Homeಮುಖಪುಟಸಿಪಿಐ (ಮಾವೋವಾದಿ) ಜೊತೆಗೆ ನಂಟು ಆರೋಪ:16 ಸಂಘಟನೆಗಳನ್ನು ಬ್ಯಾನ್ ಮಾಡಿದ ತೆಲಂಗಾಣ

ಸಿಪಿಐ (ಮಾವೋವಾದಿ) ಜೊತೆಗೆ ನಂಟು ಆರೋಪ:16 ಸಂಘಟನೆಗಳನ್ನು ಬ್ಯಾನ್ ಮಾಡಿದ ತೆಲಂಗಾಣ

ಸರ್ಕಾರದ ಆದೇಶವನ್ನು ವಿರೋಧಿಸಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ), ಸರ್ಕಾರದ ಈ ನಡೆಯು ಪ್ರಜಾಪ್ರಭುತ್ವ ವಿರೋಧಿ ಎಂದಿದೆ.

- Advertisement -
- Advertisement -

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾವೋವಾದಿ (ಸಿಪಿಐ-ಮಾವೋವಾದಿ)ಯೊಂದಿಗೆ ಸಂಬಂಧ ಹೊಂದಿವೆ ಎನ್ನಲಾಗಿರುವ 16 ಸಂಘಟನೆಗಳು ತೆಲಂಗಾಣ ಸರ್ಕಾರ ಒಂದು ವರ್ಷದ ಅವಧಿಗೆ ನಿಷೇಧಿಸಿ ಆದೇಶಿಸಿದೆ. ಈ 16 ಸಂಘಟನೆಗಳು ಕಾನೂನುಬಾಹಿರ ಸಂಘಟನೆಗಳು ಎಂದು ಹೇಳಿದ್ದು, ಮಾರ್ಚ್‌ 30 ರಿಂದ ಒಂದು ವರ್ಷದ ಅವಧಿಗೆ ನಿಷೇಧಿಸಲಾಗಿದೆ ಎಂದು ಘೋಷಿಸಲಾಗಿದೆ.

ತೆಲಂಗಾಣ ಸರ್ಕಾರ ಕಾನೂನುಬಾಹಿರವೆಂದು ಘೋಷಿಸಿರುವ ಸಂಘಟನೆಗಳು: ತೆಲಂಗಾಣ ಪ್ರಜಾ ಫ್ರಂಟ್ (TPD), ತೆಲಂಗಾಣ ಅಸಂಘಟಿತ ಕಾರ್ಮಿಕ ಸಮಾಕ್ಯ (TAKS), ತೆಲಂಗಾಣ ವಿದ್ಯಾರ್ಥಿ ವೇದಿಕಾ (TVV), ಡೆಮಾಕ್ರಟಿಕ್‌ ಸ್ಟೂಡೆಂಟ್‌ ಯೂನಿಯನ್‌ (DSU), ತೆಲಂಗಾಣ ವಿದ್ಯಾರ್ಥಿ ಸಂಘ (TVS), ಆದಿವಾಸಿ ಸ್ಟೂಡೆಂಟ್ಸ್ ಯೂನಿಯನ್ (ASU), ರಾಜಕೀಯ ಕೈದಿಗಳ ಬಿಡುಗಡೆ ಸಮಿತಿ (CRPP), ತೆಲಂಗಾಣ ರೈತಂಗ ಸಮಿತಿ (TRS), ತುಡುಮ್ ಡೆಬ್ಬಾ (TD), ಪ್ರಜಾ ಕಲಾ ಮಂಡಳಿ (PKM), ತೆಲಂಗಾಣ ಡೆಮಾಕ್ರಟಿಕ್ ಫ್ರಂಟ್ (TDF), ಹಿಂದೂ ಫ್ಯಾಸಿಸಂ ಆಕ್ರಮಣ ವಿರೋಧಿ ವೇದಿಕೆ (FAHFO), ಸಿವಿಲ್ ಲಿಬರ್ಟೀಸ್ ಕಮಿಟಿ (CLC), ಅಮರುಲಾ ಬಂಧು ಮಿಥ್ರುಲಾ ಸಂಘ (ABMS), ಚೈತನ್ಯ ಮಹಿಳಾ ಸಂಘ (CMS) ಮತ್ತು ಕ್ರಾಂತಿಕಾರಿ ಬರಹಗಾರರ ಸಂಘ (RWA).

ನಿಷೇಧಿಸಲಾಗಿರುವ ಈ 16 ಸಂಘಟನೆಗಳು ಯುಎಪಿಎ ಕಾಯ್ದೆ, ವಿವಾದಿತ ಮೂರು ಕೃಷಿ ಕಾನೂನುಗಳು, ಸಿಎಎ – ಎನ್‌ಆರ್‌ಸಿ ಮುಂತಾದ ವಿಷಯಗಳ ವಿರುದ್ದ ಪ್ರಚೋದನಾಕಾರಿ ಹೇಳಿಕೆಗಳು, ಸಭೆಗಳು ಮತ್ತು ರ್‍ಯಾಲಿಗಳನ್ನು ನಡೆಸುತ್ತಿದ್ದವು. ಈ ಮೂಲಕ ಜನರನ್ನು ತಮ್ಮ ಸಂಘಟನೆಯತ್ತ ಸೆಳೆಯುತ್ತಿವೆ. ಅಲ್ಲದೆ, ಈ ಸಂಘಟನೆಗಳು ಸಿಪಿಐ-ಮಾವೋವಾದಿ ನಾಯಕತ್ವದ ನಿರ್ದೇಶನದಂತೆ ಕೆಲಸ ಮಾಡುತ್ತವೆ ಎಂದು ಸರ್ಕಾರ ತಿಳಿಸಿದೆ.

ಇದನ್ನೂ ಓದಿ: ಕೊರೊನಾ ಸೋಂಕಿತ ವರ, ಪಿಪಿಇ ಕಿಟ್ ಧರಿಸಿದ ವಧು: ಮದುವೆ ಮಂಟಪವಾದ ಕೋವಿಡ್ ವಾರ್ಡ್!

ಈ ಸಂಘಟನೆಗಳ ಕೆಲವು ಸದಸ್ಯರು ಸರ್ಕಾರವನ್ನು “ರಾಜ್ಯದ ದಬ್ಬಾಳಿಕೆ” ಎಂದು ಕರೆಯುತ್ತಾರೆ ಮತ್ತು ಈ ಸಂಘಟನೆಗಳು ಪಿ. ವರವರ ರಾವ್, ಪ್ರೊಫೆಸರ್ ಜಿ.ಎನ್. ರೋಮಾ ವಿಲ್ಸನ್ ಮತ್ತು ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧಿಸಲ್ಪಟ್ಟ ವಿವಿಧ ಸಂಘಟನೆಗಳ ಮುಖಂಡರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ 16 ಸಂಘಟನೆಗಳನ್ನು ಒಂದು ವರ್ಷದ ಅವಧಿಗೆ ನಿಷೇಧಿಸಿರುವುದಾಗಿ ಸರ್ಕಾರ ತನ್ನ ಆದೇಶದಲ್ಲಿ ಹೇಳಿದೆ.

ಸಂಘಟನೆಗಳನ್ನು ನಿಷೇಧಿಸಿರುವ ಸರ್ಕಾರ ಆದೇಶವನ್ನು ವಿರೋಧಿಸಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ), ಸರ್ಕಾರದ ಈ ನಡೆಯು ಪ್ರಜಾಪ್ರಭುತ್ವ ವಿರೋಧಿಯಾಗಿದ್ದು, ರಾಜಕೀಯ ಭಿನ್ನಮತದ ವಿರುದ್ಧ ರಾಜ್ಯ ಸರ್ಕಾರ ಈ ರೀತಿಯ ಪ್ರತೀಕಾರಕ್ಕೆ ಇಳಿದಿದೆ ಎಂದು ಆರೋಪಿಸಿದೆ.

ಯಾವುದೇ ಸಿದ್ಧಾಂತಗಳನ್ನು ಬಲಪ್ರಯೋಗದ ಮೂಲಕ ಸೋಲಿಸಲಾಗದು. ಸಮಾಜದಲ್ಲಿ ಪ್ರಜಾಸತ್ತಾತ್ಮಕವಾಗಿ ಕೆಲಸ ಮಾಡಲು ಅವಕಾಶ ನಿರಾಕರಿಸುವುದು‌ ನಮ್ಮ ಪ್ರಜಾಸತ್ತಾತ್ಮಕ ಮೌಲ್ಯಗಳ ಮೇಲೆ ಜನರು ನಂಬಿಕೆ ಕಳೆದುಕೊಳ್ಳುವಂತೆ ಮಾಡುತ್ತದೆ ಎಂದು ಹೇಳಿದೆ.

ಕಾನೂನುಬಾಹಿರ ಕೆಲಸವನ್ನು‌ ಮಾಡಿರುವುದಕ್ಕೆ ಯಾವುದೇ ವ್ಯಕ್ತಿ ಅಥವಾ ಸಂಘಟನೆಯ ವಿರುದ್ಧ ಸರ್ಕಾರದ  ಬಳಿ ಸಾಕ್ಷಿಯಿದ್ದರೇ ಸಂಬಂಧಿಸಿದ ಪ್ರಕರಣವನ್ನು ನ್ಯಾಯಾಲಯದಲ್ಲಿ ಸಾಬೀತುಪಡಿಸಬೇಕು. ಅದನ್ನು ಬಿಟ್ಟು, ಈ ರೀತಿಯಲ್ಲಿ ದಮನ ಮಾಡುವುದು ಪ್ರಜಾಸತ್ತಾತ್ಮಕ ಸಮಾಜಕ್ಕೆ ವಿನಾಶಕಾರಿಯಾಗಿದೆ ಎಂದು ಪಿಎಫ್‌ಐ ಪ್ರಧಾನ ಕಾರ್ಯದರ್ಶಿ ಅನೀಸ್ ಅಹ್ಮದ್ ಆಕ್ಷೇಪಿಸಿದ್ದಾರೆ.


ಇದನ್ನೂ ಓದಿ: ಸಂಕೇಶ್ವರರ Some-ಶೋಧನೆಗಳು: ಉಚಿತ ರೇಷನ್ ಕೊಟ್ಟರೆ ಜನ ಕೆಲಸಕ್ಕೆ ಬರಲ್ಲ! ಆಮ್ಲಜನಕ ಸಮಸ್ಯೆ ಬಗೆಹರಿಸಲು ನಿಂಬೆರಸ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತೆಲಂಗಾಣ ಸರ್ಕಾರದ ಈ ಕ್ರಮ ಪ್ರಜಾಪ್ರಭುತ್ವದ ನಾಶಕ್ಕೆ ನಾಂದಿ ಹಾಡಿದೆ.

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...