಗೆ ಹದಿನೈದು ಲಕ್ಷ ರೂಪಾಯಿ ಚೆಕ್ ನೀಡಿದರು. ಅವರ ಕ್ಷಮಾದಾನ ಅರ್ಜಿಯನ್ನು ದುಬೈ ನ್ಯಾಯಾಲಯವು ತಿರಸ್ಕರಿಸಿತು. ಇದು ದುಬೈನಲ್ಲಿನ ಕಾನೂನುಗಳ ಬದಲಾವಣೆಯಿಂದಾಗಿ ಅವರ ಬಿಡುಗಡೆಗೆ ತಡವಾಯಿತು. ಸೆಪ್ಟೆಂಬರ್‌ನಲ್ಲಿ ಸಚಿವ ಕೆಟಿಆರ್ ಅವರು ಸಂತ್ರಸ್ತೆಯ ಕುಟುಂಬ ಸದಸ್ಯರೊಂದಿಗೆ ದುಬೈ ಕೋರ್ಟ್‌ನಲ್ಲಿ ಪ್ರಕರಣವನ್ನು ಪರಿಶೀಲಿಸಿದರು ಮತ್ತು ಕೇಂದ್ರ ವಿದೇಶಾಂಗ ಸಚಿವಾಲಯದ ಸಹಾಯದಿಂದ ದುಬೈ ರಾಜನ ಅಪಾಯಿಂಟ್‌ಮೆಂಟ್ ಪಡೆದು ಈ ಪ್ರಕರಣದಲ್ಲಿ ಕ್ಷಮಾದಾನ ಕೋರಿದರು’ ಎಂದು ಪಕ್ಷ ಹೇಳಿಕೊಂಡಿದೆ.

ಇದನ್ನೂ ಓದಿ; ಹರಿಯಾಣ 160 ರೈತರನ್ನು ಗಾಯಗೊಳಿಸಿದ್ದರೂ ನಮ್ಮ ಪೊಲೀಸರು ಜವಾಬ್ದಾರಿಯಿಂದ ನಡೆದುಕೊಂಡಿದ್ದಾರೆ: ಪಂಜಾಬ್ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...