Homeದಲಿತ್ ಫೈಲ್ಸ್ತೆಲಂಗಾಣ| ದಲಿತ ಸಹೋದ್ಯೋಗಿ ವಿರುದ್ಧ ಅವಹೇಳನಾಕಾರಿ ಪದ ಬಳಕೆ; ವಿಷಾಧ ವ್ಯಕ್ತಪಡಿಸಿದ ಸಚಿವ ಪೊನ್ನಮ್ ಪ್ರಭಾಕರ್

ತೆಲಂಗಾಣ| ದಲಿತ ಸಹೋದ್ಯೋಗಿ ವಿರುದ್ಧ ಅವಹೇಳನಾಕಾರಿ ಪದ ಬಳಕೆ; ವಿಷಾಧ ವ್ಯಕ್ತಪಡಿಸಿದ ಸಚಿವ ಪೊನ್ನಮ್ ಪ್ರಭಾಕರ್

- Advertisement -
- Advertisement -

ತನ್ನ ಸಂಪುಟ ಸಹೋದ್ಯೋಗಿ ಹಾಗೂ ದಲಿತ ಸಚಿವರ ವಿರುದ್ಧ ಅವಹೇಳನಕಾರಿ ಪದ ಬಳಸಿದ್ದಕ್ಕಾಗಿ ತೆಲಂಗಾಣದ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪೊನ್ನಮ್ ಪ್ರಭಾಕರ್ ಅವರು ವಿಷಾಧ ವ್ಯಕ್ತಪಡಿಸಿದ್ದಾರೆ.

ಸಾವರ್ವಜನಿಕ ಸಭೆಯೊಂದರಲ್ಲಿ ಪರಿಶಿಷ್ಟ ಜಾತಿ ಕಲ್ಯಾಣ ಸಚಿವ ಅಡ್ಲೂರಿ ಲಕ್ಷ್ಮಣ್ ಕುಮಾರ್ ಅವರ ಬಗ್ಗೆ ತಾವಾಡಿದ ಮಾತುಗಳಿಗೆ ಸಚಿವರು ಪ್ರತಿಕ್ರಿಯೆ ನಿಡಿದ್ದಾರೆ.

ನಿನ್ನೆ ತಡರಾತ್ರಿ ಬಿಡುಗಡೆಯಾದ ಹೇಳಿಕೆಯಲ್ಲಿ, ಲಕ್ಷ್ಮಣ್‌ ಕುಮಾರ್ ಅವರನ್ನು ನನ್ನ ‘ಸಹೋದರನಂತೆ’ ಎಂದು ಸಚಿವರು ಹೇಳಿದರು. “ಕಾಂಗ್ರೆಸ್ ಪಕ್ಷದಲ್ಲಿ ನಮ್ಮ ಸ್ನೇಹ 30 ವರ್ಷಗಳನ್ನು ಹೊಂದಿದೆ, ಅದು ರಾಜಕೀಯವನ್ನು ಮೀರಿದೆ. ನಮ್ಮ ನಡುವಿನ ಬಾಂಧವ್ಯ ಮತ್ತು ಪರಸ್ಪರ ಗೌರವ ಯಾವಾಗಲೂ ಪ್ರಬಲವಾಗಿದೆ. ಯಾರೂ ನಮ್ಮನ್ನು ಬೇರ್ಪಡಿಸಲು ಸಾಧ್ಯವಿಲ್ಲ” ಎಂದು ಅವರು ಹೇಳಿದರು.

“ನಾನು ಅವರ ವಿರುದ್ಧ ಯಾವುದೇ ವೈಯಕ್ತಿಕ ಹೇಳಿಕೆಗಳನ್ನು ನೀಡಿಲ್ಲ. ತಳಮಟ್ಟದಿಂದ ಬೆಳೆದ ವ್ಯಕ್ತಿಯಾಗಿ ಮತ್ತು ಹಿಂದುಳಿದ ವರ್ಗಗಳಿಗೆ ಸೇರಿದ ನಾಯಕನಾಗಿ, ನಾನು ಯಾರ ಬಗ್ಗೆಯೂ ಅಂತಹ ಅಭಿಪ್ರಾಯವನ್ನು ಎಂದಿಗೂ ಹೊಂದಿರುವುದಿಲ್ಲ” ಎಂದಿದ್ದಾರೆ.

“ಆದರೆ, ರಾಜಕೀಯ ದುರುದ್ದೇಶದಿಂದ, ಕೆಲವರು ನನ್ನ ಹೇಳಿಕೆಗಳನ್ನು ತಿರುಚಿ ಸತ್ಯಕ್ಕೆ ವಿರುದ್ಧವಾಗಿ ಪ್ರಚಾರ ಮಾಡಿದ್ದಾರೆ. ಈ ತಪ್ಪು ತಿಳುವಳಿಕೆಗಳಿಂದಾಗಿ, ಅಣ್ಣ ಅಡ್ಲೂರಿ ಲಕ್ಷ್ಮಣ್ ಕುಮಾರ್ ಅವರಂತಹ ವ್ಯಕ್ತಿಯ ಭಾವನೆಗಳಿಗೆ ನೋವುಂಟಾಗಿದೆ ಎಂದು ತಿಳಿದು ನನಗೆ ತುಂಬಾ ದುಃಖವಾಗಿದೆ” ಎಂದು ಪ್ರಭಾಕರ್ ಹೇಳಿದರು.

“ಅಡ್ಲೂರಿ ಲಕ್ಷ್ಮಣ್ ಕುಮಾರ್ ಅವರ ಭಾವನೆಗಳಿಗೆ ನೋವಾಗಿದ್ದರೆ ನನಗೆ ವಿಷಾದವಿದೆ. ಕಾಂಗ್ರೆಸ್ ಪಕ್ಷದ ತತ್ವಗಳನ್ನು ಬಲಪಡಿಸಲು, ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಸಾಮಾಜಿಕ ನ್ಯಾಯವನ್ನು ಸಾಧಿಸಲು ಮತ್ತು ಜನರ ಕಲ್ಯಾಣಕ್ಕಾಗಿ ಶ್ರಮಿಸಲು ನಾವಿಬ್ಬರೂ ಒಟ್ಟಾಗಿ ಕೆಲಸ ಮಾಡುತ್ತೇವೆ” ಎಂದು ಅವರು ಹೇಳಿದರು.

ನವೆಂಬರ್ 11 ರಂದು ಜುಬಿಲಿ ಹಿಲ್ಸ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿವಾದ ಪ್ರಾರಂಭವಾಯಿತು. ಲಕ್ಷ್ಮಣ್‌ ಕುಮಾರ್ ಬರುವುದಕ್ಕಾಗಿ ಕಾಯುತ್ತಿದ್ದರು ಪ್ರಭಾಕರ್, ವಿಳಂಬದಿಂದ ಸಿಟ್ಟಾಗಿದ್ದರು. ಸಹ ಸಚಿವರೊಂದಿಗೆ ಮಾತನಾಡುವಾಗ, ಅವರು ಸಮಯಪಾಲನೆಯ ಬಗ್ಗೆ ಟೀಕಿಸಿದರು. ಲಕ್ಷ್ಮಣ್‌ ಕುಮಾರ್ ಅವರನ್ನು ಎಮ್ಮ (ತೆಲುಗಿನಲ್ಲಿ ಧುನ್ನಪೋತು) ಎಂದು ಉಲ್ಲೇಖಿಸಿದರು. ಸುದ್ದಿವಾಹಿನಿಗಳು ಮಾಧ್ಯಮ ಪ್ರಸಾರಕ್ಕಾಗಿ ಇಟ್ಟಿದ್ದ ಮೈಕ್ರೊಫೋನ್‌ಗಳು ಈ ಹೇಳಿಕೆಯನ್ನು ಸೆರೆಹಿಡಿದಿದ್ದವು.

ಪರಿಶಿಷ್ಟ ಜಾತಿ ಮಾದಿಗ ಸಮುದಾಯಕ್ಕೆ ಸೇರಿದ ಲಕ್ಷ್ಮಣ್‌ ಕುಮಾರ್, ತಮ್ಮ ಸಂಪುಟ ಸಹೋದ್ಯೋಗಿಯ ಹೇಳಿಕೆಗೆ ತೀವ್ರ ದುಃಖ ವ್ಯಕ್ತಪಡಿಸಿ ಭಾವನಾತ್ಮಕ ವೀಡಿಯೊ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಈ ಹೇಳಿಕೆಯನ್ನು ಅವರು ಜಾತಿವಾದಿ ಅವಮಾನವೆಂದು ಪರಿಗಣಿಸಿದ್ದು, ಅದು ಅವರನ್ನು ಮಾತ್ರವಲ್ಲದೆ ತಮ್ಮ ಸಮುದಾಯವನ್ನೂ ನಾಚಿಕೆಪಡಿಸಿದೆ, ಸಾರ್ವಜನಿಕ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದರು. ಪ್ರಭಾಕರ್ ಕ್ಷಮೆಯಾಚಿಸದಿದ್ದರೆ, ಈ ವಿಷಯವನ್ನು ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ಹಿರಿಯ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಕೊಂಡೊಯ್ಯುವುದಾಗಿ ಕುಮಾರ್ ಎಚ್ಚರಿಸಿದರು.

ಕರೀಂನಗರ ಜಿಲ್ಲೆಯ ಪ್ರಭಾವಿ ನಾಯಕರು ಮತ್ತು ಕಾಂಗ್ರೆಸ್ ಸರ್ಕಾರದ ಪ್ರಮುಖ ವ್ಯಕ್ತಿಗಳಾದ ಹಿರಿಯ ಸಚಿವರ ನಡುವಿನ ಸಾರ್ವಜನಿಕ ಜಗಳವು ನಿರ್ಣಾಯಕ ಸ್ಥಳೀಯ ಸಂಸ್ಥೆ ಚುನಾವಣೆ ಮತ್ತು ಜುಬಿಲಿ ಹಿಲ್ಸ್ ಉಪಚುನಾವಣೆಗೆ ಮೊದಲು ಕೋಲಾಹಲಕ್ಕೆ ಕಾರಣವಾಯಿತು.

ಪರಿಸ್ಥಿತಿಯ ಗಂಭೀರತೆಯನ್ನು ಅರ್ಥಮಾಡಿಕೊಂಡ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಬಿ ಮಹೇಶ್ ಕುಮಾರ್ ಗೌಡ್, ಮಧ್ಯಪ್ರವೇಶಿಸಿ ಇಬ್ಬರೂ ಸಚಿವರೊಂದಿಗೆ ಮಾತನಾಡಿದರತು. ಸಂಯಮ ಮತ್ತು ಸಮನ್ವಯವನ್ನು ಕಾಯ್ದುಕೊಳ್ಳುವಂತೆ ಒತ್ತಾಯಿಸಿದರು.

ದಲಿತ ಸಹೋದ್ಯೋಗಿಯನ್ನು ‘ಎಮ್ಮೆ’ ಎಂದು ಟೀಕಿಸಿದ ತೆಲಂಗಾಣ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...