Homeಮುಖಪುಟ'ಬಜೆಟ್‌ನಲ್ಲಿ ತೆಲಂಗಾಣಕ್ಕೆ ಕೊಟ್ಟಿದ್ದು ಶೂನ್ಯ'; ಬ್ಯಾನರ್ ಹಾಕಿಸಿದ ತೆಲಂಗಾಣ ಸರ್ಕಾರ

‘ಬಜೆಟ್‌ನಲ್ಲಿ ತೆಲಂಗಾಣಕ್ಕೆ ಕೊಟ್ಟಿದ್ದು ಶೂನ್ಯ’; ಬ್ಯಾನರ್ ಹಾಕಿಸಿದ ತೆಲಂಗಾಣ ಸರ್ಕಾರ

- Advertisement -
- Advertisement -

ವಿತ್ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ 2023-24ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ. ಆದರೆ ಈ ಕೇಂದ್ರ ಬಜೆಟ್‌ನಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ತೆಲಂಗಾಣದ ಆಡಳಿತಾರೂಢ ಬಿಆರ್‌ಎಸ್ ಕೇಂದ್ರವನ್ನು ಗುರಿಯಾಗಿಸಿಕೊಂಡು ಪೋಸ್ಟರ್‌ಗಳನ್ನು ಹಾಕಿದೆ.

ಗುರುವಾರ ಹೈದರಾಬಾದ್‌ನಲ್ಲಿ ಮೋದಿ ಮತ್ತು ಕೇಂದ್ರವನ್ನು ಗುರಿಯಾಗಿಸಿಕೊಂಡು, ‘ಕೇಂದ್ರ ಬಜೆಟ್‌ನಲ್ಲಿ ತೆಲಂಗಾಣಕ್ಕೆ ಶೂನ್ಯ ಕೊಟ್ಟಿದೆ’ (TELANGANA GETS ZERO IN UNION BUDGET)  ಎಂಬ ದೊಡ್ಡ ಪೋಸ್ಟರ್‍‌ನ್ನು ಹಾಕಲಾಗಿದೆ. ನಗರದ ಭರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಸದಸ್ಯರು ಸಾಮಾಜಿಕ ಜಾಲತಾಣಗಳಲ್ಲಿ ಇದೇ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಕಳೆದ ವರ್ಷ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ನರೇಂದ್ರ ಮೋದಿ ಹೈದರಾಬಾದ್‌ಗೆ ಬಂದಿದ್ದಾಗ ಅವರನ್ನು ಗುರಿಯಾಗಿಸಿಕೊಂಡು ‘ಹಣ ದರೋಡೆ’ ಪೋಸ್ಟರ್‌ಗಳನ್ನು ಹಾಕಿದ್ದರು ಮತ್ತೆ ಆ ಪೋಸ್ಟರ್‍‌ಗಳನ್ನು ಬಿಆರ್‌ಎಸ್ ಕಾರ್ಯಕರ್ತರು ಇದೇ ರೀತಿ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಾರೆ. ಮೋದಿ ಅವರ ಸಾರ್ವಜನಿಕ ಸಭೆ ನಡೆಯುವ ಸ್ಥಳದ ಬಳಿ ಗುಲಾಬಿ ಬಣ್ಣದ ಬಲೂನ್‌ಗಳನ್ನು ಹಾಕುವ ಮೂಲಕ ಬಿಆರ್‌ಎಸ್ ಕಾರ್ಯಕರ್ತರು ವಿಶಿಷ್ಟವಾಗಿ ಗಮನಸೆಳೆದಿದ್ದರು.

ಇದನ್ನೂ ಓದಿ: ಬಹುಸಂಖ್ಯಾತ ಭಾರತೀಯರಿಗೆ ಬಗೆದ ದ್ರೋಹ: ಬಜೆಟ್ ಕುರಿತು ಪಿ. ಚಿದಂಬರಂ ಪ್ರತಿಕ್ರಿಯೆ

‘ಹಣ ದರೋಡೆ’ ಅಭಿಯಾನದ ಭಾಗವಾಗಿ, ಬಿಆರ್‌ಎಸ್ ಕಾರ್ಯಕರ್ತರು ಹೋರ್ಡಿಂಗ್‌ಗಳನ್ನು ಹಿಡಿದು ಮೌನವಾಗಿ ಪ್ರತಿಭಟನೆ ನಡೆಸಿದರು. ಇದು ಕಳೆದ ವರ್ಷ ಜುಲೈನಲ್ಲಿ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯುವ ವೇಳೆ ಅನೇಕರ ಗಮನವನ್ನು ಬೇರೆಡೆಗೆ ಹರಿಸಲು ಮಾಡಿದ ಪ್ಲ್ಯಾನ್ ಆಗಿತ್ತು.

ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿಯ ಅಂತಿಮ ದಿನದಂದು, ಸಿಕಂದರಾಬಾದ್‌ನ ಪರೇಡ್ ಮೈದಾನದಲ್ಲಿ ಪಿಎಂ ನರೇಂದ್ರ ಮೋದಿಯವರ ರ್ಯಾಲಿಗೆ ಕೆಲವೇ ಗಂಟೆಗಳ ಮೊದಲು, ಬಿಆರ್‌ಎಸ್ ಘೋಷಣೆಯ ‘ಜೈ ಜೈ ಕೆಸಿಆರ್’ ಎಂದು ಪಿಂಕ್ ಬಲೂನ್‌ಗಳನ್ನು ಸ್ಥಳದ ಹೊರಗೆ ಇರಿಸಲಾಗಿತ್ತು. ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಸ್ಥಳದಿಂದ ಅವು ಗೋಚರಿಸುತ್ತಿದ್ದವು. ಆ ಮೂಲಕ ಸಭೆಗೆ ಬಂದವರ ಗಮನವನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದರು.

Hyderabad: Pink 'Jai KCR' balloons fill up sky outside PM Modi's public meet venue

ಕೇಂದ್ರ ಬಜೆಟ್ ಬಿಡುಗಡೆಯಾದ ನಂತರ ಮಾತನಾಡಿದ ಬಿಆರ್‌ಎಸ್ ಎಂಎಲ್‌ಸಿ ಕೆ ಕವಿತಾ ಕಲ್ವಕುಂಟ್ಲ, ಹೊಸ ತೆರಿಗೆ ಪದ್ಧತಿಯಲ್ಲಿ 7 ಲಕ್ಷ ರೂ.ವರೆಗಿನ ಆದಾಯದ ಮೇಲಿನ ಆದಾಯ ತೆರಿಗೆ ರಿಯಾಯಿತಿ (ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದಂತೆ) ತೆಲಂಗಾಣದ ಜನರಿಗೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಹೇಳಿದರು.

”ಮೋದಿ ಸರ್ಕಾರದ ವೈಫಲ್ಯವನ್ನು ಈ ಬಜೆಟ್ ದೃಢೀಕರಿಸಿದೆ. ಇದು ಕೆಲವು ರಾಜ್ಯಗಳ ಬಜೆಟ್‌ನಂತೆ ಕಾಣುತ್ತಿದೆ. 10 ಲಕ್ಷದವರೆಗೆ ತೆರಿಗೆ ರಿಯಾಯಿತಿಯನ್ನು ನಾವು ನಿರೀಕ್ಷಿಸಿದ್ದೇವೆ. ಏಕೆಂದರೆ ತೆಲಂಗಾಣದಲ್ಲಿ, ನಾವು ಜನರಿಗೆ ಉತ್ತಮ ಸಂಬಳ ನೀಡುತ್ತೇವೆ ಆದ್ದರಿಂದ ಈ ರಿಯಾಯಿತಿ ನಮಗೆ ಯಾವುದೇ ಪ್ರಯೋಜನವಿಲ್ಲ” ಎಂದು ಅವರು ANI ಗೆ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...