Homeಮುಖಪುಟತೆಲಂಗಾಣ: ಮಾದಿಗ ಮೀಸಲಾತಿ ನೆಪದಲ್ಲಿ ಮೋದಿ ಮತಬೇಟೆ

ತೆಲಂಗಾಣ: ಮಾದಿಗ ಮೀಸಲಾತಿ ನೆಪದಲ್ಲಿ ಮೋದಿ ಮತಬೇಟೆ

- Advertisement -
- Advertisement -

ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ದಲಿತ ಉಪವರ್ಗೀಕರಣದ ಬಹುಕಾಲದ ಬೇಡಿಕೆಯ ಸಮಸ್ಯೆಯನ್ನು ಪರಿಶೀಲಿಸಲು ಸಮಿತಿ ರಚಿಸುವ ಪ್ರಕ್ರಿಯೆಯನ್ನು ಪ್ರಧಾನಿ ನರೇಂದ್ರ ಮೋದಿ ಪ್ರಾರಂಭಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಮತ್ತು ಇತರ ಅಧಿಕಾರಿಗಳೊಂದಿಗೆ ಸಮಿತಿಗೆ ಸಂಬಂಧಿಸಿದ ಸಮಸ್ಯೆ ಮತ್ತು ವಿಧಾನಗಳ ಬಗ್ಗೆ ಮೋದಿ ಚರ್ಚಿಸಿದ್ದಾರೆ ಎಂದು ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ ಪತ್ರಿಕೆ ವರದಿ ಮಾಡಿದೆ.

ನವೆಂಬರ್ 11 ರಂದು ಹೈದರಾಬಾದ್‌ನಲ್ಲಿ ಮಾದಿಗ ಮೀಸಲಾತಿ ಹೋರಾಟ ಸಮಿತಿ (ಎಂಆರ್‌ಪಿಎಸ್) ಆಯೋಜಿಸಿದ್ದ ಸಭೆಯಲ್ಲಿ ದಲಿತ ಉಪವರ್ಗೀಕರಣದ ಸಮಸ್ಯೆಯನ್ನು ಪರಿಶೀಲಿಸುವುದಾಗಿ ಮೋದಿ ಭರವಸೆ ನೀಡಿದ್ದರು.

ಮಾದಿಗರ ದಲಿತ ಉಪ-ಗುಂಪು ತೆಲಂಗಾಣ ರಾಜ್ಯದಲ್ಲಿ ಒಟ್ಟು ದಲಿತ ಜನಸಂಖ್ಯೆಯ ಸುಮಾರು ಶೇ. 50ರಷ್ಟಿದೆ. ನವೆಂಬರ್ 30 ರಂದು ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿ ದಲಿತರು ಶೇ.15ರಷ್ಟಿದ್ದಾರೆ.

1994 ರಿಂದ, ಎಂಆರ್‌ಪಿಎಸ್ ಬ್ಯಾನರ್ ಅಡಿಯಲ್ಲಿ ಮಾದಿಗರು ವಿವಿಧ ದಲಿತ ಉಪ-ಗುಂಪುಗಳು ತಮ್ಮ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪಡೆಯಲು ದಲಿತರಲ್ಲಿ ಉಪ-ವರ್ಗೀಕರಣಕ್ಕೆ ಒತ್ತಾಯಿಸುತ್ತಿದ್ದಾರೆ. ಮಂದ ಕೃಷ್ಣ ಮಾದಿಗ ನೇತೃತ್ವದ ಎಂಆರ್‌ಪಿಎಸ್, ಸುಮಾರು ಶೇ. 80 ಮೀಸಲಾತಿ ಪ್ರಯೋಜನಗಳನ್ನು ಮತ್ತೊಂದು ಪ್ರಬಲ ದಲಿತ ಉಪ-ಗುಂಪಾದ ಮಾಲಾಗಳು ಅನುಭವಿಸುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟಿದೆ.

ನವೆಂಬರ್ 11 ರಂದು ಹೈದರಾಬಾದ್‌ನಲ್ಲಿ ನಡೆದ ಎಂಆರ್‌ಪಿಎಸ್ ಸಭೆಯಲ್ಲಿ ಮೋದಿಯವರ ಉಪಸ್ಥಿತಿಯು ಮಹತ್ವವನ್ನು ಪಡೆದುಕೊಂಡಿದೆ. ‘ಇಂದಿನಿಂದ ಮಾದಿಗ ಮೀಸಲಾತಿ ಹೋರಾಟ ಸಮಿತಿ (ಎಂಆರ್‌ಪಿಎಸ್) ಸಂಸ್ಥಾಪಕ ಮಂದ ಕೃಷ್ಣ ಅವರು ಸಮುದಾಯಕ್ಕೆ ದಶಕಗಳಿಂದ ಆಗುತ್ತಿರುವ ಅನ್ಯಾಯವನ್ನು ಕೊನೆಗಾಣಿಸುವ ಚಳವಳಿಯಲ್ಲಿ ನನ್ನ ನಾಯಕರಾಗಿದ್ದಾರೆ. ನಿಮ್ಮೆಲ್ಲರಿಗೂ ನ್ಯಾಯ ಸಿಗುವವರೆಗೂ ನಾನು ಅವರ ಪರ ಇರುತ್ತೇನೆ’ ಎಂದು ಎಂಆರ್‌ಪಿಎಸ್ ಸಭೆಯನ್ನುದ್ದೇಶಿಸಿ ಮೋದಿ ಹೇಳಿದ್ದರು.

ಮಾದಿಗ ಮೀಸಲಾತಿ ಹೋರಾಟಕ್ಕೆ ಮೋದಿಯವರ ಬೆಂಬಲ ಬಿಜೆಪಿಗೆ ಚುನಾವಣೆಯಲ್ಲಿ ನೆರವಾಗಲಿದೆ. ಪ್ರಸ್ತುತ ಮಾದಿಗ ಸಮುದಾಯದ ಬೆಂಬಲ ಆಡಳಿತಾರೂಢ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಮತ್ತು ಕಾಂಗ್ರೆಸ್ ನಡುವೆ ಹಂಚಿಹೋಗಿದೆ. ತೆಲಂಗಾಣದಲ್ಲಿ ಮಾದಿಗರು, ಮುದಿರಾಜು ಮತ್ತು ಮುನ್ನಾರ್ ಕಾಪು ಸಮುದಾಯದ ಮೂವರು ಸ್ವಾಮೀಜಿಗಳು ಒಗ್ಗೂಡಿ ಬಿಜೆಪಿಯನ್ನು ಬೆಂಬಲಿಸಿದರೆ ಚುನಾವಣೆಯಲ್ಲಿ ಪಕ್ಷಕ್ಕೆ ದೊಡ್ಡ ಬಲ ಬರಲಿದೆ. ಮುದಿರಾಜು ಮತ್ತು ಮುನ್ನಾರ್ ಕಾಪು ರಾಜ್ಯದ ಪ್ರಬಲ ಇತರ ಹಿಂದುಳಿದ ವರ್ಗ(OBC)ಗಳಾಗಿವೆ. ಅವುಗಳು ಬಿಜೆಪಿಯನ್ನು ಬೆಂಬಲಿಸಿದರೆ ವಿಧಾನಸಭೆ ಚುನಾವಣೆಯ ಅಲ್ಲದಿದ್ದರೂ, 2024 ರ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಲಾಭವಾಗುವುದು ಖಚಿತ ಎಂಬ ಲೆಕ್ಕಚಾರದಲ್ಲಿ ಬಿಜೆಪಿ ಇದೆ ಎಂದು ಹಿಂದೂ ವರದಿ ಹೇಳಿದೆ.

ತೆಲಂಗಾಣದಲ್ಲಿ ಈ ಬಾರಿ ಪ್ರಮುಖವಾಗಿ ಆಡಳಿತಾರೂಢ ಬಿಆರ್‌ಎಸ್ ಮತ್ತು ಕಾಂಗ್ರೆಸ್ ನಡುವೆ ನೇರ ಹೋರಾಟವಿದೆ. ಈ ನಡುವೆ ಹಿಂದುಳಿದ ವರ್ಗಗಳ ಓಲೈಕೆಗೆ ಮುಂದಾಗಿರುವ ಬಿಜೆಪಿ, ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಒಬಿಸಿ ವರ್ಗದ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡುವುದಾಗಿ ಘೋಷಿಸಿದೆ. ರಾಜ್ಯದ 119 ಕ್ಷೇತ್ರಗಳಿಗೆ ನವೆಂಬರ್ 30 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಡಿಸೆಂಬರ್‌ 3ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ಇದನ್ನೂ ಓದಿ : ಉದಯನಿಧಿ ಸನಾತನ ಧರ್ಮ ಹೇಳಿಕೆ: ತೀರ್ಪು ಕಾಯ್ದಿರಿಸಿದ ಮದ್ರಾಸ್ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಿಬಿಎ ಅಧಿಕಾರಿಗಳಿಂದ ಮನೆಗಳ ನೆಲಸಮ : ತೀವ್ರ ಖಂಡನೆ ವ್ಯಕ್ತಪಡಿಸಿದ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ

ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಗ್ರಾಮದಲ್ಲಿ ಬಡ ಜನರ ಸುಮಾರು 150 ಮನೆಗಳನ್ನು ಏಕಾಏಕಿ ನೆಲಸಮಗೊಳಿಸಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಕ್ರಮವನ್ನು ಭೂಮಿ ಮತ್ತು ವಸತಿ ಹಕ್ಕು ವಂಚಿತರ...

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಆಯ್ಕೆ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 2026ರ ಜನವರಿ 29ರಿಂದ ಫೆಬ್ರವರಿ 6ರವರೆಗೆ ನಡೆಯಲಿದ್ದು, ರಾಯಭಾರಿಯಾಗಿ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕರು ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ. ಚಲನಚಿತ್ರೋತ್ಸವದ ಪೂರ್ವಭಾವಿಯಾಗಿ ಸಂಘಟನಾ...

ಗುಂಪು ಹತ್ಯೆ ಪ್ರಕರಣ ಹಿಂಪಡೆಯಲು ಮುಂದಾದ ಯುಪಿ ಸರ್ಕಾರ : ಹೈಕೋರ್ಟ್ ಮೆಟ್ಟಿಲೇರಿದ ಅಖ್ಲಾಕ್ ಪತ್ನಿ

ದಾದ್ರಿ ಗುಂಪು ಹತ್ಯೆ ಪ್ರಕರಣದ ಬಲಿಪಶು ಮೊಹಮ್ಮದ್ ಅಖ್ಲಾಕ್ ಅವರ ಪತ್ನಿ, ಆರೋಪಿಗಳ ವಿರುದ್ಧದ ಪ್ರಕರಣವನ್ನು ಹಿಂಪಡೆಯುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರ ಮತ್ತು ಗೌತಮ್ ಬುದ್ಧ ನಗರದ ನ್ಯಾಯಾಲಯದಲ್ಲಿ ಪ್ರಾಸಿಕ್ಯೂಟರ್ ಸಲ್ಲಿಸಿರುವ...

ಉನ್ನಾವೋ ಅತ್ಯಾಚಾರ ಪ್ರಕರಣ: ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತು

ಉನ್ನಾವೋ ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಅಪರಾಧಿ, ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ಗೆ ದೆಹಲಿ ಹೈಕೋರ್ಟ್ ಮಂಗಳವಾರ (ಡಿ.23) ಜಾಮೀನು ಮಂಜೂರು ಮಾಡಿದೆ. ನ್ಯಾಯಾಧೀಶರಾದ ಸುಬ್ರಹ್ಮಣ್ಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್...

ಮಕ್ಕಳ ಕ್ರಿಸ್‌ಮಸ್ ಕ್ಯಾರೋಲ್ ಗುಂಪಿನ ಮೇಲೆ ದಾಳಿ : ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನ

ಇತ್ತೀಚೆಗೆ ಗುಂಪು ಹತ್ಯೆ ನಡೆದ ವಲಯಾರ್‌ನಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿರುವ ಕೇರಳದ ಪಾಲಕ್ಕಾಡ್‌ನ ಪುದುಶ್ಶೇರಿಯಲ್ಲಿ ಮಕ್ಕಳನ್ನೊಳಗೊಂಡ ಕ್ರಿಸ್‌ಮಸ್ ಕ್ಯಾರೋಲ್ ಗುಂಪಿನ ಮೇಲೆ ದಾಳಿ ಮಾಡಿದ ಆರೋಪದಲ್ಲಿ ಬಿಜೆಪಿ-ಆರ್‌ಎಸ್‌ಎಸ್ ಸದಸ್ಯನೊಬ್ಬನನ್ನು ಬಂಧಿಸಲಾಗಿದೆ ಎಂದು...

ಮಧ್ಯಪ್ರದೇಶ | ಅಂಧ ಮಹಿಳೆ ಮೇಲೆ ಹಲ್ಲೆ ನಡೆಸಿದ ಬಿಜೆಪಿ ನಾಯಕಿ

ಮಧ್ಯಪ್ರದೇಶದ ಜಬಲ್ಪುರದಲ್ಲಿ ಬಿಜೆಪಿ ನಾಯಕಿಯೊಬ್ಬರು ಅಂಧ ಮಹಿಳೆಗೆ ಕಿರುಕುಳ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಜನಾಕ್ರೋಶಕ್ಕೆ ಕಾರಣವಾಗಿದೆ. ಅಂಧ ಮಹಿಳೆಯ ಅಂಗವೈಕಲ್ಯವದ ಕುರಿತು ಬಿಜೆಪಿ ನಾಯಕಿ ಅವಹೇಳನಕಾರಿ ಹೇಳಿಕೆ ನೀಡಿರುವುದು...

‘ಇದು ಹಿಂದೂ ರಾಷ್ಟ್ರ, ಇಲ್ಲಿ ಕ್ರಿಶ್ಚಿಯನ್ ಸಾಮಗ್ರಿಗಳ ಮಾರಾಟಕ್ಕೆ ಅವಕಾಶವಿಲ್ಲ’ : ಸಾಂತಾ ಟೋಪಿ ಮಾರಾಟಗಾರರಿಗೆ ದುಷ್ಕರ್ಮಿಗಳಿಂದ ಕಿರುಕುಳ

ಒಡಿಶಾದ ಭುವನೇಶ್ವರ ನಗರದಲ್ಲಿ ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ರಸ್ತೆ ಬದಿ ಸಾಂತಾ ಕ್ಲಾಸ್ ಟೋಪಿಗಳನ್ನು ಮಾರಾಟ ಮಾಡುತ್ತಿದ್ದ ಬಡ ವ್ಯಾಪಾರಿಗಳಿಗೆ ದುಷ್ಕರ್ಮಿಗಳ ಗುಂಪು ಕಿರುಕುಳ ನೀಡಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ವಿಡಿಯೋವೊಂದು ಸಾಮಾಜಿಕ...

ಬಾಂಗ್ಲಾದಲ್ಲಿ ಹಿಂದೂ ಯುವಕನ ಗುಂಪುಹತ್ಯೆ ನಾಚಿಕೆಗೇಡು ಕೃತ್ಯ; ಇಸ್ಲಾಂ ವಿರುದ್ಧ: ಜಮಿಯತ್ ಮುಖ್ಯಸ್ಥ ಮಹಮೂದ್ ಮದನಿ

ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಯುವಕ ದೀಪು ಚಂದ್ರ ದಾಸ್ ಅವರ ಮೇಲೆ ನಡೆದ ಗುಂಪು ಹಲ್ಲೆಯನ್ನು ಜಮಿಯತ್ ಉಲಮಾ-ಇ-ಹಿಂದ್ ಅಧ್ಯಕ್ಷ ಮೌಲಾನಾ ಮಹಮೂದ್ ಮದನಿ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. ಇಂತಹ ಕೃತ್ಯಗಳು...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ-ರಾಹುಲ್‌ಗೆ ದೆಹಲಿ ಹೈಕೋರ್ಟಿನಿಂದ ನೋಟಿಸ್

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿನ ನಡೆದಿದೆ ಎನ್ನಲಾದ ಹಣ ವರ್ಗಾವಣೆ ದೂರನ್ನು ಪರಿಗಣಿಸಲು ನಿರಾಕರಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ ಕ್ರಿಮಿನಲ್ ಪರಿಷ್ಕರಣಾ ಅರ್ಜಿಯ ಕುರಿತು, ಕಾಂಗ್ರೆಸ್ ಸಂಸದೀಯ...

ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ಆಕ್ರಮಣ : ಪ್ಯಾಲೆಸ್ತೀನಿಯರ ವಸತಿ ಕಟ್ಟಡಗಳು ಧ್ವಂಸ

ಇಸ್ರೇಲಿ ಪಡೆಗಳು ಆಕ್ರಮಿತ ಪಶ್ಚಿಮ ದಂಡೆಯಲ್ಲಿರುವ ಪಟ್ಟಣಗಳಿಗೆ ನುಗ್ಗಿ ಪ್ಯಾಲೆಸ್ತೀನಿಯರ ವಸತಿ ಕಟ್ಟಡಗಳನ್ನು ಕೆಡವಿ ಹಾಕಿದೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಇದು ಗಾಝಾ ಕದನ ವಿರಾಮದ ಮೂಲಕ ಇಸ್ರೇಲ್ ಪ್ಯಾಲೆಸ್ತೀನಿಯರ...