Homeಮುಖಪುಟಸಿಪಿಐ (ಮಾವೋವಾದಿ) ಜೊತೆಗೆ ನಂಟು ಆರೋಪ:16 ಸಂಘಟನೆಗಳನ್ನು ಬ್ಯಾನ್ ಮಾಡಿದ ತೆಲಂಗಾಣ

ಸಿಪಿಐ (ಮಾವೋವಾದಿ) ಜೊತೆಗೆ ನಂಟು ಆರೋಪ:16 ಸಂಘಟನೆಗಳನ್ನು ಬ್ಯಾನ್ ಮಾಡಿದ ತೆಲಂಗಾಣ

ಸರ್ಕಾರದ ಆದೇಶವನ್ನು ವಿರೋಧಿಸಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ), ಸರ್ಕಾರದ ಈ ನಡೆಯು ಪ್ರಜಾಪ್ರಭುತ್ವ ವಿರೋಧಿ ಎಂದಿದೆ.

- Advertisement -
- Advertisement -

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾವೋವಾದಿ (ಸಿಪಿಐ-ಮಾವೋವಾದಿ)ಯೊಂದಿಗೆ ಸಂಬಂಧ ಹೊಂದಿವೆ ಎನ್ನಲಾಗಿರುವ 16 ಸಂಘಟನೆಗಳು ತೆಲಂಗಾಣ ಸರ್ಕಾರ ಒಂದು ವರ್ಷದ ಅವಧಿಗೆ ನಿಷೇಧಿಸಿ ಆದೇಶಿಸಿದೆ. ಈ 16 ಸಂಘಟನೆಗಳು ಕಾನೂನುಬಾಹಿರ ಸಂಘಟನೆಗಳು ಎಂದು ಹೇಳಿದ್ದು, ಮಾರ್ಚ್‌ 30 ರಿಂದ ಒಂದು ವರ್ಷದ ಅವಧಿಗೆ ನಿಷೇಧಿಸಲಾಗಿದೆ ಎಂದು ಘೋಷಿಸಲಾಗಿದೆ.

ತೆಲಂಗಾಣ ಸರ್ಕಾರ ಕಾನೂನುಬಾಹಿರವೆಂದು ಘೋಷಿಸಿರುವ ಸಂಘಟನೆಗಳು: ತೆಲಂಗಾಣ ಪ್ರಜಾ ಫ್ರಂಟ್ (TPD), ತೆಲಂಗಾಣ ಅಸಂಘಟಿತ ಕಾರ್ಮಿಕ ಸಮಾಕ್ಯ (TAKS), ತೆಲಂಗಾಣ ವಿದ್ಯಾರ್ಥಿ ವೇದಿಕಾ (TVV), ಡೆಮಾಕ್ರಟಿಕ್‌ ಸ್ಟೂಡೆಂಟ್‌ ಯೂನಿಯನ್‌ (DSU), ತೆಲಂಗಾಣ ವಿದ್ಯಾರ್ಥಿ ಸಂಘ (TVS), ಆದಿವಾಸಿ ಸ್ಟೂಡೆಂಟ್ಸ್ ಯೂನಿಯನ್ (ASU), ರಾಜಕೀಯ ಕೈದಿಗಳ ಬಿಡುಗಡೆ ಸಮಿತಿ (CRPP), ತೆಲಂಗಾಣ ರೈತಂಗ ಸಮಿತಿ (TRS), ತುಡುಮ್ ಡೆಬ್ಬಾ (TD), ಪ್ರಜಾ ಕಲಾ ಮಂಡಳಿ (PKM), ತೆಲಂಗಾಣ ಡೆಮಾಕ್ರಟಿಕ್ ಫ್ರಂಟ್ (TDF), ಹಿಂದೂ ಫ್ಯಾಸಿಸಂ ಆಕ್ರಮಣ ವಿರೋಧಿ ವೇದಿಕೆ (FAHFO), ಸಿವಿಲ್ ಲಿಬರ್ಟೀಸ್ ಕಮಿಟಿ (CLC), ಅಮರುಲಾ ಬಂಧು ಮಿಥ್ರುಲಾ ಸಂಘ (ABMS), ಚೈತನ್ಯ ಮಹಿಳಾ ಸಂಘ (CMS) ಮತ್ತು ಕ್ರಾಂತಿಕಾರಿ ಬರಹಗಾರರ ಸಂಘ (RWA).

ನಿಷೇಧಿಸಲಾಗಿರುವ ಈ 16 ಸಂಘಟನೆಗಳು ಯುಎಪಿಎ ಕಾಯ್ದೆ, ವಿವಾದಿತ ಮೂರು ಕೃಷಿ ಕಾನೂನುಗಳು, ಸಿಎಎ – ಎನ್‌ಆರ್‌ಸಿ ಮುಂತಾದ ವಿಷಯಗಳ ವಿರುದ್ದ ಪ್ರಚೋದನಾಕಾರಿ ಹೇಳಿಕೆಗಳು, ಸಭೆಗಳು ಮತ್ತು ರ್‍ಯಾಲಿಗಳನ್ನು ನಡೆಸುತ್ತಿದ್ದವು. ಈ ಮೂಲಕ ಜನರನ್ನು ತಮ್ಮ ಸಂಘಟನೆಯತ್ತ ಸೆಳೆಯುತ್ತಿವೆ. ಅಲ್ಲದೆ, ಈ ಸಂಘಟನೆಗಳು ಸಿಪಿಐ-ಮಾವೋವಾದಿ ನಾಯಕತ್ವದ ನಿರ್ದೇಶನದಂತೆ ಕೆಲಸ ಮಾಡುತ್ತವೆ ಎಂದು ಸರ್ಕಾರ ತಿಳಿಸಿದೆ.

ಇದನ್ನೂ ಓದಿ: ಕೊರೊನಾ ಸೋಂಕಿತ ವರ, ಪಿಪಿಇ ಕಿಟ್ ಧರಿಸಿದ ವಧು: ಮದುವೆ ಮಂಟಪವಾದ ಕೋವಿಡ್ ವಾರ್ಡ್!

ಈ ಸಂಘಟನೆಗಳ ಕೆಲವು ಸದಸ್ಯರು ಸರ್ಕಾರವನ್ನು “ರಾಜ್ಯದ ದಬ್ಬಾಳಿಕೆ” ಎಂದು ಕರೆಯುತ್ತಾರೆ ಮತ್ತು ಈ ಸಂಘಟನೆಗಳು ಪಿ. ವರವರ ರಾವ್, ಪ್ರೊಫೆಸರ್ ಜಿ.ಎನ್. ರೋಮಾ ವಿಲ್ಸನ್ ಮತ್ತು ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧಿಸಲ್ಪಟ್ಟ ವಿವಿಧ ಸಂಘಟನೆಗಳ ಮುಖಂಡರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ 16 ಸಂಘಟನೆಗಳನ್ನು ಒಂದು ವರ್ಷದ ಅವಧಿಗೆ ನಿಷೇಧಿಸಿರುವುದಾಗಿ ಸರ್ಕಾರ ತನ್ನ ಆದೇಶದಲ್ಲಿ ಹೇಳಿದೆ.

ಸಂಘಟನೆಗಳನ್ನು ನಿಷೇಧಿಸಿರುವ ಸರ್ಕಾರ ಆದೇಶವನ್ನು ವಿರೋಧಿಸಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ), ಸರ್ಕಾರದ ಈ ನಡೆಯು ಪ್ರಜಾಪ್ರಭುತ್ವ ವಿರೋಧಿಯಾಗಿದ್ದು, ರಾಜಕೀಯ ಭಿನ್ನಮತದ ವಿರುದ್ಧ ರಾಜ್ಯ ಸರ್ಕಾರ ಈ ರೀತಿಯ ಪ್ರತೀಕಾರಕ್ಕೆ ಇಳಿದಿದೆ ಎಂದು ಆರೋಪಿಸಿದೆ.

ಯಾವುದೇ ಸಿದ್ಧಾಂತಗಳನ್ನು ಬಲಪ್ರಯೋಗದ ಮೂಲಕ ಸೋಲಿಸಲಾಗದು. ಸಮಾಜದಲ್ಲಿ ಪ್ರಜಾಸತ್ತಾತ್ಮಕವಾಗಿ ಕೆಲಸ ಮಾಡಲು ಅವಕಾಶ ನಿರಾಕರಿಸುವುದು‌ ನಮ್ಮ ಪ್ರಜಾಸತ್ತಾತ್ಮಕ ಮೌಲ್ಯಗಳ ಮೇಲೆ ಜನರು ನಂಬಿಕೆ ಕಳೆದುಕೊಳ್ಳುವಂತೆ ಮಾಡುತ್ತದೆ ಎಂದು ಹೇಳಿದೆ.

ಕಾನೂನುಬಾಹಿರ ಕೆಲಸವನ್ನು‌ ಮಾಡಿರುವುದಕ್ಕೆ ಯಾವುದೇ ವ್ಯಕ್ತಿ ಅಥವಾ ಸಂಘಟನೆಯ ವಿರುದ್ಧ ಸರ್ಕಾರದ  ಬಳಿ ಸಾಕ್ಷಿಯಿದ್ದರೇ ಸಂಬಂಧಿಸಿದ ಪ್ರಕರಣವನ್ನು ನ್ಯಾಯಾಲಯದಲ್ಲಿ ಸಾಬೀತುಪಡಿಸಬೇಕು. ಅದನ್ನು ಬಿಟ್ಟು, ಈ ರೀತಿಯಲ್ಲಿ ದಮನ ಮಾಡುವುದು ಪ್ರಜಾಸತ್ತಾತ್ಮಕ ಸಮಾಜಕ್ಕೆ ವಿನಾಶಕಾರಿಯಾಗಿದೆ ಎಂದು ಪಿಎಫ್‌ಐ ಪ್ರಧಾನ ಕಾರ್ಯದರ್ಶಿ ಅನೀಸ್ ಅಹ್ಮದ್ ಆಕ್ಷೇಪಿಸಿದ್ದಾರೆ.


ಇದನ್ನೂ ಓದಿ: ಸಂಕೇಶ್ವರರ Some-ಶೋಧನೆಗಳು: ಉಚಿತ ರೇಷನ್ ಕೊಟ್ಟರೆ ಜನ ಕೆಲಸಕ್ಕೆ ಬರಲ್ಲ! ಆಮ್ಲಜನಕ ಸಮಸ್ಯೆ ಬಗೆಹರಿಸಲು ನಿಂಬೆರಸ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತೆಲಂಗಾಣ ಸರ್ಕಾರದ ಈ ಕ್ರಮ ಪ್ರಜಾಪ್ರಭುತ್ವದ ನಾಶಕ್ಕೆ ನಾಂದಿ ಹಾಡಿದೆ.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...