Homeಮುಖಪುಟತೆಲಂಗಾಣ: ಅಕ್ರಮ ಕೋಳಿ ಪಂದ್ಯದಲ್ಲಿ ಹುಂಜ ದಾಳಿ-ಮಾಲೀಕ ಸಾವು

ತೆಲಂಗಾಣ: ಅಕ್ರಮ ಕೋಳಿ ಪಂದ್ಯದಲ್ಲಿ ಹುಂಜ ದಾಳಿ-ಮಾಲೀಕ ಸಾವು

ಕೋಳಿ ಪಂದ್ಯಗಳನ್ನು ನಿಷೇಧಿಸಲಾಗಿದ್ದರೂ, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ ಮತ್ತು ಒಡಿಶಾದ ಗ್ರಾಮೀಣ ಪ್ರದೇಶಗಳಲ್ಲಿ, ವಿಶೇಷವಾಗಿ ಸಂಕ್ರಾಂತಿಯ ಸುತ್ತ ಮುತ್ತ ಈ ಪಂದ್ಯ ಆಯೋಜನೆಯಾಗುತ್ತದೆ

- Advertisement -
- Advertisement -

ನಿಷೇಧದ ನಡುವೆಯೂ ದಕ್ಷಿಣ ಭಾರತದಲ್ಲಿ ಅಕ್ರಮ ಕೋಳಿ ಪಂದ್ಯಗಳು ನಡೆಯುತ್ತಿದ್ದು, ಪಂದ್ಯಕ್ಕಾಗಿ ಕೋಳಿ ಕಾಲಿಗೆ ಕಟ್ಟಲಾಗಿದ್ದ ಚಾಕುವಿಗೆ ಕೋಳಿ ಮಾಲೀಕನೇ ಬಲಿಯಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಪಂದ್ಯದ ಆಯೋಜಕರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತೆಲಂಗಾಣ ರಾಜ್ಯದ ಲೋಥುನೂರ್ ಗ್ರಾಮದಲ್ಲಿ ಕೋಳಿ ಪಂದ್ಯಕ್ಕಾಗಿ ಹುಂಜದ ಕಾಲಿಗೆ ಚಾಕುವನ್ನು ಜೋಡಿಸಲಾಗಿತ್ತು, ಪಂದ್ಯದಲ್ಲಿ ಅದು ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾಗ ಮಾಲೀಕನ ಮೇಲೆ ಹಾರಿದೆ. ಸ್ಥಳೀಯವಾಗಿ ಚಾಕು ಎಂದು ಕರೆಯಲ್ಪಡುವ ‘ಕೋಡಿ ಕಥಿ’ಯಿಂದ ಆತನ ತೊಡೆಸಂದಿಗೆ ಗಾಯವಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ಬಿ ಜೀವನ್ ತಿಳಿಸಿದ್ದಾರೆ.

ಸಾಮಾನ್ಯವಾಗಿ ‘ಕೋಡಿ ಕಥಿ’ ಮೂರು ಇಂಚು ಉದ್ದವಿರುತ್ತದೆ. ಕೆಲವೊಮ್ಮೆ ಅದನ್ನು ಇನ್ನೊಂದು ಮೂರು ಇಂಚುಗಳಷ್ಟು ವಿಸ್ತರಿಸುವ ಅವಕಾಶವನ್ನು ಹೊಂದಿರುತ್ತದೆ. ಸುಮಾರು ವರ್ಷಗಳ ನಂತರ ರಾಜ್ಯದಲ್ಲಿ ನಡೆದ ಇಂತಹ ಸಾವು ಇದಾಗಿದೆ.

ಇದನ್ನೂ ಓದಿ: ಇಲ್ಲೊಂದು ಪಾಕಕ್ರಾಂತಿಯ ಗಮ್ಮತ್ತು; ತಮಿಳುನಾಡಿನ ಯುಟ್ಯೂಬ್ ಚಾನೆಲ್‌ನ ಕರಾಮತ್ತು

ಲೋಥುನೂರ್ ಗ್ರಾಮದಲ್ಲಿ ಕೋಳಿ ಪಂದ್ಯ ಆಯೋಜಿಸಿದ 16 ಜನರಲ್ಲಿ ಈ ಮೃತ ವ್ಯಕ್ತಿಯೂ ಸೇರಿದ್ದಾನೆ ಎಂದು ಅಧಿಕಾರಿ ಜೀವನ್ ತಿಳಿಸಿದ್ದಾರೆ. ಕೋಳಿ ಸಾಕಣೆ ಕೇಂದ್ರಕ್ಕೆ ಕಳುಹಿಸುವ ಮೊದಲು ಹುಂಜವನ್ನು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಕೆಲ ಕಾಲ ಇರಿಸಲಾಗಿತ್ತು.

“ಅಕ್ರಮ ಕೋಳಿ ಪಂದ್ಯಗಳನ್ನು ಆಯೋಜಿಸುವಲ್ಲಿ ತೊಡಗಿರುವ ಇತರ 15 ಜನರನ್ನು ನಾವು ಹುಡುಕುತ್ತಿದ್ದೇವೆ” ಎಂದು ಜೀವನ್ ಹೇಳಿದರು. ಈ ಕೃತ್ಯದಲ್ಲಿ ತೋಡಗಿರುವವರು ನರಹತ್ಯೆ, ಅಕ್ರಮ ಬೆಟ್ಟಿಂಗ್ ಮತ್ತು ಕೋಳಿ ಪಂದ್ಯಕ್ಕೆ ಆತಿಥ್ಯ ವಹಿಸಿದ ಆರೋಪ ಎದುರಿಸಬೇಕಾಗುತ್ತದೆ.

ದಕ್ಷಿಣ ಭಾರತದಲ್ಲಿ ನಡೆಯುವ ಕೋಳಿ ಪಂದ್ಯಗಳನ್ನು ನಿಷೇಧಿಸಲಾಗಿದೆ. ಆದರೆ ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ ಮತ್ತು ಒಡಿಶಾ ರಾಜ್ಯಗಳ ಗ್ರಾಮೀಣ ಪ್ರದೇಶಗಳಲ್ಲಿ, ವಿಶೇಷವಾಗಿ ಹಿಂದೂ ಹಬ್ಬದ ಸಂಕ್ರಾಂತಿಯ ಸುತ್ತ ಮುತ್ತ ಈ ಪಂದ್ಯ ಆಯೋಜನೆಯಾಗುತ್ತದೆ.

ವಿಶೇಷವಾಗಿ ಬೆಳೆಸಿದ ಕೋಳಿಗಳು ತಮ್ಮ ಕಾಲಿಗೆ 7.5cm ಚಾಕುಗಳು ಅಥವಾ ಬ್ಲೇಡ್‌ಗಳನ್ನು ಕಟ್ಟಿಕೊಂಡು ಭಯಂಕರ ಹೋರಾಟ ನಡೆಸುತ್ತವೆ. ಯಾವ ಕೋಳಿ ಗೆಲ್ಲುತ್ತದೆ ಎಂಬುದರ ಮೇಲೆ ಪಂದ್ಯ ಕಟ್ಟಲಾಗುತ್ತದೆ. ಅನೇಕ ಪ್ರಾಣಿದಯಾ ಸಂಘ ಸಂಸ್ಥೆಗಳ ಪ್ರಯತ್ನಗಳ ಹೊರತಾಗಿಯೂ, ಹೆಚ್ಚಿನ ಜನಸಂದಣಿಯನ್ನು ಆಕರ್ಷಿಸುವ ೀ ಪಂದ್ಯಗಳಲ್ಲಿ ಪ್ರತಿವರ್ಷ ಸಾವಿರಾರು ಕೋಳಿಗಳು ಬಲಿಯಾಗುತ್ತವೆ.


ಇದನ್ನೂ ಓದಿ: ಸಮಾಜದ ಆರೋಗ್ಯ ಮುಖ್ಯ, ಆದಾಯ ಅಲ್ಲ: ಅಕ್ರಮ ಮದ್ಯ ನಿಷೇದಕ್ಕೆ ಆಗ್ರಹಿಸಿ ಟ್ವಿಟರ್‌ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇನ್ನಾದರೂ ಬುದ್ದಿ ಬರಲಿ.
    ಕೋಳಿಗಳು ಕೂಡ ಇಂತಹ ಸಾವು ಸಾಯುತ್ತವೆ ಎಂದು.

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...