Homeಮುಖಪುಟಸಿಪಿಐ (ಮಾವೋವಾದಿ) ಜೊತೆಗೆ ನಂಟು ಆರೋಪ:16 ಸಂಘಟನೆಗಳನ್ನು ಬ್ಯಾನ್ ಮಾಡಿದ ತೆಲಂಗಾಣ

ಸಿಪಿಐ (ಮಾವೋವಾದಿ) ಜೊತೆಗೆ ನಂಟು ಆರೋಪ:16 ಸಂಘಟನೆಗಳನ್ನು ಬ್ಯಾನ್ ಮಾಡಿದ ತೆಲಂಗಾಣ

ಸರ್ಕಾರದ ಆದೇಶವನ್ನು ವಿರೋಧಿಸಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ), ಸರ್ಕಾರದ ಈ ನಡೆಯು ಪ್ರಜಾಪ್ರಭುತ್ವ ವಿರೋಧಿ ಎಂದಿದೆ.

- Advertisement -
- Advertisement -

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾವೋವಾದಿ (ಸಿಪಿಐ-ಮಾವೋವಾದಿ)ಯೊಂದಿಗೆ ಸಂಬಂಧ ಹೊಂದಿವೆ ಎನ್ನಲಾಗಿರುವ 16 ಸಂಘಟನೆಗಳು ತೆಲಂಗಾಣ ಸರ್ಕಾರ ಒಂದು ವರ್ಷದ ಅವಧಿಗೆ ನಿಷೇಧಿಸಿ ಆದೇಶಿಸಿದೆ. ಈ 16 ಸಂಘಟನೆಗಳು ಕಾನೂನುಬಾಹಿರ ಸಂಘಟನೆಗಳು ಎಂದು ಹೇಳಿದ್ದು, ಮಾರ್ಚ್‌ 30 ರಿಂದ ಒಂದು ವರ್ಷದ ಅವಧಿಗೆ ನಿಷೇಧಿಸಲಾಗಿದೆ ಎಂದು ಘೋಷಿಸಲಾಗಿದೆ.

ತೆಲಂಗಾಣ ಸರ್ಕಾರ ಕಾನೂನುಬಾಹಿರವೆಂದು ಘೋಷಿಸಿರುವ ಸಂಘಟನೆಗಳು: ತೆಲಂಗಾಣ ಪ್ರಜಾ ಫ್ರಂಟ್ (TPD), ತೆಲಂಗಾಣ ಅಸಂಘಟಿತ ಕಾರ್ಮಿಕ ಸಮಾಕ್ಯ (TAKS), ತೆಲಂಗಾಣ ವಿದ್ಯಾರ್ಥಿ ವೇದಿಕಾ (TVV), ಡೆಮಾಕ್ರಟಿಕ್‌ ಸ್ಟೂಡೆಂಟ್‌ ಯೂನಿಯನ್‌ (DSU), ತೆಲಂಗಾಣ ವಿದ್ಯಾರ್ಥಿ ಸಂಘ (TVS), ಆದಿವಾಸಿ ಸ್ಟೂಡೆಂಟ್ಸ್ ಯೂನಿಯನ್ (ASU), ರಾಜಕೀಯ ಕೈದಿಗಳ ಬಿಡುಗಡೆ ಸಮಿತಿ (CRPP), ತೆಲಂಗಾಣ ರೈತಂಗ ಸಮಿತಿ (TRS), ತುಡುಮ್ ಡೆಬ್ಬಾ (TD), ಪ್ರಜಾ ಕಲಾ ಮಂಡಳಿ (PKM), ತೆಲಂಗಾಣ ಡೆಮಾಕ್ರಟಿಕ್ ಫ್ರಂಟ್ (TDF), ಹಿಂದೂ ಫ್ಯಾಸಿಸಂ ಆಕ್ರಮಣ ವಿರೋಧಿ ವೇದಿಕೆ (FAHFO), ಸಿವಿಲ್ ಲಿಬರ್ಟೀಸ್ ಕಮಿಟಿ (CLC), ಅಮರುಲಾ ಬಂಧು ಮಿಥ್ರುಲಾ ಸಂಘ (ABMS), ಚೈತನ್ಯ ಮಹಿಳಾ ಸಂಘ (CMS) ಮತ್ತು ಕ್ರಾಂತಿಕಾರಿ ಬರಹಗಾರರ ಸಂಘ (RWA).

ನಿಷೇಧಿಸಲಾಗಿರುವ ಈ 16 ಸಂಘಟನೆಗಳು ಯುಎಪಿಎ ಕಾಯ್ದೆ, ವಿವಾದಿತ ಮೂರು ಕೃಷಿ ಕಾನೂನುಗಳು, ಸಿಎಎ – ಎನ್‌ಆರ್‌ಸಿ ಮುಂತಾದ ವಿಷಯಗಳ ವಿರುದ್ದ ಪ್ರಚೋದನಾಕಾರಿ ಹೇಳಿಕೆಗಳು, ಸಭೆಗಳು ಮತ್ತು ರ್‍ಯಾಲಿಗಳನ್ನು ನಡೆಸುತ್ತಿದ್ದವು. ಈ ಮೂಲಕ ಜನರನ್ನು ತಮ್ಮ ಸಂಘಟನೆಯತ್ತ ಸೆಳೆಯುತ್ತಿವೆ. ಅಲ್ಲದೆ, ಈ ಸಂಘಟನೆಗಳು ಸಿಪಿಐ-ಮಾವೋವಾದಿ ನಾಯಕತ್ವದ ನಿರ್ದೇಶನದಂತೆ ಕೆಲಸ ಮಾಡುತ್ತವೆ ಎಂದು ಸರ್ಕಾರ ತಿಳಿಸಿದೆ.

ಇದನ್ನೂ ಓದಿ: ಕೊರೊನಾ ಸೋಂಕಿತ ವರ, ಪಿಪಿಇ ಕಿಟ್ ಧರಿಸಿದ ವಧು: ಮದುವೆ ಮಂಟಪವಾದ ಕೋವಿಡ್ ವಾರ್ಡ್!

ಈ ಸಂಘಟನೆಗಳ ಕೆಲವು ಸದಸ್ಯರು ಸರ್ಕಾರವನ್ನು “ರಾಜ್ಯದ ದಬ್ಬಾಳಿಕೆ” ಎಂದು ಕರೆಯುತ್ತಾರೆ ಮತ್ತು ಈ ಸಂಘಟನೆಗಳು ಪಿ. ವರವರ ರಾವ್, ಪ್ರೊಫೆಸರ್ ಜಿ.ಎನ್. ರೋಮಾ ವಿಲ್ಸನ್ ಮತ್ತು ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧಿಸಲ್ಪಟ್ಟ ವಿವಿಧ ಸಂಘಟನೆಗಳ ಮುಖಂಡರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ 16 ಸಂಘಟನೆಗಳನ್ನು ಒಂದು ವರ್ಷದ ಅವಧಿಗೆ ನಿಷೇಧಿಸಿರುವುದಾಗಿ ಸರ್ಕಾರ ತನ್ನ ಆದೇಶದಲ್ಲಿ ಹೇಳಿದೆ.

ಸಂಘಟನೆಗಳನ್ನು ನಿಷೇಧಿಸಿರುವ ಸರ್ಕಾರ ಆದೇಶವನ್ನು ವಿರೋಧಿಸಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ), ಸರ್ಕಾರದ ಈ ನಡೆಯು ಪ್ರಜಾಪ್ರಭುತ್ವ ವಿರೋಧಿಯಾಗಿದ್ದು, ರಾಜಕೀಯ ಭಿನ್ನಮತದ ವಿರುದ್ಧ ರಾಜ್ಯ ಸರ್ಕಾರ ಈ ರೀತಿಯ ಪ್ರತೀಕಾರಕ್ಕೆ ಇಳಿದಿದೆ ಎಂದು ಆರೋಪಿಸಿದೆ.

ಯಾವುದೇ ಸಿದ್ಧಾಂತಗಳನ್ನು ಬಲಪ್ರಯೋಗದ ಮೂಲಕ ಸೋಲಿಸಲಾಗದು. ಸಮಾಜದಲ್ಲಿ ಪ್ರಜಾಸತ್ತಾತ್ಮಕವಾಗಿ ಕೆಲಸ ಮಾಡಲು ಅವಕಾಶ ನಿರಾಕರಿಸುವುದು‌ ನಮ್ಮ ಪ್ರಜಾಸತ್ತಾತ್ಮಕ ಮೌಲ್ಯಗಳ ಮೇಲೆ ಜನರು ನಂಬಿಕೆ ಕಳೆದುಕೊಳ್ಳುವಂತೆ ಮಾಡುತ್ತದೆ ಎಂದು ಹೇಳಿದೆ.

ಕಾನೂನುಬಾಹಿರ ಕೆಲಸವನ್ನು‌ ಮಾಡಿರುವುದಕ್ಕೆ ಯಾವುದೇ ವ್ಯಕ್ತಿ ಅಥವಾ ಸಂಘಟನೆಯ ವಿರುದ್ಧ ಸರ್ಕಾರದ  ಬಳಿ ಸಾಕ್ಷಿಯಿದ್ದರೇ ಸಂಬಂಧಿಸಿದ ಪ್ರಕರಣವನ್ನು ನ್ಯಾಯಾಲಯದಲ್ಲಿ ಸಾಬೀತುಪಡಿಸಬೇಕು. ಅದನ್ನು ಬಿಟ್ಟು, ಈ ರೀತಿಯಲ್ಲಿ ದಮನ ಮಾಡುವುದು ಪ್ರಜಾಸತ್ತಾತ್ಮಕ ಸಮಾಜಕ್ಕೆ ವಿನಾಶಕಾರಿಯಾಗಿದೆ ಎಂದು ಪಿಎಫ್‌ಐ ಪ್ರಧಾನ ಕಾರ್ಯದರ್ಶಿ ಅನೀಸ್ ಅಹ್ಮದ್ ಆಕ್ಷೇಪಿಸಿದ್ದಾರೆ.


ಇದನ್ನೂ ಓದಿ: ಸಂಕೇಶ್ವರರ Some-ಶೋಧನೆಗಳು: ಉಚಿತ ರೇಷನ್ ಕೊಟ್ಟರೆ ಜನ ಕೆಲಸಕ್ಕೆ ಬರಲ್ಲ! ಆಮ್ಲಜನಕ ಸಮಸ್ಯೆ ಬಗೆಹರಿಸಲು ನಿಂಬೆರಸ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತೆಲಂಗಾಣ ಸರ್ಕಾರದ ಈ ಕ್ರಮ ಪ್ರಜಾಪ್ರಭುತ್ವದ ನಾಶಕ್ಕೆ ನಾಂದಿ ಹಾಡಿದೆ.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...