Homeರಾಜಕೀಯತೆಲಂಗಾಣ: ಆಡಳಿತರೂಢ ಬಿಆರ್‌ಎಸ್‌‌ ಪಕ್ಷದ ನಾಯಕ ಬಿಜೆಪಿ ಸೇರುವ ಸಾಧ್ಯತೆ

ತೆಲಂಗಾಣ: ಆಡಳಿತರೂಢ ಬಿಆರ್‌ಎಸ್‌‌ ಪಕ್ಷದ ನಾಯಕ ಬಿಜೆಪಿ ಸೇರುವ ಸಾಧ್ಯತೆ

ತೆಲಂಗಾಣದಲ್ಲಿ ಮುಂದಿನ ಡಿಸೆಂಬರ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ

- Advertisement -
- Advertisement -

ತೆಲಂಗಾಣದಲ್ಲಿ ಮುಂದಿನ ಡಿಸೆಂಬರ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈ ನಡುವೆ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದೆ. ಆಡಳಿತರೂಢ ಬಿಆರ್‌‌ಎಸ್‌‌ ನಾಯಕ ಮಾಜಿ ಸಂಸದ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಅವರು ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಇದೇ ಹಿನ್ನಲೆಯಲ್ಲಿ ಖಮ್ಮಂನಲ್ಲಿ ಬಿಆರ್‌ಎಸ್ ಅದ್ಧೂರಿ ಸಭೆ ನಡೆಸಲು ತೀರ್ಮಾನಿಸಿದೆ.

ಶ್ರೀನಿವಾಸ್‌ ರೆಡ್ಡಿ ಅವರು 2014 ರಲ್ಲಿ ಖಮ್ಮಮ್ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಇದೀಗ ಅವರು ನವದೆಹಲಿಯಲ್ಲಿ ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಜನವರಿ 18 ರಂದು ಬಿಜೆಪಿ ಸೇರುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಅಲ್ಲದೆ ಜನವರಿ 19 ರಂದು ಹೈದರಾಬಾದ್‌ಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಫ್ಲ್ಯಾಗ್ ಆಫ್ ಮಾಡುವ ಸಾಧ್ಯತೆ ಕೂಡಾ ಇದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅದೇ ದಿನ ಬಿಆರ್‌ಎಸ್ ಅಧ್ಯಕ್ಷ ಹಾಗೂ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಖಮ್ಮಂನಲ್ಲಿ ಅದ್ಧೂರಿ ಸಾರ್ವಜನಿಕ ಸಭೆ ನಡೆಸಲು ಯೋಜಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಚಿವರುಗಳಾದ ಪುವ್ವಾಡ ಅಜಯ್ ಕುಮಾರ್, ಹರೀಶ್ ರಾವ್ ಸೇರಿದಂತೆ ಹಲವಾರು ನಾಯಕರು ಭಾಗವಹಿಸಲಿದ್ದಾರೆ.

ಖಮ್ಮಂನಲ್ಲಿ ಕ್ಷಿಪ್ರವಾಗಿ ಬದಲಾಗುತ್ತಿರುವ ರಾಜಕೀಯ ಬೆಳವಣಿಗೆಗಳು ಗಮನಾರ್ಹವಾಗಿದ್ದು, ಖಮ್ಮಂ ಬಿಆರ್‌ಎಸ್‌ನ ಪ್ರಾಬಲ್ಯವಿರುವ ಪ್ರದೇಶವಲ್ಲ. ತೆಲಂಗಾಣ ರಾಜ್ಯದ ರಚನೆಯ ಆಂದೋಲನದ ಉತ್ತುಂಗದಲ್ಲಿಯೂ ಕೂಡಾ ಈ ಪ್ರದೇಶದಲ್ಲಿ ಹೆಚ್ಚು ಧ್ವನಿಗಳು ಬಂದಿರಲಿಲ್ಲ. ಆಂಧ್ರಪ್ರದೇಶದ ಗಡಿಯಾಗಿರುವ ಖಮ್ಮಂ ಕಮ್ಮ ಸಮುದಾಯದ ಪ್ರಾಬಲ್ಯವಿರುವ ಜಿಲ್ಲೆಯಾಗಿದೆ.

2014 ರಲ್ಲಿ ಟಿಆರ್‌ಎಸ್ ಅಧಿಕಾರಕ್ಕೆ ಬಂದ ನಂತರ, ಖಮ್ಮಂನಲ್ಲಿ ತನ್ನ ನೆಲೆಯನ್ನು ಬಲಪಡಿಸಲು ಪಕ್ಷವೂ ಶ್ರೀನಿವಾಸ ರೆಡ್ಡಿ ಸೇರಿದಂತೆ ಹಲವಾರು ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಂಡಿತ್ತು. ಅಲ್ಲದೆ, ವೈಎಸ್‌ಆರ್‌ಟಿಪಿ ಮುಖ್ಯಸ್ಥೆ ವೈಎಸ್ ಶರ್ಮಿಳಾ ಅವರು ಈಗಾಗಲೇ ಖಮ್ಮಂನ ಪಲೈರ್ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿರುವುದರಿಂದ ಖಮ್ಮಂ ಈಗಾಗಲೇ ರಣರಂಗವಾಗಿ ಮಾರ್ಪಟ್ಟಿದೆ.

ಕೆಲವು ತಿಂಗಳ ಹಿಂದಿನಿಂದಲೇ ಬಿಆರ್‌ಎಸ್‌ನಲ್ಲಿ ಬಿಕ್ಕಟ್ಟು ತೀವ್ರಗೊಂಡಿದ್ದು, ಖಮ್ಮಂನ ನಾಯಕರಾದ ತುಮ್ಮಲ ನಾಗೇಶ್ವರ ರಾವ್, ಜಲಗಂ ವೆಂಕಟ್ ರಾವ್ ಮತ್ತು ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಖಮ್ಮಂನಿಂದ ಬಿಆರ್‌ಎಸ್ ಟಿಕೆಟ್‌ನಲ್ಲಿ ಸ್ಪರ್ಧಿಸಲು ತಮ್ಮ ಆಸಕ್ತಿಯನ್ನು ವ್ಯಕ್ತಪಡಿಸಿದ್ದಾರೆ. ಎಲ್ಲರಿಗೂ ಪಕ್ಷ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ ಎಂಬುದನ್ನು ಮನಗಂಡಿದ್ದು ಅವರು ಬೇರೆ ಪಕ್ಷಗಳಿಗೆ ಅಥವಾ ಸ್ವತಂತ್ರವಾಗಿ ಸ್ಪರ್ಧಿಸಲು ತಮ್ಮ ಆಯ್ಕೆಗಳ ಬಗ್ಗೆ ಯೋಜನೆ ರೂಪಿಸುತ್ತಿದ್ದಾರೆ.

ಶ್ರೀನಿವಾಸ ರೆಡ್ಡಿ ಅವರು 2014 ರಲ್ಲಿ ವೈಎಸ್‌ಆರ್‌ಸಿಪಿ (ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷ) ಟಿಕೆಟ್‌ನಲ್ಲಿ ಖಮ್ಮಂ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದ ಮಾಜಿ ಸಂಸದರಾಗಿದ್ದಾರೆ. ನಂತರ ಅವರು 2016 ರಲ್ಲಿ ಬಿಆರ್‌ಎಸ್‌‌ಗೆ ಪಕ್ಷಾಂತರವಾಗಿದ್ದರು. ಆದರೆ 2019 ರಲ್ಲಿ BRS ಅವರಿಗೆ ಖಮ್ಮಂ ಕ್ಷೇತ್ರದಿಂದ ಸಂಸದರಾಗಿ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿ, ಅವರನ್ನು ಪಕ್ಷದಿಂದ ದೂರವಿಡಲಾಗಿತ್ತು.

ಮಂಗಳವಾರ ಪಿನಪಾಕದಲ್ಲಿ ತಮ್ಮ ಬೆಂಬಲಿಗರೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ್ದ ಶ್ರೀನಿವಾಸ ರೆಡ್ಡಿ, ಬಿಆರ್‌ಎಸ್‌ನಿಂದ ದೂರವಾಗಲು ಇದ್ದ ಕಾರಣವನ್ನು ಶೀಘ್ರದಲ್ಲೇ ಬಹಿರಂಗಪಡಿಸುತ್ತೇನೆ ಎಂದು ಹೇಳಿದ್ದಾರೆ. “ನಾನೇಕೆ ಅಧಿಕಾರದಲ್ಲಿ ಇಲ್ಲ? ಜನ ನನ್ನನ್ನು ತಿರಸ್ಕರಿಸಿದರೇ? ಇತರ ಸ್ಪರ್ಧಿಗಳು ನನ್ನನ್ನು ಸೋಲಿಸಿದರೇ? ಕಾರಣ ಗೊತ್ತೇ ಇದೆ. ಆದರೆ, ಕೆಟಿಆರ್‌ ಮೇಲಿನ ಪ್ರೀತಿಯಿಂದ ನಾನು ಬಿಆರ್‌ಎಸ್‌ ಪಕ್ಷದಲ್ಲಿ ಮುಂದುವರಿದಿದ್ದೇನೆ” ಎಂದು ಅವರು ಹೇಳಿದ್ದರು.

ತಮಗೆ ಹಾಗೂ ತಮ್ಮ ಬೆಂಬಲಿಗರಿಗೆ ಹುದ್ದೆ ನೀಡಲು ಅವಕಾಶವಿದ್ದರೂ ಹಲವು ಬಾರಿ ನಿರಾಕರಿಸಲಾಗಿದೆ ಎಂದು ಅವರು ಆರೋಪಿಸಿದ್ದು, ಅವರೆಲ್ಲರೂ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ಖಚಿತಪಡಿಸಿಕೊಳ್ಳುವುದಾಗಿ ಶ್ರೀನಿವಾಸ ರೆಡ್ಡಿ ತಮ್ಮ ಬೆಂಬಲಿಗರಿಗೆ ಭರವಸೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...