Homeಮುಖಪುಟರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ನಿಷೇಧಿಸಿದ ತೆಲಂಗಾಣ ಸರ್ಕಾರ

ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ನಿಷೇಧಿಸಿದ ತೆಲಂಗಾಣ ಸರ್ಕಾರ

- Advertisement -
- Advertisement -

ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಮತ್ತು ಪಾನ್ ಮಸಾಲಾ ತಯಾರಿಕೆ, ಸಂಗ್ರಹಣೆ, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ರಾಜ್ಯದಾದ್ಯಂತ ಒಂದು ವರ್ಷದ ಅವಧಿಗೆ ನಿಷೇಧಿಸಿ ತೆಲಂಗಾಣ ಸರ್ಕಾರ  ಆದೇಶ ಹೊರಡಿಸಿದೆ.

ಆಹಾರ ಸುರಕ್ಷತಾ ಆಯುಕ್ತರು ಮೇ 24 ರಂದು ಸಾರ್ವಜನಿಕ ಆರೋಗ್ಯದ ಕಾಳಜಿಯನ್ನು ಉಲ್ಲೇಖಿಸಿ ಆದೇಶ ಹೊರಡಿಸಿದ್ದಾರೆ. ಆಹಾರ ಸುರಕ್ಷತೆ ಮತ್ತು ಮಾನದಂಡಗಳ (ನಿಷೇಧ ಮತ್ತು ಮಾರಾಟದ ನಿರ್ಬಂಧ) ನಿಯಮಾವಳಿ 2011ರ ನಿಯಮಾವಳಿ 2.3.4ರ ಜೊತೆಗೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006ರ ಸೆಕ್ಷನ್ 30ರ ಉಪ-ವಿಭಾಗ (2) ರ ಷರತ್ತು (ಎ) ಅಡಿಯಲ್ಲಿ ನಿಷೇಧವನ್ನು ಜಾರಿಗೊಳಿಸಲಾಗಿದೆ.

ಈ ಆದೇಶವು ಹೈದರಾಬಾದ್ ನಗರದ ಮಾರುಕಟ್ಟೆಗಳಲ್ಲಿ ಭಾನುವಾರ (ಮೇ 26) ಮಧ್ಯಾಹ್ನದ ಬಳಿಕ ಪ್ರಭಾವ ಬೀರಿದೆ. ಪಾನ್ ಶಾಪ್ ಮಾಲೀಕರು ಆದೇಶ ಪಾಲನೆಗೆ ಒಪ್ಪಿದ್ದಾರೆ. ಆದರೆ, ಈ ವಲಯದ ಎಲ್ಲರು ಸಹಕಾರ ನೀಡಿಲ್ಲ ಎಂದು ದಿ ಹಿಂದೂ ವರದಿ ಮಾಡಿದೆ.

“ತೆಲಂಗಾಣದಲ್ಲಿ ಸುಮಾರು 1.5 ಲಕ್ಷ ಪಾನ್ ಶಾಪ್‌ಗಳಿವೆ. ನಾವು ಗುಟ್ಕಾ ನಿಷೇಧವನ್ನು ಬೆಂಬಲಿಸುತ್ತೇವೆ ಮತ್ತು ಅನೇಕ ಅಂಗಡಿಗಳು ಈಗಾಗಲೇ ಅದರ ಮಾರಾಟವನ್ನು ನಿಲ್ಲಿಸಿವೆ. ಆದರೆ, ಲಕ್ಷಾಂತರ ಕುಟುಂಬಗಳು ತಮ್ಮ ಜೀವನೋಪಾಯಕ್ಕಾಗಿ ಗುಟ್ಕಾ ಮಾರಾಟ ಅವಲಂಬಿಸಿರುವುದರಿಂದ ಜಗಿಯುವ ತಂಬಾಕು ಮತ್ತು ಜರ್ದಾಕ್ಕೆ ನಿಷೇಧದಿಂದ ವಿನಾಯಿತಿ ನೀಡುವಂತೆ ನಾವು ಅಧಿಕಾರಿಗಳನ್ನು ವಿನಂತಿಸುತ್ತೇವೆ” ಎಂದು ತೆಲಂಗಾಣ ಪಾನ್ ಶಾಪ್ ಮಾಲೀಕರ ಸಂಘದ ಅಧ್ಯಕ್ಷ ಮೊಹಮ್ಮದ್ ಸಲಾವುದ್ದೀನ್ ದಖ್ನಿ ಹೇಳಿದ್ದಾರೆ ಎಂದು ದಿ ಹಿಂದೂ ತಿಳಿಸಿದೆ.

ನಮ್ಮ ಸಂಘ ಗುಟ್ಕಾ ನಿಷೇಧ ಸಂಬಂಧ ಈ ಹಿಂದೆ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಮತ್ತು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ಮನವಿ ಸಲ್ಲಿಸಿತ್ತು. ರಾಜ್ಯಾದ್ಯಂತ ಅನೇಕ ಪಾನ್ ಶಾಪ್‌ಗಳಲ್ಲಿ ಗುಟ್ಕಾ ಮಾರಾಟ ಮಾಡುವುದಿಲ್ಲ ಎಂಬ ಪೋಸ್ಟರ್‌ಗಳನ್ನು ಸಹ ಪ್ರದರ್ಶಿಸಲಾಗಿದೆ ಎಂದು ಸಲಾವುದ್ದೀನ್ ತಿಳಿಸಿದ್ದಾರೆ ಎಂದು ಹಿಂದೂ ಹೇಳಿದೆ.

ಸರ್ಕಾರದ ಆದೇಶವನ್ನು ನಾವು ಪಾಲಿಸುತ್ತೇವೆ. ಆದರೆ, ನಿಯಮ ಸರಿಯಾದ ರೀತಿಯಲ್ಲಿ ಜಾರಿಯಾಗಬೇಕು. ಇಲ್ಲದಿದ್ದರೆ, ಅಧಿಕಾರಿಗಳು ಜರ್ದಾದಲ್ಲಿ ಸ್ವಲ್ಪ ತಂಬಾಕು ಕಂಡರೆ ಗುಟ್ಕಾ ಮಾರಾಟ ಮಾಡ್ತಿದ್ದಾರೆ ಎಂದು ಅಂಗಡಿ ಮಾಲೀಕರಿಗೆ ತೊಂದರೆ ಕೊಡಬಹುದು ಎಂಬ ಆತಂಕವನ್ನು ಯೂಸುಫ್‌ಗುಡಾದ ವ್ಯಕ್ತಿಯೊಬ್ಬರು ಹೇಳಿದ್ದಾಗಿ ಹಿಂದೂ ತಿಳಿಸಿದೆ.

ಇದನ್ನೂ ಓದಿ : ಪೋರ್ಶೆ ಕಾರು ಅಪಘಾತ ಪ್ರಕರಣ: ಆರೋಪಿಯ ರಕ್ತ ಪರೀಕ್ಷೆ ವರದಿ ತಿರುಚಿದ್ದ ಇಬ್ಬರು ವೈದ್ಯರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...