Homeಮುಖಪುಟಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಶೇ.42ರಷ್ಟು ಮೀಸಲಾತಿ: ಆದೇಶ ಹೊರಡಿಸಿದ ತೆಲಂಗಾಣ ಸರ್ಕಾರ

ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಶೇ.42ರಷ್ಟು ಮೀಸಲಾತಿ: ಆದೇಶ ಹೊರಡಿಸಿದ ತೆಲಂಗಾಣ ಸರ್ಕಾರ

- Advertisement -
- Advertisement -

ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಶೇ.42ರಷ್ಟು ಮೀಸಲಾತಿ ಕಲ್ಪಿಸಲು ತೆಲಂಗಾಣ ಸರ್ಕಾರ ಶುಕ್ರವಾರ (ಸೆ.26) ಆದೇಶ ಹೊರಡಿಸಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹೊರಡಿಸಿದ ಸರ್ಕಾರಿ ಆದೇಶದಿಂದ (ಜಿಒ) ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸಲು ದಾರಿ ಮಾಡಿಕೊಡುವ ನಿರೀಕ್ಷೆಯಿದೆ.

ತೆಲಂಗಾಣ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ, ಪುರಸಭೆ ಆಡಳಿತ ಮತ್ತು ನಗರಾಭಿವೃದ್ಧಿ ಇಲಾಖೆ ಚುನಾವಣಾ ವೇಳಾಪಟ್ಟಿ ಘೋಷಣೆಯ ಮೊದಲು ಶೇಕಡ 42ರಷ್ಟು ಸ್ಥಾನಗಳನ್ನು ಹಿಂದುಳಿದ ವರ್ಗಗಳಿಗೆ ಮೀಸಲಿಡಲಿದೆ.

“ಸ್ಥಳೀಯ ಸಂಸ್ಥೆಗಳ ಹಿಂದುಳಿದಿರುವಿಕೆಯ ಸ್ವರೂಪ ಮತ್ತು ಪರಿಣಾಮಗಳ ಬಗ್ಗೆ ಸಮಕಾಲೀನ ಕಠಿಣ ಪ್ರಾಯೋಗಿಕ ಪರಿಶೀಲನೆ ನಡೆಸಲು ಮತ್ತು ಮೀಸಲಾತಿಗಳ ಅನುಪಾತವನ್ನು ನಿರ್ದಿಷ್ಟಪಡಿಸಲು” ನವೆಂಬರ್ 2024ರಲ್ಲಿ ಆಯೋಗವನ್ನು ರಚಿಸಲಾಗಿತ್ತು ಎಂದು ಸರ್ಕಾರಿ ಆದೇಶ ಹೇಳಿದೆ.

ಜಾತಿ ಸಮೀಕ್ಷೆಯ ಪ್ರಾಯೋಗಿಕ ದತ್ತಾಂಶವನ್ನು ವಿಶ್ಲೇಷಿಸಿದ ಆಯೋಗವು ಮಾರ್ಚ್ 2025ರಲ್ಲಿ ತನ್ನ ವರದಿಯನ್ನು ಸಲ್ಲಿಸಿತ್ತು. ರಾಜ್ಯದಲ್ಲಿ ಶೇಕಡಾ 56.33 ರಷ್ಟಿರುವ ಜನಸಂಖ್ಯೆಗೆ ಹೋಲಿಸಿದರೆ ಹಿಂದುಳಿದ ವರ್ಗದವರು ತುಲನಾತ್ಮಕವಾಗಿ ಹಿಂದುಳಿದಿದ್ದಾರೆ ಎಂದು ವರದಿ ಹೇಳಿತ್ತು. ರಾಜಕೀಯ ಪ್ರಾತಿನಿಧ್ಯಗಳಲ್ಲಿ, ವಿಶೇಷವಾಗಿ ಸ್ಥಳೀಯ ಸಂಸ್ಥೆಗಳಲ್ಲಿ ಕನಿಷ್ಠ ಶೇಕಡ 42 ರಷ್ಟು ಮೀಸಲಾತಿಯನ್ನು ಶಿಫಾರಸು ಮಾಡಿತ್ತು ಎಂದು ಆದೇಶ ವಿವರಿಸಿದೆ.

ಆಗಸ್ಟ್ 31ರಂದು ವಿಧಾನಸಭೆ ಅಂಗೀಕರಿಸಿದ ಎರಡು ಮಸೂದೆಗಳು ಇನ್ನೂ ರಾಜ್ಯಪಾಲರ ಅನುಮೋದನೆಗಾಗಿ ಕಾಯುತ್ತಿರುವುದರಿಂದ ರಾಜ್ಯ ಸರ್ಕಾರವು ಈ ಆದೇಶವನ್ನು ಹೊರಡಿಸಿದೆ ಎಂದು ವರದಿಯಾಗಿದೆ.

ವಿಧಾನಸಭೆ ಅಂಗೀಕರಿಸಿರುವ ತೆಲಂಗಾಣ ಪುರಸಭೆಗಳ (ಮೂರನೇ ತಿದ್ದುಪಡಿ) ಮಸೂದೆ, 2025 ಮತ್ತು ತೆಲಂಗಾಣ ಪಂಚಾಯತ್ ರಾಜ್ (ಮೂರನೇ ತಿದ್ದುಪಡಿ) ಮಸೂದೆ, 2025, ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಶೇಕಡ 42ಕ್ಕೆ ಹೆಚ್ಚಿಸುವ ಮತ್ತು ಎಲ್ಲಾ ವರ್ಗಗಳ ಮೀಸಲಾತಿಯ 50ರ ಮಿತಿಯನ್ನು ತೆಗೆದುಹಾಕುವ ಉದ್ದೇಶ ಹೊಂದಿದೆ.

ಮಾರ್ಚ್ ಆರಂಭದಲ್ಲಿ, ಶಿಕ್ಷಣ, ಉದ್ಯೋಗ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಶೇಕಡ 42ಕ್ಕೆ ಹೆಚ್ಚಿಸಲು ವಿಧಾನಸಭೆ ಎರಡು ಮಸೂದೆಗಳನ್ನು ಅಂಗೀಕರಿಸಿತ್ತು. ಈ ಎರಡೂ ಮಸೂದೆಗಳಿಗೆ ಇನ್ನೂ ರಾಷ್ಟ್ರಪತಿಗಳ ಅನುಮೋದನೆ ದೊರೆತಿಲ್ಲ.

ಮುಖ್ಯಮಂತ್ರಿ ರೇವಂತ್ ರೆಡ್ಡಿ ನೇತೃತ್ವದಲ್ಲಿ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ತೆಲಂಗಾಣದ  ಸಚಿವರು, ಸಂಸದರು ಮತ್ತು ಶಾಸಕರು ಕೇಂದ್ರ ಸರ್ಕಾರ ಅಥವಾ ರಾಷ್ಟ್ರಪತಿ ಎರಡು ಮಸೂದೆಗಳಿಗೆ ಅನುಮೋದನೆ ನೀಡಬೇಕೆಂದು ಒತ್ತಾಯಿಸಿದ್ದರು.

ಮಸೂದೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಲು ರಾಷ್ಟ್ರಪತಿಗಳ ಅಪಾಯಿಂಟ್ಮೆಂಟ್ ಕೂಡ  ಕೋರಿದ್ದೇವೆ. ಆದರೆ, ರಾಷ್ಟ್ರಪತಿ ಭವನದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಸಿಎಂ ರೇವಂತ್ ರೆಡ್ಡಿ ತಿಳಿಸಿದ್ದಾರೆ.

ಕೇಂದ್ರದಿಂದ ಸಂಸದೀಯ ಸ್ಥಾಯಿ ಸಮಿತಿಗಳ ಅವಧಿ ವಿಸ್ತರಣೆ ಸಾಧ್ಯತೆ: ಶಶಿ ತರೂರ್‌ ಸ್ಥಾನ ಅಬಾಧಿತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...