Homeಚಳವಳಿತೆಲಂಗಾಣದಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಶೇ. 33.3 ರಷ್ಟು ಮೀಸಲಾತಿ

ತೆಲಂಗಾಣದಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಶೇ. 33.3 ರಷ್ಟು ಮೀಸಲಾತಿ

- Advertisement -
- Advertisement -

ಆರ್ಥಿಕವಾಗಿ ಹಿಂದುಳಿದ ವರ್ಗಗಳ (ಇಡಬ್ಲ್ಯೂಎಸ್) ಕೋಟಾದಡಿ ರಾಜ್ಯ ಸರ್ಕಾರಿ ಹುದ್ದೆಗಳು ಮತ್ತು ಸೇವೆಗಳಲ್ಲಿ ಮಹಿಳೆಯರಿಗೆ ಶೇಕಡಾ 33.3 ರಷ್ಟು ಮೀಸಲಾತಿ ನೀಡಲು ತೆಲಂಗಾಣ ಸರ್ಕಾರ ನಿರ್ಧರಿಸಿದೆ.

ತೆಲಂಗಾಣದಾದ್ಯಂತ ಶೇಕಡಾ 10 ರಷ್ಟು ಇಡಬ್ಲ್ಯೂಎಸ್ ಮೀಸಲಾತಿಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮಂಗಳವಾರ ಸರ್ಕಾರ ಆದೇಶ ಹೊರಡಿಸಿದೆ. ತೆಲಂಗಾಣದ ಪ್ರತಿ ಉನ್ನತ ಶಿಕ್ಷಣ ಸಂಸ್ಥೆಯು ತಮ್ಮ ಪ್ರತಿ ಶಾಖೆಯಲ್ಲಿ ಮತ್ತು ಅಧ್ಯಾಪಕರ ಸೀಟುಗಳ ಸಂಖ್ಯೆಯನ್ನು ಹೆಚ್ಚಿಸಿ ಇಎಡಬ್ಲ್ಯುಎಸ್ ಅಭ್ಯರ್ಥಿಗಳನ್ನು ನೇಮಕ ಮಾಡಲು ಸೂಚನೆ ನೀಡಿದೆ.

“EWS ವರ್ಗಕ್ಕೆ ಮೀಸಲಾಗಿರುವ ರಾಜ್ಯ ಸರ್ಕಾರದ ಅಡಿಯಲ್ಲಿನ ಹುದ್ದೆಗಳು ಮತ್ತು ಸೇವೆಗಳಲ್ಲಿನ ಆರಂಭಿಕ ನೇಮಕಾತಿಯಲ್ಲಿ 33.3% ಅಷ್ಟು ಮಹಿಳೆಯರಿಗೆ ಹಂಚಿಕೆಯಾಗಬೇಕು” ಎಂದು ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್  ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕವೇ ಮೊದಲ ರಾಜ್ಯ: ಸರ್ಕಾರಿ ಉದ್ಯೋಗಗಳಲ್ಲಿ ಟ್ರಾನ್ಸ್‌ಜೆಂಡರ್‌ ಸಮುದಾಯಕ್ಕೆ 1% ಮೀಸಲಾತಿ ಘೋಷಣೆ

ಕೇಂದ್ರವು ಶಿಕ್ಷಣ ಮತ್ತು ಉದ್ಯೋಗದಲ್ಲಿ 10 % EWS ಮೀಸಲಾತಿಯನ್ನು ಘೋಷಿಸಿದೆ. ಇದರ ಎರಡು ವರ್ಷಗಳ ನಂತರ ತೆಲಂಗಾಣದಲ್ಲಿ ಇದೇ ಕೋಟಾದ ಅಡಿಯಲ್ಲಿ ಶೇಕಡಾ 33.3 ರಷ್ಟು ಮೀಸಲಾತಿ ನೀಡಲು ಮಾರ್ಗಸೂಚಿಗಳನ್ನು ನೀಡಲಾಗಿದೆ.

ಪ್ರಸ್ತುತ ರಾಜ್ಯದಲ್ಲಿ ಶೇ 50 ರಷ್ಟು ಮೀಸಲಾತಿಯನ್ನು ಹಿಂದುಳಿದ, ದುರ್ಬಲ ವರ್ಗಗಳಿಗೆ ಜಾರಿಗೊಳಿಸಲಾಗುತ್ತಿದೆ. ಈಗ EWSನ ಶೇಕಡಾ 10 ರಷ್ಟು ಮೀಸಲಾತಿಯೊಂದಿಗೆ, ಒಟ್ಟು ಶೇಕಡಾ 60 ರಷ್ಟು ಮೀಸಲಾತಿ ಸಿಕ್ಕಿದಂತಾಗುತ್ತದೆ.

ಎಸ್‌ಸಿ, ಎಸ್‌ಟಿ ಮತ್ತು ಬಿಸಿಗಳಿಗೆ ಮೀಸಲಾತಿ ಯೋಜನೆಯ ವ್ಯಾಪ್ತಿಗೆ ಒಳಪಡದ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಎಂಟು ಲಕ್ಷಕ್ಕಿಂತ ಕಡಿಮೆ ಇರುವ ವ್ಯಕ್ತಿಗಳನ್ನು ಇಡಬ್ಲ್ಯೂಎಸ್ ಕೋಡಾದಡಿ ಮೀಸಲಾತಿಗೆ ಅರ್ಹರು ಎಂದು ಗುರುತಿಸಬೇಕು ಎಂದು ಮಾರ್ಗಸೂಚಿಗಳಲ್ಲಿ ಹೇಳಲಾಗಿದೆ.


ಇದನ್ನೂ ಓದಿ: ಮರಾಠಾ ಮೀಸಲಾತಿ ರದ್ದುಗೊಳಿಸಿದ ಸುಪ್ರೀಂ; ರಾಜ್ಯದ ಮೇಲೂ ಪರಿಣಾಮ, ಜನಸಂಖ್ಯೆ ಆಧರಿಸಿದ ಮೀಸಲಾತಿ ಚರ್ಚೆ ಮುನ್ನೆಲೆಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

1962ರ ಯುದ್ಧದಲ್ಲಿ ಸೈನ್ಯಕ್ಕೆ 600 ಕೆಜಿ ಚಿನ್ನ ದಾನ ಮಾಡಿದ್ದ ದರ್ಭಂಗಾದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ ನಿಧನ

ದರ್ಭಾಂಗ ರಾಜಮನೆತನದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ 2025 ಜನವರಿ 12 ರಂದು ನಿಧನರಾಗಿದ್ದಾರೆ.  ಅನಾರೋಗ್ಯದಿಂದ ಬಳಲುತ್ತಿದ್ದ ಮಹಾರಾಣಿ ಕಾಮಸುಂದರಿ ಅವರು, ಬಿಹಾರದ ದರ್ಭಾಂಗದಲ್ಲಿರುವ ತಮ್ಮ ಐತಿಹಾಸಿಕ ನಿವಾಸ 'ಕಲ್ಯಾಣಿ'ಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದೊಂದಿಗೆ...

ವಿಧಾನಸಭೆ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ

2027 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸೇರಿದಂತೆ ದೇಶಾದ್ಯಂತ ಎಲ್ಲಾ ಚುನಾವಣೆಗಳಲ್ಲಿ ತಮ್ಮ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ. ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)...

ಐ-ಪ್ಯಾಕ್ ದಾಳಿ | ಇಡಿ ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ತಡೆ : ಮಮತಾ ಬ್ಯಾನರ್ಜಿ, ಪ.ಬಂಗಾಳ ಸರ್ಕಾರಕ್ಕೆ ನೋಟಿಸ್

ಐ-ಪ್ಯಾಕ್ ಕಚೇರಿ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಡಿ ಅಧಿಕಾರಿಗಳ ವಿರುದ್ದ ಕೋಲ್ಕತ್ತಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ಗುರುವಾರ (ಜ.15) ತಡೆ ನೀಡಿದೆ. ಇದರಿಂದ...

ಕಾಶ್ಮೀರ: ಭಯೋತ್ಪಾದನಾ ಪ್ರಕರಣದಲ್ಲಿ ಆಸಿಯಾ ಅಂದ್ರಾಬಿ ಮತ್ತು ಅವರ ಇಬ್ಬರು ಸಹಚರರು ದೋಷಿಗಳು ಎಂದು ತೀರ್ಪು ನೀಡಿದ ದೆಹಲಿ ನ್ಯಾಯಾಲಯ 

ದೆಹಲಿಯ ಎನ್ಐಎ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಬುಧವಾರ ನಿಷೇಧಿತ ಕಾಶ್ಮೀರಿ ಸಂಘಟನೆ ದುಖ್ತರನ್-ಎ-ಮಿಲ್ಲತ್ (ಡಿಇಎಂ) ಮುಖ್ಯಸ್ಥೆ ಆಸಿಯಾ ಅಂದ್ರಾಬಿ ಮತ್ತು ಆಕೆಯ ಇಬ್ಬರು ಸಹಚರರಾದ ಸೋಫಿ ಫೆಹ್ಮಿದಾ...

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ: ಉದ್ಧವ್ ಠಾಕ್ರೆ ಆರೋಪ

ಮಹಾರಾಷ್ಟ್ರದ ನಾಗರಿಕ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಗುರುವಾರ ಆರೋಪಿಸಿದ್ದು, ಇದು ಪ್ರಜಾಪ್ರಭುತ್ವವನ್ನು ಕೊಲೆ ಮಾಡುವ ಪ್ರಯತ್ನ ಎಂದು ಹೇಳಿದ್ದಾರೆ. ನಗರಸಭೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂಬ...

2025ರಲ್ಲಿ ಭಾರತದಲ್ಲಿ 1,318 ದ್ವೇಷ ಭಾಷಣ ಪ್ರಕರಣಗಳು ವರದಿಯಾಗಿದ್ದು, ಅವುಗಳಲ್ಲಿ ಶೇ. 98 ಮುಸ್ಲಿಮರನ್ನು ಗುರಿಯಾಗಿಸಿಕೊಂಡಿವೆ; ವರದಿ

2025ರಲ್ಲಿ ಭಾರತವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು, ವಿಶೇಷವಾಗಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡ ಕನಿಷ್ಠ 1,318 ದ್ವೇಷ ಭಾಷಣ ಘಟನೆಗಳಿಗೆ ಸಾಕ್ಷಿಯಾಗಿದೆ. ದಿನಕ್ಕೆ ಸರಾಸರಿ ನಾಲ್ಕು ದ್ವೇಷ ಭಾಷಣ...

ಪಶ್ಚಿಮ ಬಂಗಾಳ ಎಸ್‌ಐಆರ್ ಪ್ರತಿಭಟನೆ; ಉತ್ತರ ದಿನಾಜ್‌ಪುರದ ಸರ್ಕಾರಿ ಕಚೇರಿ ಧ್ವಂಸ

ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯಲ್ಲಿ ಗುರುವಾರ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಸರ್ಕಾರಿ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಜಾನೆಯಿಂದಲೇ, ಚಾಕುಲಿಯಾದಲ್ಲಿನ ಕಹಾಟಾ...

ಕೇರಳದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್‌ನಲ್ಲಿ ಇಬ್ಬರು ಬಾಲಕಿಯರ ಶವಗಳು ಪತ್ತೆ

ಕೇರಳದ ಕೊಲ್ಲಂನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರ (SAI) ಹಾಸ್ಟೆಲ್‌ನಲ್ಲಿ ತಂಗಿದ್ದ ಇಬ್ಬರು ಹುಡುಗಿಯರು ಗುರುವಾರ ಬೆಳಿಗ್ಗೆ ತಮ್ಮ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಕೋಝಿಕ್ಕೋಡ್ ಜಿಲ್ಲೆಯ ಸಾಂಡ್ರಾ (17) ಮತ್ತು...

ಪಿಎಚ್‌ಡಿ ಪ್ರವೇಶ ನಿರಾಕರಿಸಿದ ಜಾಮಿಯಾ ಯೂನಿವರ್ಸಿಟಿ; ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿ

2025–26 ಶೈಕ್ಷಣಿಕ ಅವಧಿಗೆ ಅಧಿಕೃತ ಪ್ರವೇಶ ಪ್ರಕ್ರಿಯೆಯ ಮೂಲಕ ಆಯ್ಕೆಯಾದ ತನ್ನನ್ನು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ವಿನಾಕಾರಣ ಪ್ರವೇಶ ನಿರಾಕರಿಸಿದೆ ಎಂದು ಆರೋಪಿಸಿ ವಿದ್ಯಾರ್ಥಿಯೊಬ್ಬರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಯುಜಿಸಿ-ನೆಟ್ ವಿನಾಯಿತಿ...

ಮದ್ರಸಾ ನಿರ್ಮಾಣದ ವದಂತಿ : ಖಾಸಗಿ ಶಾಲಾ ಕಟ್ಟಡ ಕೆಡವಿದ ಅಧಿಕಾರಿಗಳು

ಅನಧಿಕೃತವಾಗಿ ಮದ್ರಸಾ ನಿರ್ಮಿಸಲಾಗುತ್ತಿದೆ ಎಂಬ ವದಂತಿ ಹರಡಿದ ಹಿನ್ನೆಲೆ ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡವನ್ನು ಅಧಿಕಾರಿಗಳು ಬುಲ್ಡೋಝರ್ ಬಳಸಿ ಕೆಡವಿದ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...