Homeಮುಖಪುಟಕಾಳೇಶ್ವರಂ ಏತ ನೀರಾವರಿ ಯೋಜನೆಯಲ್ಲಿ ಲೋಪ: ನ್ಯಾಯಾಂಗ ತನಿಖೆಗೆ ಮುಂದಾದ ಸರ್ಕಾರ

ಕಾಳೇಶ್ವರಂ ಏತ ನೀರಾವರಿ ಯೋಜನೆಯಲ್ಲಿ ಲೋಪ: ನ್ಯಾಯಾಂಗ ತನಿಖೆಗೆ ಮುಂದಾದ ಸರ್ಕಾರ

- Advertisement -
- Advertisement -

ಗೋದಾವರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಾಳೇಶ್ವರಂ ಏತ ನೀರಾವರಿ ಯೋಜನೆಯ ನಿರ್ಮಾಣ ಮತ್ತು ಕಾರ್ಯಾಚರಣೆಯಲ್ಲಿ ಇಂಜಿನಿಯರಿಂಗ್ ಲೋಪ ಪ್ರಕರಣವನ್ನು ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ನಡೆಸುವುದಾಗಿ ತೆಲಂಗಾಣ ಸರ್ಕಾರ ಶುಕ್ರವಾರ ತಿಳಿಸಿದೆ.

ರಾಜ್ಯದ ನೂತನ ನೀರಾವರಿ ಸಚಿವ ಎನ್.ಉತ್ತಮ್ ಕುಮಾರ್ ರೆಡ್ಡಿ ನೇತೃತ್ವದ ಉನ್ನತ ಇಂಜಿನಿಯರ್‌ಗಳು ಮತ್ತು ಹಿರಿಯ ಅಧಿಕಾರಿಗಳ ತಂಡ ಏತ ನೀರಾವರಿ ಯೋಜನೆಯ ಸ್ಥಳಕ್ಕೆ ಭೇಟಿ ನೀಡಿ, ಬರೋಬ್ಬರಿ ₹1 ಲಕ್ಷ ಕೋಟಿ ವೆಚ್ಚದ ಯೋಜನೆಯ ಬ್ಯಾರೇಜ್‌ಗಳ ಪಿಲ್ಲರ್‌ಗಳ ಮುಳುಗುವಿಕೆಯಿಂದ ಉಂಟಾದ ಹಾನಿಯನ್ನು ಪರಿಶೀಲಿಸಿದ ನಂತರ ಈ ಪ್ರಕಟಣೆ ಹೊರಬಿದ್ದಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಉತ್ತಮ್ ಕುಮಾರ್ ರೆಡ್ಡಿ, 2019ರಲ್ಲಿ ನಿರ್ಮಿಸಲಾದ ಏತ ನೀರಾವರಿ ಯೋಜನೆಯ ಇಂಜಿನಿಯರಿಂಗ್ ಲೋಪಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

“ಕಾರಣ ಏನೇ ಇರಲಿ, ಮೇಡಿಗಡ್ಡ ಬ್ಯಾರೇಜ್‌ನ ಅಡಿಪಾಯ ಮುಳುಗಿದೆ. ಅಣ್ಣಾರಾಮ್ ಬ್ಯಾರೇಜ್‌ನಲ್ಲಿ ಸೋರಿಕೆಯಾಗ್ತಿದೆ ಮತ್ತು ಬಿರುಕುಗಳು ಕಾಣಿಸಿಕೊಂಡಿವೆ. ಸುಂಡಿಲ್ಲಾ ಬ್ಯಾರೇಜ್ ಹಾನಿಗೊಳಗಾಗಿದೆ. ಇವುಗಳ ವಿಚಾರಣೆ ಮತ್ತು ದುರಸ್ತಿ ಕಾರ್ಯಗಳು ನಡೆಯಲಿವೆ. ಈ ಕಾರಣಕ್ಕೆ ಕೆಲ ಸಮಯ ಏತ ನೀರಾವರಿ ಕಾರ್ಯಾಚರಣೆ ಸ್ಥಗಿತಗೊಳ್ಳಬಹುದು” ಎಂದು ಹೇಳಿದ್ದಾರೆ.

ಕಾಳೇಶ್ವರಂ ಯೋಜನೆಯಿಂದಾಗಿ ತೆಲಂಗಾಣದ ಮೇಲೆ ವರ್ಷಕ್ಕೆ ₹15,000 ಕೋಟಿ ಆರ್ಥಿಕ ಹೊರೆಯಾಗುತ್ತಿದೆ. ನೀರಾವರಿ ಇಲಾಖೆಯಲ್ಲಿ ಈಗಾಗಲೇ ₹10,000 ಕೋಟಿ ಬಿಲ್‌ಗಳು ಬಾಕಿ ಉಳಿದಿವೆ ಎಂದು ಸಚಿವರು ತಿಳಿಸಿದ್ದಾರೆ.

15 ರಿಂದ 20 ರವರೆಗೆ 86 ಪಿಯರ್‌ಗಳಲ್ಲಿ ಆರು ಮುಳುಗಡೆಯಾಗಿವೆ. ಮೇಡಿಗಡ್ಡ ಬ್ಯಾರೇಜ್‌ನ ಆರು, ಏಳು ಮತ್ತು ಎಂಟು ಬ್ಲಾಕ್‌ಗಳಲ್ಲಿ ಗೇಟ್‌ಗಳು ದುರ್ಬಲಗೊಂಡಿವೆ. ಈ ವಿಚಾರ ಕಳೆದ ಅಕ್ಟೋಬರ್ 21 ರಂದು ಬೆಳಕಿಗೆ ಬಂದಿತ್ತು. ನೀರಾವರಿ ಅಧಿಕಾರಿಗಳು ಜಲಾಶಯವನ್ನು ಖಾಲಿ ಮಾಡಲು ಒತ್ತಾಯಿಸಿದ್ದಾರೆ. ಬ್ಯಾರೇಜ್ ಮೇಲೆ ನಿರ್ಮಿಸಿರುವ ರಸ್ತೆಯಲ್ಲಿ ಸಂಚಾರ ನಿಷೇಧಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಮೇಡಿಗಡ್ಡಾ ಬ್ಯಾರೇಜ್‌ನ ಹಾನಿಗೊಳಗಾದ ಭಾಗಗಳನ್ನು ಪರಿಶೀಲಿಸಲು ರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಪ್ರಾಧಿಕಾರ ರಚಿಸಿದ್ದ ತಾಂತ್ರಿಕ ತಜ್ಞರ ಸಮಿತಿಯು, ಬ್ಯಾರೇಜ್ ಅನ್ನು ಸಂಪೂರ್ಣವಾಗಿ ಪುನಶ್ಚೇತನಗೊಳಿಸದ ಹೊರತು ಪ್ರಸ್ತುತ ಸ್ಥಿತಿಯಲ್ಲಿ ಅದು ‘ಸಂಪೂರ್ಣವಾಗಿ ನಿಷ್ಪ್ರಯೋಜಕ’ ಎಂದು ಘೋಷಿಸಿದೆ ಎಂದು ಉತ್ತಮ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ.

ಇಂತಹ ಮಹತ್ವದ ಯೋಜನೆ ನಿರ್ಮಾಣವಾದ ಕೆಲವೇ ವರ್ಷಗಳಲ್ಲಿ ಹಾನಿಗೊಳಗಾಗಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ. ಈ ಯೋಜನೆಯಲ್ಲಿನ ಲೋಪದೋಷಗಳ ಕುರಿತು ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಸರ್ಕಾರ ನಿರ್ಧರಿಸಿದೆ. ಮುಂದಿನ ಕ್ರಮಕ್ಕಾಗಿ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ವರದಿ ಸಲ್ಲಿಸಲಾಗುವುದು. ಹಾನಿಗೆ ಹೊಣೆಗಾರರಾದ ಯಾರನ್ನೂ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಹಿಂದಿನ ಕಾಂಗ್ರೆಸ್ ಸರ್ಕಾರವು, ಆರಂಭದಲ್ಲಿ ಕಾಳೇಶ್ವರಂನ ಮೇಲ್ಭಾಗದ ತುಮ್ಮಿಡಿ ಹಟ್ಟಿ ಗ್ರಾಮದಲ್ಲಿ ಪ್ರಾಣಹಿತ ಚೇವೆಲ್ಲಾ ಯೋಜನೆ ಎಂದು ಹೆಸರಿಸಲಾದ ಯೋಜನೆಯ ನಿರ್ಮಾಣವನ್ನು ಯೋಜಿಸಿತ್ತು. ಆದರೆ ಬಿಆರ್‌ಎಸ್‌ ಸರ್ಕಾರ “ವೈಜ್ಞಾನಿಕ ವಿಧಾನವಿಲ್ಲದೆ ಕಾಳೇಶ್ವರಂಗೆ ಸ್ಥಳವನ್ನು ಬದಲಾಯಿಸುವ ಮೂಲಕ ಅದನ್ನು ಮರುವಿನ್ಯಾಸಗೊಳಿಸಿದೆ” ಎಂದು ಸಚಿವರು ಆರೋಪಿಸಿದ್ದಾರೆ.

ಬಿಆರ್‌ಎಸ್ ಶಾಸಕ ಮತ್ತು ಮಾಜಿ ರಾಜ್ಯ ಸಚಿವ ಕಡಿಯಂ ಶ್ರೀಹರಿ ಅವರು ಮಹಾರಾಷ್ಟ್ರದ ಪ್ರದೇಶಗಳು ಮುಳುಗುವುದನ್ನು ತಡೆಯಲು ಮತ್ತು ಭಾರೀ ಪರಿಹಾರವನ್ನು ಪಾವತಿಸುವುದನ್ನು ತಪ್ಪಿಸಲು ಯೋಜನೆಯನ್ನು ಮರುವಿನ್ಯಾಸಗೊಳಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಬಿಆರ್‌ಎಸ್‌, ಕೇಂದ್ರದಿಂದ 11 ರೀತಿಯ ಅನುಮತಿಗಳನ್ನು ಪಡೆದ ನಂತರವೇ ಬಿಆರ್‌ಎಸ್ ಸರ್ಕಾರವು ಕಾಳೇಶ್ವರಂ ಯೋಜನೆಯನ್ನು ಕೈಗೆತ್ತಿಕೊಂಡಿತ್ತು. ನ್ಯಾಯಾಂಗ ತನಿಖೆ ಪ್ರಾರಂಭವಾಗುವ ಮೊದಲೇ ಕಾಂಗ್ರೆಸ್ ಸರ್ಕಾರದ ಸಚಿವರು ತೀರ್ಪು ನೀಡುತ್ತಿರುವುದು ಆಶ್ಚರ್ಯಕರವಾಗಿದೆ ಎಂದಿದೆ.

ಕಾಳೇಶ್ವರಂ ಏತ ನೀರಾವರಿ ಯೋಜನೆ ತೆಲಂಗಾಣದ ಈ ಹಿಂದಿನ ಬಿಆರ್‌ಎಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ. 10 ವರ್ಷಗಳ ತೆಲಂಗಾಣ ಬಿಆರ್‌ಎಸ್‌ ಸರ್ಕಾರದ ಅವಧಿಯಲ್ಲಿ ಪೂರ್ಣಗೊಳಿಸಿದ ಅತ್ಯಂತ ದೊಡ್ಡ ಯೋಜನೆ ಇದು ಎಂದು ಪರಿಗಣಿಸಲಾಗಿದೆ. ಕಾಳೇಶ್ವರಂ ವಿಶ್ವದ ಅತೀ ದೊಡ್ಡ ಏತ ನೀರಾವರಿ ಯೋಜನೆಯೂ ಹೌದು. ಬಿಆರ್‌ಎಸ್‌ ಸರ್ಕಾರ ಬಹಳ ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದ ಯೋಜನೆಯಲ್ಲಿ ಲೋಪದ ಆರೋಪ ಮಾಡಿರುವ ನೂತನ ಕಾಂಗ್ರೆಸ್ ಸರ್ಕಾರ ನ್ಯಾಯಾಂಗ ತನಿಖೆಗೆ ಮುಂದಾಗಿದೆ.

ಇದನ್ನೂ ಓದಿ : ಪಿಂಚಣಿ ಅರ್ಹತಾ ವಯಸ್ಸು 50ಕ್ಕೆ ಇಳಿಕೆ, ಶೇ.75% ಉದ್ಯೋಗ ಸ್ಥಳೀಯರಿಗೆ ಮೀಸಲು: ಹೇಮಂತ್ ಸುರೇನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...