Homeದಲಿತ್ ಫೈಲ್ಸ್ತೆಲಂಗಾಣ| ದಲಿತ ಸಹೋದ್ಯೋಗಿ ವಿರುದ್ಧ ಅವಹೇಳನಾಕಾರಿ ಪದ ಬಳಕೆ; ವಿಷಾಧ ವ್ಯಕ್ತಪಡಿಸಿದ ಸಚಿವ ಪೊನ್ನಮ್ ಪ್ರಭಾಕರ್

ತೆಲಂಗಾಣ| ದಲಿತ ಸಹೋದ್ಯೋಗಿ ವಿರುದ್ಧ ಅವಹೇಳನಾಕಾರಿ ಪದ ಬಳಕೆ; ವಿಷಾಧ ವ್ಯಕ್ತಪಡಿಸಿದ ಸಚಿವ ಪೊನ್ನಮ್ ಪ್ರಭಾಕರ್

- Advertisement -
- Advertisement -

ತನ್ನ ಸಂಪುಟ ಸಹೋದ್ಯೋಗಿ ಹಾಗೂ ದಲಿತ ಸಚಿವರ ವಿರುದ್ಧ ಅವಹೇಳನಕಾರಿ ಪದ ಬಳಸಿದ್ದಕ್ಕಾಗಿ ತೆಲಂಗಾಣದ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪೊನ್ನಮ್ ಪ್ರಭಾಕರ್ ಅವರು ವಿಷಾಧ ವ್ಯಕ್ತಪಡಿಸಿದ್ದಾರೆ.

ಸಾವರ್ವಜನಿಕ ಸಭೆಯೊಂದರಲ್ಲಿ ಪರಿಶಿಷ್ಟ ಜಾತಿ ಕಲ್ಯಾಣ ಸಚಿವ ಅಡ್ಲೂರಿ ಲಕ್ಷ್ಮಣ್ ಕುಮಾರ್ ಅವರ ಬಗ್ಗೆ ತಾವಾಡಿದ ಮಾತುಗಳಿಗೆ ಸಚಿವರು ಪ್ರತಿಕ್ರಿಯೆ ನಿಡಿದ್ದಾರೆ.

ನಿನ್ನೆ ತಡರಾತ್ರಿ ಬಿಡುಗಡೆಯಾದ ಹೇಳಿಕೆಯಲ್ಲಿ, ಲಕ್ಷ್ಮಣ್‌ ಕುಮಾರ್ ಅವರನ್ನು ನನ್ನ ‘ಸಹೋದರನಂತೆ’ ಎಂದು ಸಚಿವರು ಹೇಳಿದರು. “ಕಾಂಗ್ರೆಸ್ ಪಕ್ಷದಲ್ಲಿ ನಮ್ಮ ಸ್ನೇಹ 30 ವರ್ಷಗಳನ್ನು ಹೊಂದಿದೆ, ಅದು ರಾಜಕೀಯವನ್ನು ಮೀರಿದೆ. ನಮ್ಮ ನಡುವಿನ ಬಾಂಧವ್ಯ ಮತ್ತು ಪರಸ್ಪರ ಗೌರವ ಯಾವಾಗಲೂ ಪ್ರಬಲವಾಗಿದೆ. ಯಾರೂ ನಮ್ಮನ್ನು ಬೇರ್ಪಡಿಸಲು ಸಾಧ್ಯವಿಲ್ಲ” ಎಂದು ಅವರು ಹೇಳಿದರು.

“ನಾನು ಅವರ ವಿರುದ್ಧ ಯಾವುದೇ ವೈಯಕ್ತಿಕ ಹೇಳಿಕೆಗಳನ್ನು ನೀಡಿಲ್ಲ. ತಳಮಟ್ಟದಿಂದ ಬೆಳೆದ ವ್ಯಕ್ತಿಯಾಗಿ ಮತ್ತು ಹಿಂದುಳಿದ ವರ್ಗಗಳಿಗೆ ಸೇರಿದ ನಾಯಕನಾಗಿ, ನಾನು ಯಾರ ಬಗ್ಗೆಯೂ ಅಂತಹ ಅಭಿಪ್ರಾಯವನ್ನು ಎಂದಿಗೂ ಹೊಂದಿರುವುದಿಲ್ಲ” ಎಂದಿದ್ದಾರೆ.

“ಆದರೆ, ರಾಜಕೀಯ ದುರುದ್ದೇಶದಿಂದ, ಕೆಲವರು ನನ್ನ ಹೇಳಿಕೆಗಳನ್ನು ತಿರುಚಿ ಸತ್ಯಕ್ಕೆ ವಿರುದ್ಧವಾಗಿ ಪ್ರಚಾರ ಮಾಡಿದ್ದಾರೆ. ಈ ತಪ್ಪು ತಿಳುವಳಿಕೆಗಳಿಂದಾಗಿ, ಅಣ್ಣ ಅಡ್ಲೂರಿ ಲಕ್ಷ್ಮಣ್ ಕುಮಾರ್ ಅವರಂತಹ ವ್ಯಕ್ತಿಯ ಭಾವನೆಗಳಿಗೆ ನೋವುಂಟಾಗಿದೆ ಎಂದು ತಿಳಿದು ನನಗೆ ತುಂಬಾ ದುಃಖವಾಗಿದೆ” ಎಂದು ಪ್ರಭಾಕರ್ ಹೇಳಿದರು.

“ಅಡ್ಲೂರಿ ಲಕ್ಷ್ಮಣ್ ಕುಮಾರ್ ಅವರ ಭಾವನೆಗಳಿಗೆ ನೋವಾಗಿದ್ದರೆ ನನಗೆ ವಿಷಾದವಿದೆ. ಕಾಂಗ್ರೆಸ್ ಪಕ್ಷದ ತತ್ವಗಳನ್ನು ಬಲಪಡಿಸಲು, ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಸಾಮಾಜಿಕ ನ್ಯಾಯವನ್ನು ಸಾಧಿಸಲು ಮತ್ತು ಜನರ ಕಲ್ಯಾಣಕ್ಕಾಗಿ ಶ್ರಮಿಸಲು ನಾವಿಬ್ಬರೂ ಒಟ್ಟಾಗಿ ಕೆಲಸ ಮಾಡುತ್ತೇವೆ” ಎಂದು ಅವರು ಹೇಳಿದರು.

ನವೆಂಬರ್ 11 ರಂದು ಜುಬಿಲಿ ಹಿಲ್ಸ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿವಾದ ಪ್ರಾರಂಭವಾಯಿತು. ಲಕ್ಷ್ಮಣ್‌ ಕುಮಾರ್ ಬರುವುದಕ್ಕಾಗಿ ಕಾಯುತ್ತಿದ್ದರು ಪ್ರಭಾಕರ್, ವಿಳಂಬದಿಂದ ಸಿಟ್ಟಾಗಿದ್ದರು. ಸಹ ಸಚಿವರೊಂದಿಗೆ ಮಾತನಾಡುವಾಗ, ಅವರು ಸಮಯಪಾಲನೆಯ ಬಗ್ಗೆ ಟೀಕಿಸಿದರು. ಲಕ್ಷ್ಮಣ್‌ ಕುಮಾರ್ ಅವರನ್ನು ಎಮ್ಮ (ತೆಲುಗಿನಲ್ಲಿ ಧುನ್ನಪೋತು) ಎಂದು ಉಲ್ಲೇಖಿಸಿದರು. ಸುದ್ದಿವಾಹಿನಿಗಳು ಮಾಧ್ಯಮ ಪ್ರಸಾರಕ್ಕಾಗಿ ಇಟ್ಟಿದ್ದ ಮೈಕ್ರೊಫೋನ್‌ಗಳು ಈ ಹೇಳಿಕೆಯನ್ನು ಸೆರೆಹಿಡಿದಿದ್ದವು.

ಪರಿಶಿಷ್ಟ ಜಾತಿ ಮಾದಿಗ ಸಮುದಾಯಕ್ಕೆ ಸೇರಿದ ಲಕ್ಷ್ಮಣ್‌ ಕುಮಾರ್, ತಮ್ಮ ಸಂಪುಟ ಸಹೋದ್ಯೋಗಿಯ ಹೇಳಿಕೆಗೆ ತೀವ್ರ ದುಃಖ ವ್ಯಕ್ತಪಡಿಸಿ ಭಾವನಾತ್ಮಕ ವೀಡಿಯೊ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಈ ಹೇಳಿಕೆಯನ್ನು ಅವರು ಜಾತಿವಾದಿ ಅವಮಾನವೆಂದು ಪರಿಗಣಿಸಿದ್ದು, ಅದು ಅವರನ್ನು ಮಾತ್ರವಲ್ಲದೆ ತಮ್ಮ ಸಮುದಾಯವನ್ನೂ ನಾಚಿಕೆಪಡಿಸಿದೆ, ಸಾರ್ವಜನಿಕ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದರು. ಪ್ರಭಾಕರ್ ಕ್ಷಮೆಯಾಚಿಸದಿದ್ದರೆ, ಈ ವಿಷಯವನ್ನು ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ಹಿರಿಯ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಕೊಂಡೊಯ್ಯುವುದಾಗಿ ಕುಮಾರ್ ಎಚ್ಚರಿಸಿದರು.

ಕರೀಂನಗರ ಜಿಲ್ಲೆಯ ಪ್ರಭಾವಿ ನಾಯಕರು ಮತ್ತು ಕಾಂಗ್ರೆಸ್ ಸರ್ಕಾರದ ಪ್ರಮುಖ ವ್ಯಕ್ತಿಗಳಾದ ಹಿರಿಯ ಸಚಿವರ ನಡುವಿನ ಸಾರ್ವಜನಿಕ ಜಗಳವು ನಿರ್ಣಾಯಕ ಸ್ಥಳೀಯ ಸಂಸ್ಥೆ ಚುನಾವಣೆ ಮತ್ತು ಜುಬಿಲಿ ಹಿಲ್ಸ್ ಉಪಚುನಾವಣೆಗೆ ಮೊದಲು ಕೋಲಾಹಲಕ್ಕೆ ಕಾರಣವಾಯಿತು.

ಪರಿಸ್ಥಿತಿಯ ಗಂಭೀರತೆಯನ್ನು ಅರ್ಥಮಾಡಿಕೊಂಡ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಬಿ ಮಹೇಶ್ ಕುಮಾರ್ ಗೌಡ್, ಮಧ್ಯಪ್ರವೇಶಿಸಿ ಇಬ್ಬರೂ ಸಚಿವರೊಂದಿಗೆ ಮಾತನಾಡಿದರತು. ಸಂಯಮ ಮತ್ತು ಸಮನ್ವಯವನ್ನು ಕಾಯ್ದುಕೊಳ್ಳುವಂತೆ ಒತ್ತಾಯಿಸಿದರು.

ದಲಿತ ಸಹೋದ್ಯೋಗಿಯನ್ನು ‘ಎಮ್ಮೆ’ ಎಂದು ಟೀಕಿಸಿದ ತೆಲಂಗಾಣ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...