Homeಮುಖಪುಟ'ಬಜೆಟ್‌ನಲ್ಲಿ ತೆಲಂಗಾಣಕ್ಕೆ ಕೊಟ್ಟಿದ್ದು ಶೂನ್ಯ'; ಬ್ಯಾನರ್ ಹಾಕಿಸಿದ ತೆಲಂಗಾಣ ಸರ್ಕಾರ

‘ಬಜೆಟ್‌ನಲ್ಲಿ ತೆಲಂಗಾಣಕ್ಕೆ ಕೊಟ್ಟಿದ್ದು ಶೂನ್ಯ’; ಬ್ಯಾನರ್ ಹಾಕಿಸಿದ ತೆಲಂಗಾಣ ಸರ್ಕಾರ

- Advertisement -
- Advertisement -

ವಿತ್ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ 2023-24ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ. ಆದರೆ ಈ ಕೇಂದ್ರ ಬಜೆಟ್‌ನಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ತೆಲಂಗಾಣದ ಆಡಳಿತಾರೂಢ ಬಿಆರ್‌ಎಸ್ ಕೇಂದ್ರವನ್ನು ಗುರಿಯಾಗಿಸಿಕೊಂಡು ಪೋಸ್ಟರ್‌ಗಳನ್ನು ಹಾಕಿದೆ.

ಗುರುವಾರ ಹೈದರಾಬಾದ್‌ನಲ್ಲಿ ಮೋದಿ ಮತ್ತು ಕೇಂದ್ರವನ್ನು ಗುರಿಯಾಗಿಸಿಕೊಂಡು, ‘ಕೇಂದ್ರ ಬಜೆಟ್‌ನಲ್ಲಿ ತೆಲಂಗಾಣಕ್ಕೆ ಶೂನ್ಯ ಕೊಟ್ಟಿದೆ’ (TELANGANA GETS ZERO IN UNION BUDGET)  ಎಂಬ ದೊಡ್ಡ ಪೋಸ್ಟರ್‍‌ನ್ನು ಹಾಕಲಾಗಿದೆ. ನಗರದ ಭರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಸದಸ್ಯರು ಸಾಮಾಜಿಕ ಜಾಲತಾಣಗಳಲ್ಲಿ ಇದೇ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಕಳೆದ ವರ್ಷ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ನರೇಂದ್ರ ಮೋದಿ ಹೈದರಾಬಾದ್‌ಗೆ ಬಂದಿದ್ದಾಗ ಅವರನ್ನು ಗುರಿಯಾಗಿಸಿಕೊಂಡು ‘ಹಣ ದರೋಡೆ’ ಪೋಸ್ಟರ್‌ಗಳನ್ನು ಹಾಕಿದ್ದರು ಮತ್ತೆ ಆ ಪೋಸ್ಟರ್‍‌ಗಳನ್ನು ಬಿಆರ್‌ಎಸ್ ಕಾರ್ಯಕರ್ತರು ಇದೇ ರೀತಿ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಾರೆ. ಮೋದಿ ಅವರ ಸಾರ್ವಜನಿಕ ಸಭೆ ನಡೆಯುವ ಸ್ಥಳದ ಬಳಿ ಗುಲಾಬಿ ಬಣ್ಣದ ಬಲೂನ್‌ಗಳನ್ನು ಹಾಕುವ ಮೂಲಕ ಬಿಆರ್‌ಎಸ್ ಕಾರ್ಯಕರ್ತರು ವಿಶಿಷ್ಟವಾಗಿ ಗಮನಸೆಳೆದಿದ್ದರು.

ಇದನ್ನೂ ಓದಿ: ಬಹುಸಂಖ್ಯಾತ ಭಾರತೀಯರಿಗೆ ಬಗೆದ ದ್ರೋಹ: ಬಜೆಟ್ ಕುರಿತು ಪಿ. ಚಿದಂಬರಂ ಪ್ರತಿಕ್ರಿಯೆ

‘ಹಣ ದರೋಡೆ’ ಅಭಿಯಾನದ ಭಾಗವಾಗಿ, ಬಿಆರ್‌ಎಸ್ ಕಾರ್ಯಕರ್ತರು ಹೋರ್ಡಿಂಗ್‌ಗಳನ್ನು ಹಿಡಿದು ಮೌನವಾಗಿ ಪ್ರತಿಭಟನೆ ನಡೆಸಿದರು. ಇದು ಕಳೆದ ವರ್ಷ ಜುಲೈನಲ್ಲಿ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯುವ ವೇಳೆ ಅನೇಕರ ಗಮನವನ್ನು ಬೇರೆಡೆಗೆ ಹರಿಸಲು ಮಾಡಿದ ಪ್ಲ್ಯಾನ್ ಆಗಿತ್ತು.

ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿಯ ಅಂತಿಮ ದಿನದಂದು, ಸಿಕಂದರಾಬಾದ್‌ನ ಪರೇಡ್ ಮೈದಾನದಲ್ಲಿ ಪಿಎಂ ನರೇಂದ್ರ ಮೋದಿಯವರ ರ್ಯಾಲಿಗೆ ಕೆಲವೇ ಗಂಟೆಗಳ ಮೊದಲು, ಬಿಆರ್‌ಎಸ್ ಘೋಷಣೆಯ ‘ಜೈ ಜೈ ಕೆಸಿಆರ್’ ಎಂದು ಪಿಂಕ್ ಬಲೂನ್‌ಗಳನ್ನು ಸ್ಥಳದ ಹೊರಗೆ ಇರಿಸಲಾಗಿತ್ತು. ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಸ್ಥಳದಿಂದ ಅವು ಗೋಚರಿಸುತ್ತಿದ್ದವು. ಆ ಮೂಲಕ ಸಭೆಗೆ ಬಂದವರ ಗಮನವನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದರು.

Hyderabad: Pink 'Jai KCR' balloons fill up sky outside PM Modi's public meet venue

ಕೇಂದ್ರ ಬಜೆಟ್ ಬಿಡುಗಡೆಯಾದ ನಂತರ ಮಾತನಾಡಿದ ಬಿಆರ್‌ಎಸ್ ಎಂಎಲ್‌ಸಿ ಕೆ ಕವಿತಾ ಕಲ್ವಕುಂಟ್ಲ, ಹೊಸ ತೆರಿಗೆ ಪದ್ಧತಿಯಲ್ಲಿ 7 ಲಕ್ಷ ರೂ.ವರೆಗಿನ ಆದಾಯದ ಮೇಲಿನ ಆದಾಯ ತೆರಿಗೆ ರಿಯಾಯಿತಿ (ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದಂತೆ) ತೆಲಂಗಾಣದ ಜನರಿಗೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಹೇಳಿದರು.

”ಮೋದಿ ಸರ್ಕಾರದ ವೈಫಲ್ಯವನ್ನು ಈ ಬಜೆಟ್ ದೃಢೀಕರಿಸಿದೆ. ಇದು ಕೆಲವು ರಾಜ್ಯಗಳ ಬಜೆಟ್‌ನಂತೆ ಕಾಣುತ್ತಿದೆ. 10 ಲಕ್ಷದವರೆಗೆ ತೆರಿಗೆ ರಿಯಾಯಿತಿಯನ್ನು ನಾವು ನಿರೀಕ್ಷಿಸಿದ್ದೇವೆ. ಏಕೆಂದರೆ ತೆಲಂಗಾಣದಲ್ಲಿ, ನಾವು ಜನರಿಗೆ ಉತ್ತಮ ಸಂಬಳ ನೀಡುತ್ತೇವೆ ಆದ್ದರಿಂದ ಈ ರಿಯಾಯಿತಿ ನಮಗೆ ಯಾವುದೇ ಪ್ರಯೋಜನವಿಲ್ಲ” ಎಂದು ಅವರು ANI ಗೆ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...