Homeಮುಖಪುಟ'ಬಜೆಟ್‌ನಲ್ಲಿ ತೆಲಂಗಾಣಕ್ಕೆ ಕೊಟ್ಟಿದ್ದು ಶೂನ್ಯ'; ಬ್ಯಾನರ್ ಹಾಕಿಸಿದ ತೆಲಂಗಾಣ ಸರ್ಕಾರ

‘ಬಜೆಟ್‌ನಲ್ಲಿ ತೆಲಂಗಾಣಕ್ಕೆ ಕೊಟ್ಟಿದ್ದು ಶೂನ್ಯ’; ಬ್ಯಾನರ್ ಹಾಕಿಸಿದ ತೆಲಂಗಾಣ ಸರ್ಕಾರ

- Advertisement -
- Advertisement -

ವಿತ್ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ 2023-24ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ. ಆದರೆ ಈ ಕೇಂದ್ರ ಬಜೆಟ್‌ನಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ತೆಲಂಗಾಣದ ಆಡಳಿತಾರೂಢ ಬಿಆರ್‌ಎಸ್ ಕೇಂದ್ರವನ್ನು ಗುರಿಯಾಗಿಸಿಕೊಂಡು ಪೋಸ್ಟರ್‌ಗಳನ್ನು ಹಾಕಿದೆ.

ಗುರುವಾರ ಹೈದರಾಬಾದ್‌ನಲ್ಲಿ ಮೋದಿ ಮತ್ತು ಕೇಂದ್ರವನ್ನು ಗುರಿಯಾಗಿಸಿಕೊಂಡು, ‘ಕೇಂದ್ರ ಬಜೆಟ್‌ನಲ್ಲಿ ತೆಲಂಗಾಣಕ್ಕೆ ಶೂನ್ಯ ಕೊಟ್ಟಿದೆ’ (TELANGANA GETS ZERO IN UNION BUDGET)  ಎಂಬ ದೊಡ್ಡ ಪೋಸ್ಟರ್‍‌ನ್ನು ಹಾಕಲಾಗಿದೆ. ನಗರದ ಭರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಸದಸ್ಯರು ಸಾಮಾಜಿಕ ಜಾಲತಾಣಗಳಲ್ಲಿ ಇದೇ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಕಳೆದ ವರ್ಷ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ನರೇಂದ್ರ ಮೋದಿ ಹೈದರಾಬಾದ್‌ಗೆ ಬಂದಿದ್ದಾಗ ಅವರನ್ನು ಗುರಿಯಾಗಿಸಿಕೊಂಡು ‘ಹಣ ದರೋಡೆ’ ಪೋಸ್ಟರ್‌ಗಳನ್ನು ಹಾಕಿದ್ದರು ಮತ್ತೆ ಆ ಪೋಸ್ಟರ್‍‌ಗಳನ್ನು ಬಿಆರ್‌ಎಸ್ ಕಾರ್ಯಕರ್ತರು ಇದೇ ರೀತಿ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಾರೆ. ಮೋದಿ ಅವರ ಸಾರ್ವಜನಿಕ ಸಭೆ ನಡೆಯುವ ಸ್ಥಳದ ಬಳಿ ಗುಲಾಬಿ ಬಣ್ಣದ ಬಲೂನ್‌ಗಳನ್ನು ಹಾಕುವ ಮೂಲಕ ಬಿಆರ್‌ಎಸ್ ಕಾರ್ಯಕರ್ತರು ವಿಶಿಷ್ಟವಾಗಿ ಗಮನಸೆಳೆದಿದ್ದರು.

ಇದನ್ನೂ ಓದಿ: ಬಹುಸಂಖ್ಯಾತ ಭಾರತೀಯರಿಗೆ ಬಗೆದ ದ್ರೋಹ: ಬಜೆಟ್ ಕುರಿತು ಪಿ. ಚಿದಂಬರಂ ಪ್ರತಿಕ್ರಿಯೆ

‘ಹಣ ದರೋಡೆ’ ಅಭಿಯಾನದ ಭಾಗವಾಗಿ, ಬಿಆರ್‌ಎಸ್ ಕಾರ್ಯಕರ್ತರು ಹೋರ್ಡಿಂಗ್‌ಗಳನ್ನು ಹಿಡಿದು ಮೌನವಾಗಿ ಪ್ರತಿಭಟನೆ ನಡೆಸಿದರು. ಇದು ಕಳೆದ ವರ್ಷ ಜುಲೈನಲ್ಲಿ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯುವ ವೇಳೆ ಅನೇಕರ ಗಮನವನ್ನು ಬೇರೆಡೆಗೆ ಹರಿಸಲು ಮಾಡಿದ ಪ್ಲ್ಯಾನ್ ಆಗಿತ್ತು.

ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿಯ ಅಂತಿಮ ದಿನದಂದು, ಸಿಕಂದರಾಬಾದ್‌ನ ಪರೇಡ್ ಮೈದಾನದಲ್ಲಿ ಪಿಎಂ ನರೇಂದ್ರ ಮೋದಿಯವರ ರ್ಯಾಲಿಗೆ ಕೆಲವೇ ಗಂಟೆಗಳ ಮೊದಲು, ಬಿಆರ್‌ಎಸ್ ಘೋಷಣೆಯ ‘ಜೈ ಜೈ ಕೆಸಿಆರ್’ ಎಂದು ಪಿಂಕ್ ಬಲೂನ್‌ಗಳನ್ನು ಸ್ಥಳದ ಹೊರಗೆ ಇರಿಸಲಾಗಿತ್ತು. ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಸ್ಥಳದಿಂದ ಅವು ಗೋಚರಿಸುತ್ತಿದ್ದವು. ಆ ಮೂಲಕ ಸಭೆಗೆ ಬಂದವರ ಗಮನವನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದರು.

Hyderabad: Pink 'Jai KCR' balloons fill up sky outside PM Modi's public meet venue

ಕೇಂದ್ರ ಬಜೆಟ್ ಬಿಡುಗಡೆಯಾದ ನಂತರ ಮಾತನಾಡಿದ ಬಿಆರ್‌ಎಸ್ ಎಂಎಲ್‌ಸಿ ಕೆ ಕವಿತಾ ಕಲ್ವಕುಂಟ್ಲ, ಹೊಸ ತೆರಿಗೆ ಪದ್ಧತಿಯಲ್ಲಿ 7 ಲಕ್ಷ ರೂ.ವರೆಗಿನ ಆದಾಯದ ಮೇಲಿನ ಆದಾಯ ತೆರಿಗೆ ರಿಯಾಯಿತಿ (ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದಂತೆ) ತೆಲಂಗಾಣದ ಜನರಿಗೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಹೇಳಿದರು.

”ಮೋದಿ ಸರ್ಕಾರದ ವೈಫಲ್ಯವನ್ನು ಈ ಬಜೆಟ್ ದೃಢೀಕರಿಸಿದೆ. ಇದು ಕೆಲವು ರಾಜ್ಯಗಳ ಬಜೆಟ್‌ನಂತೆ ಕಾಣುತ್ತಿದೆ. 10 ಲಕ್ಷದವರೆಗೆ ತೆರಿಗೆ ರಿಯಾಯಿತಿಯನ್ನು ನಾವು ನಿರೀಕ್ಷಿಸಿದ್ದೇವೆ. ಏಕೆಂದರೆ ತೆಲಂಗಾಣದಲ್ಲಿ, ನಾವು ಜನರಿಗೆ ಉತ್ತಮ ಸಂಬಳ ನೀಡುತ್ತೇವೆ ಆದ್ದರಿಂದ ಈ ರಿಯಾಯಿತಿ ನಮಗೆ ಯಾವುದೇ ಪ್ರಯೋಜನವಿಲ್ಲ” ಎಂದು ಅವರು ANI ಗೆ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...