Homeಮುಖಪುಟತೆಲಂಗಾಣ| ಕೆಸಿಆರ್ ಹೊಗಳಿ, ಸಿಎಂ ರೇವಂತ್ ರೆಡ್ಡಿಯನ್ನು ಟೀಕಿಸಿದ ರೈತನ ವಿಡಿಯೋ ಪೋಸ್ಟ್ : ಪತ್ರಕರ್ತನ...

ತೆಲಂಗಾಣ| ಕೆಸಿಆರ್ ಹೊಗಳಿ, ಸಿಎಂ ರೇವಂತ್ ರೆಡ್ಡಿಯನ್ನು ಟೀಕಿಸಿದ ರೈತನ ವಿಡಿಯೋ ಪೋಸ್ಟ್ : ಪತ್ರಕರ್ತನ ಬಂಧನ

- Advertisement -
- Advertisement -

ಡಿಜಿಟಲ್ ನ್ಯೂಸ್ ಪೋರ್ಟಲ್ ‘ತೆಲುಗು ಸ್ಕ್ರೈಬ್‌’ನ ಪತ್ರಕರ್ತ ಗೌತಮ್ ಪೋತಗೋನಿ ಅವರನ್ನು ಅಕ್ಟೋಬರ್ 7ರಂದು ಸೋಮವಾರ ತೆಲಂಗಾಣದಲ್ಲಿ ಬಂಧಿಸಲಾಗಿದೆ. ಅವರ ವಿರುದ್ದ ರಾಜಕೀಯ ಸಂಘರ್ಷ ಸೃಷ್ಟಿಗೆ ಪ್ರಯತ್ನ, ಸಾರ್ವಜನಿಕ ಸಾಮರಸ್ಯ ಕದಡುವುದು ಮತ್ತು ಸಿಎಂ ರೇವಂತ್ ರೆಡ್ಡಿಯನ್ನು ಅವಮಾನಿಸಿದ ಆರೋಪ ಹೊರಿಸಲಾಗಿದೆ.

ಗೌತಮ್ ಅವರು ತನ್ನ ಎಕ್ಸ್ ಖಾತೆಯಲ್ಲಿ ಏಳು ತಿಂಗಳ ಹಿಂದೆ, ಅಂದರೆ ಕಳೆದ ಮಾರ್ಚ್‌ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದರು. ವಿಡಿಯೋದಲ್ಲಿ ರೈತರೊಬ್ಬರು ಮಾಜಿ ಸಿಎಂ ಕೆಸಿಆರ್ ನೇತೃತ್ವದ ಸರ್ಕಾರದ ಕಾರ್ಯಕ್ರಮಗಳನ್ನು ಹೊಗಳಿ, ಕಾಂಗ್ರೆಸ್ ನೇತೃತ್ವದ ಪ್ರಸ್ತುತ ಸರ್ಕಾರದ ವಿರುದ್ಧ ತಮ್ಮ ಅಸಮಾಧಾನ ಹೊರ ಹಾಕಿದ ದೃಶ್ಯವಿತ್ತು ಎಂದು ದಿ ನ್ಯೂಸ್‌ ಮಿನಿಟ್ ವರದಿ ಮಾಡಿದೆ.

ಸೆಪ್ಟೆಂಬರ್‌ನಲ್ಲಿ ಪತ್ರಕರ್ತ ಗೌತಮ್ ಪೋತಗೋನಿ ವಿರುದ್ಧ ದಾಖಲಿಸಲಾದ ನಾಲ್ಕು ಎಫ್‌ಐಆರ್‌ಗಳನ್ನು ಆಧರಿಸಿ ಬಂಧನ ನಡೆದಿದೆ. ಅವುಗಳಲ್ಲಿ ಮೂರು ಈ ಅವರು ವಿಡಿಯೋ ಪೋಸ್ಟ್ ಮಾಡಿದ್ದಕ್ಕೆ ಸಂಬಂಧಿಸಿವೆ. ಮಾರ್ಚ್‌ನಲ್ಲಿ ವೈರಲ್ ಆದ ವಿಡಿಯೋ ಸಂಬಂಧ ಸೆಪ್ಟೆಂಬರ್‌ನಲ್ಲಿ ಏಕೆ ಪ್ರಕರಣ ದಾಖಲಿಸಲಾಗಿದೆ ಎಂಬುವುದು ಸ್ಪಷ್ಟವಾಗಿಲ್ಲ ಎಂದು ವರದಿ ತಿಳಿಸಿದೆ.

ಮಾರ್ಚ್ 12, 2024 ರಂದು, ಗೌತಮ್ ಅವರು ನಲ್ಗೊಂಡದ ರೈತರೊಬ್ಬರ ವಿಡಿಯೋವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು. ಜೊತೆಗೆ “ನನ್ನ ಪ್ರವಾಸದ ಸಮಯದಲ್ಲಿ, ನಾನು ನಿನ್ನೆ ಹೃದಯವಿದ್ರಾವಕ ಘಟನೆಯೊಂದನ್ನು ಎದುರಿಸಿದೆ. ನಲ್ಗೊಂಡ ಜಿಲ್ಲೆಯ ಮುಶಂಪಲ್ಲಿ ಗ್ರಾಮದ ಮಲ್ಲಯ್ಯ ಎಂಬ ರೈತ ನನಗೆ ಖುದ್ದಾಗಿ ವಿಡಿಯೋ ರೆಕಾರ್ಡ್ ಮಾಡಿ ಕೆಸಿಆರ್ ಅವರಿಗೆ ಕಳುಹಿಸುವಂತೆ ಕೇಳಿಕೊಂಡರು” ಎಂದು ಬರೆದುಕೊಂಡಿದ್ದರು.

ಗೌತಮ್ ಹಂಚಿಕೊಂಡಿದ್ದ ವಿಡಿಯೋದಲ್ಲಿ ರೈತ ಮಲ್ಲಯ್ಯ ಅವರು ಮಾಜಿ ಸಿಎಂ ಕೆಸಿಆರ್ ನೇತೃತ್ವದ ಬಿಆರ್‌ಎಸ್ ಸರ್ಕಾರದ ಕಾರ್ಯಕ್ರಮವಾದ ರೈತ ಬಂಧು ಅನ್ನು ಹೊಗಳಿದ್ದರು. ಬಿಆರ್‌ಎಸ್ ಸರ್ಕಾರ ಪರಿಚಯಿಸಿದ ರೈತರ ಹೂಡಿಕೆ ಬೆಂಬಲ ಯೋಜನೆ ಬಗ್ಗೆ ಹೆಚ್ಚು ಮಾತನಾಡಿದ್ದರು. ಪ್ರಸ್ತುತ ಆಡಳಿತದಲ್ಲಿ ತಾನು ಸಾಲದ ಸುಳಿಯಲ್ಲಿ ಸಿಲುಕಿದ್ದೇನೆ ಎಂದಿದ್ದರು.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ತೆಲುಗು ಸ್ಕ್ರೈಬ್ ತೆಲಂಗಾಣದಲ್ಲಿ ಕಾಂಗ್ರೆಸ್ ಅನ್ನು ಟೀಕಿಸುವ ಮತ್ತು ಪ್ರತಿಪಕ್ಷ ಬಿಆರ್‌ಎಸ್‌ ಅನ್ನು ಬೆಂಬಲಿಸುವ ಸುದ್ದಿ ಸಂಸ್ಥೆಯಾಗಿದೆ.

ಶೇಕ್ ಅಶ್ರಫ್ ಎಂಬ ಉದ್ಯಮಿ ಮತ್ತು ಅನುಮಕೊಂಡ ಭಾರ್ಗವ್ ಎಂಬ ವಿದ್ಯಾರ್ಥಿ ನೀಡಿದ ದೂರಿನ ಆಧಾರದ ಮೇಲೆ ಸೆಪ್ಟೆಂಬರ್ 28 ರಂದು ಖಾರ್ಕಾನಾ ಮತ್ತು ವನಸ್ಥಲಿಪುರಂ ಪೊಲೀಸ್ ಠಾಣೆಗಳಲ್ಲಿ ಗೌತಮ್ ವಿರುದ್ದ ಮೊದಲ ಮತ್ತು ಎರಡನೇ ಎಫ್‌ಐಆರ್ ದಾಖಲಾಗಿದೆ. ಮಂಚಾಲ್ ಪೊಲೀಸ್ ಠಾಣೆಯಲ್ಲಿ ಐ ರಾಮಚಂದ್ರ ರೆಡ್ಡಿ ಎಂಬ ರೈತ ನೀಡಿದ ದೂರಿನ ಆಧಾರದ ಮೇಲೆ ಸೆಪ್ಟೆಂಬರ್ 29 ರಂದು ಗೌತಮ್ ವಿರುದ್ಧ ಮೂರನೇ ಎಫ್‌ಐಆರ್ ದಾಖಲಿಸಲಾಗಿದೆ.

ಮೂವರ ದೂರುಗಳಲ್ಲೂ “ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಪೋಸ್ಟ್‌ಗಳನ್ನು ಹಾಕಿದ್ದು. ಅದು ನಮ್ಮ ತೆಲಂಗಾಣದ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಮತ್ತು ತೆಲಂಗಾಣ ಸರ್ಕಾರವನ್ನು ಅವಹೇಳನ ಮಾಡಿದೆ” ಎಂದು ಆರೋಪಿಸಲಾಗಿದೆ.

“ಅಂತಹ ಪೋಸ್ಟ್‌ಗಳು ರಾಜಕೀಯ ಉದ್ವಿಗ್ನತೆ ಮತ್ತು ಗುಂಪುಗಳ ನಡುವೆ ದ್ವೇಷವನ್ನು ಉಂಟು ಮಾಡುತ್ತವೆ. ಸಾರ್ವಜನಿಕರ ನಡುವಿನ ಸಾಮಾರಸ್ಯ ಕೆಡಸುತ್ತವೆ. ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗೆ ಕಾರಣವಾಗಬಹುದು. ವಿಡಿಯೋ ಪೋಸ್ಟ್ ಮಾಡಿದವರು ಅನಗತ್ಯ ವದಂತಿಗಳನ್ನು ಹರಡುತ್ತಿದ್ದಾರೆ. ಅದು ಸಾರ್ವಜನಿಕರನ್ನು ದಾರಿ ತಪ್ಪಿಸುವಂತಿದೆ. ಅದರಿಂದಾಗಿ ಸಾರ್ವಜನಿಕರ ಶಾಂತಿ ಮತ್ತು ನೆಮ್ಮದಿಗೆ ಭಂಗ ಉಂಟಾಗುತ್ತದೆ” ಎಂದು ಮೂವರ ದೂರುಗಳಲ್ಲಿ ಹೇಳಲಾಗಿದೆ.

ಜೆ ಸಂಜೀವ್ ರೆಡ್ಡಿ ಎಂಬ ವ್ಯಕ್ತಿಯ ದೂರಿನ ಆಧಾರದ ಮೇಲೆ ಸೈಬರ್ ಕ್ರೈಂ ಪೊಲೀಸರು ಗೌತಮ್ ಮತ್ತು ತೆಲುಗು ಸ್ಕ್ರೈಬ್ ಸಂಸ್ಥೆಯ ವಿರುದ್ದ ನಾಲ್ಕನೇ ಎಫ್‌ಐಆರ್ ದಾಖಲಿಸಿದ್ದಾರೆ. ಈ ದೂರಿನಲ್ಲಿ ಸುದ್ದಿ ಸಂಸ್ಥೆ ಸಿಎಂ ವಿರುದ್ಧ ಅವಹೇಳನಕಾರಿ ವಿಡಿಯೋ ಪೋಸ್ಟ್ ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು, ಮೂರು ಯುಆರ್‌ಎಲ್‌ಗಳನ್ನು ಅಳಿಸಬೇಕು ಎಂದು ಒತ್ತಾಯಿಸಲಾಗಿದೆ. ಅವುಗಳಲ್ಲಿ ಒಂದು ಅದಿಲಾಬಾದ್‌ನಲ್ಲಿ ಹಿರಿಯ ವ್ಯಕ್ತಿಯೊಬ್ಬರು ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಸರ್ಕಾರ ಕೆಡವಬೇಕು ಎಂದು ಅವಾಚ್ಯವಾಗಿ ನಿಂದಿಸಿರುವುದು ಎಂದು ನ್ಯೂಸ್ ಮಿನಿಟ್ ವರದಿ ತಿಳಿಸಿದೆ.

ಇದನ್ನೂ ಓದಿ : ಹರಿಯಾಣ | 90ರಲ್ಲಿ 86 ಶಾಸಕರು ಕೋಟ್ಯಾಧಿಪತಿ; 12 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ – ಎಡಿಆರ್ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...