Homeರಾಜಕೀಯತೆಲಂಗಾಣ: ಆಡಳಿತರೂಢ ಬಿಆರ್‌ಎಸ್‌‌ ಪಕ್ಷದ ನಾಯಕ ಬಿಜೆಪಿ ಸೇರುವ ಸಾಧ್ಯತೆ

ತೆಲಂಗಾಣ: ಆಡಳಿತರೂಢ ಬಿಆರ್‌ಎಸ್‌‌ ಪಕ್ಷದ ನಾಯಕ ಬಿಜೆಪಿ ಸೇರುವ ಸಾಧ್ಯತೆ

ತೆಲಂಗಾಣದಲ್ಲಿ ಮುಂದಿನ ಡಿಸೆಂಬರ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ

- Advertisement -
- Advertisement -

ತೆಲಂಗಾಣದಲ್ಲಿ ಮುಂದಿನ ಡಿಸೆಂಬರ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈ ನಡುವೆ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದೆ. ಆಡಳಿತರೂಢ ಬಿಆರ್‌‌ಎಸ್‌‌ ನಾಯಕ ಮಾಜಿ ಸಂಸದ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಅವರು ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಇದೇ ಹಿನ್ನಲೆಯಲ್ಲಿ ಖಮ್ಮಂನಲ್ಲಿ ಬಿಆರ್‌ಎಸ್ ಅದ್ಧೂರಿ ಸಭೆ ನಡೆಸಲು ತೀರ್ಮಾನಿಸಿದೆ.

ಶ್ರೀನಿವಾಸ್‌ ರೆಡ್ಡಿ ಅವರು 2014 ರಲ್ಲಿ ಖಮ್ಮಮ್ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಇದೀಗ ಅವರು ನವದೆಹಲಿಯಲ್ಲಿ ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಜನವರಿ 18 ರಂದು ಬಿಜೆಪಿ ಸೇರುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಅಲ್ಲದೆ ಜನವರಿ 19 ರಂದು ಹೈದರಾಬಾದ್‌ಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಫ್ಲ್ಯಾಗ್ ಆಫ್ ಮಾಡುವ ಸಾಧ್ಯತೆ ಕೂಡಾ ಇದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅದೇ ದಿನ ಬಿಆರ್‌ಎಸ್ ಅಧ್ಯಕ್ಷ ಹಾಗೂ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಖಮ್ಮಂನಲ್ಲಿ ಅದ್ಧೂರಿ ಸಾರ್ವಜನಿಕ ಸಭೆ ನಡೆಸಲು ಯೋಜಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಚಿವರುಗಳಾದ ಪುವ್ವಾಡ ಅಜಯ್ ಕುಮಾರ್, ಹರೀಶ್ ರಾವ್ ಸೇರಿದಂತೆ ಹಲವಾರು ನಾಯಕರು ಭಾಗವಹಿಸಲಿದ್ದಾರೆ.

ಖಮ್ಮಂನಲ್ಲಿ ಕ್ಷಿಪ್ರವಾಗಿ ಬದಲಾಗುತ್ತಿರುವ ರಾಜಕೀಯ ಬೆಳವಣಿಗೆಗಳು ಗಮನಾರ್ಹವಾಗಿದ್ದು, ಖಮ್ಮಂ ಬಿಆರ್‌ಎಸ್‌ನ ಪ್ರಾಬಲ್ಯವಿರುವ ಪ್ರದೇಶವಲ್ಲ. ತೆಲಂಗಾಣ ರಾಜ್ಯದ ರಚನೆಯ ಆಂದೋಲನದ ಉತ್ತುಂಗದಲ್ಲಿಯೂ ಕೂಡಾ ಈ ಪ್ರದೇಶದಲ್ಲಿ ಹೆಚ್ಚು ಧ್ವನಿಗಳು ಬಂದಿರಲಿಲ್ಲ. ಆಂಧ್ರಪ್ರದೇಶದ ಗಡಿಯಾಗಿರುವ ಖಮ್ಮಂ ಕಮ್ಮ ಸಮುದಾಯದ ಪ್ರಾಬಲ್ಯವಿರುವ ಜಿಲ್ಲೆಯಾಗಿದೆ.

2014 ರಲ್ಲಿ ಟಿಆರ್‌ಎಸ್ ಅಧಿಕಾರಕ್ಕೆ ಬಂದ ನಂತರ, ಖಮ್ಮಂನಲ್ಲಿ ತನ್ನ ನೆಲೆಯನ್ನು ಬಲಪಡಿಸಲು ಪಕ್ಷವೂ ಶ್ರೀನಿವಾಸ ರೆಡ್ಡಿ ಸೇರಿದಂತೆ ಹಲವಾರು ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಂಡಿತ್ತು. ಅಲ್ಲದೆ, ವೈಎಸ್‌ಆರ್‌ಟಿಪಿ ಮುಖ್ಯಸ್ಥೆ ವೈಎಸ್ ಶರ್ಮಿಳಾ ಅವರು ಈಗಾಗಲೇ ಖಮ್ಮಂನ ಪಲೈರ್ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿರುವುದರಿಂದ ಖಮ್ಮಂ ಈಗಾಗಲೇ ರಣರಂಗವಾಗಿ ಮಾರ್ಪಟ್ಟಿದೆ.

ಕೆಲವು ತಿಂಗಳ ಹಿಂದಿನಿಂದಲೇ ಬಿಆರ್‌ಎಸ್‌ನಲ್ಲಿ ಬಿಕ್ಕಟ್ಟು ತೀವ್ರಗೊಂಡಿದ್ದು, ಖಮ್ಮಂನ ನಾಯಕರಾದ ತುಮ್ಮಲ ನಾಗೇಶ್ವರ ರಾವ್, ಜಲಗಂ ವೆಂಕಟ್ ರಾವ್ ಮತ್ತು ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಖಮ್ಮಂನಿಂದ ಬಿಆರ್‌ಎಸ್ ಟಿಕೆಟ್‌ನಲ್ಲಿ ಸ್ಪರ್ಧಿಸಲು ತಮ್ಮ ಆಸಕ್ತಿಯನ್ನು ವ್ಯಕ್ತಪಡಿಸಿದ್ದಾರೆ. ಎಲ್ಲರಿಗೂ ಪಕ್ಷ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ ಎಂಬುದನ್ನು ಮನಗಂಡಿದ್ದು ಅವರು ಬೇರೆ ಪಕ್ಷಗಳಿಗೆ ಅಥವಾ ಸ್ವತಂತ್ರವಾಗಿ ಸ್ಪರ್ಧಿಸಲು ತಮ್ಮ ಆಯ್ಕೆಗಳ ಬಗ್ಗೆ ಯೋಜನೆ ರೂಪಿಸುತ್ತಿದ್ದಾರೆ.

ಶ್ರೀನಿವಾಸ ರೆಡ್ಡಿ ಅವರು 2014 ರಲ್ಲಿ ವೈಎಸ್‌ಆರ್‌ಸಿಪಿ (ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷ) ಟಿಕೆಟ್‌ನಲ್ಲಿ ಖಮ್ಮಂ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದ ಮಾಜಿ ಸಂಸದರಾಗಿದ್ದಾರೆ. ನಂತರ ಅವರು 2016 ರಲ್ಲಿ ಬಿಆರ್‌ಎಸ್‌‌ಗೆ ಪಕ್ಷಾಂತರವಾಗಿದ್ದರು. ಆದರೆ 2019 ರಲ್ಲಿ BRS ಅವರಿಗೆ ಖಮ್ಮಂ ಕ್ಷೇತ್ರದಿಂದ ಸಂಸದರಾಗಿ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿ, ಅವರನ್ನು ಪಕ್ಷದಿಂದ ದೂರವಿಡಲಾಗಿತ್ತು.

ಮಂಗಳವಾರ ಪಿನಪಾಕದಲ್ಲಿ ತಮ್ಮ ಬೆಂಬಲಿಗರೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ್ದ ಶ್ರೀನಿವಾಸ ರೆಡ್ಡಿ, ಬಿಆರ್‌ಎಸ್‌ನಿಂದ ದೂರವಾಗಲು ಇದ್ದ ಕಾರಣವನ್ನು ಶೀಘ್ರದಲ್ಲೇ ಬಹಿರಂಗಪಡಿಸುತ್ತೇನೆ ಎಂದು ಹೇಳಿದ್ದಾರೆ. “ನಾನೇಕೆ ಅಧಿಕಾರದಲ್ಲಿ ಇಲ್ಲ? ಜನ ನನ್ನನ್ನು ತಿರಸ್ಕರಿಸಿದರೇ? ಇತರ ಸ್ಪರ್ಧಿಗಳು ನನ್ನನ್ನು ಸೋಲಿಸಿದರೇ? ಕಾರಣ ಗೊತ್ತೇ ಇದೆ. ಆದರೆ, ಕೆಟಿಆರ್‌ ಮೇಲಿನ ಪ್ರೀತಿಯಿಂದ ನಾನು ಬಿಆರ್‌ಎಸ್‌ ಪಕ್ಷದಲ್ಲಿ ಮುಂದುವರಿದಿದ್ದೇನೆ” ಎಂದು ಅವರು ಹೇಳಿದ್ದರು.

ತಮಗೆ ಹಾಗೂ ತಮ್ಮ ಬೆಂಬಲಿಗರಿಗೆ ಹುದ್ದೆ ನೀಡಲು ಅವಕಾಶವಿದ್ದರೂ ಹಲವು ಬಾರಿ ನಿರಾಕರಿಸಲಾಗಿದೆ ಎಂದು ಅವರು ಆರೋಪಿಸಿದ್ದು, ಅವರೆಲ್ಲರೂ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ಖಚಿತಪಡಿಸಿಕೊಳ್ಳುವುದಾಗಿ ಶ್ರೀನಿವಾಸ ರೆಡ್ಡಿ ತಮ್ಮ ಬೆಂಬಲಿಗರಿಗೆ ಭರವಸೆ ನೀಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ‘ಸಂವಿಧಾನ ಮತ್ತು ಮೀಸಲಾತಿ’ಯನ್ನು ರದ್ದುಗೊಳಿಸಲು ಬಯಸುತ್ತಿದೆ: ಲಾಲು ಪ್ರಸಾದ್ ಯಾದವ್

0
ಬಿಜೆಪಿ ಸಂವಿಧಾನ ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತಿದೆ, ಸರ್ಕಾರಿ ಉದ್ಯೋಗ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರು ಕೂಡ ಮೀಸಲಾತಿಯನ್ನು ಪಡೆಯಬೇಕು, ಅವರ ಮೀಸಲಾತಿ ಪರವಾಗಿ ನಾನಿದ್ದೇನೆ ಎಂದು ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ)...