Homeಮುಖಪುಟತೆಲಂಗಾಣ: ಅಕ್ರಮ ಕೋಳಿ ಪಂದ್ಯದಲ್ಲಿ ಹುಂಜ ದಾಳಿ-ಮಾಲೀಕ ಸಾವು

ತೆಲಂಗಾಣ: ಅಕ್ರಮ ಕೋಳಿ ಪಂದ್ಯದಲ್ಲಿ ಹುಂಜ ದಾಳಿ-ಮಾಲೀಕ ಸಾವು

ಕೋಳಿ ಪಂದ್ಯಗಳನ್ನು ನಿಷೇಧಿಸಲಾಗಿದ್ದರೂ, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ ಮತ್ತು ಒಡಿಶಾದ ಗ್ರಾಮೀಣ ಪ್ರದೇಶಗಳಲ್ಲಿ, ವಿಶೇಷವಾಗಿ ಸಂಕ್ರಾಂತಿಯ ಸುತ್ತ ಮುತ್ತ ಈ ಪಂದ್ಯ ಆಯೋಜನೆಯಾಗುತ್ತದೆ

- Advertisement -
- Advertisement -

ನಿಷೇಧದ ನಡುವೆಯೂ ದಕ್ಷಿಣ ಭಾರತದಲ್ಲಿ ಅಕ್ರಮ ಕೋಳಿ ಪಂದ್ಯಗಳು ನಡೆಯುತ್ತಿದ್ದು, ಪಂದ್ಯಕ್ಕಾಗಿ ಕೋಳಿ ಕಾಲಿಗೆ ಕಟ್ಟಲಾಗಿದ್ದ ಚಾಕುವಿಗೆ ಕೋಳಿ ಮಾಲೀಕನೇ ಬಲಿಯಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಪಂದ್ಯದ ಆಯೋಜಕರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತೆಲಂಗಾಣ ರಾಜ್ಯದ ಲೋಥುನೂರ್ ಗ್ರಾಮದಲ್ಲಿ ಕೋಳಿ ಪಂದ್ಯಕ್ಕಾಗಿ ಹುಂಜದ ಕಾಲಿಗೆ ಚಾಕುವನ್ನು ಜೋಡಿಸಲಾಗಿತ್ತು, ಪಂದ್ಯದಲ್ಲಿ ಅದು ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾಗ ಮಾಲೀಕನ ಮೇಲೆ ಹಾರಿದೆ. ಸ್ಥಳೀಯವಾಗಿ ಚಾಕು ಎಂದು ಕರೆಯಲ್ಪಡುವ ‘ಕೋಡಿ ಕಥಿ’ಯಿಂದ ಆತನ ತೊಡೆಸಂದಿಗೆ ಗಾಯವಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ಬಿ ಜೀವನ್ ತಿಳಿಸಿದ್ದಾರೆ.

ಸಾಮಾನ್ಯವಾಗಿ ‘ಕೋಡಿ ಕಥಿ’ ಮೂರು ಇಂಚು ಉದ್ದವಿರುತ್ತದೆ. ಕೆಲವೊಮ್ಮೆ ಅದನ್ನು ಇನ್ನೊಂದು ಮೂರು ಇಂಚುಗಳಷ್ಟು ವಿಸ್ತರಿಸುವ ಅವಕಾಶವನ್ನು ಹೊಂದಿರುತ್ತದೆ. ಸುಮಾರು ವರ್ಷಗಳ ನಂತರ ರಾಜ್ಯದಲ್ಲಿ ನಡೆದ ಇಂತಹ ಸಾವು ಇದಾಗಿದೆ.

ಇದನ್ನೂ ಓದಿ: ಇಲ್ಲೊಂದು ಪಾಕಕ್ರಾಂತಿಯ ಗಮ್ಮತ್ತು; ತಮಿಳುನಾಡಿನ ಯುಟ್ಯೂಬ್ ಚಾನೆಲ್‌ನ ಕರಾಮತ್ತು

ಲೋಥುನೂರ್ ಗ್ರಾಮದಲ್ಲಿ ಕೋಳಿ ಪಂದ್ಯ ಆಯೋಜಿಸಿದ 16 ಜನರಲ್ಲಿ ಈ ಮೃತ ವ್ಯಕ್ತಿಯೂ ಸೇರಿದ್ದಾನೆ ಎಂದು ಅಧಿಕಾರಿ ಜೀವನ್ ತಿಳಿಸಿದ್ದಾರೆ. ಕೋಳಿ ಸಾಕಣೆ ಕೇಂದ್ರಕ್ಕೆ ಕಳುಹಿಸುವ ಮೊದಲು ಹುಂಜವನ್ನು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಕೆಲ ಕಾಲ ಇರಿಸಲಾಗಿತ್ತು.

“ಅಕ್ರಮ ಕೋಳಿ ಪಂದ್ಯಗಳನ್ನು ಆಯೋಜಿಸುವಲ್ಲಿ ತೊಡಗಿರುವ ಇತರ 15 ಜನರನ್ನು ನಾವು ಹುಡುಕುತ್ತಿದ್ದೇವೆ” ಎಂದು ಜೀವನ್ ಹೇಳಿದರು. ಈ ಕೃತ್ಯದಲ್ಲಿ ತೋಡಗಿರುವವರು ನರಹತ್ಯೆ, ಅಕ್ರಮ ಬೆಟ್ಟಿಂಗ್ ಮತ್ತು ಕೋಳಿ ಪಂದ್ಯಕ್ಕೆ ಆತಿಥ್ಯ ವಹಿಸಿದ ಆರೋಪ ಎದುರಿಸಬೇಕಾಗುತ್ತದೆ.

ದಕ್ಷಿಣ ಭಾರತದಲ್ಲಿ ನಡೆಯುವ ಕೋಳಿ ಪಂದ್ಯಗಳನ್ನು ನಿಷೇಧಿಸಲಾಗಿದೆ. ಆದರೆ ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ ಮತ್ತು ಒಡಿಶಾ ರಾಜ್ಯಗಳ ಗ್ರಾಮೀಣ ಪ್ರದೇಶಗಳಲ್ಲಿ, ವಿಶೇಷವಾಗಿ ಹಿಂದೂ ಹಬ್ಬದ ಸಂಕ್ರಾಂತಿಯ ಸುತ್ತ ಮುತ್ತ ಈ ಪಂದ್ಯ ಆಯೋಜನೆಯಾಗುತ್ತದೆ.

ವಿಶೇಷವಾಗಿ ಬೆಳೆಸಿದ ಕೋಳಿಗಳು ತಮ್ಮ ಕಾಲಿಗೆ 7.5cm ಚಾಕುಗಳು ಅಥವಾ ಬ್ಲೇಡ್‌ಗಳನ್ನು ಕಟ್ಟಿಕೊಂಡು ಭಯಂಕರ ಹೋರಾಟ ನಡೆಸುತ್ತವೆ. ಯಾವ ಕೋಳಿ ಗೆಲ್ಲುತ್ತದೆ ಎಂಬುದರ ಮೇಲೆ ಪಂದ್ಯ ಕಟ್ಟಲಾಗುತ್ತದೆ. ಅನೇಕ ಪ್ರಾಣಿದಯಾ ಸಂಘ ಸಂಸ್ಥೆಗಳ ಪ್ರಯತ್ನಗಳ ಹೊರತಾಗಿಯೂ, ಹೆಚ್ಚಿನ ಜನಸಂದಣಿಯನ್ನು ಆಕರ್ಷಿಸುವ ೀ ಪಂದ್ಯಗಳಲ್ಲಿ ಪ್ರತಿವರ್ಷ ಸಾವಿರಾರು ಕೋಳಿಗಳು ಬಲಿಯಾಗುತ್ತವೆ.


ಇದನ್ನೂ ಓದಿ: ಸಮಾಜದ ಆರೋಗ್ಯ ಮುಖ್ಯ, ಆದಾಯ ಅಲ್ಲ: ಅಕ್ರಮ ಮದ್ಯ ನಿಷೇದಕ್ಕೆ ಆಗ್ರಹಿಸಿ ಟ್ವಿಟರ್‌ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇನ್ನಾದರೂ ಬುದ್ದಿ ಬರಲಿ.
    ಕೋಳಿಗಳು ಕೂಡ ಇಂತಹ ಸಾವು ಸಾಯುತ್ತವೆ ಎಂದು.

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...