Homeಮುಖಪುಟಜಾತಿ ಗಣತಿಗೆ ನಿರ್ಣಯ ಅಂಗೀಕರಿಸಿದ ತೆಲಂಗಾಣ ವಿಧಾನಸಭೆ

ಜಾತಿ ಗಣತಿಗೆ ನಿರ್ಣಯ ಅಂಗೀಕರಿಸಿದ ತೆಲಂಗಾಣ ವಿಧಾನಸಭೆ

- Advertisement -
- Advertisement -

ಮುಸ್ಲಿಮರು ಸೇರಿದಂತೆ ರಾಜ್ಯದ ಎಲ್ಲಾ ಸಮುದಾಯಗಳನ್ನು ಒಳಗೊಂಡ ಜಾತಿ ಗಣತಿ ನಡೆಸುವ ನಿರ್ಣಯವನ್ನು ತೆಲಂಗಾಣ ವಿಧಾನಸಭೆ ಶುಕ್ರವಾರ ಸರ್ವಾನುಮತದಿಂದ ಅಂಗೀಕರಿಸಿದೆ.

ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ ಅವರು ಬಿಆರ್‌ಎಸ್, ಎಐಎಂಐಎಂ ಮತ್ತು ಸಿಪಿಐ ಸದಸ್ಯರು ಎತ್ತಿರುವ ಪ್ರಶ್ನೆಗಳಿಗೆ ಉತ್ತರಿಸಿದರು. ತಜ್ಞರ ನೇಮಕ ಸೇರಿದಂತೆ ಸದಸ್ಯರು ನೀಡುವ ಪ್ರತಿಯೊಂದು ಸಲಹೆಯನ್ನು ಪರಿಗಣಿಸಲು ಕಾಂಗ್ರೆಸ್ ಸರ್ಕಾರ ಪ್ರಯತ್ನಿಸಲಿದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆಯ ನಂತರ ಜಾತಿ ಗಣತಿ ನಿರ್ಣಯವನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ. ಕಾನೂನು ಇಲಾಖೆ ಪರಿಶೀಲನೆ ನಡೆಸಿದ ಬಳಿಕ ನಿರ್ಣಯ ಮಂಡನೆಯಾಗಿದೆ.

“ಜಾತಿ ಗಣತಿಗೆ ಯಾವುದೇ ಕಾನೂನು ತೊಡಕು ಉಂಟಾಗದಂತೆ ನಾವು ಕ್ರಮಕೈಗೊಳ್ಳುತ್ತೇವೆ. ಬಿಆರ್‌ಎಸ್ ಮತ್ತು ಇತರ ಪಕ್ಷಗಳ ಕೆಲವು ಶಾಸಕರು ಜಾತಿ ಗಣತಿ ಬಿಹಾರ ಮತ್ತು ಕರ್ನಾಟಕದಲ್ಲಿ ಕಾನೂನು ತೊಡಕುಗಳನ್ನು ಎದುರಿಸುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಹಾಗಾಗಿ, ನಿರ್ಣಯ ಅಂಗೀಕರಿಸುವ ಮೊದಲೇ ನಾವು ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿದ್ದೇವೆ. ಮತ್ತೊಮ್ಮೆ ಅವರ ಜೊತೆ ಮಾತುಕತೆ ನಡೆಸಲಾಗುವುದು. ವಿರೋಧ ಪಕ್ಷದ ಸದಸ್ಯರು ಸೇರಿದಂತೆ ಎಲ್ಲರು ನೀಡುವ ಸಲಹೆಗಳನ್ನು ಸ್ವೀಕರಿಸುತ್ತೇವೆ” ಎಂದು ಡಿಸಿಎಂ ಭಟ್ಟಿ ವಿಕ್ರಮಾರ್ಕ ತಿಳಿಸಿದ್ದಾರೆ.

ಸಾರ್ವತ್ರಿಕ ಚುನಾವಣೆಗೂ ಮುನ್ನ ಜಾತಿ ಗಣತಿಯ ಮಾರ್ಗಸೂಚಿ ರೂಪಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದ ಡಿಸಿಎಂ, ಗಣತಿ ಪೂರ್ಣಗೊಂಡ ಬಳಿಕ ಸಮಗ್ರ ಕುಟುಂಬ ಸಮೀಕ್ಷೆಯಂತೆ ರಾಜ್ಯದಲ್ಲಿನ ಹಿಂದುಳಿದ ವರ್ಗಗಳ ಜನ ಸಂಖ್ಯೆಯ ಶೇಖಡವಾರು ಮಾಹಿತಿ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಜಾತಿ ಗಣತಿಯ ವರದಿಯ ಆಧಾರದ ಮೇಲೆ ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಉನ್ನತಿಗಾಗಿ ಕ್ರಾಂತಿಕಾರಿ ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ. ಹಿಂದುಳಿದ ವರ್ಗಗಳಿಗೆ ನೀಡಿರುವ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಜಾತಿ ಗಣತಿ ನಿರ್ಣಯವು ಮೊದಲ ಹೆಜ್ಜೆಯಾಗಿದೆ ಎಂದು ಭಟ್ಟಿ ವಿಕ್ರಮಾರ್ಕ ತಿಳಿಸಿದ್ದಾರೆ.

ಇದನ್ನೂ ಓದಿ: ‘ಮೈತ್ರಿ ಬಾಗಿಲು ತೆರೆದಿದೆ’ ಎಂಬ ಲಾಲೂ ಹೇಳಿಕೆ; ಸಿಎಂ ನಿತೀಶ್‌ಕುಮಾರ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...