Homeಮುಖಪುಟಸಿಪಿಐ (ಮಾವೋವಾದಿ) ಜೊತೆಗೆ ನಂಟು ಆರೋಪ:16 ಸಂಘಟನೆಗಳನ್ನು ಬ್ಯಾನ್ ಮಾಡಿದ ತೆಲಂಗಾಣ

ಸಿಪಿಐ (ಮಾವೋವಾದಿ) ಜೊತೆಗೆ ನಂಟು ಆರೋಪ:16 ಸಂಘಟನೆಗಳನ್ನು ಬ್ಯಾನ್ ಮಾಡಿದ ತೆಲಂಗಾಣ

ಸರ್ಕಾರದ ಆದೇಶವನ್ನು ವಿರೋಧಿಸಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ), ಸರ್ಕಾರದ ಈ ನಡೆಯು ಪ್ರಜಾಪ್ರಭುತ್ವ ವಿರೋಧಿ ಎಂದಿದೆ.

- Advertisement -
- Advertisement -

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾವೋವಾದಿ (ಸಿಪಿಐ-ಮಾವೋವಾದಿ)ಯೊಂದಿಗೆ ಸಂಬಂಧ ಹೊಂದಿವೆ ಎನ್ನಲಾಗಿರುವ 16 ಸಂಘಟನೆಗಳು ತೆಲಂಗಾಣ ಸರ್ಕಾರ ಒಂದು ವರ್ಷದ ಅವಧಿಗೆ ನಿಷೇಧಿಸಿ ಆದೇಶಿಸಿದೆ. ಈ 16 ಸಂಘಟನೆಗಳು ಕಾನೂನುಬಾಹಿರ ಸಂಘಟನೆಗಳು ಎಂದು ಹೇಳಿದ್ದು, ಮಾರ್ಚ್‌ 30 ರಿಂದ ಒಂದು ವರ್ಷದ ಅವಧಿಗೆ ನಿಷೇಧಿಸಲಾಗಿದೆ ಎಂದು ಘೋಷಿಸಲಾಗಿದೆ.

ತೆಲಂಗಾಣ ಸರ್ಕಾರ ಕಾನೂನುಬಾಹಿರವೆಂದು ಘೋಷಿಸಿರುವ ಸಂಘಟನೆಗಳು: ತೆಲಂಗಾಣ ಪ್ರಜಾ ಫ್ರಂಟ್ (TPD), ತೆಲಂಗಾಣ ಅಸಂಘಟಿತ ಕಾರ್ಮಿಕ ಸಮಾಕ್ಯ (TAKS), ತೆಲಂಗಾಣ ವಿದ್ಯಾರ್ಥಿ ವೇದಿಕಾ (TVV), ಡೆಮಾಕ್ರಟಿಕ್‌ ಸ್ಟೂಡೆಂಟ್‌ ಯೂನಿಯನ್‌ (DSU), ತೆಲಂಗಾಣ ವಿದ್ಯಾರ್ಥಿ ಸಂಘ (TVS), ಆದಿವಾಸಿ ಸ್ಟೂಡೆಂಟ್ಸ್ ಯೂನಿಯನ್ (ASU), ರಾಜಕೀಯ ಕೈದಿಗಳ ಬಿಡುಗಡೆ ಸಮಿತಿ (CRPP), ತೆಲಂಗಾಣ ರೈತಂಗ ಸಮಿತಿ (TRS), ತುಡುಮ್ ಡೆಬ್ಬಾ (TD), ಪ್ರಜಾ ಕಲಾ ಮಂಡಳಿ (PKM), ತೆಲಂಗಾಣ ಡೆಮಾಕ್ರಟಿಕ್ ಫ್ರಂಟ್ (TDF), ಹಿಂದೂ ಫ್ಯಾಸಿಸಂ ಆಕ್ರಮಣ ವಿರೋಧಿ ವೇದಿಕೆ (FAHFO), ಸಿವಿಲ್ ಲಿಬರ್ಟೀಸ್ ಕಮಿಟಿ (CLC), ಅಮರುಲಾ ಬಂಧು ಮಿಥ್ರುಲಾ ಸಂಘ (ABMS), ಚೈತನ್ಯ ಮಹಿಳಾ ಸಂಘ (CMS) ಮತ್ತು ಕ್ರಾಂತಿಕಾರಿ ಬರಹಗಾರರ ಸಂಘ (RWA).

ನಿಷೇಧಿಸಲಾಗಿರುವ ಈ 16 ಸಂಘಟನೆಗಳು ಯುಎಪಿಎ ಕಾಯ್ದೆ, ವಿವಾದಿತ ಮೂರು ಕೃಷಿ ಕಾನೂನುಗಳು, ಸಿಎಎ – ಎನ್‌ಆರ್‌ಸಿ ಮುಂತಾದ ವಿಷಯಗಳ ವಿರುದ್ದ ಪ್ರಚೋದನಾಕಾರಿ ಹೇಳಿಕೆಗಳು, ಸಭೆಗಳು ಮತ್ತು ರ್‍ಯಾಲಿಗಳನ್ನು ನಡೆಸುತ್ತಿದ್ದವು. ಈ ಮೂಲಕ ಜನರನ್ನು ತಮ್ಮ ಸಂಘಟನೆಯತ್ತ ಸೆಳೆಯುತ್ತಿವೆ. ಅಲ್ಲದೆ, ಈ ಸಂಘಟನೆಗಳು ಸಿಪಿಐ-ಮಾವೋವಾದಿ ನಾಯಕತ್ವದ ನಿರ್ದೇಶನದಂತೆ ಕೆಲಸ ಮಾಡುತ್ತವೆ ಎಂದು ಸರ್ಕಾರ ತಿಳಿಸಿದೆ.

ಇದನ್ನೂ ಓದಿ: ಕೊರೊನಾ ಸೋಂಕಿತ ವರ, ಪಿಪಿಇ ಕಿಟ್ ಧರಿಸಿದ ವಧು: ಮದುವೆ ಮಂಟಪವಾದ ಕೋವಿಡ್ ವಾರ್ಡ್!

ಈ ಸಂಘಟನೆಗಳ ಕೆಲವು ಸದಸ್ಯರು ಸರ್ಕಾರವನ್ನು “ರಾಜ್ಯದ ದಬ್ಬಾಳಿಕೆ” ಎಂದು ಕರೆಯುತ್ತಾರೆ ಮತ್ತು ಈ ಸಂಘಟನೆಗಳು ಪಿ. ವರವರ ರಾವ್, ಪ್ರೊಫೆಸರ್ ಜಿ.ಎನ್. ರೋಮಾ ವಿಲ್ಸನ್ ಮತ್ತು ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧಿಸಲ್ಪಟ್ಟ ವಿವಿಧ ಸಂಘಟನೆಗಳ ಮುಖಂಡರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ 16 ಸಂಘಟನೆಗಳನ್ನು ಒಂದು ವರ್ಷದ ಅವಧಿಗೆ ನಿಷೇಧಿಸಿರುವುದಾಗಿ ಸರ್ಕಾರ ತನ್ನ ಆದೇಶದಲ್ಲಿ ಹೇಳಿದೆ.

ಸಂಘಟನೆಗಳನ್ನು ನಿಷೇಧಿಸಿರುವ ಸರ್ಕಾರ ಆದೇಶವನ್ನು ವಿರೋಧಿಸಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ), ಸರ್ಕಾರದ ಈ ನಡೆಯು ಪ್ರಜಾಪ್ರಭುತ್ವ ವಿರೋಧಿಯಾಗಿದ್ದು, ರಾಜಕೀಯ ಭಿನ್ನಮತದ ವಿರುದ್ಧ ರಾಜ್ಯ ಸರ್ಕಾರ ಈ ರೀತಿಯ ಪ್ರತೀಕಾರಕ್ಕೆ ಇಳಿದಿದೆ ಎಂದು ಆರೋಪಿಸಿದೆ.

ಯಾವುದೇ ಸಿದ್ಧಾಂತಗಳನ್ನು ಬಲಪ್ರಯೋಗದ ಮೂಲಕ ಸೋಲಿಸಲಾಗದು. ಸಮಾಜದಲ್ಲಿ ಪ್ರಜಾಸತ್ತಾತ್ಮಕವಾಗಿ ಕೆಲಸ ಮಾಡಲು ಅವಕಾಶ ನಿರಾಕರಿಸುವುದು‌ ನಮ್ಮ ಪ್ರಜಾಸತ್ತಾತ್ಮಕ ಮೌಲ್ಯಗಳ ಮೇಲೆ ಜನರು ನಂಬಿಕೆ ಕಳೆದುಕೊಳ್ಳುವಂತೆ ಮಾಡುತ್ತದೆ ಎಂದು ಹೇಳಿದೆ.

ಕಾನೂನುಬಾಹಿರ ಕೆಲಸವನ್ನು‌ ಮಾಡಿರುವುದಕ್ಕೆ ಯಾವುದೇ ವ್ಯಕ್ತಿ ಅಥವಾ ಸಂಘಟನೆಯ ವಿರುದ್ಧ ಸರ್ಕಾರದ  ಬಳಿ ಸಾಕ್ಷಿಯಿದ್ದರೇ ಸಂಬಂಧಿಸಿದ ಪ್ರಕರಣವನ್ನು ನ್ಯಾಯಾಲಯದಲ್ಲಿ ಸಾಬೀತುಪಡಿಸಬೇಕು. ಅದನ್ನು ಬಿಟ್ಟು, ಈ ರೀತಿಯಲ್ಲಿ ದಮನ ಮಾಡುವುದು ಪ್ರಜಾಸತ್ತಾತ್ಮಕ ಸಮಾಜಕ್ಕೆ ವಿನಾಶಕಾರಿಯಾಗಿದೆ ಎಂದು ಪಿಎಫ್‌ಐ ಪ್ರಧಾನ ಕಾರ್ಯದರ್ಶಿ ಅನೀಸ್ ಅಹ್ಮದ್ ಆಕ್ಷೇಪಿಸಿದ್ದಾರೆ.


ಇದನ್ನೂ ಓದಿ: ಸಂಕೇಶ್ವರರ Some-ಶೋಧನೆಗಳು: ಉಚಿತ ರೇಷನ್ ಕೊಟ್ಟರೆ ಜನ ಕೆಲಸಕ್ಕೆ ಬರಲ್ಲ! ಆಮ್ಲಜನಕ ಸಮಸ್ಯೆ ಬಗೆಹರಿಸಲು ನಿಂಬೆರಸ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತೆಲಂಗಾಣ ಸರ್ಕಾರದ ಈ ಕ್ರಮ ಪ್ರಜಾಪ್ರಭುತ್ವದ ನಾಶಕ್ಕೆ ನಾಂದಿ ಹಾಡಿದೆ.

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...