Homeಮುಖಪುಟಸಿಪಿಐ (ಮಾವೋವಾದಿ) ಜೊತೆಗೆ ನಂಟು ಆರೋಪ:16 ಸಂಘಟನೆಗಳನ್ನು ಬ್ಯಾನ್ ಮಾಡಿದ ತೆಲಂಗಾಣ

ಸಿಪಿಐ (ಮಾವೋವಾದಿ) ಜೊತೆಗೆ ನಂಟು ಆರೋಪ:16 ಸಂಘಟನೆಗಳನ್ನು ಬ್ಯಾನ್ ಮಾಡಿದ ತೆಲಂಗಾಣ

ಸರ್ಕಾರದ ಆದೇಶವನ್ನು ವಿರೋಧಿಸಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ), ಸರ್ಕಾರದ ಈ ನಡೆಯು ಪ್ರಜಾಪ್ರಭುತ್ವ ವಿರೋಧಿ ಎಂದಿದೆ.

- Advertisement -
- Advertisement -

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾವೋವಾದಿ (ಸಿಪಿಐ-ಮಾವೋವಾದಿ)ಯೊಂದಿಗೆ ಸಂಬಂಧ ಹೊಂದಿವೆ ಎನ್ನಲಾಗಿರುವ 16 ಸಂಘಟನೆಗಳು ತೆಲಂಗಾಣ ಸರ್ಕಾರ ಒಂದು ವರ್ಷದ ಅವಧಿಗೆ ನಿಷೇಧಿಸಿ ಆದೇಶಿಸಿದೆ. ಈ 16 ಸಂಘಟನೆಗಳು ಕಾನೂನುಬಾಹಿರ ಸಂಘಟನೆಗಳು ಎಂದು ಹೇಳಿದ್ದು, ಮಾರ್ಚ್‌ 30 ರಿಂದ ಒಂದು ವರ್ಷದ ಅವಧಿಗೆ ನಿಷೇಧಿಸಲಾಗಿದೆ ಎಂದು ಘೋಷಿಸಲಾಗಿದೆ.

ತೆಲಂಗಾಣ ಸರ್ಕಾರ ಕಾನೂನುಬಾಹಿರವೆಂದು ಘೋಷಿಸಿರುವ ಸಂಘಟನೆಗಳು: ತೆಲಂಗಾಣ ಪ್ರಜಾ ಫ್ರಂಟ್ (TPD), ತೆಲಂಗಾಣ ಅಸಂಘಟಿತ ಕಾರ್ಮಿಕ ಸಮಾಕ್ಯ (TAKS), ತೆಲಂಗಾಣ ವಿದ್ಯಾರ್ಥಿ ವೇದಿಕಾ (TVV), ಡೆಮಾಕ್ರಟಿಕ್‌ ಸ್ಟೂಡೆಂಟ್‌ ಯೂನಿಯನ್‌ (DSU), ತೆಲಂಗಾಣ ವಿದ್ಯಾರ್ಥಿ ಸಂಘ (TVS), ಆದಿವಾಸಿ ಸ್ಟೂಡೆಂಟ್ಸ್ ಯೂನಿಯನ್ (ASU), ರಾಜಕೀಯ ಕೈದಿಗಳ ಬಿಡುಗಡೆ ಸಮಿತಿ (CRPP), ತೆಲಂಗಾಣ ರೈತಂಗ ಸಮಿತಿ (TRS), ತುಡುಮ್ ಡೆಬ್ಬಾ (TD), ಪ್ರಜಾ ಕಲಾ ಮಂಡಳಿ (PKM), ತೆಲಂಗಾಣ ಡೆಮಾಕ್ರಟಿಕ್ ಫ್ರಂಟ್ (TDF), ಹಿಂದೂ ಫ್ಯಾಸಿಸಂ ಆಕ್ರಮಣ ವಿರೋಧಿ ವೇದಿಕೆ (FAHFO), ಸಿವಿಲ್ ಲಿಬರ್ಟೀಸ್ ಕಮಿಟಿ (CLC), ಅಮರುಲಾ ಬಂಧು ಮಿಥ್ರುಲಾ ಸಂಘ (ABMS), ಚೈತನ್ಯ ಮಹಿಳಾ ಸಂಘ (CMS) ಮತ್ತು ಕ್ರಾಂತಿಕಾರಿ ಬರಹಗಾರರ ಸಂಘ (RWA).

ನಿಷೇಧಿಸಲಾಗಿರುವ ಈ 16 ಸಂಘಟನೆಗಳು ಯುಎಪಿಎ ಕಾಯ್ದೆ, ವಿವಾದಿತ ಮೂರು ಕೃಷಿ ಕಾನೂನುಗಳು, ಸಿಎಎ – ಎನ್‌ಆರ್‌ಸಿ ಮುಂತಾದ ವಿಷಯಗಳ ವಿರುದ್ದ ಪ್ರಚೋದನಾಕಾರಿ ಹೇಳಿಕೆಗಳು, ಸಭೆಗಳು ಮತ್ತು ರ್‍ಯಾಲಿಗಳನ್ನು ನಡೆಸುತ್ತಿದ್ದವು. ಈ ಮೂಲಕ ಜನರನ್ನು ತಮ್ಮ ಸಂಘಟನೆಯತ್ತ ಸೆಳೆಯುತ್ತಿವೆ. ಅಲ್ಲದೆ, ಈ ಸಂಘಟನೆಗಳು ಸಿಪಿಐ-ಮಾವೋವಾದಿ ನಾಯಕತ್ವದ ನಿರ್ದೇಶನದಂತೆ ಕೆಲಸ ಮಾಡುತ್ತವೆ ಎಂದು ಸರ್ಕಾರ ತಿಳಿಸಿದೆ.

ಇದನ್ನೂ ಓದಿ: ಕೊರೊನಾ ಸೋಂಕಿತ ವರ, ಪಿಪಿಇ ಕಿಟ್ ಧರಿಸಿದ ವಧು: ಮದುವೆ ಮಂಟಪವಾದ ಕೋವಿಡ್ ವಾರ್ಡ್!

ಈ ಸಂಘಟನೆಗಳ ಕೆಲವು ಸದಸ್ಯರು ಸರ್ಕಾರವನ್ನು “ರಾಜ್ಯದ ದಬ್ಬಾಳಿಕೆ” ಎಂದು ಕರೆಯುತ್ತಾರೆ ಮತ್ತು ಈ ಸಂಘಟನೆಗಳು ಪಿ. ವರವರ ರಾವ್, ಪ್ರೊಫೆಸರ್ ಜಿ.ಎನ್. ರೋಮಾ ವಿಲ್ಸನ್ ಮತ್ತು ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧಿಸಲ್ಪಟ್ಟ ವಿವಿಧ ಸಂಘಟನೆಗಳ ಮುಖಂಡರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ 16 ಸಂಘಟನೆಗಳನ್ನು ಒಂದು ವರ್ಷದ ಅವಧಿಗೆ ನಿಷೇಧಿಸಿರುವುದಾಗಿ ಸರ್ಕಾರ ತನ್ನ ಆದೇಶದಲ್ಲಿ ಹೇಳಿದೆ.

ಸಂಘಟನೆಗಳನ್ನು ನಿಷೇಧಿಸಿರುವ ಸರ್ಕಾರ ಆದೇಶವನ್ನು ವಿರೋಧಿಸಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ), ಸರ್ಕಾರದ ಈ ನಡೆಯು ಪ್ರಜಾಪ್ರಭುತ್ವ ವಿರೋಧಿಯಾಗಿದ್ದು, ರಾಜಕೀಯ ಭಿನ್ನಮತದ ವಿರುದ್ಧ ರಾಜ್ಯ ಸರ್ಕಾರ ಈ ರೀತಿಯ ಪ್ರತೀಕಾರಕ್ಕೆ ಇಳಿದಿದೆ ಎಂದು ಆರೋಪಿಸಿದೆ.

ಯಾವುದೇ ಸಿದ್ಧಾಂತಗಳನ್ನು ಬಲಪ್ರಯೋಗದ ಮೂಲಕ ಸೋಲಿಸಲಾಗದು. ಸಮಾಜದಲ್ಲಿ ಪ್ರಜಾಸತ್ತಾತ್ಮಕವಾಗಿ ಕೆಲಸ ಮಾಡಲು ಅವಕಾಶ ನಿರಾಕರಿಸುವುದು‌ ನಮ್ಮ ಪ್ರಜಾಸತ್ತಾತ್ಮಕ ಮೌಲ್ಯಗಳ ಮೇಲೆ ಜನರು ನಂಬಿಕೆ ಕಳೆದುಕೊಳ್ಳುವಂತೆ ಮಾಡುತ್ತದೆ ಎಂದು ಹೇಳಿದೆ.

ಕಾನೂನುಬಾಹಿರ ಕೆಲಸವನ್ನು‌ ಮಾಡಿರುವುದಕ್ಕೆ ಯಾವುದೇ ವ್ಯಕ್ತಿ ಅಥವಾ ಸಂಘಟನೆಯ ವಿರುದ್ಧ ಸರ್ಕಾರದ  ಬಳಿ ಸಾಕ್ಷಿಯಿದ್ದರೇ ಸಂಬಂಧಿಸಿದ ಪ್ರಕರಣವನ್ನು ನ್ಯಾಯಾಲಯದಲ್ಲಿ ಸಾಬೀತುಪಡಿಸಬೇಕು. ಅದನ್ನು ಬಿಟ್ಟು, ಈ ರೀತಿಯಲ್ಲಿ ದಮನ ಮಾಡುವುದು ಪ್ರಜಾಸತ್ತಾತ್ಮಕ ಸಮಾಜಕ್ಕೆ ವಿನಾಶಕಾರಿಯಾಗಿದೆ ಎಂದು ಪಿಎಫ್‌ಐ ಪ್ರಧಾನ ಕಾರ್ಯದರ್ಶಿ ಅನೀಸ್ ಅಹ್ಮದ್ ಆಕ್ಷೇಪಿಸಿದ್ದಾರೆ.


ಇದನ್ನೂ ಓದಿ: ಸಂಕೇಶ್ವರರ Some-ಶೋಧನೆಗಳು: ಉಚಿತ ರೇಷನ್ ಕೊಟ್ಟರೆ ಜನ ಕೆಲಸಕ್ಕೆ ಬರಲ್ಲ! ಆಮ್ಲಜನಕ ಸಮಸ್ಯೆ ಬಗೆಹರಿಸಲು ನಿಂಬೆರಸ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತೆಲಂಗಾಣ ಸರ್ಕಾರದ ಈ ಕ್ರಮ ಪ್ರಜಾಪ್ರಭುತ್ವದ ನಾಶಕ್ಕೆ ನಾಂದಿ ಹಾಡಿದೆ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...