Homeಮುಖಪುಟತೆಲಂಗಾಣ| ಕೆಸಿಆರ್ ಹೊಗಳಿ, ಸಿಎಂ ರೇವಂತ್ ರೆಡ್ಡಿಯನ್ನು ಟೀಕಿಸಿದ ರೈತನ ವಿಡಿಯೋ ಪೋಸ್ಟ್ : ಪತ್ರಕರ್ತನ...

ತೆಲಂಗಾಣ| ಕೆಸಿಆರ್ ಹೊಗಳಿ, ಸಿಎಂ ರೇವಂತ್ ರೆಡ್ಡಿಯನ್ನು ಟೀಕಿಸಿದ ರೈತನ ವಿಡಿಯೋ ಪೋಸ್ಟ್ : ಪತ್ರಕರ್ತನ ಬಂಧನ

- Advertisement -
- Advertisement -

ಡಿಜಿಟಲ್ ನ್ಯೂಸ್ ಪೋರ್ಟಲ್ ‘ತೆಲುಗು ಸ್ಕ್ರೈಬ್‌’ನ ಪತ್ರಕರ್ತ ಗೌತಮ್ ಪೋತಗೋನಿ ಅವರನ್ನು ಅಕ್ಟೋಬರ್ 7ರಂದು ಸೋಮವಾರ ತೆಲಂಗಾಣದಲ್ಲಿ ಬಂಧಿಸಲಾಗಿದೆ. ಅವರ ವಿರುದ್ದ ರಾಜಕೀಯ ಸಂಘರ್ಷ ಸೃಷ್ಟಿಗೆ ಪ್ರಯತ್ನ, ಸಾರ್ವಜನಿಕ ಸಾಮರಸ್ಯ ಕದಡುವುದು ಮತ್ತು ಸಿಎಂ ರೇವಂತ್ ರೆಡ್ಡಿಯನ್ನು ಅವಮಾನಿಸಿದ ಆರೋಪ ಹೊರಿಸಲಾಗಿದೆ.

ಗೌತಮ್ ಅವರು ತನ್ನ ಎಕ್ಸ್ ಖಾತೆಯಲ್ಲಿ ಏಳು ತಿಂಗಳ ಹಿಂದೆ, ಅಂದರೆ ಕಳೆದ ಮಾರ್ಚ್‌ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದರು. ವಿಡಿಯೋದಲ್ಲಿ ರೈತರೊಬ್ಬರು ಮಾಜಿ ಸಿಎಂ ಕೆಸಿಆರ್ ನೇತೃತ್ವದ ಸರ್ಕಾರದ ಕಾರ್ಯಕ್ರಮಗಳನ್ನು ಹೊಗಳಿ, ಕಾಂಗ್ರೆಸ್ ನೇತೃತ್ವದ ಪ್ರಸ್ತುತ ಸರ್ಕಾರದ ವಿರುದ್ಧ ತಮ್ಮ ಅಸಮಾಧಾನ ಹೊರ ಹಾಕಿದ ದೃಶ್ಯವಿತ್ತು ಎಂದು ದಿ ನ್ಯೂಸ್‌ ಮಿನಿಟ್ ವರದಿ ಮಾಡಿದೆ.

ಸೆಪ್ಟೆಂಬರ್‌ನಲ್ಲಿ ಪತ್ರಕರ್ತ ಗೌತಮ್ ಪೋತಗೋನಿ ವಿರುದ್ಧ ದಾಖಲಿಸಲಾದ ನಾಲ್ಕು ಎಫ್‌ಐಆರ್‌ಗಳನ್ನು ಆಧರಿಸಿ ಬಂಧನ ನಡೆದಿದೆ. ಅವುಗಳಲ್ಲಿ ಮೂರು ಈ ಅವರು ವಿಡಿಯೋ ಪೋಸ್ಟ್ ಮಾಡಿದ್ದಕ್ಕೆ ಸಂಬಂಧಿಸಿವೆ. ಮಾರ್ಚ್‌ನಲ್ಲಿ ವೈರಲ್ ಆದ ವಿಡಿಯೋ ಸಂಬಂಧ ಸೆಪ್ಟೆಂಬರ್‌ನಲ್ಲಿ ಏಕೆ ಪ್ರಕರಣ ದಾಖಲಿಸಲಾಗಿದೆ ಎಂಬುವುದು ಸ್ಪಷ್ಟವಾಗಿಲ್ಲ ಎಂದು ವರದಿ ತಿಳಿಸಿದೆ.

ಮಾರ್ಚ್ 12, 2024 ರಂದು, ಗೌತಮ್ ಅವರು ನಲ್ಗೊಂಡದ ರೈತರೊಬ್ಬರ ವಿಡಿಯೋವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು. ಜೊತೆಗೆ “ನನ್ನ ಪ್ರವಾಸದ ಸಮಯದಲ್ಲಿ, ನಾನು ನಿನ್ನೆ ಹೃದಯವಿದ್ರಾವಕ ಘಟನೆಯೊಂದನ್ನು ಎದುರಿಸಿದೆ. ನಲ್ಗೊಂಡ ಜಿಲ್ಲೆಯ ಮುಶಂಪಲ್ಲಿ ಗ್ರಾಮದ ಮಲ್ಲಯ್ಯ ಎಂಬ ರೈತ ನನಗೆ ಖುದ್ದಾಗಿ ವಿಡಿಯೋ ರೆಕಾರ್ಡ್ ಮಾಡಿ ಕೆಸಿಆರ್ ಅವರಿಗೆ ಕಳುಹಿಸುವಂತೆ ಕೇಳಿಕೊಂಡರು” ಎಂದು ಬರೆದುಕೊಂಡಿದ್ದರು.

ಗೌತಮ್ ಹಂಚಿಕೊಂಡಿದ್ದ ವಿಡಿಯೋದಲ್ಲಿ ರೈತ ಮಲ್ಲಯ್ಯ ಅವರು ಮಾಜಿ ಸಿಎಂ ಕೆಸಿಆರ್ ನೇತೃತ್ವದ ಬಿಆರ್‌ಎಸ್ ಸರ್ಕಾರದ ಕಾರ್ಯಕ್ರಮವಾದ ರೈತ ಬಂಧು ಅನ್ನು ಹೊಗಳಿದ್ದರು. ಬಿಆರ್‌ಎಸ್ ಸರ್ಕಾರ ಪರಿಚಯಿಸಿದ ರೈತರ ಹೂಡಿಕೆ ಬೆಂಬಲ ಯೋಜನೆ ಬಗ್ಗೆ ಹೆಚ್ಚು ಮಾತನಾಡಿದ್ದರು. ಪ್ರಸ್ತುತ ಆಡಳಿತದಲ್ಲಿ ತಾನು ಸಾಲದ ಸುಳಿಯಲ್ಲಿ ಸಿಲುಕಿದ್ದೇನೆ ಎಂದಿದ್ದರು.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ತೆಲುಗು ಸ್ಕ್ರೈಬ್ ತೆಲಂಗಾಣದಲ್ಲಿ ಕಾಂಗ್ರೆಸ್ ಅನ್ನು ಟೀಕಿಸುವ ಮತ್ತು ಪ್ರತಿಪಕ್ಷ ಬಿಆರ್‌ಎಸ್‌ ಅನ್ನು ಬೆಂಬಲಿಸುವ ಸುದ್ದಿ ಸಂಸ್ಥೆಯಾಗಿದೆ.

ಶೇಕ್ ಅಶ್ರಫ್ ಎಂಬ ಉದ್ಯಮಿ ಮತ್ತು ಅನುಮಕೊಂಡ ಭಾರ್ಗವ್ ಎಂಬ ವಿದ್ಯಾರ್ಥಿ ನೀಡಿದ ದೂರಿನ ಆಧಾರದ ಮೇಲೆ ಸೆಪ್ಟೆಂಬರ್ 28 ರಂದು ಖಾರ್ಕಾನಾ ಮತ್ತು ವನಸ್ಥಲಿಪುರಂ ಪೊಲೀಸ್ ಠಾಣೆಗಳಲ್ಲಿ ಗೌತಮ್ ವಿರುದ್ದ ಮೊದಲ ಮತ್ತು ಎರಡನೇ ಎಫ್‌ಐಆರ್ ದಾಖಲಾಗಿದೆ. ಮಂಚಾಲ್ ಪೊಲೀಸ್ ಠಾಣೆಯಲ್ಲಿ ಐ ರಾಮಚಂದ್ರ ರೆಡ್ಡಿ ಎಂಬ ರೈತ ನೀಡಿದ ದೂರಿನ ಆಧಾರದ ಮೇಲೆ ಸೆಪ್ಟೆಂಬರ್ 29 ರಂದು ಗೌತಮ್ ವಿರುದ್ಧ ಮೂರನೇ ಎಫ್‌ಐಆರ್ ದಾಖಲಿಸಲಾಗಿದೆ.

ಮೂವರ ದೂರುಗಳಲ್ಲೂ “ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಪೋಸ್ಟ್‌ಗಳನ್ನು ಹಾಕಿದ್ದು. ಅದು ನಮ್ಮ ತೆಲಂಗಾಣದ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಮತ್ತು ತೆಲಂಗಾಣ ಸರ್ಕಾರವನ್ನು ಅವಹೇಳನ ಮಾಡಿದೆ” ಎಂದು ಆರೋಪಿಸಲಾಗಿದೆ.

“ಅಂತಹ ಪೋಸ್ಟ್‌ಗಳು ರಾಜಕೀಯ ಉದ್ವಿಗ್ನತೆ ಮತ್ತು ಗುಂಪುಗಳ ನಡುವೆ ದ್ವೇಷವನ್ನು ಉಂಟು ಮಾಡುತ್ತವೆ. ಸಾರ್ವಜನಿಕರ ನಡುವಿನ ಸಾಮಾರಸ್ಯ ಕೆಡಸುತ್ತವೆ. ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗೆ ಕಾರಣವಾಗಬಹುದು. ವಿಡಿಯೋ ಪೋಸ್ಟ್ ಮಾಡಿದವರು ಅನಗತ್ಯ ವದಂತಿಗಳನ್ನು ಹರಡುತ್ತಿದ್ದಾರೆ. ಅದು ಸಾರ್ವಜನಿಕರನ್ನು ದಾರಿ ತಪ್ಪಿಸುವಂತಿದೆ. ಅದರಿಂದಾಗಿ ಸಾರ್ವಜನಿಕರ ಶಾಂತಿ ಮತ್ತು ನೆಮ್ಮದಿಗೆ ಭಂಗ ಉಂಟಾಗುತ್ತದೆ” ಎಂದು ಮೂವರ ದೂರುಗಳಲ್ಲಿ ಹೇಳಲಾಗಿದೆ.

ಜೆ ಸಂಜೀವ್ ರೆಡ್ಡಿ ಎಂಬ ವ್ಯಕ್ತಿಯ ದೂರಿನ ಆಧಾರದ ಮೇಲೆ ಸೈಬರ್ ಕ್ರೈಂ ಪೊಲೀಸರು ಗೌತಮ್ ಮತ್ತು ತೆಲುಗು ಸ್ಕ್ರೈಬ್ ಸಂಸ್ಥೆಯ ವಿರುದ್ದ ನಾಲ್ಕನೇ ಎಫ್‌ಐಆರ್ ದಾಖಲಿಸಿದ್ದಾರೆ. ಈ ದೂರಿನಲ್ಲಿ ಸುದ್ದಿ ಸಂಸ್ಥೆ ಸಿಎಂ ವಿರುದ್ಧ ಅವಹೇಳನಕಾರಿ ವಿಡಿಯೋ ಪೋಸ್ಟ್ ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು, ಮೂರು ಯುಆರ್‌ಎಲ್‌ಗಳನ್ನು ಅಳಿಸಬೇಕು ಎಂದು ಒತ್ತಾಯಿಸಲಾಗಿದೆ. ಅವುಗಳಲ್ಲಿ ಒಂದು ಅದಿಲಾಬಾದ್‌ನಲ್ಲಿ ಹಿರಿಯ ವ್ಯಕ್ತಿಯೊಬ್ಬರು ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಸರ್ಕಾರ ಕೆಡವಬೇಕು ಎಂದು ಅವಾಚ್ಯವಾಗಿ ನಿಂದಿಸಿರುವುದು ಎಂದು ನ್ಯೂಸ್ ಮಿನಿಟ್ ವರದಿ ತಿಳಿಸಿದೆ.

ಇದನ್ನೂ ಓದಿ : ಹರಿಯಾಣ | 90ರಲ್ಲಿ 86 ಶಾಸಕರು ಕೋಟ್ಯಾಧಿಪತಿ; 12 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ – ಎಡಿಆರ್ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...