Homeಮುಖಪುಟತೆಲಂಗಾಣ: ಅಕ್ರಮ ಕೋಳಿ ಪಂದ್ಯದಲ್ಲಿ ಹುಂಜ ದಾಳಿ-ಮಾಲೀಕ ಸಾವು

ತೆಲಂಗಾಣ: ಅಕ್ರಮ ಕೋಳಿ ಪಂದ್ಯದಲ್ಲಿ ಹುಂಜ ದಾಳಿ-ಮಾಲೀಕ ಸಾವು

ಕೋಳಿ ಪಂದ್ಯಗಳನ್ನು ನಿಷೇಧಿಸಲಾಗಿದ್ದರೂ, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ ಮತ್ತು ಒಡಿಶಾದ ಗ್ರಾಮೀಣ ಪ್ರದೇಶಗಳಲ್ಲಿ, ವಿಶೇಷವಾಗಿ ಸಂಕ್ರಾಂತಿಯ ಸುತ್ತ ಮುತ್ತ ಈ ಪಂದ್ಯ ಆಯೋಜನೆಯಾಗುತ್ತದೆ

- Advertisement -
- Advertisement -

ನಿಷೇಧದ ನಡುವೆಯೂ ದಕ್ಷಿಣ ಭಾರತದಲ್ಲಿ ಅಕ್ರಮ ಕೋಳಿ ಪಂದ್ಯಗಳು ನಡೆಯುತ್ತಿದ್ದು, ಪಂದ್ಯಕ್ಕಾಗಿ ಕೋಳಿ ಕಾಲಿಗೆ ಕಟ್ಟಲಾಗಿದ್ದ ಚಾಕುವಿಗೆ ಕೋಳಿ ಮಾಲೀಕನೇ ಬಲಿಯಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಪಂದ್ಯದ ಆಯೋಜಕರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತೆಲಂಗಾಣ ರಾಜ್ಯದ ಲೋಥುನೂರ್ ಗ್ರಾಮದಲ್ಲಿ ಕೋಳಿ ಪಂದ್ಯಕ್ಕಾಗಿ ಹುಂಜದ ಕಾಲಿಗೆ ಚಾಕುವನ್ನು ಜೋಡಿಸಲಾಗಿತ್ತು, ಪಂದ್ಯದಲ್ಲಿ ಅದು ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾಗ ಮಾಲೀಕನ ಮೇಲೆ ಹಾರಿದೆ. ಸ್ಥಳೀಯವಾಗಿ ಚಾಕು ಎಂದು ಕರೆಯಲ್ಪಡುವ ‘ಕೋಡಿ ಕಥಿ’ಯಿಂದ ಆತನ ತೊಡೆಸಂದಿಗೆ ಗಾಯವಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ಬಿ ಜೀವನ್ ತಿಳಿಸಿದ್ದಾರೆ.

ಸಾಮಾನ್ಯವಾಗಿ ‘ಕೋಡಿ ಕಥಿ’ ಮೂರು ಇಂಚು ಉದ್ದವಿರುತ್ತದೆ. ಕೆಲವೊಮ್ಮೆ ಅದನ್ನು ಇನ್ನೊಂದು ಮೂರು ಇಂಚುಗಳಷ್ಟು ವಿಸ್ತರಿಸುವ ಅವಕಾಶವನ್ನು ಹೊಂದಿರುತ್ತದೆ. ಸುಮಾರು ವರ್ಷಗಳ ನಂತರ ರಾಜ್ಯದಲ್ಲಿ ನಡೆದ ಇಂತಹ ಸಾವು ಇದಾಗಿದೆ.

ಇದನ್ನೂ ಓದಿ: ಇಲ್ಲೊಂದು ಪಾಕಕ್ರಾಂತಿಯ ಗಮ್ಮತ್ತು; ತಮಿಳುನಾಡಿನ ಯುಟ್ಯೂಬ್ ಚಾನೆಲ್‌ನ ಕರಾಮತ್ತು

ಲೋಥುನೂರ್ ಗ್ರಾಮದಲ್ಲಿ ಕೋಳಿ ಪಂದ್ಯ ಆಯೋಜಿಸಿದ 16 ಜನರಲ್ಲಿ ಈ ಮೃತ ವ್ಯಕ್ತಿಯೂ ಸೇರಿದ್ದಾನೆ ಎಂದು ಅಧಿಕಾರಿ ಜೀವನ್ ತಿಳಿಸಿದ್ದಾರೆ. ಕೋಳಿ ಸಾಕಣೆ ಕೇಂದ್ರಕ್ಕೆ ಕಳುಹಿಸುವ ಮೊದಲು ಹುಂಜವನ್ನು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಕೆಲ ಕಾಲ ಇರಿಸಲಾಗಿತ್ತು.

“ಅಕ್ರಮ ಕೋಳಿ ಪಂದ್ಯಗಳನ್ನು ಆಯೋಜಿಸುವಲ್ಲಿ ತೊಡಗಿರುವ ಇತರ 15 ಜನರನ್ನು ನಾವು ಹುಡುಕುತ್ತಿದ್ದೇವೆ” ಎಂದು ಜೀವನ್ ಹೇಳಿದರು. ಈ ಕೃತ್ಯದಲ್ಲಿ ತೋಡಗಿರುವವರು ನರಹತ್ಯೆ, ಅಕ್ರಮ ಬೆಟ್ಟಿಂಗ್ ಮತ್ತು ಕೋಳಿ ಪಂದ್ಯಕ್ಕೆ ಆತಿಥ್ಯ ವಹಿಸಿದ ಆರೋಪ ಎದುರಿಸಬೇಕಾಗುತ್ತದೆ.

ದಕ್ಷಿಣ ಭಾರತದಲ್ಲಿ ನಡೆಯುವ ಕೋಳಿ ಪಂದ್ಯಗಳನ್ನು ನಿಷೇಧಿಸಲಾಗಿದೆ. ಆದರೆ ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ ಮತ್ತು ಒಡಿಶಾ ರಾಜ್ಯಗಳ ಗ್ರಾಮೀಣ ಪ್ರದೇಶಗಳಲ್ಲಿ, ವಿಶೇಷವಾಗಿ ಹಿಂದೂ ಹಬ್ಬದ ಸಂಕ್ರಾಂತಿಯ ಸುತ್ತ ಮುತ್ತ ಈ ಪಂದ್ಯ ಆಯೋಜನೆಯಾಗುತ್ತದೆ.

ವಿಶೇಷವಾಗಿ ಬೆಳೆಸಿದ ಕೋಳಿಗಳು ತಮ್ಮ ಕಾಲಿಗೆ 7.5cm ಚಾಕುಗಳು ಅಥವಾ ಬ್ಲೇಡ್‌ಗಳನ್ನು ಕಟ್ಟಿಕೊಂಡು ಭಯಂಕರ ಹೋರಾಟ ನಡೆಸುತ್ತವೆ. ಯಾವ ಕೋಳಿ ಗೆಲ್ಲುತ್ತದೆ ಎಂಬುದರ ಮೇಲೆ ಪಂದ್ಯ ಕಟ್ಟಲಾಗುತ್ತದೆ. ಅನೇಕ ಪ್ರಾಣಿದಯಾ ಸಂಘ ಸಂಸ್ಥೆಗಳ ಪ್ರಯತ್ನಗಳ ಹೊರತಾಗಿಯೂ, ಹೆಚ್ಚಿನ ಜನಸಂದಣಿಯನ್ನು ಆಕರ್ಷಿಸುವ ೀ ಪಂದ್ಯಗಳಲ್ಲಿ ಪ್ರತಿವರ್ಷ ಸಾವಿರಾರು ಕೋಳಿಗಳು ಬಲಿಯಾಗುತ್ತವೆ.


ಇದನ್ನೂ ಓದಿ: ಸಮಾಜದ ಆರೋಗ್ಯ ಮುಖ್ಯ, ಆದಾಯ ಅಲ್ಲ: ಅಕ್ರಮ ಮದ್ಯ ನಿಷೇದಕ್ಕೆ ಆಗ್ರಹಿಸಿ ಟ್ವಿಟರ್‌ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇನ್ನಾದರೂ ಬುದ್ದಿ ಬರಲಿ.
    ಕೋಳಿಗಳು ಕೂಡ ಇಂತಹ ಸಾವು ಸಾಯುತ್ತವೆ ಎಂದು.

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...