Homeಮುಖಪುಟಸಿಪಿಐ (ಮಾವೋವಾದಿ) ಜೊತೆಗೆ ನಂಟು ಆರೋಪ:16 ಸಂಘಟನೆಗಳನ್ನು ಬ್ಯಾನ್ ಮಾಡಿದ ತೆಲಂಗಾಣ

ಸಿಪಿಐ (ಮಾವೋವಾದಿ) ಜೊತೆಗೆ ನಂಟು ಆರೋಪ:16 ಸಂಘಟನೆಗಳನ್ನು ಬ್ಯಾನ್ ಮಾಡಿದ ತೆಲಂಗಾಣ

ಸರ್ಕಾರದ ಆದೇಶವನ್ನು ವಿರೋಧಿಸಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ), ಸರ್ಕಾರದ ಈ ನಡೆಯು ಪ್ರಜಾಪ್ರಭುತ್ವ ವಿರೋಧಿ ಎಂದಿದೆ.

- Advertisement -
- Advertisement -

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾವೋವಾದಿ (ಸಿಪಿಐ-ಮಾವೋವಾದಿ)ಯೊಂದಿಗೆ ಸಂಬಂಧ ಹೊಂದಿವೆ ಎನ್ನಲಾಗಿರುವ 16 ಸಂಘಟನೆಗಳು ತೆಲಂಗಾಣ ಸರ್ಕಾರ ಒಂದು ವರ್ಷದ ಅವಧಿಗೆ ನಿಷೇಧಿಸಿ ಆದೇಶಿಸಿದೆ. ಈ 16 ಸಂಘಟನೆಗಳು ಕಾನೂನುಬಾಹಿರ ಸಂಘಟನೆಗಳು ಎಂದು ಹೇಳಿದ್ದು, ಮಾರ್ಚ್‌ 30 ರಿಂದ ಒಂದು ವರ್ಷದ ಅವಧಿಗೆ ನಿಷೇಧಿಸಲಾಗಿದೆ ಎಂದು ಘೋಷಿಸಲಾಗಿದೆ.

ತೆಲಂಗಾಣ ಸರ್ಕಾರ ಕಾನೂನುಬಾಹಿರವೆಂದು ಘೋಷಿಸಿರುವ ಸಂಘಟನೆಗಳು: ತೆಲಂಗಾಣ ಪ್ರಜಾ ಫ್ರಂಟ್ (TPD), ತೆಲಂಗಾಣ ಅಸಂಘಟಿತ ಕಾರ್ಮಿಕ ಸಮಾಕ್ಯ (TAKS), ತೆಲಂಗಾಣ ವಿದ್ಯಾರ್ಥಿ ವೇದಿಕಾ (TVV), ಡೆಮಾಕ್ರಟಿಕ್‌ ಸ್ಟೂಡೆಂಟ್‌ ಯೂನಿಯನ್‌ (DSU), ತೆಲಂಗಾಣ ವಿದ್ಯಾರ್ಥಿ ಸಂಘ (TVS), ಆದಿವಾಸಿ ಸ್ಟೂಡೆಂಟ್ಸ್ ಯೂನಿಯನ್ (ASU), ರಾಜಕೀಯ ಕೈದಿಗಳ ಬಿಡುಗಡೆ ಸಮಿತಿ (CRPP), ತೆಲಂಗಾಣ ರೈತಂಗ ಸಮಿತಿ (TRS), ತುಡುಮ್ ಡೆಬ್ಬಾ (TD), ಪ್ರಜಾ ಕಲಾ ಮಂಡಳಿ (PKM), ತೆಲಂಗಾಣ ಡೆಮಾಕ್ರಟಿಕ್ ಫ್ರಂಟ್ (TDF), ಹಿಂದೂ ಫ್ಯಾಸಿಸಂ ಆಕ್ರಮಣ ವಿರೋಧಿ ವೇದಿಕೆ (FAHFO), ಸಿವಿಲ್ ಲಿಬರ್ಟೀಸ್ ಕಮಿಟಿ (CLC), ಅಮರುಲಾ ಬಂಧು ಮಿಥ್ರುಲಾ ಸಂಘ (ABMS), ಚೈತನ್ಯ ಮಹಿಳಾ ಸಂಘ (CMS) ಮತ್ತು ಕ್ರಾಂತಿಕಾರಿ ಬರಹಗಾರರ ಸಂಘ (RWA).

ನಿಷೇಧಿಸಲಾಗಿರುವ ಈ 16 ಸಂಘಟನೆಗಳು ಯುಎಪಿಎ ಕಾಯ್ದೆ, ವಿವಾದಿತ ಮೂರು ಕೃಷಿ ಕಾನೂನುಗಳು, ಸಿಎಎ – ಎನ್‌ಆರ್‌ಸಿ ಮುಂತಾದ ವಿಷಯಗಳ ವಿರುದ್ದ ಪ್ರಚೋದನಾಕಾರಿ ಹೇಳಿಕೆಗಳು, ಸಭೆಗಳು ಮತ್ತು ರ್‍ಯಾಲಿಗಳನ್ನು ನಡೆಸುತ್ತಿದ್ದವು. ಈ ಮೂಲಕ ಜನರನ್ನು ತಮ್ಮ ಸಂಘಟನೆಯತ್ತ ಸೆಳೆಯುತ್ತಿವೆ. ಅಲ್ಲದೆ, ಈ ಸಂಘಟನೆಗಳು ಸಿಪಿಐ-ಮಾವೋವಾದಿ ನಾಯಕತ್ವದ ನಿರ್ದೇಶನದಂತೆ ಕೆಲಸ ಮಾಡುತ್ತವೆ ಎಂದು ಸರ್ಕಾರ ತಿಳಿಸಿದೆ.

ಇದನ್ನೂ ಓದಿ: ಕೊರೊನಾ ಸೋಂಕಿತ ವರ, ಪಿಪಿಇ ಕಿಟ್ ಧರಿಸಿದ ವಧು: ಮದುವೆ ಮಂಟಪವಾದ ಕೋವಿಡ್ ವಾರ್ಡ್!

ಈ ಸಂಘಟನೆಗಳ ಕೆಲವು ಸದಸ್ಯರು ಸರ್ಕಾರವನ್ನು “ರಾಜ್ಯದ ದಬ್ಬಾಳಿಕೆ” ಎಂದು ಕರೆಯುತ್ತಾರೆ ಮತ್ತು ಈ ಸಂಘಟನೆಗಳು ಪಿ. ವರವರ ರಾವ್, ಪ್ರೊಫೆಸರ್ ಜಿ.ಎನ್. ರೋಮಾ ವಿಲ್ಸನ್ ಮತ್ತು ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧಿಸಲ್ಪಟ್ಟ ವಿವಿಧ ಸಂಘಟನೆಗಳ ಮುಖಂಡರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ 16 ಸಂಘಟನೆಗಳನ್ನು ಒಂದು ವರ್ಷದ ಅವಧಿಗೆ ನಿಷೇಧಿಸಿರುವುದಾಗಿ ಸರ್ಕಾರ ತನ್ನ ಆದೇಶದಲ್ಲಿ ಹೇಳಿದೆ.

ಸಂಘಟನೆಗಳನ್ನು ನಿಷೇಧಿಸಿರುವ ಸರ್ಕಾರ ಆದೇಶವನ್ನು ವಿರೋಧಿಸಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ), ಸರ್ಕಾರದ ಈ ನಡೆಯು ಪ್ರಜಾಪ್ರಭುತ್ವ ವಿರೋಧಿಯಾಗಿದ್ದು, ರಾಜಕೀಯ ಭಿನ್ನಮತದ ವಿರುದ್ಧ ರಾಜ್ಯ ಸರ್ಕಾರ ಈ ರೀತಿಯ ಪ್ರತೀಕಾರಕ್ಕೆ ಇಳಿದಿದೆ ಎಂದು ಆರೋಪಿಸಿದೆ.

ಯಾವುದೇ ಸಿದ್ಧಾಂತಗಳನ್ನು ಬಲಪ್ರಯೋಗದ ಮೂಲಕ ಸೋಲಿಸಲಾಗದು. ಸಮಾಜದಲ್ಲಿ ಪ್ರಜಾಸತ್ತಾತ್ಮಕವಾಗಿ ಕೆಲಸ ಮಾಡಲು ಅವಕಾಶ ನಿರಾಕರಿಸುವುದು‌ ನಮ್ಮ ಪ್ರಜಾಸತ್ತಾತ್ಮಕ ಮೌಲ್ಯಗಳ ಮೇಲೆ ಜನರು ನಂಬಿಕೆ ಕಳೆದುಕೊಳ್ಳುವಂತೆ ಮಾಡುತ್ತದೆ ಎಂದು ಹೇಳಿದೆ.

ಕಾನೂನುಬಾಹಿರ ಕೆಲಸವನ್ನು‌ ಮಾಡಿರುವುದಕ್ಕೆ ಯಾವುದೇ ವ್ಯಕ್ತಿ ಅಥವಾ ಸಂಘಟನೆಯ ವಿರುದ್ಧ ಸರ್ಕಾರದ  ಬಳಿ ಸಾಕ್ಷಿಯಿದ್ದರೇ ಸಂಬಂಧಿಸಿದ ಪ್ರಕರಣವನ್ನು ನ್ಯಾಯಾಲಯದಲ್ಲಿ ಸಾಬೀತುಪಡಿಸಬೇಕು. ಅದನ್ನು ಬಿಟ್ಟು, ಈ ರೀತಿಯಲ್ಲಿ ದಮನ ಮಾಡುವುದು ಪ್ರಜಾಸತ್ತಾತ್ಮಕ ಸಮಾಜಕ್ಕೆ ವಿನಾಶಕಾರಿಯಾಗಿದೆ ಎಂದು ಪಿಎಫ್‌ಐ ಪ್ರಧಾನ ಕಾರ್ಯದರ್ಶಿ ಅನೀಸ್ ಅಹ್ಮದ್ ಆಕ್ಷೇಪಿಸಿದ್ದಾರೆ.


ಇದನ್ನೂ ಓದಿ: ಸಂಕೇಶ್ವರರ Some-ಶೋಧನೆಗಳು: ಉಚಿತ ರೇಷನ್ ಕೊಟ್ಟರೆ ಜನ ಕೆಲಸಕ್ಕೆ ಬರಲ್ಲ! ಆಮ್ಲಜನಕ ಸಮಸ್ಯೆ ಬಗೆಹರಿಸಲು ನಿಂಬೆರಸ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತೆಲಂಗಾಣ ಸರ್ಕಾರದ ಈ ಕ್ರಮ ಪ್ರಜಾಪ್ರಭುತ್ವದ ನಾಶಕ್ಕೆ ನಾಂದಿ ಹಾಡಿದೆ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...