Homeಮುಖಪುಟತೆಲಂಗಾಣ: ಮಾದಿಗ ಮೀಸಲಾತಿ ನೆಪದಲ್ಲಿ ಮೋದಿ ಮತಬೇಟೆ

ತೆಲಂಗಾಣ: ಮಾದಿಗ ಮೀಸಲಾತಿ ನೆಪದಲ್ಲಿ ಮೋದಿ ಮತಬೇಟೆ

- Advertisement -
- Advertisement -

ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ದಲಿತ ಉಪವರ್ಗೀಕರಣದ ಬಹುಕಾಲದ ಬೇಡಿಕೆಯ ಸಮಸ್ಯೆಯನ್ನು ಪರಿಶೀಲಿಸಲು ಸಮಿತಿ ರಚಿಸುವ ಪ್ರಕ್ರಿಯೆಯನ್ನು ಪ್ರಧಾನಿ ನರೇಂದ್ರ ಮೋದಿ ಪ್ರಾರಂಭಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಮತ್ತು ಇತರ ಅಧಿಕಾರಿಗಳೊಂದಿಗೆ ಸಮಿತಿಗೆ ಸಂಬಂಧಿಸಿದ ಸಮಸ್ಯೆ ಮತ್ತು ವಿಧಾನಗಳ ಬಗ್ಗೆ ಮೋದಿ ಚರ್ಚಿಸಿದ್ದಾರೆ ಎಂದು ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ ಪತ್ರಿಕೆ ವರದಿ ಮಾಡಿದೆ.

ನವೆಂಬರ್ 11 ರಂದು ಹೈದರಾಬಾದ್‌ನಲ್ಲಿ ಮಾದಿಗ ಮೀಸಲಾತಿ ಹೋರಾಟ ಸಮಿತಿ (ಎಂಆರ್‌ಪಿಎಸ್) ಆಯೋಜಿಸಿದ್ದ ಸಭೆಯಲ್ಲಿ ದಲಿತ ಉಪವರ್ಗೀಕರಣದ ಸಮಸ್ಯೆಯನ್ನು ಪರಿಶೀಲಿಸುವುದಾಗಿ ಮೋದಿ ಭರವಸೆ ನೀಡಿದ್ದರು.

ಮಾದಿಗರ ದಲಿತ ಉಪ-ಗುಂಪು ತೆಲಂಗಾಣ ರಾಜ್ಯದಲ್ಲಿ ಒಟ್ಟು ದಲಿತ ಜನಸಂಖ್ಯೆಯ ಸುಮಾರು ಶೇ. 50ರಷ್ಟಿದೆ. ನವೆಂಬರ್ 30 ರಂದು ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿ ದಲಿತರು ಶೇ.15ರಷ್ಟಿದ್ದಾರೆ.

1994 ರಿಂದ, ಎಂಆರ್‌ಪಿಎಸ್ ಬ್ಯಾನರ್ ಅಡಿಯಲ್ಲಿ ಮಾದಿಗರು ವಿವಿಧ ದಲಿತ ಉಪ-ಗುಂಪುಗಳು ತಮ್ಮ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪಡೆಯಲು ದಲಿತರಲ್ಲಿ ಉಪ-ವರ್ಗೀಕರಣಕ್ಕೆ ಒತ್ತಾಯಿಸುತ್ತಿದ್ದಾರೆ. ಮಂದ ಕೃಷ್ಣ ಮಾದಿಗ ನೇತೃತ್ವದ ಎಂಆರ್‌ಪಿಎಸ್, ಸುಮಾರು ಶೇ. 80 ಮೀಸಲಾತಿ ಪ್ರಯೋಜನಗಳನ್ನು ಮತ್ತೊಂದು ಪ್ರಬಲ ದಲಿತ ಉಪ-ಗುಂಪಾದ ಮಾಲಾಗಳು ಅನುಭವಿಸುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟಿದೆ.

ನವೆಂಬರ್ 11 ರಂದು ಹೈದರಾಬಾದ್‌ನಲ್ಲಿ ನಡೆದ ಎಂಆರ್‌ಪಿಎಸ್ ಸಭೆಯಲ್ಲಿ ಮೋದಿಯವರ ಉಪಸ್ಥಿತಿಯು ಮಹತ್ವವನ್ನು ಪಡೆದುಕೊಂಡಿದೆ. ‘ಇಂದಿನಿಂದ ಮಾದಿಗ ಮೀಸಲಾತಿ ಹೋರಾಟ ಸಮಿತಿ (ಎಂಆರ್‌ಪಿಎಸ್) ಸಂಸ್ಥಾಪಕ ಮಂದ ಕೃಷ್ಣ ಅವರು ಸಮುದಾಯಕ್ಕೆ ದಶಕಗಳಿಂದ ಆಗುತ್ತಿರುವ ಅನ್ಯಾಯವನ್ನು ಕೊನೆಗಾಣಿಸುವ ಚಳವಳಿಯಲ್ಲಿ ನನ್ನ ನಾಯಕರಾಗಿದ್ದಾರೆ. ನಿಮ್ಮೆಲ್ಲರಿಗೂ ನ್ಯಾಯ ಸಿಗುವವರೆಗೂ ನಾನು ಅವರ ಪರ ಇರುತ್ತೇನೆ’ ಎಂದು ಎಂಆರ್‌ಪಿಎಸ್ ಸಭೆಯನ್ನುದ್ದೇಶಿಸಿ ಮೋದಿ ಹೇಳಿದ್ದರು.

ಮಾದಿಗ ಮೀಸಲಾತಿ ಹೋರಾಟಕ್ಕೆ ಮೋದಿಯವರ ಬೆಂಬಲ ಬಿಜೆಪಿಗೆ ಚುನಾವಣೆಯಲ್ಲಿ ನೆರವಾಗಲಿದೆ. ಪ್ರಸ್ತುತ ಮಾದಿಗ ಸಮುದಾಯದ ಬೆಂಬಲ ಆಡಳಿತಾರೂಢ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮತ್ತು ಕಾಂಗ್ರೆಸ್ ನಡುವೆ ಹಂಚಿಹೋಗಿದೆ. ತೆಲಂಗಾಣದಲ್ಲಿ ಮಾದಿಗರು, ಮುದಿರಾಜು ಮತ್ತು ಮುನ್ನಾರ್ ಕಾಪು ಸಮುದಾಯದ ಮೂವರು ಸ್ವಾಮೀಜಿಗಳು ಒಗ್ಗೂಡಿ ಬಿಜೆಪಿಯನ್ನು ಬೆಂಬಲಿಸಿದರೆ ಚುನಾವಣೆಯಲ್ಲಿ ಪಕ್ಷಕ್ಕೆ ದೊಡ್ಡ ಬಲ ಬರಲಿದೆ. ಮುದಿರಾಜು ಮತ್ತು ಮುನ್ನಾರ್ ಕಾಪು ರಾಜ್ಯದ ಪ್ರಬಲ ಇತರ ಹಿಂದುಳಿದ ವರ್ಗ(OBC)ಗಳಾಗಿವೆ. ಅವುಗಳು ಬಿಜೆಪಿಯನ್ನು ಬೆಂಬಲಿಸಿದರೆ ವಿಧಾನಸಭೆ ಚುನಾವಣೆಯ ಅಲ್ಲದಿದ್ದರೂ, 2024 ರ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಲಾಭವಾಗುವುದು ಖಚಿತ ಎಂಬ ಲೆಕ್ಕಚಾರದಲ್ಲಿ ಬಿಜೆಪಿ ಇದೆ ಎಂದು ಹಿಂದೂ ವರದಿ ಹೇಳಿದೆ.

ತೆಲಂಗಾಣದಲ್ಲಿ ಈ ಬಾರಿ ಪ್ರಮುಖವಾಗಿ ಆಡಳಿತಾರೂಢ ಬಿಆರ್‌ಎಸ್ ಮತ್ತು ಕಾಂಗ್ರೆಸ್ ನಡುವೆ ನೇರ ಹೋರಾಟವಿದೆ. ಈ ನಡುವೆ ಹಿಂದುಳಿದ ವರ್ಗಗಳ ಓಲೈಕೆಗೆ ಮುಂದಾಗಿರುವ ಬಿಜೆಪಿ, ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಒಬಿಸಿ ವರ್ಗದ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡುವುದಾಗಿ ಘೋಷಿಸಿದೆ. ರಾಜ್ಯದ 119 ಕ್ಷೇತ್ರಗಳಿಗೆ ನವೆಂಬರ್ 30 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಡಿಸೆಂಬರ್‌ 3ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ಇದನ್ನೂ ಓದಿ : ಉದಯನಿಧಿ ಸನಾತನ ಧರ್ಮ ಹೇಳಿಕೆ: ತೀರ್ಪು ಕಾಯ್ದಿರಿಸಿದ ಮದ್ರಾಸ್ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...