Homeಮುಖಪುಟತೆಲಂಗಾಣ: ಹೊಸ ಪಕ್ಷ ಪ್ರಾರಂಭಿಸಲಿರುವ ಆಂಧ್ರ ಸಿಎಂ ಜಗನ್ ಸಹೋದರಿ ಶರ್ಮಿಳಾ

ತೆಲಂಗಾಣ: ಹೊಸ ಪಕ್ಷ ಪ್ರಾರಂಭಿಸಲಿರುವ ಆಂಧ್ರ ಸಿಎಂ ಜಗನ್ ಸಹೋದರಿ ಶರ್ಮಿಳಾ

- Advertisement -
- Advertisement -

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್.ರಾಜಶೇಖರ ರೆಡ್ಡಿ ಅವರ ಪುತ್ರಿ ವೈ.ಎಸ್.ಶರ್ಮಿಳಾ ರೆಡ್ಡಿ ತೆಲಂಗಾಣದಲ್ಲಿ ತಮ್ಮ ರಾಜಕೀಯ ಪಕ್ಷವನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ. ತಮ್ಮ ತಂದೆಯ ಜನ್ಮ ದಿನವಾದ ಜುಲೈ 8 ರಂದು ತೆಲಂಗಾಣದಲ್ಲಿ ಅಧಿಕೃತವಾಗಿ ಪಕ್ಷ ಘೋಷಿಸುವುದಾಗಿ ತಿಳಿಸಿದ್ದಾರೆ.

ವೈ.ಎಸ್.ಶರ್ಮಿಳಾ ಅವರ ನಿರ್ಧಾರವನ್ನು ಅವರ ತಾಯಿ ವೈ.ಎಸ್.ವಿಜಯಲಕ್ಷ್ಮಿ ಬೆಂಬಲಿಸಿದ್ದು, ತಮ್ಮ ಮಗಳು ತೆಲಂಗಾಣದ ಜನರ ಸೇವೆ ಮಾಡಲು ರಾಜಕೀಯ ಆಯ್ಕೆ ಮಾಡಿಕೊಂಡಿರುವುದಕ್ಕೆ ಸಂತೋಷವಾಗಿದೆ ಎಂದು ಹೇಳಿದ್ದಾರೆ. ಜೊತೆಗೆ ತನ್ನ ಮಗಳಿಗೆ ಆಕೆಯ ತಂದೆಯಂತೆಯೇ ಧೈರ್ಯವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನು, ತೆಲಂಗಾಣದವರೆಗೆ ತಮ್ಮ ಪಕ್ಷವನ್ನು ವಿಸ್ತರಿಸಲು ಯೋಚಿಸಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ, ತೆಲಂಗಾಣದಲ್ಲಿ ತಮ್ಮ ತಂಗಿಯ ರಾಜಕೀಯ ಯೋಜನೆಗಳಿಂದ ದೂರವಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಆಪರೇಷನ್ ಕಮಲ ಭೀತಿ: ಕಾಂಗ್ರೆಸ್ ಮೈತ್ರಿಕೂಟದ 20 ಅಭ್ಯರ್ಥಿಗಳು ಜೈಪುರ ರೆಸಾರ್ಟ್‌ಗೆ!

ವೈ.ಎಸ್.ರಾಜಶೇಖರ ರೆಡ್ಡಿ ಅವರ ಪುತ್ರಿ ವೈ.ಎಸ್.ಶರ್ಮಿಳಾ ರೆಡ್ಡಿ, ಅವರ ಪಕ್ಷದ ಹೆಸರು, ಲೋಗೊ, ಧ್ವಜ ಮತ್ತು ಸಿದ್ಧಾಂತವನ್ನು ಜುಲೈ 8 ರಂದು ಅನಾವರಣಗೊಳಿಸಲಾಗುವುದು ಎಂದು ಮಾಹಿತಿ ನೀಡಲಾಗಿದೆ. ಇನ್ನು 2023 ರಲ್ಲಿ ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

ತೆಲಂಗಾಣದ ಆಡಳಿತರೂಢ ಪಕ್ಷ ತೆಲಂಗಾಣ ರಾಷ್ಟ್ರ ಸಮಿತಿ ಸರ್ಕಾರ 1.91 ಲಕ್ಷ ಉದ್ಯೋಗ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಒತ್ತಾಯಿಸಿ, ಏಪ್ರಿಲ್ 15 ರಂದು ಶರ್ಮಿಳಾ ನಿರುದ್ಯೋಗಿ ಯುವಕರ ಪರವಾಗಿ ಮೂರು ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ಇದು ಸದ್ಯ ತೆಲಂಗಾಣದಲ್ಲಿ ರಾಜಕೀಯ ಚರ್ಚೆಯ ವಿಷಯವಾಗಿದೆ.

“ತೆಲಂಗಾಣಕ್ಕೆ ಬರಬೇಕಾದ ಒಂದು ಹನಿ ನೀರನ್ನು ಸಹ ಬೇರೆ ರಾಜ್ಯಕ್ಕೆ ಹೋಗಲು ನಾನು ಬಿಡುವುದಿಲ್ಲ” ಎಂದು ಶರ್ಮಿಳಾ ಸಂಕಲ್ಪ ರ್‍ಯಾಲಿಯಲ್ಲಿ ಹೇಳಿದ್ದಾರೆ. ಹಿಂದಿನ ಆಂಧ್ರಪ್ರದೇಶದ ತೆಲಂಗಾಣ ಮತ್ತು ಆಂಧ್ರ ಪ್ರದೇಶಗಳ ನಡುವೆ ನೀರು ವಿವಾದದ ವಿಷಯವಾಗಿದೆ.

ತೆಲಂಗಾಣದಲ್ಲಿ ಟಿಆರ್‌ಎಸ್ ಪ್ರಬಲ ರಾಜಕೀಯ ಪಕ್ಷವಾಗಿದೆ. ಕಾಂಗ್ರೆಸ್ ದುರ್ಬಲಗೊಂಡಿದೆ, ಮತ್ತು ಬಿಜೆಪಿ ಪ್ರತಿಪಕ್ಷದ ಜಾಗದಲ್ಲಿ ಸ್ಥಾನ ಗಿಟ್ಟಿಸಲು ಪ್ರಯತ್ನಿಸುತ್ತಿದೆ. ಈ ನಡುವೆ ಶರ್ಮಿಳಾ ರೆಡ್ಡಿಯವರ ಹೊಸ ರಾಜಕೀಯ ಪಕ್ಷ ಹುಟ್ಟಿಕೊಳ್ಳುತ್ತಿದೆ.


ಇದನ್ನೂ ಓದಿ: ರೈತರ ಮೇಲೆ ರಸಗೊಬ್ಬರ ದರ ಹೆಚ್ಚಳದ ಬರೆ: ಸರ್ಕಾರದ ಕ್ರಮ ಖಂಡಿಸಿದ ಎಸ್‌ಕೆಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...