Homeಮುಖಪುಟತೆಲಂಗಾಣ ಮರ್ಯಾದಾಗೇಡು ಹತ್ಯೆ ಪ್ರಕರಣದ ಶಿಕ್ಷೆ ಪ್ರಕಟ; ಒಬ್ಬರಿಗೆ ಮರಣದಂಡನೆ; 6 ಜನರಿಗೆ ಜೀವಾವಧಿ

ತೆಲಂಗಾಣ ಮರ್ಯಾದಾಗೇಡು ಹತ್ಯೆ ಪ್ರಕರಣದ ಶಿಕ್ಷೆ ಪ್ರಕಟ; ಒಬ್ಬರಿಗೆ ಮರಣದಂಡನೆ; 6 ಜನರಿಗೆ ಜೀವಾವಧಿ

- Advertisement -
- Advertisement -

ತೆಲಂಗಾಣದ ನಲ್ಗೊಂಡ ಜಿಲ್ಲೆಯ ಮಿರಿಯಾಲಗುಡದಲ್ಲಿ 2018 ರಲ್ಲಿ ನಡೆದ 23 ವರ್ಷದ ದಲಿತ ಯುವಕನ ಮರ್ಯಾದಾಗೇಡು ಹತ್ಯೆಗೆ ಸಂಬಂಧಿಸಿದಂತೆ ರಾಜ್ಯದ ನ್ಯಾಯಾಲಯವು ಸೋಮವಾರದಂದು ಅಪರಾಧಿಗಳಲ್ಲಿ ಒಬ್ಬ ವ್ಯಕ್ತಿಗೆ ಮರಣದಂಡನೆ ಶಿಕ್ಷೆ ಮತ್ತು ಇತರ ಆರು ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ತೆಲಂಗಾಣ ಮರ್ಯಾದಾಗೇಡು ಹತ್ಯೆ

ದಲಿತ ಪ್ರಣಯ್ ಅವರನ್ನು ಕೊಲ್ಲಲು ಆರೋಪಿ ಸುಭಾಷ್ ಶರ್ಮಾ ಅವರನ್ನು ನೇಮಿಸಲಾಗಿತ್ತು ಎಂದು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಅವರಿಗೆ ಮರಣದಂಡನೆ  ವಿಧಿಸಿದೆ. ನ್ಯಾಯಾಲಯವು ಶರ್ಮಾಗೆ 15,000 ರೂ. ಮತ್ತು ಇತರ ಆರು ಅಪರಾಧಿಗಳಿಗೆ ತಲಾ 10,000 ರೂ. ದಂಡವನ್ನು ವಿಧಿಸಿದೆ. ತೆಲಂಗಾಣ ಮರ್ಯಾದಾಗೇಡು ಹತ್ಯೆ

ಸೆಪ್ಟೆಂಬರ್ 14, 2018 ರಂದು ನಲ್ಗೊಂಡದ ಆಸ್ಪತ್ರೆಯಿಂದ ಹೊರಬರುತ್ತಿದ್ದಾಗ, ‘ಮೇಲ್ಜಾತಿ’ಯ ಕುಟುಂಬಕ್ಕೆ ಸೇರಿದ ಅವರ ಗರ್ಭಿಣಿ ಪತ್ನಿ ಅಮೃತ ವರ್ಷಿಣಿ ಅವರ ಮುಂದೆಯೆ ಪ್ರಣಯ್ ಅವರನ್ನು ಕೊಂದು ಹಾಕಲಾಗಿತ್ತು.

ಪ್ರಣಯ್‌ ಮತ್ತು ಅಮೃತ ವರ್ಷಿಣಿಯವರ ಕುಟುಂಬವು ಅವರ ಪ್ರೇಮ ಸಂಬಂಧವನ್ನು ವಿರೋಧಿಸಿದ್ದರಿಂದ ದಂಪತಿಗಳು 2018 ರ ಜನವರಿಯಲ್ಲಿ ಓಡಿಹೋಗಿ ವಿವಾಹವಾಗಿದ್ದರು. ಕೊಲೆಯಾದ ಒಂದು ದಿನದ ನಂತರ, ತನ್ನ ಗಂಡನ ಕೊಲೆಗೆ ತನ್ನ ತಂದೆ ಟಿ. ಮಾರುತಿ ರಾವ್ ಅವರೆ ಕಾರಣ ಎಂದು ಅಮೃತ ವರ್ಷಿಣಿ ಅವರು ಆರೋಪಿಸಿದ್ದರು.

2019 ರಲ್ಲಿ, ನಲ್ಗೊಂಡ ಪೊಲೀಸರು ಕೊಲೆ (302), ಕ್ರಿಮಿನಲ್ ಪಿತೂರಿ (120B), ಪ್ರಚೋದನೆ (109) ಮತ್ತು ಭಾರತೀಯ ಶಸ್ತ್ರಾಸ್ತ್ರ ಕಾಯ್ದೆಯ ನಿಬಂಧನೆಗಳಿಗೆ ಸಂಬಂಧಿಸಿದ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಪಟ್ಟಿ ಸಲ್ಲಿಸಿದ್ದರ. ಪ್ರಕರಣದಲ್ಲಿ ಎಂಟು ಆರೋಪಿಗಳನ್ನು ಹೆಸರಿಸಲಾಗಿತ್ತು.

ಅದಾಗ್ಯೂ, 2020 ಮಾರ್ಚ್‌ ತಿಂಗಳಲ್ಲಿ ಜಾಮೀನಿನ ಮೇಲೆ ಹೊರಬಂದಿದ್ದ ಮಾರುತಿ ರಾವ್ ಹೈದರಾಬಾದ್‌ನ ಹೋಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಅವರು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು ನಂಬಲಾಗಿದೆ. ಮಾರುತಿ ರಾವ್ ಅವರು ತನ್ನ ಮಗಳ ಗಂಡ ಪ್ರಣಯ್ ಅವರನ್ನು ಕೊಲೆ ಮಾಡಲು ಸುಭಾಷ್‌ ಶರ್ಮಾಗೆ 1 ಕೋಟಿ ರೂ. ಪಾವತಿಸಿದ್ದಾರೆ ಎಂದು ಆರೋಪ ಮಾಡಲಾಗಿತ್ತು.

ದುಷ್ಕರ್ಮಿ ಶರ್ಮಾ ಪ್ರಣಯ್ ಅವರನ್ನು ಅಮೃತ ವರ್ಷಿಣಿ ಅವರ ಮುಂದೆಯೆ ಹತ್ಯ ಮಾಡುವ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಭಾರತದಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸಂಭಾಲ್ ಮಸೀದಿಯ ಹೊರ ಗೋಡೆಗೆ ಸುಣ್ಣ ಬಳಿದರೆ ಸಮಸ್ಯೆ ಏನು? – ಅಲಹಾಬಾದ್ ಹೈಕೋರ್ಟ್‌

ಸಂಭಾಲ್ ಮಸೀದಿಯ ಹೊರ ಗೋಡೆಗೆ ಸುಣ್ಣ ಬಳಿದರೆ ಸಮಸ್ಯೆ ಏನು? – ಅಲಹಾಬಾದ್ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...