Homeದಲಿತ್ ಫೈಲ್ಸ್ತೆಲಂಗಾಣ| ದಲಿತ ಸಹೋದ್ಯೋಗಿ ವಿರುದ್ಧ ಅವಹೇಳನಾಕಾರಿ ಪದ ಬಳಕೆ; ವಿಷಾಧ ವ್ಯಕ್ತಪಡಿಸಿದ ಸಚಿವ ಪೊನ್ನಮ್ ಪ್ರಭಾಕರ್

ತೆಲಂಗಾಣ| ದಲಿತ ಸಹೋದ್ಯೋಗಿ ವಿರುದ್ಧ ಅವಹೇಳನಾಕಾರಿ ಪದ ಬಳಕೆ; ವಿಷಾಧ ವ್ಯಕ್ತಪಡಿಸಿದ ಸಚಿವ ಪೊನ್ನಮ್ ಪ್ರಭಾಕರ್

- Advertisement -
- Advertisement -

ತನ್ನ ಸಂಪುಟ ಸಹೋದ್ಯೋಗಿ ಹಾಗೂ ದಲಿತ ಸಚಿವರ ವಿರುದ್ಧ ಅವಹೇಳನಕಾರಿ ಪದ ಬಳಸಿದ್ದಕ್ಕಾಗಿ ತೆಲಂಗಾಣದ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪೊನ್ನಮ್ ಪ್ರಭಾಕರ್ ಅವರು ವಿಷಾಧ ವ್ಯಕ್ತಪಡಿಸಿದ್ದಾರೆ.

ಸಾವರ್ವಜನಿಕ ಸಭೆಯೊಂದರಲ್ಲಿ ಪರಿಶಿಷ್ಟ ಜಾತಿ ಕಲ್ಯಾಣ ಸಚಿವ ಅಡ್ಲೂರಿ ಲಕ್ಷ್ಮಣ್ ಕುಮಾರ್ ಅವರ ಬಗ್ಗೆ ತಾವಾಡಿದ ಮಾತುಗಳಿಗೆ ಸಚಿವರು ಪ್ರತಿಕ್ರಿಯೆ ನಿಡಿದ್ದಾರೆ.

ನಿನ್ನೆ ತಡರಾತ್ರಿ ಬಿಡುಗಡೆಯಾದ ಹೇಳಿಕೆಯಲ್ಲಿ, ಲಕ್ಷ್ಮಣ್‌ ಕುಮಾರ್ ಅವರನ್ನು ನನ್ನ ‘ಸಹೋದರನಂತೆ’ ಎಂದು ಸಚಿವರು ಹೇಳಿದರು. “ಕಾಂಗ್ರೆಸ್ ಪಕ್ಷದಲ್ಲಿ ನಮ್ಮ ಸ್ನೇಹ 30 ವರ್ಷಗಳನ್ನು ಹೊಂದಿದೆ, ಅದು ರಾಜಕೀಯವನ್ನು ಮೀರಿದೆ. ನಮ್ಮ ನಡುವಿನ ಬಾಂಧವ್ಯ ಮತ್ತು ಪರಸ್ಪರ ಗೌರವ ಯಾವಾಗಲೂ ಪ್ರಬಲವಾಗಿದೆ. ಯಾರೂ ನಮ್ಮನ್ನು ಬೇರ್ಪಡಿಸಲು ಸಾಧ್ಯವಿಲ್ಲ” ಎಂದು ಅವರು ಹೇಳಿದರು.

“ನಾನು ಅವರ ವಿರುದ್ಧ ಯಾವುದೇ ವೈಯಕ್ತಿಕ ಹೇಳಿಕೆಗಳನ್ನು ನೀಡಿಲ್ಲ. ತಳಮಟ್ಟದಿಂದ ಬೆಳೆದ ವ್ಯಕ್ತಿಯಾಗಿ ಮತ್ತು ಹಿಂದುಳಿದ ವರ್ಗಗಳಿಗೆ ಸೇರಿದ ನಾಯಕನಾಗಿ, ನಾನು ಯಾರ ಬಗ್ಗೆಯೂ ಅಂತಹ ಅಭಿಪ್ರಾಯವನ್ನು ಎಂದಿಗೂ ಹೊಂದಿರುವುದಿಲ್ಲ” ಎಂದಿದ್ದಾರೆ.

“ಆದರೆ, ರಾಜಕೀಯ ದುರುದ್ದೇಶದಿಂದ, ಕೆಲವರು ನನ್ನ ಹೇಳಿಕೆಗಳನ್ನು ತಿರುಚಿ ಸತ್ಯಕ್ಕೆ ವಿರುದ್ಧವಾಗಿ ಪ್ರಚಾರ ಮಾಡಿದ್ದಾರೆ. ಈ ತಪ್ಪು ತಿಳುವಳಿಕೆಗಳಿಂದಾಗಿ, ಅಣ್ಣ ಅಡ್ಲೂರಿ ಲಕ್ಷ್ಮಣ್ ಕುಮಾರ್ ಅವರಂತಹ ವ್ಯಕ್ತಿಯ ಭಾವನೆಗಳಿಗೆ ನೋವುಂಟಾಗಿದೆ ಎಂದು ತಿಳಿದು ನನಗೆ ತುಂಬಾ ದುಃಖವಾಗಿದೆ” ಎಂದು ಪ್ರಭಾಕರ್ ಹೇಳಿದರು.

“ಅಡ್ಲೂರಿ ಲಕ್ಷ್ಮಣ್ ಕುಮಾರ್ ಅವರ ಭಾವನೆಗಳಿಗೆ ನೋವಾಗಿದ್ದರೆ ನನಗೆ ವಿಷಾದವಿದೆ. ಕಾಂಗ್ರೆಸ್ ಪಕ್ಷದ ತತ್ವಗಳನ್ನು ಬಲಪಡಿಸಲು, ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಸಾಮಾಜಿಕ ನ್ಯಾಯವನ್ನು ಸಾಧಿಸಲು ಮತ್ತು ಜನರ ಕಲ್ಯಾಣಕ್ಕಾಗಿ ಶ್ರಮಿಸಲು ನಾವಿಬ್ಬರೂ ಒಟ್ಟಾಗಿ ಕೆಲಸ ಮಾಡುತ್ತೇವೆ” ಎಂದು ಅವರು ಹೇಳಿದರು.

ನವೆಂಬರ್ 11 ರಂದು ಜುಬಿಲಿ ಹಿಲ್ಸ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿವಾದ ಪ್ರಾರಂಭವಾಯಿತು. ಲಕ್ಷ್ಮಣ್‌ ಕುಮಾರ್ ಬರುವುದಕ್ಕಾಗಿ ಕಾಯುತ್ತಿದ್ದರು ಪ್ರಭಾಕರ್, ವಿಳಂಬದಿಂದ ಸಿಟ್ಟಾಗಿದ್ದರು. ಸಹ ಸಚಿವರೊಂದಿಗೆ ಮಾತನಾಡುವಾಗ, ಅವರು ಸಮಯಪಾಲನೆಯ ಬಗ್ಗೆ ಟೀಕಿಸಿದರು. ಲಕ್ಷ್ಮಣ್‌ ಕುಮಾರ್ ಅವರನ್ನು ಎಮ್ಮ (ತೆಲುಗಿನಲ್ಲಿ ಧುನ್ನಪೋತು) ಎಂದು ಉಲ್ಲೇಖಿಸಿದರು. ಸುದ್ದಿವಾಹಿನಿಗಳು ಮಾಧ್ಯಮ ಪ್ರಸಾರಕ್ಕಾಗಿ ಇಟ್ಟಿದ್ದ ಮೈಕ್ರೊಫೋನ್‌ಗಳು ಈ ಹೇಳಿಕೆಯನ್ನು ಸೆರೆಹಿಡಿದಿದ್ದವು.

ಪರಿಶಿಷ್ಟ ಜಾತಿ ಮಾದಿಗ ಸಮುದಾಯಕ್ಕೆ ಸೇರಿದ ಲಕ್ಷ್ಮಣ್‌ ಕುಮಾರ್, ತಮ್ಮ ಸಂಪುಟ ಸಹೋದ್ಯೋಗಿಯ ಹೇಳಿಕೆಗೆ ತೀವ್ರ ದುಃಖ ವ್ಯಕ್ತಪಡಿಸಿ ಭಾವನಾತ್ಮಕ ವೀಡಿಯೊ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಈ ಹೇಳಿಕೆಯನ್ನು ಅವರು ಜಾತಿವಾದಿ ಅವಮಾನವೆಂದು ಪರಿಗಣಿಸಿದ್ದು, ಅದು ಅವರನ್ನು ಮಾತ್ರವಲ್ಲದೆ ತಮ್ಮ ಸಮುದಾಯವನ್ನೂ ನಾಚಿಕೆಪಡಿಸಿದೆ, ಸಾರ್ವಜನಿಕ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದರು. ಪ್ರಭಾಕರ್ ಕ್ಷಮೆಯಾಚಿಸದಿದ್ದರೆ, ಈ ವಿಷಯವನ್ನು ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ಹಿರಿಯ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಕೊಂಡೊಯ್ಯುವುದಾಗಿ ಕುಮಾರ್ ಎಚ್ಚರಿಸಿದರು.

ಕರೀಂನಗರ ಜಿಲ್ಲೆಯ ಪ್ರಭಾವಿ ನಾಯಕರು ಮತ್ತು ಕಾಂಗ್ರೆಸ್ ಸರ್ಕಾರದ ಪ್ರಮುಖ ವ್ಯಕ್ತಿಗಳಾದ ಹಿರಿಯ ಸಚಿವರ ನಡುವಿನ ಸಾರ್ವಜನಿಕ ಜಗಳವು ನಿರ್ಣಾಯಕ ಸ್ಥಳೀಯ ಸಂಸ್ಥೆ ಚುನಾವಣೆ ಮತ್ತು ಜುಬಿಲಿ ಹಿಲ್ಸ್ ಉಪಚುನಾವಣೆಗೆ ಮೊದಲು ಕೋಲಾಹಲಕ್ಕೆ ಕಾರಣವಾಯಿತು.

ಪರಿಸ್ಥಿತಿಯ ಗಂಭೀರತೆಯನ್ನು ಅರ್ಥಮಾಡಿಕೊಂಡ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಬಿ ಮಹೇಶ್ ಕುಮಾರ್ ಗೌಡ್, ಮಧ್ಯಪ್ರವೇಶಿಸಿ ಇಬ್ಬರೂ ಸಚಿವರೊಂದಿಗೆ ಮಾತನಾಡಿದರತು. ಸಂಯಮ ಮತ್ತು ಸಮನ್ವಯವನ್ನು ಕಾಯ್ದುಕೊಳ್ಳುವಂತೆ ಒತ್ತಾಯಿಸಿದರು.

ದಲಿತ ಸಹೋದ್ಯೋಗಿಯನ್ನು ‘ಎಮ್ಮೆ’ ಎಂದು ಟೀಕಿಸಿದ ತೆಲಂಗಾಣ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...