Homeಮುಖಪುಟತೆಲಂಗಾಣ: ಅವಹೇಳನಕಾರಿ ಪೋಸ್ಟ್‌ ವಿರುದ್ಧ ಭಾರೀ ಪ್ರತಿಭಟನೆ; ಲಾಠಿಚಾರ್ಜ್‌

ತೆಲಂಗಾಣ: ಅವಹೇಳನಕಾರಿ ಪೋಸ್ಟ್‌ ವಿರುದ್ಧ ಭಾರೀ ಪ್ರತಿಭಟನೆ; ಲಾಠಿಚಾರ್ಜ್‌

- Advertisement -
- Advertisement -

ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿಯಾಗಿ ಹಾಕಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ ತೆಲಂಗಾಣದ ಆದಿಲಾಬಾದ್ ಜಿಲ್ಲೆಯಲ್ಲಿ ಪೊಲೀಸ್ ಠಾಣೆಯ ಹೊರಗೆ ಭಾರಿ ಪ್ರತಿಭಟನೆ ನಡೆಯಿತು. ಪೊಲೀಸರು ಲಾಠಿ ಚಾರ್ಜ್‌ ಮಾಡಿ ಗುಂಪನ್ನು ಚದುರಿಸಿದ್ದಾರೆ.

ಪೊಲೀಸರು ಬಲಪ್ರಯೋಗ ಮಾಡಿದ ವಿಡಿಯೊ ಮಾಧ್ಯಮಗಳಲ್ಲಿ ವರದಿಯಾಗಿದೆ. ಪ್ರತಿಭಟನೆಗೆ ಪ್ರಚೋದಿಸಿದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸುದ್ದಿ ಸಂಸ್ಥೆ ANI ಪೋಸ್ಟ್ ಮಾಡಿದ 17 ಸೆಕೆಂಡುಗಳ ಕ್ಲಿಪ್‌ನಲ್ಲಿ, ಪೊಲೀಸರು ಲಾಠಿಚಾರ್ಜ್ ಮಾಡಿ ಗುಂಪನ್ನು ಚದುರಿಸುತ್ತಿರುವುದನ್ನು ಕಾಣಬಹುದು. ಗೊಂದಲದ ನಡುವೆಯೇ ಪ್ರತಿಭಟನಾಕಾರರು ಸ್ಥಳದಿಂದ ನಿರ್ಗಮಿಸಿದ್ದಾರೆ. ಒನ್ ಟೌನ್ ಪೊಲೀಸ್ ಠಾಣೆಯ ಹೊರಭಾಗದಲ್ಲಿ ಪ್ರತಿಭಟನೆ ನಡೆದಿದೆ ಎಂದು ಎಎನ್‌ಐ ವರದಿ ಮಾಡಿದೆ.

“ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವುದಕ್ಕಾಗಿ ಒಬ್ಬ ವ್ಯಕ್ತಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದೇವೆ ಹಾಗೂ ಆರೋಪಿಗಳನ್ನು ನಾವು ಬಂಧಿಸಿದ್ದೇವೆ. ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ” ಎಂದು ಆದಿಲಾಬಾದ್ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಉದಯ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಇದನ್ನೂ ಓದಿರಿ: ಬಿಬಿಸಿ ಸಂದರ್ಶನದ ವೇಳೆ ಸಿಟ್ಟಿಗೆದ್ದ ಸ್ವಘೋಷಿತ ದೇವಮಾನವ ‘ಜಗ್ಗಿ ವಾಸುದೇವ್‌’

ಪ್ರವಾದಿ ಮೊಹಮ್ಮದ್ ಕುರಿತು ಅವಹೇಳನಕಾರಿಯಾಗಿ ಮಾತನಾಡಿ ಬಿಜೆಪಿಯಿಂದ ಹೊರದೂಡಲ್ಪಟ್ಟ ನೂಪುರ್ ಶರ್ಮಾ ನವೀನ್ ಜಿಂದಾಲ್ ‌ಅವರ ವಿರುದ್ಧ ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ಹಲವಾರು ರಾಜ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಉತ್ತರ ಪ್ರದೇಶದಲ್ಲಿ ಪ್ರತಿಭಟನೆಗಳು ಜೋರಾದ ಬೆನ್ನಲ್ಲೇ ಸಹರಾನ್‌ಪುರ ಮತ್ತು ಕಾನ್ಪುರದ ಬೀದಿಗಳಲ್ಲಿ ಶನಿವಾರ ಬುಲ್ಡೋಜರ್‌ಗಳು ಕಾಣಿಸಿಕೊಂಡಿದ್ದು ಹಲವು ಮನೆಗಳನ್ನು ಧ್ವಂಸಗೊಳಿಸಲಾಗಿದೆ.

ಉತ್ತರ ಪ್ರದೇಶದಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿವೆ. ಘಟನೆಗೆ ಸಂಬಂಧಿಸಿದಂತೆ ಆರು ಜಿಲ್ಲೆಗಳಲ್ಲಿ 200ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಪ್ರಯಾಗ್‌ರಾಜ್‌ನಿಂದ 68 ಜನರನ್ನು ಬಂಧಿಸಲಾಗಿದ್ದು, 50 ಜನರನ್ನು ಹತ್ರಾಸ್‌ನಲ್ಲಿ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಸಹರಾನ್‌ಪುರದಿಂದ ನಲವತ್ತೆಂಟು ಜನರನ್ನು, ಅಂಬೇಡ್ಕರ್‌ನಗರದಲ್ಲಿ 28 ಜನ, ಮೊರಾದಾಬಾದ್‌ನಲ್ಲಿ 25 ಜನರನ್ನು ಮತ್ತು  ಫಿರೋಜಾಬಾದ್‌ನಲ್ಲಿ ಎಂಟು ಮಂದಿಯನ್ನು ಬಂಧಿಸಲಾಗಿದೆ. ಒಟ್ಟಾರೆಯಾಗಿ 227 ಜನರನ್ನು ಬಂಧಿಸಲಾಗಿದೆ.

ಇದರ ಜೊತೆಗೆ ಜಾರ್ಖಂಡ್‌ನ ರಾಂಚಿ, ಸಹರಾನ್‌ಪುರ ಮತ್ತು ಯುಪಿಯ ಪ್ರಯಾಗ್‌ರಾಜ್‌ನಲ್ಲೂ ಕಲ್ಲು ತೂರಾಟ ಮತ್ತು ಬೆಂಕಿ ಹಚ್ಚಿದ ಘಟನೆಗಳು ವರದಿಯಾಗಿವೆ. ಪ್ರತಿಭಟನಾ ಸ್ಥಳಗಳಲ್ಲಿ ದೊರಕಿದ ವಿಡಿಯೋ ದೃಶ್ಯಾವಳಿಗಳನ್ನು ಆಧರಿಸಿ ಪ್ರತಿಭಟನಾಕಾರರನ್ನು ಬಂಧಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...