Homeರಾಷ್ಟ್ರೀಯತೆಲಂಗಾಣ: ಸಾಲ ನೀಡುವ ಆ್ಯಪ್ ಏಜೆಂಟ್‌‌ ಕಿರುಕುಳ; 4 ಸಾವಿರ ಸಾಲ ಪಡೆದಿದ್ದ ವ್ಯಕ್ತಿ ಆತ್ಮಹತ್ಯೆ

ತೆಲಂಗಾಣ: ಸಾಲ ನೀಡುವ ಆ್ಯಪ್ ಏಜೆಂಟ್‌‌ ಕಿರುಕುಳ; 4 ಸಾವಿರ ಸಾಲ ಪಡೆದಿದ್ದ ವ್ಯಕ್ತಿ ಆತ್ಮಹತ್ಯೆ

- Advertisement -
- Advertisement -

ಸಾಲ ವಾಪಸಾತಿ ಏಜೆಂಟರ ಕಿರುಕುಳದಿಂದಾಗಿ ತೆಲಂಗಾಣದ ವನಪಾರ್ಥಿಯ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತ ವ್ಯಕ್ತಿಯನ್ನು ದಾಸರಿ ಶೇಖರ್ ಎಂದು ಗುರುತಿಸಲಾಗಿದ್ದು, ಕಳೆದ ತಿಂಗಳು ಅವರು ತಮ್ಮ ಫೋನಿನಲ್ಲಿ ಸಾಲ ನೀಡುವ ಅಪ್ಲಿಕೇಶನ್‌ನಿಂದ ಎರಡು ಕಂತಿನಂತೆ 4,000 ರೂ.ಗಳನ್ನು ಪಡೆದುಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದರ ನಂತರ ಅಪ್ಲಿಕೇಶನ್‌ನ ಸಾಲ ವಾಪಾಸು ಪಡೆಯು ರಿಕವರಿ ಏಜೆಂಟರು ಶೇಖರ್‌ ಅವರು ಸಾಲ ಕಟ್ಟಿಲ್ಲ ಎಂದು ಆರೋಪಿಸಿ ಅವರ ಸಂಬಂಧಿಕರಿಗೆ ಸಂದೇಶಗಳನ್ನು ಕಳುಹಿಸಲು ಪ್ರಾರಂಭಿಸಿದ್ದಾರೆ. ಇದರ ನಂತರ ಅವರು ಶೇಖರ್‌ ಅವರ ಮೊಬೈಲ್‌ಗೆ ನಗ್ನ ಚಿತ್ರವನ್ನು ಕಳುಹಿಸಿದ್ದು, ಅದನ್ನು ಅವರ ಎಲ್ಲ ಸ್ನೇಹಿತರು ಮತ್ತು ಸಂಬಂಧಿಕರೊಂದಿಗೆ ಹಂಚಿಕೊಳ್ಳಲಾಗುವುದು ಎಂದು ಬೆದರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಾನಸಿಕ ಒತ್ತಡದಿಂದ ಭಾನುವಾರ ರಾತ್ರಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶೇಖರ್ ಅವರ ಹೆಂಡತಿಯಿಂದ ದೂರು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: 100ಕ್ಕೂ ಹೆಚ್ಚು ಅಪ್ಲಿಕೇಷನ್‌ ಬಳಸಿ ಸುಲಿಗೆ; ₹ 500 ಕೋಟಿ ಚೀನಾಕ್ಕೆ ಕಳುಹಿಸಿದ ಯುಪಿ ಗ್ಯಾಂಗ್‌ ಅರೆಸ್ಟ್‌‌!

ಸಾಲ ನೀಡುವ ಅಪ್ಲಿಕೇಷನ್‌ನ ಸುಳಿಯಲ್ಲಿ ಸಿಕ್ಕಿ ಹಲವರು ಪ್ರಾಣ ತೆತ್ತಿರುವ ಸರಣಿ ಘಟನೆಗಳು ನಡೆಯುತ್ತಿದ್ದು, ಶೇಖರ್‌ ಅವರ ಸಾವು ಇದಕ್ಕೆ ಹೊಸ ಸೇರ್ಪಡೆಯಾಗಿದೆ. ಕೊರೊನಾ ಸಾಂ‌ಕ್ರಮಿಕದ ವೇಳೆ ತ್ವರಿತ ಮತ್ತು ಸುಲಭವಾಗಿ ಸಾಲ ನೀಡುವುದಾಗಿ ಹೇಳಿ ಜನರಿಗೆ ಆಮಿಷವೊಡ್ಡುವ ಸಾಲ ನೀಡುವ ಅಪ್ಲಿಕೇಶನ್‌ಗಳಲ್ಲಿ ಏರಿಕೆ ಕಂಡುಬಂದಿದೆ.

ಈ ಅಪ್ಲಿಕೇಷನ್‌‌ಗಳು ನೀಡುವ ಸಾಲಗಳು ಸಾಮಾನ್ಯವಾಗಿ ಹೆಚ್ಚಿನ ಬಡ್ಡಿದರಗಳು ಮತ್ತು ಹಲವು ಶುಲ್ಕವನ್ನು ಒಳಗೊಂಡಿರುತ್ತವೆ. ಜೊತಗೆ ಸಾಲ ವಾಪಾಸಾತಿ ಏಜೆಂಟರು ಸಾಲಗಾರರ ಮೊಬೈಲ್‌ನಲ್ಲಿದ್ದ ಎಲ್ಲಾ ನಂಬರ್‌ಗಳನ್ನು ಕೂಡಾ ಪಡೆದು, ಅವರ ಸಾಲಗಾರರ ಸಂಪರ್ಕದಲ್ಲಿರುವ ಜನರಿಗೆ ಪೋನ್‌ ಮಾಡುವುದು ಸೇರಿದಂತೆ ವಿವಿಧ ರೀತಿಯ ಕಿರುಕುಳಗಳನ್ನು ನೀಡುತ್ತಾರೆ. ಇಷ್ಟೆ ಅಲ್ಲದೆ, ಸಾಲ ವಾಪಾಸಾತಿ ಏಜೆಂಟರು ಸಾಲ ಪಡೆದವರ ಚಿತ್ರಗಳನ್ನು ಪಡೆದು ಅದನ್ನು ನಗ್ನ ಚಿತ್ರಗಳೊಂದಿಗೆ ಎಡಿಟ್‌ ಮಾಡಿ ಅವರ ಕುಟುಂಬ ಸದಸ್ಯರು ಮತ್ತು ಸಂಪರ್ಕದಲ್ಲಿ ಇರುವ ಇತರರೊಂದಿಗೆ ಹಂಚಿಕೊಳ್ಳುವುದಾಗಿ ಬೆದರಿಕೆ ಹಾಕಿದ ಅನೇಕ ನಿದರ್ಶನಗಳಿವೆ.

ಜುಲೈನಲ್ಲಿ ಹೈದರಾಬಾದ್‌ನ ವ್ಯಕ್ತಿಯೊಬ್ಬರು ಸಾಲದ ಅಪ್ಲಿಕೇಶನ್ ಏಜೆಂಟರಿಂದ ಕಿರುಕುಳಕ್ಕೊಳಗಿ ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದರು. ಸೆಪ್ಟೆಂಬರ್‌ನಲ್ಲಿ ಸಾಲ ಅಪ್ಲಿಕೇಶನ್ ಏಜೆಂಟರಿಂದ ಕಿರುಕುಳದಿಂದಾಗಿ ಆಂಧ್ರಪ್ರದೇಶದ ರಾಜಮಂಡ್ರಿಯ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು. ದುಷ್ಕರ್ಮಿಗಳು ದಂಪತಿಗಳ ಮಾರ್ಫೆಡ್ ವೀಡಿಯೊಗಳು ಮತ್ತು ಫೋಟೋಗಳನ್ನು ವೈರಲ್‌ ಮಾಡುವುದಾಗಿ ಬೆದರಿಸಿದ್ದರು.

ಇದನ್ನೂ ಓದಿ: ತ್ವರಿತ ಸಾಲ ನೀಡುವ ಆ್ಯಪ್‌ಗಳ ವಂಚನೆ: ಚೀನಿ ಪ್ರಜೆ ಸೇರಿದಂತೆ ಒಟ್ಟು ನಾಲ್ಕು ಜನರ ಬಂಧನ


ಜೀವ ಅಮೂಲ್ಯವಾಗಿದೆ. ಎಲ್ಲಾ ಸಮಸ್ಯೆಗಳಿಗೂ ಪರಿಹಾರವಿದೆ. ಮಾನಸಿಕ ಆರೋಗ್ಯ ಸಮಸ್ಯೆಗಳಿದ್ದರೆ ಅಥವಾ ಆತ್ಮಹತ್ಯೆ ಮಾಡಿಕೊಳ್ಳುವ ಭಾವನೆ ಬಂದರೆ ನಿಮಗೆ ಭಾವನಾತ್ಮಕ ಬೆಂಬಲವನ್ನು ನೀಡಿ ಆತ್ಮಹತ್ಯೆ ತಡೆಗಟ್ಟುವ ಸಂಸ್ಥೆಗಳ ಕೆಲವು ಸಹಾಯವಾಣಿ ಸಂಖ್ಯೆಗಳು ಇಲ್ಲಿವೆ.
ಸಹಾಯ (24-ಗಂಟೆ): 080 65000111, 080 65000222
24×7 ಸಹಾಯವಾಣಿ: 98204667260
ಭಾರತದಾದ್ಯಂತ ಸಹಾಯವಾಣಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...