Homeರಾಷ್ಟ್ರೀಯತೆಲಂಗಾಣ: ಸಾಲ ನೀಡುವ ಆ್ಯಪ್ ಏಜೆಂಟ್‌‌ ಕಿರುಕುಳ; 4 ಸಾವಿರ ಸಾಲ ಪಡೆದಿದ್ದ ವ್ಯಕ್ತಿ ಆತ್ಮಹತ್ಯೆ

ತೆಲಂಗಾಣ: ಸಾಲ ನೀಡುವ ಆ್ಯಪ್ ಏಜೆಂಟ್‌‌ ಕಿರುಕುಳ; 4 ಸಾವಿರ ಸಾಲ ಪಡೆದಿದ್ದ ವ್ಯಕ್ತಿ ಆತ್ಮಹತ್ಯೆ

- Advertisement -
- Advertisement -

ಸಾಲ ವಾಪಸಾತಿ ಏಜೆಂಟರ ಕಿರುಕುಳದಿಂದಾಗಿ ತೆಲಂಗಾಣದ ವನಪಾರ್ಥಿಯ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತ ವ್ಯಕ್ತಿಯನ್ನು ದಾಸರಿ ಶೇಖರ್ ಎಂದು ಗುರುತಿಸಲಾಗಿದ್ದು, ಕಳೆದ ತಿಂಗಳು ಅವರು ತಮ್ಮ ಫೋನಿನಲ್ಲಿ ಸಾಲ ನೀಡುವ ಅಪ್ಲಿಕೇಶನ್‌ನಿಂದ ಎರಡು ಕಂತಿನಂತೆ 4,000 ರೂ.ಗಳನ್ನು ಪಡೆದುಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದರ ನಂತರ ಅಪ್ಲಿಕೇಶನ್‌ನ ಸಾಲ ವಾಪಾಸು ಪಡೆಯು ರಿಕವರಿ ಏಜೆಂಟರು ಶೇಖರ್‌ ಅವರು ಸಾಲ ಕಟ್ಟಿಲ್ಲ ಎಂದು ಆರೋಪಿಸಿ ಅವರ ಸಂಬಂಧಿಕರಿಗೆ ಸಂದೇಶಗಳನ್ನು ಕಳುಹಿಸಲು ಪ್ರಾರಂಭಿಸಿದ್ದಾರೆ. ಇದರ ನಂತರ ಅವರು ಶೇಖರ್‌ ಅವರ ಮೊಬೈಲ್‌ಗೆ ನಗ್ನ ಚಿತ್ರವನ್ನು ಕಳುಹಿಸಿದ್ದು, ಅದನ್ನು ಅವರ ಎಲ್ಲ ಸ್ನೇಹಿತರು ಮತ್ತು ಸಂಬಂಧಿಕರೊಂದಿಗೆ ಹಂಚಿಕೊಳ್ಳಲಾಗುವುದು ಎಂದು ಬೆದರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಾನಸಿಕ ಒತ್ತಡದಿಂದ ಭಾನುವಾರ ರಾತ್ರಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶೇಖರ್ ಅವರ ಹೆಂಡತಿಯಿಂದ ದೂರು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: 100ಕ್ಕೂ ಹೆಚ್ಚು ಅಪ್ಲಿಕೇಷನ್‌ ಬಳಸಿ ಸುಲಿಗೆ; ₹ 500 ಕೋಟಿ ಚೀನಾಕ್ಕೆ ಕಳುಹಿಸಿದ ಯುಪಿ ಗ್ಯಾಂಗ್‌ ಅರೆಸ್ಟ್‌‌!

ಸಾಲ ನೀಡುವ ಅಪ್ಲಿಕೇಷನ್‌ನ ಸುಳಿಯಲ್ಲಿ ಸಿಕ್ಕಿ ಹಲವರು ಪ್ರಾಣ ತೆತ್ತಿರುವ ಸರಣಿ ಘಟನೆಗಳು ನಡೆಯುತ್ತಿದ್ದು, ಶೇಖರ್‌ ಅವರ ಸಾವು ಇದಕ್ಕೆ ಹೊಸ ಸೇರ್ಪಡೆಯಾಗಿದೆ. ಕೊರೊನಾ ಸಾಂ‌ಕ್ರಮಿಕದ ವೇಳೆ ತ್ವರಿತ ಮತ್ತು ಸುಲಭವಾಗಿ ಸಾಲ ನೀಡುವುದಾಗಿ ಹೇಳಿ ಜನರಿಗೆ ಆಮಿಷವೊಡ್ಡುವ ಸಾಲ ನೀಡುವ ಅಪ್ಲಿಕೇಶನ್‌ಗಳಲ್ಲಿ ಏರಿಕೆ ಕಂಡುಬಂದಿದೆ.

ಈ ಅಪ್ಲಿಕೇಷನ್‌‌ಗಳು ನೀಡುವ ಸಾಲಗಳು ಸಾಮಾನ್ಯವಾಗಿ ಹೆಚ್ಚಿನ ಬಡ್ಡಿದರಗಳು ಮತ್ತು ಹಲವು ಶುಲ್ಕವನ್ನು ಒಳಗೊಂಡಿರುತ್ತವೆ. ಜೊತಗೆ ಸಾಲ ವಾಪಾಸಾತಿ ಏಜೆಂಟರು ಸಾಲಗಾರರ ಮೊಬೈಲ್‌ನಲ್ಲಿದ್ದ ಎಲ್ಲಾ ನಂಬರ್‌ಗಳನ್ನು ಕೂಡಾ ಪಡೆದು, ಅವರ ಸಾಲಗಾರರ ಸಂಪರ್ಕದಲ್ಲಿರುವ ಜನರಿಗೆ ಪೋನ್‌ ಮಾಡುವುದು ಸೇರಿದಂತೆ ವಿವಿಧ ರೀತಿಯ ಕಿರುಕುಳಗಳನ್ನು ನೀಡುತ್ತಾರೆ. ಇಷ್ಟೆ ಅಲ್ಲದೆ, ಸಾಲ ವಾಪಾಸಾತಿ ಏಜೆಂಟರು ಸಾಲ ಪಡೆದವರ ಚಿತ್ರಗಳನ್ನು ಪಡೆದು ಅದನ್ನು ನಗ್ನ ಚಿತ್ರಗಳೊಂದಿಗೆ ಎಡಿಟ್‌ ಮಾಡಿ ಅವರ ಕುಟುಂಬ ಸದಸ್ಯರು ಮತ್ತು ಸಂಪರ್ಕದಲ್ಲಿ ಇರುವ ಇತರರೊಂದಿಗೆ ಹಂಚಿಕೊಳ್ಳುವುದಾಗಿ ಬೆದರಿಕೆ ಹಾಕಿದ ಅನೇಕ ನಿದರ್ಶನಗಳಿವೆ.

ಜುಲೈನಲ್ಲಿ ಹೈದರಾಬಾದ್‌ನ ವ್ಯಕ್ತಿಯೊಬ್ಬರು ಸಾಲದ ಅಪ್ಲಿಕೇಶನ್ ಏಜೆಂಟರಿಂದ ಕಿರುಕುಳಕ್ಕೊಳಗಿ ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದರು. ಸೆಪ್ಟೆಂಬರ್‌ನಲ್ಲಿ ಸಾಲ ಅಪ್ಲಿಕೇಶನ್ ಏಜೆಂಟರಿಂದ ಕಿರುಕುಳದಿಂದಾಗಿ ಆಂಧ್ರಪ್ರದೇಶದ ರಾಜಮಂಡ್ರಿಯ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು. ದುಷ್ಕರ್ಮಿಗಳು ದಂಪತಿಗಳ ಮಾರ್ಫೆಡ್ ವೀಡಿಯೊಗಳು ಮತ್ತು ಫೋಟೋಗಳನ್ನು ವೈರಲ್‌ ಮಾಡುವುದಾಗಿ ಬೆದರಿಸಿದ್ದರು.

ಇದನ್ನೂ ಓದಿ: ತ್ವರಿತ ಸಾಲ ನೀಡುವ ಆ್ಯಪ್‌ಗಳ ವಂಚನೆ: ಚೀನಿ ಪ್ರಜೆ ಸೇರಿದಂತೆ ಒಟ್ಟು ನಾಲ್ಕು ಜನರ ಬಂಧನ


ಜೀವ ಅಮೂಲ್ಯವಾಗಿದೆ. ಎಲ್ಲಾ ಸಮಸ್ಯೆಗಳಿಗೂ ಪರಿಹಾರವಿದೆ. ಮಾನಸಿಕ ಆರೋಗ್ಯ ಸಮಸ್ಯೆಗಳಿದ್ದರೆ ಅಥವಾ ಆತ್ಮಹತ್ಯೆ ಮಾಡಿಕೊಳ್ಳುವ ಭಾವನೆ ಬಂದರೆ ನಿಮಗೆ ಭಾವನಾತ್ಮಕ ಬೆಂಬಲವನ್ನು ನೀಡಿ ಆತ್ಮಹತ್ಯೆ ತಡೆಗಟ್ಟುವ ಸಂಸ್ಥೆಗಳ ಕೆಲವು ಸಹಾಯವಾಣಿ ಸಂಖ್ಯೆಗಳು ಇಲ್ಲಿವೆ.
ಸಹಾಯ (24-ಗಂಟೆ): 080 65000111, 080 65000222
24×7 ಸಹಾಯವಾಣಿ: 98204667260
ಭಾರತದಾದ್ಯಂತ ಸಹಾಯವಾಣಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...