Homeಮುಖಪುಟಕಾಳೇಶ್ವರಂ ಏತ ನೀರಾವರಿ ಯೋಜನೆಯಲ್ಲಿ ಲೋಪ: ನ್ಯಾಯಾಂಗ ತನಿಖೆಗೆ ಮುಂದಾದ ಸರ್ಕಾರ

ಕಾಳೇಶ್ವರಂ ಏತ ನೀರಾವರಿ ಯೋಜನೆಯಲ್ಲಿ ಲೋಪ: ನ್ಯಾಯಾಂಗ ತನಿಖೆಗೆ ಮುಂದಾದ ಸರ್ಕಾರ

- Advertisement -
- Advertisement -

ಗೋದಾವರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಾಳೇಶ್ವರಂ ಏತ ನೀರಾವರಿ ಯೋಜನೆಯ ನಿರ್ಮಾಣ ಮತ್ತು ಕಾರ್ಯಾಚರಣೆಯಲ್ಲಿ ಇಂಜಿನಿಯರಿಂಗ್ ಲೋಪ ಪ್ರಕರಣವನ್ನು ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ನಡೆಸುವುದಾಗಿ ತೆಲಂಗಾಣ ಸರ್ಕಾರ ಶುಕ್ರವಾರ ತಿಳಿಸಿದೆ.

ರಾಜ್ಯದ ನೂತನ ನೀರಾವರಿ ಸಚಿವ ಎನ್.ಉತ್ತಮ್ ಕುಮಾರ್ ರೆಡ್ಡಿ ನೇತೃತ್ವದ ಉನ್ನತ ಇಂಜಿನಿಯರ್‌ಗಳು ಮತ್ತು ಹಿರಿಯ ಅಧಿಕಾರಿಗಳ ತಂಡ ಏತ ನೀರಾವರಿ ಯೋಜನೆಯ ಸ್ಥಳಕ್ಕೆ ಭೇಟಿ ನೀಡಿ, ಬರೋಬ್ಬರಿ ₹1 ಲಕ್ಷ ಕೋಟಿ ವೆಚ್ಚದ ಯೋಜನೆಯ ಬ್ಯಾರೇಜ್‌ಗಳ ಪಿಲ್ಲರ್‌ಗಳ ಮುಳುಗುವಿಕೆಯಿಂದ ಉಂಟಾದ ಹಾನಿಯನ್ನು ಪರಿಶೀಲಿಸಿದ ನಂತರ ಈ ಪ್ರಕಟಣೆ ಹೊರಬಿದ್ದಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಉತ್ತಮ್ ಕುಮಾರ್ ರೆಡ್ಡಿ, 2019ರಲ್ಲಿ ನಿರ್ಮಿಸಲಾದ ಏತ ನೀರಾವರಿ ಯೋಜನೆಯ ಇಂಜಿನಿಯರಿಂಗ್ ಲೋಪಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

“ಕಾರಣ ಏನೇ ಇರಲಿ, ಮೇಡಿಗಡ್ಡ ಬ್ಯಾರೇಜ್‌ನ ಅಡಿಪಾಯ ಮುಳುಗಿದೆ. ಅಣ್ಣಾರಾಮ್ ಬ್ಯಾರೇಜ್‌ನಲ್ಲಿ ಸೋರಿಕೆಯಾಗ್ತಿದೆ ಮತ್ತು ಬಿರುಕುಗಳು ಕಾಣಿಸಿಕೊಂಡಿವೆ. ಸುಂಡಿಲ್ಲಾ ಬ್ಯಾರೇಜ್ ಹಾನಿಗೊಳಗಾಗಿದೆ. ಇವುಗಳ ವಿಚಾರಣೆ ಮತ್ತು ದುರಸ್ತಿ ಕಾರ್ಯಗಳು ನಡೆಯಲಿವೆ. ಈ ಕಾರಣಕ್ಕೆ ಕೆಲ ಸಮಯ ಏತ ನೀರಾವರಿ ಕಾರ್ಯಾಚರಣೆ ಸ್ಥಗಿತಗೊಳ್ಳಬಹುದು” ಎಂದು ಹೇಳಿದ್ದಾರೆ.

ಕಾಳೇಶ್ವರಂ ಯೋಜನೆಯಿಂದಾಗಿ ತೆಲಂಗಾಣದ ಮೇಲೆ ವರ್ಷಕ್ಕೆ ₹15,000 ಕೋಟಿ ಆರ್ಥಿಕ ಹೊರೆಯಾಗುತ್ತಿದೆ. ನೀರಾವರಿ ಇಲಾಖೆಯಲ್ಲಿ ಈಗಾಗಲೇ ₹10,000 ಕೋಟಿ ಬಿಲ್‌ಗಳು ಬಾಕಿ ಉಳಿದಿವೆ ಎಂದು ಸಚಿವರು ತಿಳಿಸಿದ್ದಾರೆ.

15 ರಿಂದ 20 ರವರೆಗೆ 86 ಪಿಯರ್‌ಗಳಲ್ಲಿ ಆರು ಮುಳುಗಡೆಯಾಗಿವೆ. ಮೇಡಿಗಡ್ಡ ಬ್ಯಾರೇಜ್‌ನ ಆರು, ಏಳು ಮತ್ತು ಎಂಟು ಬ್ಲಾಕ್‌ಗಳಲ್ಲಿ ಗೇಟ್‌ಗಳು ದುರ್ಬಲಗೊಂಡಿವೆ. ಈ ವಿಚಾರ ಕಳೆದ ಅಕ್ಟೋಬರ್ 21 ರಂದು ಬೆಳಕಿಗೆ ಬಂದಿತ್ತು. ನೀರಾವರಿ ಅಧಿಕಾರಿಗಳು ಜಲಾಶಯವನ್ನು ಖಾಲಿ ಮಾಡಲು ಒತ್ತಾಯಿಸಿದ್ದಾರೆ. ಬ್ಯಾರೇಜ್ ಮೇಲೆ ನಿರ್ಮಿಸಿರುವ ರಸ್ತೆಯಲ್ಲಿ ಸಂಚಾರ ನಿಷೇಧಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಮೇಡಿಗಡ್ಡಾ ಬ್ಯಾರೇಜ್‌ನ ಹಾನಿಗೊಳಗಾದ ಭಾಗಗಳನ್ನು ಪರಿಶೀಲಿಸಲು ರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಪ್ರಾಧಿಕಾರ ರಚಿಸಿದ್ದ ತಾಂತ್ರಿಕ ತಜ್ಞರ ಸಮಿತಿಯು, ಬ್ಯಾರೇಜ್ ಅನ್ನು ಸಂಪೂರ್ಣವಾಗಿ ಪುನಶ್ಚೇತನಗೊಳಿಸದ ಹೊರತು ಪ್ರಸ್ತುತ ಸ್ಥಿತಿಯಲ್ಲಿ ಅದು ‘ಸಂಪೂರ್ಣವಾಗಿ ನಿಷ್ಪ್ರಯೋಜಕ’ ಎಂದು ಘೋಷಿಸಿದೆ ಎಂದು ಉತ್ತಮ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ.

ಇಂತಹ ಮಹತ್ವದ ಯೋಜನೆ ನಿರ್ಮಾಣವಾದ ಕೆಲವೇ ವರ್ಷಗಳಲ್ಲಿ ಹಾನಿಗೊಳಗಾಗಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ. ಈ ಯೋಜನೆಯಲ್ಲಿನ ಲೋಪದೋಷಗಳ ಕುರಿತು ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಸರ್ಕಾರ ನಿರ್ಧರಿಸಿದೆ. ಮುಂದಿನ ಕ್ರಮಕ್ಕಾಗಿ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ವರದಿ ಸಲ್ಲಿಸಲಾಗುವುದು. ಹಾನಿಗೆ ಹೊಣೆಗಾರರಾದ ಯಾರನ್ನೂ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಹಿಂದಿನ ಕಾಂಗ್ರೆಸ್ ಸರ್ಕಾರವು, ಆರಂಭದಲ್ಲಿ ಕಾಳೇಶ್ವರಂನ ಮೇಲ್ಭಾಗದ ತುಮ್ಮಿಡಿ ಹಟ್ಟಿ ಗ್ರಾಮದಲ್ಲಿ ಪ್ರಾಣಹಿತ ಚೇವೆಲ್ಲಾ ಯೋಜನೆ ಎಂದು ಹೆಸರಿಸಲಾದ ಯೋಜನೆಯ ನಿರ್ಮಾಣವನ್ನು ಯೋಜಿಸಿತ್ತು. ಆದರೆ ಬಿಆರ್‌ಎಸ್‌ ಸರ್ಕಾರ “ವೈಜ್ಞಾನಿಕ ವಿಧಾನವಿಲ್ಲದೆ ಕಾಳೇಶ್ವರಂಗೆ ಸ್ಥಳವನ್ನು ಬದಲಾಯಿಸುವ ಮೂಲಕ ಅದನ್ನು ಮರುವಿನ್ಯಾಸಗೊಳಿಸಿದೆ” ಎಂದು ಸಚಿವರು ಆರೋಪಿಸಿದ್ದಾರೆ.

ಬಿಆರ್‌ಎಸ್ ಶಾಸಕ ಮತ್ತು ಮಾಜಿ ರಾಜ್ಯ ಸಚಿವ ಕಡಿಯಂ ಶ್ರೀಹರಿ ಅವರು ಮಹಾರಾಷ್ಟ್ರದ ಪ್ರದೇಶಗಳು ಮುಳುಗುವುದನ್ನು ತಡೆಯಲು ಮತ್ತು ಭಾರೀ ಪರಿಹಾರವನ್ನು ಪಾವತಿಸುವುದನ್ನು ತಪ್ಪಿಸಲು ಯೋಜನೆಯನ್ನು ಮರುವಿನ್ಯಾಸಗೊಳಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಬಿಆರ್‌ಎಸ್‌, ಕೇಂದ್ರದಿಂದ 11 ರೀತಿಯ ಅನುಮತಿಗಳನ್ನು ಪಡೆದ ನಂತರವೇ ಬಿಆರ್‌ಎಸ್ ಸರ್ಕಾರವು ಕಾಳೇಶ್ವರಂ ಯೋಜನೆಯನ್ನು ಕೈಗೆತ್ತಿಕೊಂಡಿತ್ತು. ನ್ಯಾಯಾಂಗ ತನಿಖೆ ಪ್ರಾರಂಭವಾಗುವ ಮೊದಲೇ ಕಾಂಗ್ರೆಸ್ ಸರ್ಕಾರದ ಸಚಿವರು ತೀರ್ಪು ನೀಡುತ್ತಿರುವುದು ಆಶ್ಚರ್ಯಕರವಾಗಿದೆ ಎಂದಿದೆ.

ಕಾಳೇಶ್ವರಂ ಏತ ನೀರಾವರಿ ಯೋಜನೆ ತೆಲಂಗಾಣದ ಈ ಹಿಂದಿನ ಬಿಆರ್‌ಎಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ. 10 ವರ್ಷಗಳ ತೆಲಂಗಾಣ ಬಿಆರ್‌ಎಸ್‌ ಸರ್ಕಾರದ ಅವಧಿಯಲ್ಲಿ ಪೂರ್ಣಗೊಳಿಸಿದ ಅತ್ಯಂತ ದೊಡ್ಡ ಯೋಜನೆ ಇದು ಎಂದು ಪರಿಗಣಿಸಲಾಗಿದೆ. ಕಾಳೇಶ್ವರಂ ವಿಶ್ವದ ಅತೀ ದೊಡ್ಡ ಏತ ನೀರಾವರಿ ಯೋಜನೆಯೂ ಹೌದು. ಬಿಆರ್‌ಎಸ್‌ ಸರ್ಕಾರ ಬಹಳ ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದ ಯೋಜನೆಯಲ್ಲಿ ಲೋಪದ ಆರೋಪ ಮಾಡಿರುವ ನೂತನ ಕಾಂಗ್ರೆಸ್ ಸರ್ಕಾರ ನ್ಯಾಯಾಂಗ ತನಿಖೆಗೆ ಮುಂದಾಗಿದೆ.

ಇದನ್ನೂ ಓದಿ : ಪಿಂಚಣಿ ಅರ್ಹತಾ ವಯಸ್ಸು 50ಕ್ಕೆ ಇಳಿಕೆ, ಶೇ.75% ಉದ್ಯೋಗ ಸ್ಥಳೀಯರಿಗೆ ಮೀಸಲು: ಹೇಮಂತ್ ಸುರೇನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...