Homeಮುಖಪುಟ'ಬಜೆಟ್‌ನಲ್ಲಿ ತೆಲಂಗಾಣಕ್ಕೆ ಕೊಟ್ಟಿದ್ದು ಶೂನ್ಯ'; ಬ್ಯಾನರ್ ಹಾಕಿಸಿದ ತೆಲಂಗಾಣ ಸರ್ಕಾರ

‘ಬಜೆಟ್‌ನಲ್ಲಿ ತೆಲಂಗಾಣಕ್ಕೆ ಕೊಟ್ಟಿದ್ದು ಶೂನ್ಯ’; ಬ್ಯಾನರ್ ಹಾಕಿಸಿದ ತೆಲಂಗಾಣ ಸರ್ಕಾರ

- Advertisement -
- Advertisement -

ವಿತ್ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ 2023-24ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ. ಆದರೆ ಈ ಕೇಂದ್ರ ಬಜೆಟ್‌ನಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ತೆಲಂಗಾಣದ ಆಡಳಿತಾರೂಢ ಬಿಆರ್‌ಎಸ್ ಕೇಂದ್ರವನ್ನು ಗುರಿಯಾಗಿಸಿಕೊಂಡು ಪೋಸ್ಟರ್‌ಗಳನ್ನು ಹಾಕಿದೆ.

ಗುರುವಾರ ಹೈದರಾಬಾದ್‌ನಲ್ಲಿ ಮೋದಿ ಮತ್ತು ಕೇಂದ್ರವನ್ನು ಗುರಿಯಾಗಿಸಿಕೊಂಡು, ‘ಕೇಂದ್ರ ಬಜೆಟ್‌ನಲ್ಲಿ ತೆಲಂಗಾಣಕ್ಕೆ ಶೂನ್ಯ ಕೊಟ್ಟಿದೆ’ (TELANGANA GETS ZERO IN UNION BUDGET)  ಎಂಬ ದೊಡ್ಡ ಪೋಸ್ಟರ್‍‌ನ್ನು ಹಾಕಲಾಗಿದೆ. ನಗರದ ಭರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಸದಸ್ಯರು ಸಾಮಾಜಿಕ ಜಾಲತಾಣಗಳಲ್ಲಿ ಇದೇ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಕಳೆದ ವರ್ಷ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ನರೇಂದ್ರ ಮೋದಿ ಹೈದರಾಬಾದ್‌ಗೆ ಬಂದಿದ್ದಾಗ ಅವರನ್ನು ಗುರಿಯಾಗಿಸಿಕೊಂಡು ‘ಹಣ ದರೋಡೆ’ ಪೋಸ್ಟರ್‌ಗಳನ್ನು ಹಾಕಿದ್ದರು ಮತ್ತೆ ಆ ಪೋಸ್ಟರ್‍‌ಗಳನ್ನು ಬಿಆರ್‌ಎಸ್ ಕಾರ್ಯಕರ್ತರು ಇದೇ ರೀತಿ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಾರೆ. ಮೋದಿ ಅವರ ಸಾರ್ವಜನಿಕ ಸಭೆ ನಡೆಯುವ ಸ್ಥಳದ ಬಳಿ ಗುಲಾಬಿ ಬಣ್ಣದ ಬಲೂನ್‌ಗಳನ್ನು ಹಾಕುವ ಮೂಲಕ ಬಿಆರ್‌ಎಸ್ ಕಾರ್ಯಕರ್ತರು ವಿಶಿಷ್ಟವಾಗಿ ಗಮನಸೆಳೆದಿದ್ದರು.

ಇದನ್ನೂ ಓದಿ: ಬಹುಸಂಖ್ಯಾತ ಭಾರತೀಯರಿಗೆ ಬಗೆದ ದ್ರೋಹ: ಬಜೆಟ್ ಕುರಿತು ಪಿ. ಚಿದಂಬರಂ ಪ್ರತಿಕ್ರಿಯೆ

‘ಹಣ ದರೋಡೆ’ ಅಭಿಯಾನದ ಭಾಗವಾಗಿ, ಬಿಆರ್‌ಎಸ್ ಕಾರ್ಯಕರ್ತರು ಹೋರ್ಡಿಂಗ್‌ಗಳನ್ನು ಹಿಡಿದು ಮೌನವಾಗಿ ಪ್ರತಿಭಟನೆ ನಡೆಸಿದರು. ಇದು ಕಳೆದ ವರ್ಷ ಜುಲೈನಲ್ಲಿ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯುವ ವೇಳೆ ಅನೇಕರ ಗಮನವನ್ನು ಬೇರೆಡೆಗೆ ಹರಿಸಲು ಮಾಡಿದ ಪ್ಲ್ಯಾನ್ ಆಗಿತ್ತು.

ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿಯ ಅಂತಿಮ ದಿನದಂದು, ಸಿಕಂದರಾಬಾದ್‌ನ ಪರೇಡ್ ಮೈದಾನದಲ್ಲಿ ಪಿಎಂ ನರೇಂದ್ರ ಮೋದಿಯವರ ರ್ಯಾಲಿಗೆ ಕೆಲವೇ ಗಂಟೆಗಳ ಮೊದಲು, ಬಿಆರ್‌ಎಸ್ ಘೋಷಣೆಯ ‘ಜೈ ಜೈ ಕೆಸಿಆರ್’ ಎಂದು ಪಿಂಕ್ ಬಲೂನ್‌ಗಳನ್ನು ಸ್ಥಳದ ಹೊರಗೆ ಇರಿಸಲಾಗಿತ್ತು. ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಸ್ಥಳದಿಂದ ಅವು ಗೋಚರಿಸುತ್ತಿದ್ದವು. ಆ ಮೂಲಕ ಸಭೆಗೆ ಬಂದವರ ಗಮನವನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದರು.

Hyderabad: Pink 'Jai KCR' balloons fill up sky outside PM Modi's public meet venue

ಕೇಂದ್ರ ಬಜೆಟ್ ಬಿಡುಗಡೆಯಾದ ನಂತರ ಮಾತನಾಡಿದ ಬಿಆರ್‌ಎಸ್ ಎಂಎಲ್‌ಸಿ ಕೆ ಕವಿತಾ ಕಲ್ವಕುಂಟ್ಲ, ಹೊಸ ತೆರಿಗೆ ಪದ್ಧತಿಯಲ್ಲಿ 7 ಲಕ್ಷ ರೂ.ವರೆಗಿನ ಆದಾಯದ ಮೇಲಿನ ಆದಾಯ ತೆರಿಗೆ ರಿಯಾಯಿತಿ (ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದಂತೆ) ತೆಲಂಗಾಣದ ಜನರಿಗೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಹೇಳಿದರು.

”ಮೋದಿ ಸರ್ಕಾರದ ವೈಫಲ್ಯವನ್ನು ಈ ಬಜೆಟ್ ದೃಢೀಕರಿಸಿದೆ. ಇದು ಕೆಲವು ರಾಜ್ಯಗಳ ಬಜೆಟ್‌ನಂತೆ ಕಾಣುತ್ತಿದೆ. 10 ಲಕ್ಷದವರೆಗೆ ತೆರಿಗೆ ರಿಯಾಯಿತಿಯನ್ನು ನಾವು ನಿರೀಕ್ಷಿಸಿದ್ದೇವೆ. ಏಕೆಂದರೆ ತೆಲಂಗಾಣದಲ್ಲಿ, ನಾವು ಜನರಿಗೆ ಉತ್ತಮ ಸಂಬಳ ನೀಡುತ್ತೇವೆ ಆದ್ದರಿಂದ ಈ ರಿಯಾಯಿತಿ ನಮಗೆ ಯಾವುದೇ ಪ್ರಯೋಜನವಿಲ್ಲ” ಎಂದು ಅವರು ANI ಗೆ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....