Homeಮುಖಪುಟತೆಲಂಗಾಣ| ಕೆಸಿಆರ್ ಹೊಗಳಿ, ಸಿಎಂ ರೇವಂತ್ ರೆಡ್ಡಿಯನ್ನು ಟೀಕಿಸಿದ ರೈತನ ವಿಡಿಯೋ ಪೋಸ್ಟ್ : ಪತ್ರಕರ್ತನ...

ತೆಲಂಗಾಣ| ಕೆಸಿಆರ್ ಹೊಗಳಿ, ಸಿಎಂ ರೇವಂತ್ ರೆಡ್ಡಿಯನ್ನು ಟೀಕಿಸಿದ ರೈತನ ವಿಡಿಯೋ ಪೋಸ್ಟ್ : ಪತ್ರಕರ್ತನ ಬಂಧನ

- Advertisement -
- Advertisement -

ಡಿಜಿಟಲ್ ನ್ಯೂಸ್ ಪೋರ್ಟಲ್ ‘ತೆಲುಗು ಸ್ಕ್ರೈಬ್‌’ನ ಪತ್ರಕರ್ತ ಗೌತಮ್ ಪೋತಗೋನಿ ಅವರನ್ನು ಅಕ್ಟೋಬರ್ 7ರಂದು ಸೋಮವಾರ ತೆಲಂಗಾಣದಲ್ಲಿ ಬಂಧಿಸಲಾಗಿದೆ. ಅವರ ವಿರುದ್ದ ರಾಜಕೀಯ ಸಂಘರ್ಷ ಸೃಷ್ಟಿಗೆ ಪ್ರಯತ್ನ, ಸಾರ್ವಜನಿಕ ಸಾಮರಸ್ಯ ಕದಡುವುದು ಮತ್ತು ಸಿಎಂ ರೇವಂತ್ ರೆಡ್ಡಿಯನ್ನು ಅವಮಾನಿಸಿದ ಆರೋಪ ಹೊರಿಸಲಾಗಿದೆ.

ಗೌತಮ್ ಅವರು ತನ್ನ ಎಕ್ಸ್ ಖಾತೆಯಲ್ಲಿ ಏಳು ತಿಂಗಳ ಹಿಂದೆ, ಅಂದರೆ ಕಳೆದ ಮಾರ್ಚ್‌ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದರು. ವಿಡಿಯೋದಲ್ಲಿ ರೈತರೊಬ್ಬರು ಮಾಜಿ ಸಿಎಂ ಕೆಸಿಆರ್ ನೇತೃತ್ವದ ಸರ್ಕಾರದ ಕಾರ್ಯಕ್ರಮಗಳನ್ನು ಹೊಗಳಿ, ಕಾಂಗ್ರೆಸ್ ನೇತೃತ್ವದ ಪ್ರಸ್ತುತ ಸರ್ಕಾರದ ವಿರುದ್ಧ ತಮ್ಮ ಅಸಮಾಧಾನ ಹೊರ ಹಾಕಿದ ದೃಶ್ಯವಿತ್ತು ಎಂದು ದಿ ನ್ಯೂಸ್‌ ಮಿನಿಟ್ ವರದಿ ಮಾಡಿದೆ.

ಸೆಪ್ಟೆಂಬರ್‌ನಲ್ಲಿ ಪತ್ರಕರ್ತ ಗೌತಮ್ ಪೋತಗೋನಿ ವಿರುದ್ಧ ದಾಖಲಿಸಲಾದ ನಾಲ್ಕು ಎಫ್‌ಐಆರ್‌ಗಳನ್ನು ಆಧರಿಸಿ ಬಂಧನ ನಡೆದಿದೆ. ಅವುಗಳಲ್ಲಿ ಮೂರು ಈ ಅವರು ವಿಡಿಯೋ ಪೋಸ್ಟ್ ಮಾಡಿದ್ದಕ್ಕೆ ಸಂಬಂಧಿಸಿವೆ. ಮಾರ್ಚ್‌ನಲ್ಲಿ ವೈರಲ್ ಆದ ವಿಡಿಯೋ ಸಂಬಂಧ ಸೆಪ್ಟೆಂಬರ್‌ನಲ್ಲಿ ಏಕೆ ಪ್ರಕರಣ ದಾಖಲಿಸಲಾಗಿದೆ ಎಂಬುವುದು ಸ್ಪಷ್ಟವಾಗಿಲ್ಲ ಎಂದು ವರದಿ ತಿಳಿಸಿದೆ.

ಮಾರ್ಚ್ 12, 2024 ರಂದು, ಗೌತಮ್ ಅವರು ನಲ್ಗೊಂಡದ ರೈತರೊಬ್ಬರ ವಿಡಿಯೋವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು. ಜೊತೆಗೆ “ನನ್ನ ಪ್ರವಾಸದ ಸಮಯದಲ್ಲಿ, ನಾನು ನಿನ್ನೆ ಹೃದಯವಿದ್ರಾವಕ ಘಟನೆಯೊಂದನ್ನು ಎದುರಿಸಿದೆ. ನಲ್ಗೊಂಡ ಜಿಲ್ಲೆಯ ಮುಶಂಪಲ್ಲಿ ಗ್ರಾಮದ ಮಲ್ಲಯ್ಯ ಎಂಬ ರೈತ ನನಗೆ ಖುದ್ದಾಗಿ ವಿಡಿಯೋ ರೆಕಾರ್ಡ್ ಮಾಡಿ ಕೆಸಿಆರ್ ಅವರಿಗೆ ಕಳುಹಿಸುವಂತೆ ಕೇಳಿಕೊಂಡರು” ಎಂದು ಬರೆದುಕೊಂಡಿದ್ದರು.

ಗೌತಮ್ ಹಂಚಿಕೊಂಡಿದ್ದ ವಿಡಿಯೋದಲ್ಲಿ ರೈತ ಮಲ್ಲಯ್ಯ ಅವರು ಮಾಜಿ ಸಿಎಂ ಕೆಸಿಆರ್ ನೇತೃತ್ವದ ಬಿಆರ್‌ಎಸ್ ಸರ್ಕಾರದ ಕಾರ್ಯಕ್ರಮವಾದ ರೈತ ಬಂಧು ಅನ್ನು ಹೊಗಳಿದ್ದರು. ಬಿಆರ್‌ಎಸ್ ಸರ್ಕಾರ ಪರಿಚಯಿಸಿದ ರೈತರ ಹೂಡಿಕೆ ಬೆಂಬಲ ಯೋಜನೆ ಬಗ್ಗೆ ಹೆಚ್ಚು ಮಾತನಾಡಿದ್ದರು. ಪ್ರಸ್ತುತ ಆಡಳಿತದಲ್ಲಿ ತಾನು ಸಾಲದ ಸುಳಿಯಲ್ಲಿ ಸಿಲುಕಿದ್ದೇನೆ ಎಂದಿದ್ದರು.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ತೆಲುಗು ಸ್ಕ್ರೈಬ್ ತೆಲಂಗಾಣದಲ್ಲಿ ಕಾಂಗ್ರೆಸ್ ಅನ್ನು ಟೀಕಿಸುವ ಮತ್ತು ಪ್ರತಿಪಕ್ಷ ಬಿಆರ್‌ಎಸ್‌ ಅನ್ನು ಬೆಂಬಲಿಸುವ ಸುದ್ದಿ ಸಂಸ್ಥೆಯಾಗಿದೆ.

ಶೇಕ್ ಅಶ್ರಫ್ ಎಂಬ ಉದ್ಯಮಿ ಮತ್ತು ಅನುಮಕೊಂಡ ಭಾರ್ಗವ್ ಎಂಬ ವಿದ್ಯಾರ್ಥಿ ನೀಡಿದ ದೂರಿನ ಆಧಾರದ ಮೇಲೆ ಸೆಪ್ಟೆಂಬರ್ 28 ರಂದು ಖಾರ್ಕಾನಾ ಮತ್ತು ವನಸ್ಥಲಿಪುರಂ ಪೊಲೀಸ್ ಠಾಣೆಗಳಲ್ಲಿ ಗೌತಮ್ ವಿರುದ್ದ ಮೊದಲ ಮತ್ತು ಎರಡನೇ ಎಫ್‌ಐಆರ್ ದಾಖಲಾಗಿದೆ. ಮಂಚಾಲ್ ಪೊಲೀಸ್ ಠಾಣೆಯಲ್ಲಿ ಐ ರಾಮಚಂದ್ರ ರೆಡ್ಡಿ ಎಂಬ ರೈತ ನೀಡಿದ ದೂರಿನ ಆಧಾರದ ಮೇಲೆ ಸೆಪ್ಟೆಂಬರ್ 29 ರಂದು ಗೌತಮ್ ವಿರುದ್ಧ ಮೂರನೇ ಎಫ್‌ಐಆರ್ ದಾಖಲಿಸಲಾಗಿದೆ.

ಮೂವರ ದೂರುಗಳಲ್ಲೂ “ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಪೋಸ್ಟ್‌ಗಳನ್ನು ಹಾಕಿದ್ದು. ಅದು ನಮ್ಮ ತೆಲಂಗಾಣದ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಮತ್ತು ತೆಲಂಗಾಣ ಸರ್ಕಾರವನ್ನು ಅವಹೇಳನ ಮಾಡಿದೆ” ಎಂದು ಆರೋಪಿಸಲಾಗಿದೆ.

“ಅಂತಹ ಪೋಸ್ಟ್‌ಗಳು ರಾಜಕೀಯ ಉದ್ವಿಗ್ನತೆ ಮತ್ತು ಗುಂಪುಗಳ ನಡುವೆ ದ್ವೇಷವನ್ನು ಉಂಟು ಮಾಡುತ್ತವೆ. ಸಾರ್ವಜನಿಕರ ನಡುವಿನ ಸಾಮಾರಸ್ಯ ಕೆಡಸುತ್ತವೆ. ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗೆ ಕಾರಣವಾಗಬಹುದು. ವಿಡಿಯೋ ಪೋಸ್ಟ್ ಮಾಡಿದವರು ಅನಗತ್ಯ ವದಂತಿಗಳನ್ನು ಹರಡುತ್ತಿದ್ದಾರೆ. ಅದು ಸಾರ್ವಜನಿಕರನ್ನು ದಾರಿ ತಪ್ಪಿಸುವಂತಿದೆ. ಅದರಿಂದಾಗಿ ಸಾರ್ವಜನಿಕರ ಶಾಂತಿ ಮತ್ತು ನೆಮ್ಮದಿಗೆ ಭಂಗ ಉಂಟಾಗುತ್ತದೆ” ಎಂದು ಮೂವರ ದೂರುಗಳಲ್ಲಿ ಹೇಳಲಾಗಿದೆ.

ಜೆ ಸಂಜೀವ್ ರೆಡ್ಡಿ ಎಂಬ ವ್ಯಕ್ತಿಯ ದೂರಿನ ಆಧಾರದ ಮೇಲೆ ಸೈಬರ್ ಕ್ರೈಂ ಪೊಲೀಸರು ಗೌತಮ್ ಮತ್ತು ತೆಲುಗು ಸ್ಕ್ರೈಬ್ ಸಂಸ್ಥೆಯ ವಿರುದ್ದ ನಾಲ್ಕನೇ ಎಫ್‌ಐಆರ್ ದಾಖಲಿಸಿದ್ದಾರೆ. ಈ ದೂರಿನಲ್ಲಿ ಸುದ್ದಿ ಸಂಸ್ಥೆ ಸಿಎಂ ವಿರುದ್ಧ ಅವಹೇಳನಕಾರಿ ವಿಡಿಯೋ ಪೋಸ್ಟ್ ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು, ಮೂರು ಯುಆರ್‌ಎಲ್‌ಗಳನ್ನು ಅಳಿಸಬೇಕು ಎಂದು ಒತ್ತಾಯಿಸಲಾಗಿದೆ. ಅವುಗಳಲ್ಲಿ ಒಂದು ಅದಿಲಾಬಾದ್‌ನಲ್ಲಿ ಹಿರಿಯ ವ್ಯಕ್ತಿಯೊಬ್ಬರು ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಸರ್ಕಾರ ಕೆಡವಬೇಕು ಎಂದು ಅವಾಚ್ಯವಾಗಿ ನಿಂದಿಸಿರುವುದು ಎಂದು ನ್ಯೂಸ್ ಮಿನಿಟ್ ವರದಿ ತಿಳಿಸಿದೆ.

ಇದನ್ನೂ ಓದಿ : ಹರಿಯಾಣ | 90ರಲ್ಲಿ 86 ಶಾಸಕರು ಕೋಟ್ಯಾಧಿಪತಿ; 12 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ – ಎಡಿಆರ್ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...