Homeಮುಖಪುಟಕಾಳೇಶ್ವರಂ ಏತ ನೀರಾವರಿ ಯೋಜನೆಯಲ್ಲಿ ಲೋಪ: ನ್ಯಾಯಾಂಗ ತನಿಖೆಗೆ ಮುಂದಾದ ಸರ್ಕಾರ

ಕಾಳೇಶ್ವರಂ ಏತ ನೀರಾವರಿ ಯೋಜನೆಯಲ್ಲಿ ಲೋಪ: ನ್ಯಾಯಾಂಗ ತನಿಖೆಗೆ ಮುಂದಾದ ಸರ್ಕಾರ

- Advertisement -
- Advertisement -

ಗೋದಾವರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಾಳೇಶ್ವರಂ ಏತ ನೀರಾವರಿ ಯೋಜನೆಯ ನಿರ್ಮಾಣ ಮತ್ತು ಕಾರ್ಯಾಚರಣೆಯಲ್ಲಿ ಇಂಜಿನಿಯರಿಂಗ್ ಲೋಪ ಪ್ರಕರಣವನ್ನು ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ನಡೆಸುವುದಾಗಿ ತೆಲಂಗಾಣ ಸರ್ಕಾರ ಶುಕ್ರವಾರ ತಿಳಿಸಿದೆ.

ರಾಜ್ಯದ ನೂತನ ನೀರಾವರಿ ಸಚಿವ ಎನ್.ಉತ್ತಮ್ ಕುಮಾರ್ ರೆಡ್ಡಿ ನೇತೃತ್ವದ ಉನ್ನತ ಇಂಜಿನಿಯರ್‌ಗಳು ಮತ್ತು ಹಿರಿಯ ಅಧಿಕಾರಿಗಳ ತಂಡ ಏತ ನೀರಾವರಿ ಯೋಜನೆಯ ಸ್ಥಳಕ್ಕೆ ಭೇಟಿ ನೀಡಿ, ಬರೋಬ್ಬರಿ ₹1 ಲಕ್ಷ ಕೋಟಿ ವೆಚ್ಚದ ಯೋಜನೆಯ ಬ್ಯಾರೇಜ್‌ಗಳ ಪಿಲ್ಲರ್‌ಗಳ ಮುಳುಗುವಿಕೆಯಿಂದ ಉಂಟಾದ ಹಾನಿಯನ್ನು ಪರಿಶೀಲಿಸಿದ ನಂತರ ಈ ಪ್ರಕಟಣೆ ಹೊರಬಿದ್ದಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಉತ್ತಮ್ ಕುಮಾರ್ ರೆಡ್ಡಿ, 2019ರಲ್ಲಿ ನಿರ್ಮಿಸಲಾದ ಏತ ನೀರಾವರಿ ಯೋಜನೆಯ ಇಂಜಿನಿಯರಿಂಗ್ ಲೋಪಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

“ಕಾರಣ ಏನೇ ಇರಲಿ, ಮೇಡಿಗಡ್ಡ ಬ್ಯಾರೇಜ್‌ನ ಅಡಿಪಾಯ ಮುಳುಗಿದೆ. ಅಣ್ಣಾರಾಮ್ ಬ್ಯಾರೇಜ್‌ನಲ್ಲಿ ಸೋರಿಕೆಯಾಗ್ತಿದೆ ಮತ್ತು ಬಿರುಕುಗಳು ಕಾಣಿಸಿಕೊಂಡಿವೆ. ಸುಂಡಿಲ್ಲಾ ಬ್ಯಾರೇಜ್ ಹಾನಿಗೊಳಗಾಗಿದೆ. ಇವುಗಳ ವಿಚಾರಣೆ ಮತ್ತು ದುರಸ್ತಿ ಕಾರ್ಯಗಳು ನಡೆಯಲಿವೆ. ಈ ಕಾರಣಕ್ಕೆ ಕೆಲ ಸಮಯ ಏತ ನೀರಾವರಿ ಕಾರ್ಯಾಚರಣೆ ಸ್ಥಗಿತಗೊಳ್ಳಬಹುದು” ಎಂದು ಹೇಳಿದ್ದಾರೆ.

ಕಾಳೇಶ್ವರಂ ಯೋಜನೆಯಿಂದಾಗಿ ತೆಲಂಗಾಣದ ಮೇಲೆ ವರ್ಷಕ್ಕೆ ₹15,000 ಕೋಟಿ ಆರ್ಥಿಕ ಹೊರೆಯಾಗುತ್ತಿದೆ. ನೀರಾವರಿ ಇಲಾಖೆಯಲ್ಲಿ ಈಗಾಗಲೇ ₹10,000 ಕೋಟಿ ಬಿಲ್‌ಗಳು ಬಾಕಿ ಉಳಿದಿವೆ ಎಂದು ಸಚಿವರು ತಿಳಿಸಿದ್ದಾರೆ.

15 ರಿಂದ 20 ರವರೆಗೆ 86 ಪಿಯರ್‌ಗಳಲ್ಲಿ ಆರು ಮುಳುಗಡೆಯಾಗಿವೆ. ಮೇಡಿಗಡ್ಡ ಬ್ಯಾರೇಜ್‌ನ ಆರು, ಏಳು ಮತ್ತು ಎಂಟು ಬ್ಲಾಕ್‌ಗಳಲ್ಲಿ ಗೇಟ್‌ಗಳು ದುರ್ಬಲಗೊಂಡಿವೆ. ಈ ವಿಚಾರ ಕಳೆದ ಅಕ್ಟೋಬರ್ 21 ರಂದು ಬೆಳಕಿಗೆ ಬಂದಿತ್ತು. ನೀರಾವರಿ ಅಧಿಕಾರಿಗಳು ಜಲಾಶಯವನ್ನು ಖಾಲಿ ಮಾಡಲು ಒತ್ತಾಯಿಸಿದ್ದಾರೆ. ಬ್ಯಾರೇಜ್ ಮೇಲೆ ನಿರ್ಮಿಸಿರುವ ರಸ್ತೆಯಲ್ಲಿ ಸಂಚಾರ ನಿಷೇಧಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಮೇಡಿಗಡ್ಡಾ ಬ್ಯಾರೇಜ್‌ನ ಹಾನಿಗೊಳಗಾದ ಭಾಗಗಳನ್ನು ಪರಿಶೀಲಿಸಲು ರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಪ್ರಾಧಿಕಾರ ರಚಿಸಿದ್ದ ತಾಂತ್ರಿಕ ತಜ್ಞರ ಸಮಿತಿಯು, ಬ್ಯಾರೇಜ್ ಅನ್ನು ಸಂಪೂರ್ಣವಾಗಿ ಪುನಶ್ಚೇತನಗೊಳಿಸದ ಹೊರತು ಪ್ರಸ್ತುತ ಸ್ಥಿತಿಯಲ್ಲಿ ಅದು ‘ಸಂಪೂರ್ಣವಾಗಿ ನಿಷ್ಪ್ರಯೋಜಕ’ ಎಂದು ಘೋಷಿಸಿದೆ ಎಂದು ಉತ್ತಮ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ.

ಇಂತಹ ಮಹತ್ವದ ಯೋಜನೆ ನಿರ್ಮಾಣವಾದ ಕೆಲವೇ ವರ್ಷಗಳಲ್ಲಿ ಹಾನಿಗೊಳಗಾಗಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ. ಈ ಯೋಜನೆಯಲ್ಲಿನ ಲೋಪದೋಷಗಳ ಕುರಿತು ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಸರ್ಕಾರ ನಿರ್ಧರಿಸಿದೆ. ಮುಂದಿನ ಕ್ರಮಕ್ಕಾಗಿ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ವರದಿ ಸಲ್ಲಿಸಲಾಗುವುದು. ಹಾನಿಗೆ ಹೊಣೆಗಾರರಾದ ಯಾರನ್ನೂ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಹಿಂದಿನ ಕಾಂಗ್ರೆಸ್ ಸರ್ಕಾರವು, ಆರಂಭದಲ್ಲಿ ಕಾಳೇಶ್ವರಂನ ಮೇಲ್ಭಾಗದ ತುಮ್ಮಿಡಿ ಹಟ್ಟಿ ಗ್ರಾಮದಲ್ಲಿ ಪ್ರಾಣಹಿತ ಚೇವೆಲ್ಲಾ ಯೋಜನೆ ಎಂದು ಹೆಸರಿಸಲಾದ ಯೋಜನೆಯ ನಿರ್ಮಾಣವನ್ನು ಯೋಜಿಸಿತ್ತು. ಆದರೆ ಬಿಆರ್‌ಎಸ್‌ ಸರ್ಕಾರ “ವೈಜ್ಞಾನಿಕ ವಿಧಾನವಿಲ್ಲದೆ ಕಾಳೇಶ್ವರಂಗೆ ಸ್ಥಳವನ್ನು ಬದಲಾಯಿಸುವ ಮೂಲಕ ಅದನ್ನು ಮರುವಿನ್ಯಾಸಗೊಳಿಸಿದೆ” ಎಂದು ಸಚಿವರು ಆರೋಪಿಸಿದ್ದಾರೆ.

ಬಿಆರ್‌ಎಸ್ ಶಾಸಕ ಮತ್ತು ಮಾಜಿ ರಾಜ್ಯ ಸಚಿವ ಕಡಿಯಂ ಶ್ರೀಹರಿ ಅವರು ಮಹಾರಾಷ್ಟ್ರದ ಪ್ರದೇಶಗಳು ಮುಳುಗುವುದನ್ನು ತಡೆಯಲು ಮತ್ತು ಭಾರೀ ಪರಿಹಾರವನ್ನು ಪಾವತಿಸುವುದನ್ನು ತಪ್ಪಿಸಲು ಯೋಜನೆಯನ್ನು ಮರುವಿನ್ಯಾಸಗೊಳಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಬಿಆರ್‌ಎಸ್‌, ಕೇಂದ್ರದಿಂದ 11 ರೀತಿಯ ಅನುಮತಿಗಳನ್ನು ಪಡೆದ ನಂತರವೇ ಬಿಆರ್‌ಎಸ್ ಸರ್ಕಾರವು ಕಾಳೇಶ್ವರಂ ಯೋಜನೆಯನ್ನು ಕೈಗೆತ್ತಿಕೊಂಡಿತ್ತು. ನ್ಯಾಯಾಂಗ ತನಿಖೆ ಪ್ರಾರಂಭವಾಗುವ ಮೊದಲೇ ಕಾಂಗ್ರೆಸ್ ಸರ್ಕಾರದ ಸಚಿವರು ತೀರ್ಪು ನೀಡುತ್ತಿರುವುದು ಆಶ್ಚರ್ಯಕರವಾಗಿದೆ ಎಂದಿದೆ.

ಕಾಳೇಶ್ವರಂ ಏತ ನೀರಾವರಿ ಯೋಜನೆ ತೆಲಂಗಾಣದ ಈ ಹಿಂದಿನ ಬಿಆರ್‌ಎಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ. 10 ವರ್ಷಗಳ ತೆಲಂಗಾಣ ಬಿಆರ್‌ಎಸ್‌ ಸರ್ಕಾರದ ಅವಧಿಯಲ್ಲಿ ಪೂರ್ಣಗೊಳಿಸಿದ ಅತ್ಯಂತ ದೊಡ್ಡ ಯೋಜನೆ ಇದು ಎಂದು ಪರಿಗಣಿಸಲಾಗಿದೆ. ಕಾಳೇಶ್ವರಂ ವಿಶ್ವದ ಅತೀ ದೊಡ್ಡ ಏತ ನೀರಾವರಿ ಯೋಜನೆಯೂ ಹೌದು. ಬಿಆರ್‌ಎಸ್‌ ಸರ್ಕಾರ ಬಹಳ ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದ ಯೋಜನೆಯಲ್ಲಿ ಲೋಪದ ಆರೋಪ ಮಾಡಿರುವ ನೂತನ ಕಾಂಗ್ರೆಸ್ ಸರ್ಕಾರ ನ್ಯಾಯಾಂಗ ತನಿಖೆಗೆ ಮುಂದಾಗಿದೆ.

ಇದನ್ನೂ ಓದಿ : ಪಿಂಚಣಿ ಅರ್ಹತಾ ವಯಸ್ಸು 50ಕ್ಕೆ ಇಳಿಕೆ, ಶೇ.75% ಉದ್ಯೋಗ ಸ್ಥಳೀಯರಿಗೆ ಮೀಸಲು: ಹೇಮಂತ್ ಸುರೇನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...