Homeಮುಖಪುಟಕಾಳೇಶ್ವರಂ ಏತ ನೀರಾವರಿ ಯೋಜನೆಯಲ್ಲಿ ಲೋಪ: ನ್ಯಾಯಾಂಗ ತನಿಖೆಗೆ ಮುಂದಾದ ಸರ್ಕಾರ

ಕಾಳೇಶ್ವರಂ ಏತ ನೀರಾವರಿ ಯೋಜನೆಯಲ್ಲಿ ಲೋಪ: ನ್ಯಾಯಾಂಗ ತನಿಖೆಗೆ ಮುಂದಾದ ಸರ್ಕಾರ

- Advertisement -
- Advertisement -

ಗೋದಾವರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಾಳೇಶ್ವರಂ ಏತ ನೀರಾವರಿ ಯೋಜನೆಯ ನಿರ್ಮಾಣ ಮತ್ತು ಕಾರ್ಯಾಚರಣೆಯಲ್ಲಿ ಇಂಜಿನಿಯರಿಂಗ್ ಲೋಪ ಪ್ರಕರಣವನ್ನು ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ನಡೆಸುವುದಾಗಿ ತೆಲಂಗಾಣ ಸರ್ಕಾರ ಶುಕ್ರವಾರ ತಿಳಿಸಿದೆ.

ರಾಜ್ಯದ ನೂತನ ನೀರಾವರಿ ಸಚಿವ ಎನ್.ಉತ್ತಮ್ ಕುಮಾರ್ ರೆಡ್ಡಿ ನೇತೃತ್ವದ ಉನ್ನತ ಇಂಜಿನಿಯರ್‌ಗಳು ಮತ್ತು ಹಿರಿಯ ಅಧಿಕಾರಿಗಳ ತಂಡ ಏತ ನೀರಾವರಿ ಯೋಜನೆಯ ಸ್ಥಳಕ್ಕೆ ಭೇಟಿ ನೀಡಿ, ಬರೋಬ್ಬರಿ ₹1 ಲಕ್ಷ ಕೋಟಿ ವೆಚ್ಚದ ಯೋಜನೆಯ ಬ್ಯಾರೇಜ್‌ಗಳ ಪಿಲ್ಲರ್‌ಗಳ ಮುಳುಗುವಿಕೆಯಿಂದ ಉಂಟಾದ ಹಾನಿಯನ್ನು ಪರಿಶೀಲಿಸಿದ ನಂತರ ಈ ಪ್ರಕಟಣೆ ಹೊರಬಿದ್ದಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಉತ್ತಮ್ ಕುಮಾರ್ ರೆಡ್ಡಿ, 2019ರಲ್ಲಿ ನಿರ್ಮಿಸಲಾದ ಏತ ನೀರಾವರಿ ಯೋಜನೆಯ ಇಂಜಿನಿಯರಿಂಗ್ ಲೋಪಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

“ಕಾರಣ ಏನೇ ಇರಲಿ, ಮೇಡಿಗಡ್ಡ ಬ್ಯಾರೇಜ್‌ನ ಅಡಿಪಾಯ ಮುಳುಗಿದೆ. ಅಣ್ಣಾರಾಮ್ ಬ್ಯಾರೇಜ್‌ನಲ್ಲಿ ಸೋರಿಕೆಯಾಗ್ತಿದೆ ಮತ್ತು ಬಿರುಕುಗಳು ಕಾಣಿಸಿಕೊಂಡಿವೆ. ಸುಂಡಿಲ್ಲಾ ಬ್ಯಾರೇಜ್ ಹಾನಿಗೊಳಗಾಗಿದೆ. ಇವುಗಳ ವಿಚಾರಣೆ ಮತ್ತು ದುರಸ್ತಿ ಕಾರ್ಯಗಳು ನಡೆಯಲಿವೆ. ಈ ಕಾರಣಕ್ಕೆ ಕೆಲ ಸಮಯ ಏತ ನೀರಾವರಿ ಕಾರ್ಯಾಚರಣೆ ಸ್ಥಗಿತಗೊಳ್ಳಬಹುದು” ಎಂದು ಹೇಳಿದ್ದಾರೆ.

ಕಾಳೇಶ್ವರಂ ಯೋಜನೆಯಿಂದಾಗಿ ತೆಲಂಗಾಣದ ಮೇಲೆ ವರ್ಷಕ್ಕೆ ₹15,000 ಕೋಟಿ ಆರ್ಥಿಕ ಹೊರೆಯಾಗುತ್ತಿದೆ. ನೀರಾವರಿ ಇಲಾಖೆಯಲ್ಲಿ ಈಗಾಗಲೇ ₹10,000 ಕೋಟಿ ಬಿಲ್‌ಗಳು ಬಾಕಿ ಉಳಿದಿವೆ ಎಂದು ಸಚಿವರು ತಿಳಿಸಿದ್ದಾರೆ.

15 ರಿಂದ 20 ರವರೆಗೆ 86 ಪಿಯರ್‌ಗಳಲ್ಲಿ ಆರು ಮುಳುಗಡೆಯಾಗಿವೆ. ಮೇಡಿಗಡ್ಡ ಬ್ಯಾರೇಜ್‌ನ ಆರು, ಏಳು ಮತ್ತು ಎಂಟು ಬ್ಲಾಕ್‌ಗಳಲ್ಲಿ ಗೇಟ್‌ಗಳು ದುರ್ಬಲಗೊಂಡಿವೆ. ಈ ವಿಚಾರ ಕಳೆದ ಅಕ್ಟೋಬರ್ 21 ರಂದು ಬೆಳಕಿಗೆ ಬಂದಿತ್ತು. ನೀರಾವರಿ ಅಧಿಕಾರಿಗಳು ಜಲಾಶಯವನ್ನು ಖಾಲಿ ಮಾಡಲು ಒತ್ತಾಯಿಸಿದ್ದಾರೆ. ಬ್ಯಾರೇಜ್ ಮೇಲೆ ನಿರ್ಮಿಸಿರುವ ರಸ್ತೆಯಲ್ಲಿ ಸಂಚಾರ ನಿಷೇಧಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಮೇಡಿಗಡ್ಡಾ ಬ್ಯಾರೇಜ್‌ನ ಹಾನಿಗೊಳಗಾದ ಭಾಗಗಳನ್ನು ಪರಿಶೀಲಿಸಲು ರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಪ್ರಾಧಿಕಾರ ರಚಿಸಿದ್ದ ತಾಂತ್ರಿಕ ತಜ್ಞರ ಸಮಿತಿಯು, ಬ್ಯಾರೇಜ್ ಅನ್ನು ಸಂಪೂರ್ಣವಾಗಿ ಪುನಶ್ಚೇತನಗೊಳಿಸದ ಹೊರತು ಪ್ರಸ್ತುತ ಸ್ಥಿತಿಯಲ್ಲಿ ಅದು ‘ಸಂಪೂರ್ಣವಾಗಿ ನಿಷ್ಪ್ರಯೋಜಕ’ ಎಂದು ಘೋಷಿಸಿದೆ ಎಂದು ಉತ್ತಮ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ.

ಇಂತಹ ಮಹತ್ವದ ಯೋಜನೆ ನಿರ್ಮಾಣವಾದ ಕೆಲವೇ ವರ್ಷಗಳಲ್ಲಿ ಹಾನಿಗೊಳಗಾಗಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ. ಈ ಯೋಜನೆಯಲ್ಲಿನ ಲೋಪದೋಷಗಳ ಕುರಿತು ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಸರ್ಕಾರ ನಿರ್ಧರಿಸಿದೆ. ಮುಂದಿನ ಕ್ರಮಕ್ಕಾಗಿ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ವರದಿ ಸಲ್ಲಿಸಲಾಗುವುದು. ಹಾನಿಗೆ ಹೊಣೆಗಾರರಾದ ಯಾರನ್ನೂ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಹಿಂದಿನ ಕಾಂಗ್ರೆಸ್ ಸರ್ಕಾರವು, ಆರಂಭದಲ್ಲಿ ಕಾಳೇಶ್ವರಂನ ಮೇಲ್ಭಾಗದ ತುಮ್ಮಿಡಿ ಹಟ್ಟಿ ಗ್ರಾಮದಲ್ಲಿ ಪ್ರಾಣಹಿತ ಚೇವೆಲ್ಲಾ ಯೋಜನೆ ಎಂದು ಹೆಸರಿಸಲಾದ ಯೋಜನೆಯ ನಿರ್ಮಾಣವನ್ನು ಯೋಜಿಸಿತ್ತು. ಆದರೆ ಬಿಆರ್‌ಎಸ್‌ ಸರ್ಕಾರ “ವೈಜ್ಞಾನಿಕ ವಿಧಾನವಿಲ್ಲದೆ ಕಾಳೇಶ್ವರಂಗೆ ಸ್ಥಳವನ್ನು ಬದಲಾಯಿಸುವ ಮೂಲಕ ಅದನ್ನು ಮರುವಿನ್ಯಾಸಗೊಳಿಸಿದೆ” ಎಂದು ಸಚಿವರು ಆರೋಪಿಸಿದ್ದಾರೆ.

ಬಿಆರ್‌ಎಸ್ ಶಾಸಕ ಮತ್ತು ಮಾಜಿ ರಾಜ್ಯ ಸಚಿವ ಕಡಿಯಂ ಶ್ರೀಹರಿ ಅವರು ಮಹಾರಾಷ್ಟ್ರದ ಪ್ರದೇಶಗಳು ಮುಳುಗುವುದನ್ನು ತಡೆಯಲು ಮತ್ತು ಭಾರೀ ಪರಿಹಾರವನ್ನು ಪಾವತಿಸುವುದನ್ನು ತಪ್ಪಿಸಲು ಯೋಜನೆಯನ್ನು ಮರುವಿನ್ಯಾಸಗೊಳಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಬಿಆರ್‌ಎಸ್‌, ಕೇಂದ್ರದಿಂದ 11 ರೀತಿಯ ಅನುಮತಿಗಳನ್ನು ಪಡೆದ ನಂತರವೇ ಬಿಆರ್‌ಎಸ್ ಸರ್ಕಾರವು ಕಾಳೇಶ್ವರಂ ಯೋಜನೆಯನ್ನು ಕೈಗೆತ್ತಿಕೊಂಡಿತ್ತು. ನ್ಯಾಯಾಂಗ ತನಿಖೆ ಪ್ರಾರಂಭವಾಗುವ ಮೊದಲೇ ಕಾಂಗ್ರೆಸ್ ಸರ್ಕಾರದ ಸಚಿವರು ತೀರ್ಪು ನೀಡುತ್ತಿರುವುದು ಆಶ್ಚರ್ಯಕರವಾಗಿದೆ ಎಂದಿದೆ.

ಕಾಳೇಶ್ವರಂ ಏತ ನೀರಾವರಿ ಯೋಜನೆ ತೆಲಂಗಾಣದ ಈ ಹಿಂದಿನ ಬಿಆರ್‌ಎಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ. 10 ವರ್ಷಗಳ ತೆಲಂಗಾಣ ಬಿಆರ್‌ಎಸ್‌ ಸರ್ಕಾರದ ಅವಧಿಯಲ್ಲಿ ಪೂರ್ಣಗೊಳಿಸಿದ ಅತ್ಯಂತ ದೊಡ್ಡ ಯೋಜನೆ ಇದು ಎಂದು ಪರಿಗಣಿಸಲಾಗಿದೆ. ಕಾಳೇಶ್ವರಂ ವಿಶ್ವದ ಅತೀ ದೊಡ್ಡ ಏತ ನೀರಾವರಿ ಯೋಜನೆಯೂ ಹೌದು. ಬಿಆರ್‌ಎಸ್‌ ಸರ್ಕಾರ ಬಹಳ ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದ ಯೋಜನೆಯಲ್ಲಿ ಲೋಪದ ಆರೋಪ ಮಾಡಿರುವ ನೂತನ ಕಾಂಗ್ರೆಸ್ ಸರ್ಕಾರ ನ್ಯಾಯಾಂಗ ತನಿಖೆಗೆ ಮುಂದಾಗಿದೆ.

ಇದನ್ನೂ ಓದಿ : ಪಿಂಚಣಿ ಅರ್ಹತಾ ವಯಸ್ಸು 50ಕ್ಕೆ ಇಳಿಕೆ, ಶೇ.75% ಉದ್ಯೋಗ ಸ್ಥಳೀಯರಿಗೆ ಮೀಸಲು: ಹೇಮಂತ್ ಸುರೇನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...