Homeಕರೋನಾ ತಲ್ಲಣಕೊರೊನಾ ಭೀತಿ ಸೃಷ್ಟಿಸಿದ ಆರೋಪ: ಟಿವಿ ಪ್ಯಾನಲಿಸ್ಟ್‌ ವಿರುದ್ಧ ದೂರ ದಾಖಲಿಸಿದ ತೆಲಂಗಾಣ ಸರ್ಕಾರ

ಕೊರೊನಾ ಭೀತಿ ಸೃಷ್ಟಿಸಿದ ಆರೋಪ: ಟಿವಿ ಪ್ಯಾನಲಿಸ್ಟ್‌ ವಿರುದ್ಧ ದೂರ ದಾಖಲಿಸಿದ ತೆಲಂಗಾಣ ಸರ್ಕಾರ

- Advertisement -
- Advertisement -

ಕೊರೊನಾ ಮೂರನೇ ಅಲೆಯಲ್ಲಿ ತೆಲಂಗಾಣದಲ್ಲಿ ಸಾವುಗಳು ಸಂಭವಿಸುವ ಕುರಿತು ಭೀತಿ ಸೃಷ್ಟಿಸುವ ಹೇಳಿಕೆ ನೀಡಿದ ಟೆಲಿವಿಷನ್ ಪ್ಯಾನಲಿಸ್ಟ್ ವಿರುದ್ಧ ಕ್ರಮಕೈಗೊಳ್ಳುವಂತೆ ತೆಲಂಗಾಣ ಸರ್ಕಾರ ಪೊಲೀಸರಿಗೆ ದೂರು ನೀಡಿದೆ.

ಕೆಮಿಕಲ್ ಎಂಜಿನಿಯರ್ ಆಗಿರುವ ಪರುಚುರಿ ಮಲ್ಲಿಕ್ ವಿರುದ್ಧ ತೆಲಂಗಾಣ ಸಾರ್ವಜನಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನಿರ್ದೇಶಕ ಡಾ.ಜಿ.ಶ್ರೀನಿವಾಸ್ ರಾವ್ ಅವರು ದೂರು ದಾಖಲಿಸಿದ್ದಾರೆ. ಟಿವಿ ಪ್ಯಾನಲಿಸ್ಟ್ ಆಗಿರುವ ಮಲ್ಲಿಕ್ ಸುದ್ದಿ ಚಾನೆಲ್‌ ಒಂದರ ನೇರ ಪ್ರಸಾರದ ಚರ್ಚೆಯಲ್ಲಿ, ಕೊರೊನಾ ಮೂರನೇ ಅಲೆಯಲ್ಲಿ ತೆಲಂಗಾಣದ ಪ್ರತಿಯೊಂದು ಮನೆಯಲ್ಲಿಯೂ ಸಾವುಗಳು ದಾಖಲಾಗುತ್ತವೆ ಎಂದು ಹೇಳಿದ್ದರು.

ಮಲ್ಲಿಕ್ ಅವರು ಮಾಧ್ಯಮದಲ್ಲ ಹೇಳಿರುವ ಹೇಳಿಕೆಗಳು ವೈದ್ಯಕೀಯ ನೀತಿಶಾಸ್ತ್ರದ ವಿಷಯದಲ್ಲಿ ಹೆಚ್ಚು ಆಕ್ಷೇಪಾರ್ಹವಾಗಿವೆ. ಜೊತೆಗೆ ಸಾಮಾನ್ಯ ಜನರಲ್ಲಿ ಭೀತಿ ಉಂಟುಮಾಡುತ್ತದೆ” ಎಂದು ಸಾರ್ವಜನಿಕ ಆರೋಗ್ಯ ನಿರ್ದೇಶಕರು ಸುಲ್ತಾನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ದೂರಿನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ತೆಲಂಗಾಣ: 40,000 ಕೋಟಿ ಸಾಲವಿದ್ದರೂ ಅಧಿಕಾರಿಗಳಿಗೆ ಐಷಾರಾಮಿ ಕಾರು ನೀಡಿದ ಸರ್ಕಾರ

ಶ್ರೀನಿವಾಸ ರಾವ್ ಅವರು ತಮ್ಮ ದೂರಿನಲ್ಲಿ, ಮಲ್ಲಿಕ್ ವಿಷಯ ತಜ್ಞರಲ್ಲ. ತಮ್ಮ ಹೇಳಿಕೆಯಿಂದ ಸುಳ್ಳು ಭೀತಿ ಸೃಷ್ಟಿಸಿರುವುದಕ್ಕಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯ ಸೆಕ್ಷನ್ 54 ರ ಅಡಿಯಲ್ಲಿ ಮಲ್ಲಿಕ್ ವಿರುದ್ಧ ಕ್ರಮಕೈಗೊಳ್ಳಲು ಕೋರಿದ್ದಾರೆ. ದೂರಿನ ಬಗ್ಗೆ ಪರಿಶೀಲನೆ ನಡೆಸುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

“ಕೊರೊನಾ ಮೂರನೇ ಅಲೆಯಿಂದ ಕುಟುಂಬಗಳು ಅಥವಾ ಮಕ್ಕಳ ಮೇಲೆ ಆಗುವ ಪರಿಣಾಮದ ಬಗ್ಗೆ ಜಾಗತಿಕವಾಗಿ ಯಾವುದೇ ಸಂಸ್ಥೆ ಅಥವಾ ವ್ಯಕ್ತಿ ಕೂಡ ಅನುಭವ / ವೈಜ್ಞಾನಿಕ ಮುನ್ಸೂಚನೆ ನೀಡಿಲ್ಲ” ಎಂದು ದೂರಿನಲ್ಲಿ ಹೇಳಲಾಗಿದೆ. ಆಧಾರರಹಿತ ಮತ್ತು ಯಾವುದೇ ವೈಜ್ಞಾನಿಕ ಬೆಂಬಲವಿಲ್ಲದ ವದಂತಿಗಳನ್ನು ಅನಗತ್ಯವಾಗಿ ಹರಡುವುದು ಖಂಡಿತವಾಗಿಯೂ ಸಾಮಾನ್ಯ ಜನರಿಗೆ ಭೀತಿ ಉಂಟುಮಾಡುತ್ತದೆ ಎಂದು ಹೇಳಲಾಗಿದೆ.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶ್ರೀನಿವಾಸ್ ರಾವ್, ಈ ವದಂತಿಗಳನ್ನು ನಂಬಬೇಡಿ ಎಂದು ಜನರಿಗೆ ಮನವಿ ಮಾಡಿದ್ದಾರೆ. ಆಸ್ಪತ್ರೆಯ ಹಾಸಿಗೆಗಳು, ಔಷಧಿಗಳು, ಆಮ್ಲಜನಕ ಮತ್ತು ಮಾನವಶಕ್ತಿಯ ವಿಷಯದಲ್ಲಿ ರಾಜ್ಯವು ಉತ್ತಮವಾಗಿ ಸಜ್ಜುಗೊಂಡಿರುವುದರಿಂದ ಅಪ್ಪಳಿಸಲಿರುವ ಮೂರನೇ ಅಲೆಯನ್ನು ಎದುರಿಸಲು ಸಿದ್ಧವಾಗಿದೆ ಎಂದು ಪುನರುಚ್ಚರಿಸಿದ್ದಾರೆ.


ಇದನ್ನೂ ಓದಿ: ತೆಲಂಗಾಣ: ಭೂ ಕಬಳಿಕೆ ಆರೋಪದಿಂದ ಟಿಆರ್‌ಎಸ್‌ ತೊರೆದಿದ್ದ ಮಾಜಿ ಸಚಿವ ಬಿಜೆಪಿ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...