Homeಮುಖಪುಟಕಾಳೇಶ್ವರಂ ಏತ ನೀರಾವರಿ ಯೋಜನೆಯಲ್ಲಿ ಲೋಪ: ನ್ಯಾಯಾಂಗ ತನಿಖೆಗೆ ಮುಂದಾದ ಸರ್ಕಾರ

ಕಾಳೇಶ್ವರಂ ಏತ ನೀರಾವರಿ ಯೋಜನೆಯಲ್ಲಿ ಲೋಪ: ನ್ಯಾಯಾಂಗ ತನಿಖೆಗೆ ಮುಂದಾದ ಸರ್ಕಾರ

- Advertisement -
- Advertisement -

ಗೋದಾವರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಾಳೇಶ್ವರಂ ಏತ ನೀರಾವರಿ ಯೋಜನೆಯ ನಿರ್ಮಾಣ ಮತ್ತು ಕಾರ್ಯಾಚರಣೆಯಲ್ಲಿ ಇಂಜಿನಿಯರಿಂಗ್ ಲೋಪ ಪ್ರಕರಣವನ್ನು ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ನಡೆಸುವುದಾಗಿ ತೆಲಂಗಾಣ ಸರ್ಕಾರ ಶುಕ್ರವಾರ ತಿಳಿಸಿದೆ.

ರಾಜ್ಯದ ನೂತನ ನೀರಾವರಿ ಸಚಿವ ಎನ್.ಉತ್ತಮ್ ಕುಮಾರ್ ರೆಡ್ಡಿ ನೇತೃತ್ವದ ಉನ್ನತ ಇಂಜಿನಿಯರ್‌ಗಳು ಮತ್ತು ಹಿರಿಯ ಅಧಿಕಾರಿಗಳ ತಂಡ ಏತ ನೀರಾವರಿ ಯೋಜನೆಯ ಸ್ಥಳಕ್ಕೆ ಭೇಟಿ ನೀಡಿ, ಬರೋಬ್ಬರಿ ₹1 ಲಕ್ಷ ಕೋಟಿ ವೆಚ್ಚದ ಯೋಜನೆಯ ಬ್ಯಾರೇಜ್‌ಗಳ ಪಿಲ್ಲರ್‌ಗಳ ಮುಳುಗುವಿಕೆಯಿಂದ ಉಂಟಾದ ಹಾನಿಯನ್ನು ಪರಿಶೀಲಿಸಿದ ನಂತರ ಈ ಪ್ರಕಟಣೆ ಹೊರಬಿದ್ದಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಉತ್ತಮ್ ಕುಮಾರ್ ರೆಡ್ಡಿ, 2019ರಲ್ಲಿ ನಿರ್ಮಿಸಲಾದ ಏತ ನೀರಾವರಿ ಯೋಜನೆಯ ಇಂಜಿನಿಯರಿಂಗ್ ಲೋಪಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

“ಕಾರಣ ಏನೇ ಇರಲಿ, ಮೇಡಿಗಡ್ಡ ಬ್ಯಾರೇಜ್‌ನ ಅಡಿಪಾಯ ಮುಳುಗಿದೆ. ಅಣ್ಣಾರಾಮ್ ಬ್ಯಾರೇಜ್‌ನಲ್ಲಿ ಸೋರಿಕೆಯಾಗ್ತಿದೆ ಮತ್ತು ಬಿರುಕುಗಳು ಕಾಣಿಸಿಕೊಂಡಿವೆ. ಸುಂಡಿಲ್ಲಾ ಬ್ಯಾರೇಜ್ ಹಾನಿಗೊಳಗಾಗಿದೆ. ಇವುಗಳ ವಿಚಾರಣೆ ಮತ್ತು ದುರಸ್ತಿ ಕಾರ್ಯಗಳು ನಡೆಯಲಿವೆ. ಈ ಕಾರಣಕ್ಕೆ ಕೆಲ ಸಮಯ ಏತ ನೀರಾವರಿ ಕಾರ್ಯಾಚರಣೆ ಸ್ಥಗಿತಗೊಳ್ಳಬಹುದು” ಎಂದು ಹೇಳಿದ್ದಾರೆ.

ಕಾಳೇಶ್ವರಂ ಯೋಜನೆಯಿಂದಾಗಿ ತೆಲಂಗಾಣದ ಮೇಲೆ ವರ್ಷಕ್ಕೆ ₹15,000 ಕೋಟಿ ಆರ್ಥಿಕ ಹೊರೆಯಾಗುತ್ತಿದೆ. ನೀರಾವರಿ ಇಲಾಖೆಯಲ್ಲಿ ಈಗಾಗಲೇ ₹10,000 ಕೋಟಿ ಬಿಲ್‌ಗಳು ಬಾಕಿ ಉಳಿದಿವೆ ಎಂದು ಸಚಿವರು ತಿಳಿಸಿದ್ದಾರೆ.

15 ರಿಂದ 20 ರವರೆಗೆ 86 ಪಿಯರ್‌ಗಳಲ್ಲಿ ಆರು ಮುಳುಗಡೆಯಾಗಿವೆ. ಮೇಡಿಗಡ್ಡ ಬ್ಯಾರೇಜ್‌ನ ಆರು, ಏಳು ಮತ್ತು ಎಂಟು ಬ್ಲಾಕ್‌ಗಳಲ್ಲಿ ಗೇಟ್‌ಗಳು ದುರ್ಬಲಗೊಂಡಿವೆ. ಈ ವಿಚಾರ ಕಳೆದ ಅಕ್ಟೋಬರ್ 21 ರಂದು ಬೆಳಕಿಗೆ ಬಂದಿತ್ತು. ನೀರಾವರಿ ಅಧಿಕಾರಿಗಳು ಜಲಾಶಯವನ್ನು ಖಾಲಿ ಮಾಡಲು ಒತ್ತಾಯಿಸಿದ್ದಾರೆ. ಬ್ಯಾರೇಜ್ ಮೇಲೆ ನಿರ್ಮಿಸಿರುವ ರಸ್ತೆಯಲ್ಲಿ ಸಂಚಾರ ನಿಷೇಧಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಮೇಡಿಗಡ್ಡಾ ಬ್ಯಾರೇಜ್‌ನ ಹಾನಿಗೊಳಗಾದ ಭಾಗಗಳನ್ನು ಪರಿಶೀಲಿಸಲು ರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಪ್ರಾಧಿಕಾರ ರಚಿಸಿದ್ದ ತಾಂತ್ರಿಕ ತಜ್ಞರ ಸಮಿತಿಯು, ಬ್ಯಾರೇಜ್ ಅನ್ನು ಸಂಪೂರ್ಣವಾಗಿ ಪುನಶ್ಚೇತನಗೊಳಿಸದ ಹೊರತು ಪ್ರಸ್ತುತ ಸ್ಥಿತಿಯಲ್ಲಿ ಅದು ‘ಸಂಪೂರ್ಣವಾಗಿ ನಿಷ್ಪ್ರಯೋಜಕ’ ಎಂದು ಘೋಷಿಸಿದೆ ಎಂದು ಉತ್ತಮ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ.

ಇಂತಹ ಮಹತ್ವದ ಯೋಜನೆ ನಿರ್ಮಾಣವಾದ ಕೆಲವೇ ವರ್ಷಗಳಲ್ಲಿ ಹಾನಿಗೊಳಗಾಗಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ. ಈ ಯೋಜನೆಯಲ್ಲಿನ ಲೋಪದೋಷಗಳ ಕುರಿತು ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಸರ್ಕಾರ ನಿರ್ಧರಿಸಿದೆ. ಮುಂದಿನ ಕ್ರಮಕ್ಕಾಗಿ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ವರದಿ ಸಲ್ಲಿಸಲಾಗುವುದು. ಹಾನಿಗೆ ಹೊಣೆಗಾರರಾದ ಯಾರನ್ನೂ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಹಿಂದಿನ ಕಾಂಗ್ರೆಸ್ ಸರ್ಕಾರವು, ಆರಂಭದಲ್ಲಿ ಕಾಳೇಶ್ವರಂನ ಮೇಲ್ಭಾಗದ ತುಮ್ಮಿಡಿ ಹಟ್ಟಿ ಗ್ರಾಮದಲ್ಲಿ ಪ್ರಾಣಹಿತ ಚೇವೆಲ್ಲಾ ಯೋಜನೆ ಎಂದು ಹೆಸರಿಸಲಾದ ಯೋಜನೆಯ ನಿರ್ಮಾಣವನ್ನು ಯೋಜಿಸಿತ್ತು. ಆದರೆ ಬಿಆರ್‌ಎಸ್‌ ಸರ್ಕಾರ “ವೈಜ್ಞಾನಿಕ ವಿಧಾನವಿಲ್ಲದೆ ಕಾಳೇಶ್ವರಂಗೆ ಸ್ಥಳವನ್ನು ಬದಲಾಯಿಸುವ ಮೂಲಕ ಅದನ್ನು ಮರುವಿನ್ಯಾಸಗೊಳಿಸಿದೆ” ಎಂದು ಸಚಿವರು ಆರೋಪಿಸಿದ್ದಾರೆ.

ಬಿಆರ್‌ಎಸ್ ಶಾಸಕ ಮತ್ತು ಮಾಜಿ ರಾಜ್ಯ ಸಚಿವ ಕಡಿಯಂ ಶ್ರೀಹರಿ ಅವರು ಮಹಾರಾಷ್ಟ್ರದ ಪ್ರದೇಶಗಳು ಮುಳುಗುವುದನ್ನು ತಡೆಯಲು ಮತ್ತು ಭಾರೀ ಪರಿಹಾರವನ್ನು ಪಾವತಿಸುವುದನ್ನು ತಪ್ಪಿಸಲು ಯೋಜನೆಯನ್ನು ಮರುವಿನ್ಯಾಸಗೊಳಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಬಿಆರ್‌ಎಸ್‌, ಕೇಂದ್ರದಿಂದ 11 ರೀತಿಯ ಅನುಮತಿಗಳನ್ನು ಪಡೆದ ನಂತರವೇ ಬಿಆರ್‌ಎಸ್ ಸರ್ಕಾರವು ಕಾಳೇಶ್ವರಂ ಯೋಜನೆಯನ್ನು ಕೈಗೆತ್ತಿಕೊಂಡಿತ್ತು. ನ್ಯಾಯಾಂಗ ತನಿಖೆ ಪ್ರಾರಂಭವಾಗುವ ಮೊದಲೇ ಕಾಂಗ್ರೆಸ್ ಸರ್ಕಾರದ ಸಚಿವರು ತೀರ್ಪು ನೀಡುತ್ತಿರುವುದು ಆಶ್ಚರ್ಯಕರವಾಗಿದೆ ಎಂದಿದೆ.

ಕಾಳೇಶ್ವರಂ ಏತ ನೀರಾವರಿ ಯೋಜನೆ ತೆಲಂಗಾಣದ ಈ ಹಿಂದಿನ ಬಿಆರ್‌ಎಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ. 10 ವರ್ಷಗಳ ತೆಲಂಗಾಣ ಬಿಆರ್‌ಎಸ್‌ ಸರ್ಕಾರದ ಅವಧಿಯಲ್ಲಿ ಪೂರ್ಣಗೊಳಿಸಿದ ಅತ್ಯಂತ ದೊಡ್ಡ ಯೋಜನೆ ಇದು ಎಂದು ಪರಿಗಣಿಸಲಾಗಿದೆ. ಕಾಳೇಶ್ವರಂ ವಿಶ್ವದ ಅತೀ ದೊಡ್ಡ ಏತ ನೀರಾವರಿ ಯೋಜನೆಯೂ ಹೌದು. ಬಿಆರ್‌ಎಸ್‌ ಸರ್ಕಾರ ಬಹಳ ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದ ಯೋಜನೆಯಲ್ಲಿ ಲೋಪದ ಆರೋಪ ಮಾಡಿರುವ ನೂತನ ಕಾಂಗ್ರೆಸ್ ಸರ್ಕಾರ ನ್ಯಾಯಾಂಗ ತನಿಖೆಗೆ ಮುಂದಾಗಿದೆ.

ಇದನ್ನೂ ಓದಿ : ಪಿಂಚಣಿ ಅರ್ಹತಾ ವಯಸ್ಸು 50ಕ್ಕೆ ಇಳಿಕೆ, ಶೇ.75% ಉದ್ಯೋಗ ಸ್ಥಳೀಯರಿಗೆ ಮೀಸಲು: ಹೇಮಂತ್ ಸುರೇನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...