Homeಮುಖಪುಟತೆಲಂಗಾಣ| ಕೆಸಿಆರ್ ಹೊಗಳಿ, ಸಿಎಂ ರೇವಂತ್ ರೆಡ್ಡಿಯನ್ನು ಟೀಕಿಸಿದ ರೈತನ ವಿಡಿಯೋ ಪೋಸ್ಟ್ : ಪತ್ರಕರ್ತನ...

ತೆಲಂಗಾಣ| ಕೆಸಿಆರ್ ಹೊಗಳಿ, ಸಿಎಂ ರೇವಂತ್ ರೆಡ್ಡಿಯನ್ನು ಟೀಕಿಸಿದ ರೈತನ ವಿಡಿಯೋ ಪೋಸ್ಟ್ : ಪತ್ರಕರ್ತನ ಬಂಧನ

- Advertisement -
- Advertisement -

ಡಿಜಿಟಲ್ ನ್ಯೂಸ್ ಪೋರ್ಟಲ್ ‘ತೆಲುಗು ಸ್ಕ್ರೈಬ್‌’ನ ಪತ್ರಕರ್ತ ಗೌತಮ್ ಪೋತಗೋನಿ ಅವರನ್ನು ಅಕ್ಟೋಬರ್ 7ರಂದು ಸೋಮವಾರ ತೆಲಂಗಾಣದಲ್ಲಿ ಬಂಧಿಸಲಾಗಿದೆ. ಅವರ ವಿರುದ್ದ ರಾಜಕೀಯ ಸಂಘರ್ಷ ಸೃಷ್ಟಿಗೆ ಪ್ರಯತ್ನ, ಸಾರ್ವಜನಿಕ ಸಾಮರಸ್ಯ ಕದಡುವುದು ಮತ್ತು ಸಿಎಂ ರೇವಂತ್ ರೆಡ್ಡಿಯನ್ನು ಅವಮಾನಿಸಿದ ಆರೋಪ ಹೊರಿಸಲಾಗಿದೆ.

ಗೌತಮ್ ಅವರು ತನ್ನ ಎಕ್ಸ್ ಖಾತೆಯಲ್ಲಿ ಏಳು ತಿಂಗಳ ಹಿಂದೆ, ಅಂದರೆ ಕಳೆದ ಮಾರ್ಚ್‌ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದರು. ವಿಡಿಯೋದಲ್ಲಿ ರೈತರೊಬ್ಬರು ಮಾಜಿ ಸಿಎಂ ಕೆಸಿಆರ್ ನೇತೃತ್ವದ ಸರ್ಕಾರದ ಕಾರ್ಯಕ್ರಮಗಳನ್ನು ಹೊಗಳಿ, ಕಾಂಗ್ರೆಸ್ ನೇತೃತ್ವದ ಪ್ರಸ್ತುತ ಸರ್ಕಾರದ ವಿರುದ್ಧ ತಮ್ಮ ಅಸಮಾಧಾನ ಹೊರ ಹಾಕಿದ ದೃಶ್ಯವಿತ್ತು ಎಂದು ದಿ ನ್ಯೂಸ್‌ ಮಿನಿಟ್ ವರದಿ ಮಾಡಿದೆ.

ಸೆಪ್ಟೆಂಬರ್‌ನಲ್ಲಿ ಪತ್ರಕರ್ತ ಗೌತಮ್ ಪೋತಗೋನಿ ವಿರುದ್ಧ ದಾಖಲಿಸಲಾದ ನಾಲ್ಕು ಎಫ್‌ಐಆರ್‌ಗಳನ್ನು ಆಧರಿಸಿ ಬಂಧನ ನಡೆದಿದೆ. ಅವುಗಳಲ್ಲಿ ಮೂರು ಈ ಅವರು ವಿಡಿಯೋ ಪೋಸ್ಟ್ ಮಾಡಿದ್ದಕ್ಕೆ ಸಂಬಂಧಿಸಿವೆ. ಮಾರ್ಚ್‌ನಲ್ಲಿ ವೈರಲ್ ಆದ ವಿಡಿಯೋ ಸಂಬಂಧ ಸೆಪ್ಟೆಂಬರ್‌ನಲ್ಲಿ ಏಕೆ ಪ್ರಕರಣ ದಾಖಲಿಸಲಾಗಿದೆ ಎಂಬುವುದು ಸ್ಪಷ್ಟವಾಗಿಲ್ಲ ಎಂದು ವರದಿ ತಿಳಿಸಿದೆ.

ಮಾರ್ಚ್ 12, 2024 ರಂದು, ಗೌತಮ್ ಅವರು ನಲ್ಗೊಂಡದ ರೈತರೊಬ್ಬರ ವಿಡಿಯೋವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು. ಜೊತೆಗೆ “ನನ್ನ ಪ್ರವಾಸದ ಸಮಯದಲ್ಲಿ, ನಾನು ನಿನ್ನೆ ಹೃದಯವಿದ್ರಾವಕ ಘಟನೆಯೊಂದನ್ನು ಎದುರಿಸಿದೆ. ನಲ್ಗೊಂಡ ಜಿಲ್ಲೆಯ ಮುಶಂಪಲ್ಲಿ ಗ್ರಾಮದ ಮಲ್ಲಯ್ಯ ಎಂಬ ರೈತ ನನಗೆ ಖುದ್ದಾಗಿ ವಿಡಿಯೋ ರೆಕಾರ್ಡ್ ಮಾಡಿ ಕೆಸಿಆರ್ ಅವರಿಗೆ ಕಳುಹಿಸುವಂತೆ ಕೇಳಿಕೊಂಡರು” ಎಂದು ಬರೆದುಕೊಂಡಿದ್ದರು.

ಗೌತಮ್ ಹಂಚಿಕೊಂಡಿದ್ದ ವಿಡಿಯೋದಲ್ಲಿ ರೈತ ಮಲ್ಲಯ್ಯ ಅವರು ಮಾಜಿ ಸಿಎಂ ಕೆಸಿಆರ್ ನೇತೃತ್ವದ ಬಿಆರ್‌ಎಸ್ ಸರ್ಕಾರದ ಕಾರ್ಯಕ್ರಮವಾದ ರೈತ ಬಂಧು ಅನ್ನು ಹೊಗಳಿದ್ದರು. ಬಿಆರ್‌ಎಸ್ ಸರ್ಕಾರ ಪರಿಚಯಿಸಿದ ರೈತರ ಹೂಡಿಕೆ ಬೆಂಬಲ ಯೋಜನೆ ಬಗ್ಗೆ ಹೆಚ್ಚು ಮಾತನಾಡಿದ್ದರು. ಪ್ರಸ್ತುತ ಆಡಳಿತದಲ್ಲಿ ತಾನು ಸಾಲದ ಸುಳಿಯಲ್ಲಿ ಸಿಲುಕಿದ್ದೇನೆ ಎಂದಿದ್ದರು.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ತೆಲುಗು ಸ್ಕ್ರೈಬ್ ತೆಲಂಗಾಣದಲ್ಲಿ ಕಾಂಗ್ರೆಸ್ ಅನ್ನು ಟೀಕಿಸುವ ಮತ್ತು ಪ್ರತಿಪಕ್ಷ ಬಿಆರ್‌ಎಸ್‌ ಅನ್ನು ಬೆಂಬಲಿಸುವ ಸುದ್ದಿ ಸಂಸ್ಥೆಯಾಗಿದೆ.

ಶೇಕ್ ಅಶ್ರಫ್ ಎಂಬ ಉದ್ಯಮಿ ಮತ್ತು ಅನುಮಕೊಂಡ ಭಾರ್ಗವ್ ಎಂಬ ವಿದ್ಯಾರ್ಥಿ ನೀಡಿದ ದೂರಿನ ಆಧಾರದ ಮೇಲೆ ಸೆಪ್ಟೆಂಬರ್ 28 ರಂದು ಖಾರ್ಕಾನಾ ಮತ್ತು ವನಸ್ಥಲಿಪುರಂ ಪೊಲೀಸ್ ಠಾಣೆಗಳಲ್ಲಿ ಗೌತಮ್ ವಿರುದ್ದ ಮೊದಲ ಮತ್ತು ಎರಡನೇ ಎಫ್‌ಐಆರ್ ದಾಖಲಾಗಿದೆ. ಮಂಚಾಲ್ ಪೊಲೀಸ್ ಠಾಣೆಯಲ್ಲಿ ಐ ರಾಮಚಂದ್ರ ರೆಡ್ಡಿ ಎಂಬ ರೈತ ನೀಡಿದ ದೂರಿನ ಆಧಾರದ ಮೇಲೆ ಸೆಪ್ಟೆಂಬರ್ 29 ರಂದು ಗೌತಮ್ ವಿರುದ್ಧ ಮೂರನೇ ಎಫ್‌ಐಆರ್ ದಾಖಲಿಸಲಾಗಿದೆ.

ಮೂವರ ದೂರುಗಳಲ್ಲೂ “ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಪೋಸ್ಟ್‌ಗಳನ್ನು ಹಾಕಿದ್ದು. ಅದು ನಮ್ಮ ತೆಲಂಗಾಣದ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಮತ್ತು ತೆಲಂಗಾಣ ಸರ್ಕಾರವನ್ನು ಅವಹೇಳನ ಮಾಡಿದೆ” ಎಂದು ಆರೋಪಿಸಲಾಗಿದೆ.

“ಅಂತಹ ಪೋಸ್ಟ್‌ಗಳು ರಾಜಕೀಯ ಉದ್ವಿಗ್ನತೆ ಮತ್ತು ಗುಂಪುಗಳ ನಡುವೆ ದ್ವೇಷವನ್ನು ಉಂಟು ಮಾಡುತ್ತವೆ. ಸಾರ್ವಜನಿಕರ ನಡುವಿನ ಸಾಮಾರಸ್ಯ ಕೆಡಸುತ್ತವೆ. ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗೆ ಕಾರಣವಾಗಬಹುದು. ವಿಡಿಯೋ ಪೋಸ್ಟ್ ಮಾಡಿದವರು ಅನಗತ್ಯ ವದಂತಿಗಳನ್ನು ಹರಡುತ್ತಿದ್ದಾರೆ. ಅದು ಸಾರ್ವಜನಿಕರನ್ನು ದಾರಿ ತಪ್ಪಿಸುವಂತಿದೆ. ಅದರಿಂದಾಗಿ ಸಾರ್ವಜನಿಕರ ಶಾಂತಿ ಮತ್ತು ನೆಮ್ಮದಿಗೆ ಭಂಗ ಉಂಟಾಗುತ್ತದೆ” ಎಂದು ಮೂವರ ದೂರುಗಳಲ್ಲಿ ಹೇಳಲಾಗಿದೆ.

ಜೆ ಸಂಜೀವ್ ರೆಡ್ಡಿ ಎಂಬ ವ್ಯಕ್ತಿಯ ದೂರಿನ ಆಧಾರದ ಮೇಲೆ ಸೈಬರ್ ಕ್ರೈಂ ಪೊಲೀಸರು ಗೌತಮ್ ಮತ್ತು ತೆಲುಗು ಸ್ಕ್ರೈಬ್ ಸಂಸ್ಥೆಯ ವಿರುದ್ದ ನಾಲ್ಕನೇ ಎಫ್‌ಐಆರ್ ದಾಖಲಿಸಿದ್ದಾರೆ. ಈ ದೂರಿನಲ್ಲಿ ಸುದ್ದಿ ಸಂಸ್ಥೆ ಸಿಎಂ ವಿರುದ್ಧ ಅವಹೇಳನಕಾರಿ ವಿಡಿಯೋ ಪೋಸ್ಟ್ ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು, ಮೂರು ಯುಆರ್‌ಎಲ್‌ಗಳನ್ನು ಅಳಿಸಬೇಕು ಎಂದು ಒತ್ತಾಯಿಸಲಾಗಿದೆ. ಅವುಗಳಲ್ಲಿ ಒಂದು ಅದಿಲಾಬಾದ್‌ನಲ್ಲಿ ಹಿರಿಯ ವ್ಯಕ್ತಿಯೊಬ್ಬರು ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಸರ್ಕಾರ ಕೆಡವಬೇಕು ಎಂದು ಅವಾಚ್ಯವಾಗಿ ನಿಂದಿಸಿರುವುದು ಎಂದು ನ್ಯೂಸ್ ಮಿನಿಟ್ ವರದಿ ತಿಳಿಸಿದೆ.

ಇದನ್ನೂ ಓದಿ : ಹರಿಯಾಣ | 90ರಲ್ಲಿ 86 ಶಾಸಕರು ಕೋಟ್ಯಾಧಿಪತಿ; 12 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ – ಎಡಿಆರ್ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...